ನಿಧನ

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ

ಮಂಗಳೂರು: ಕಾಲೇಜಿನಲ್ಲಿ ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು  ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಮೃತಪಟ್ಟವರು. ಬಜೆ ಪಡು ಪೆರಾರ ನಿವಾಸಿ ಗೋರಿಯಾ ಆಶಾ ರೋಡ್ರಿಗಸ್ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್‌ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿದ್ದರು. ಬಳಿಕ ಅಲೋಶಿಯಸ್ ಕಾಲೇಜಿನಲ್ಲಿಯೇ ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು ನ.9ರಂದು ಕಾಲೇಜಿನಲ್ಲಿ ತಲೆಸುತ್ತು ಬಂದು ಬಿದ್ದ ಅವರಿಗೆ ಗಾಯವಾಗಿತ್ತು. ಅವರನ್ನು ಕಂಕನಾಡಿ […]

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ Read More »

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ಮೃತಪಟ್ಟ ಘಟನೆ ನಡೆದಿದೆ. ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಮೃತರು ತಂದೆ ತಾಯಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ Read More »

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ

ಬಂಟ್ವಾಳ:  ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ವಿಜಯ ಜಿ. ಜೈನ್ ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ Read More »

ಕುಂಬ್ರ ನಿವಾಸಿ ಯುವ ವಕೀಲ ಚಂದ್ರಕಾಂತ್ ಅಡೂರ್ ನಿಧನ

ಪುತ್ತೂರು: ಅನಾರೋಗ್ಯದ ಹಿನ್ನಲೆಯಲ್ಲಿ ಯುವ ವಕೀಲ ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಉತ್ತಮ ಕ್ರೀಡಾಪಟುವಾಗಿದ್ದ ಅವರು, ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಮಗು, ಕುಟುಂಬಸ್ಥರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.

ಕುಂಬ್ರ ನಿವಾಸಿ ಯುವ ವಕೀಲ ಚಂದ್ರಕಾಂತ್ ಅಡೂರ್ ನಿಧನ Read More »

ಹಿರಿಯ ನಟ ಡೆಲ್ಲಿ ಗಣೇಶ್‌ ನಿಧನ

400ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಬಹಭಾಷಾ ಕಲಾವಿದ ಚೆನ್ನೈ : ನೂರಾರು ಸಿನಿಮಾಗಳಲ್ಲಿ ನಟಿಸಿರುವ ತಮಿಳು ನಟ ಡೆಲ್ಲಿ ಗಣೇಶ್ ನಿಧನ ಹೊಂದಿದ್ದಾರೆ. ಡೆಲ್ಲಿ ಗಣೇಶ್ ಅವರ ಪುತ್ರ ಮಹದೇವನ್ ಅವರು ‘ಡೆಲ್ಲಿ ಗಣೇಶ್ ಅವರು, ನಿನ್ನೆ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಡೆಲ್ಲಿ ಗಣೇಶನ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು. 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಅವರು ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. 400ಕ್ಕೂ

ಹಿರಿಯ ನಟ ಡೆಲ್ಲಿ ಗಣೇಶ್‌ ನಿಧನ Read More »

ಕೊಂಬೆಟ್ಟು ನಿವಾಸಿ ಜ್ಞಾನಾನಂದ ಹೆಗ್ಡೆ ನಿಧನ

ಪುತ್ತೂರು: ಕೊಂಬೆಟ್ಟು ಮಮ್ಮಿ ಜ್ಯೂಸ್‌ನ ಮಾಲಕ ಜ್ಞಾನಾನಂದ ಹೆಗ್ಡೆ (58) ಮಂಗಳವಾರ ಸಂಜೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಜ್ಞಾನಾನಂದ ಹೆಗ್ಡೆಯವರು ಕೊಂಬೆಟ್ಟಿನಲ್ಲಿ ಕಬ್ಬಿನ ಹಾಲಿನ ‘ಮಮ್ಮಿ ಜ್ಯೂಸ್’ ಶಾಪ್ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಬಳಿಕ ಅನಾರೋಗ್ಯದಿಂದಾಗಿ ವ್ಯವಹಾರದಿಂದ ನಿವೃತ್ತಿ ಪಡೆದಿದ್ದ ಅವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು. ಮೃತರು ತಾಯಿ, ಪತ್ನಿ, ಪುತ್ರಿಯರು ಹಾಗೂ ಸಹೋದರರನ್ನು ಅಗಲಿದ್ದಾರೆ.

ಕೊಂಬೆಟ್ಟು ನಿವಾಸಿ ಜ್ಞಾನಾನಂದ ಹೆಗ್ಡೆ ನಿಧನ Read More »

ಶಾಂತಿಗೋಡು ನಿವಾಸಿ ವಿಜಯ ಗೌಡ ಪಾದೆ ನಿಧನ

ಪುತ್ತೂರು: ಶಾಂತಿಗೋಡು ಗ್ರಾಮದ ಪಾದೆ ನಿವಾಸಿ ವಿಜಯ ಗೌಡ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅನಾರೋಗ್ಯದಿಂದಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಮೃತರು ತಂದೆ ತಂದೆ ನಿವೃತ ಶಿಕ್ಷಕ ಮಾಧವ ಗೌಡ, ತಾಯಿ ಶೋಭಾ, ಪತ್ನಿ, ಸಹೋದರರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಶಾಂತಿಗೋಡು ನಿವಾಸಿ ವಿಜಯ ಗೌಡ ಪಾದೆ ನಿಧನ Read More »

ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ರನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು. ಮೃತ ರಾಮಣ್ಯಗೌಡರವರು ಪತ್ನಿ ಚಂದ್ರಾವತಿ, ಪುತ್ರಿಯರಾದ ಶಶಿಕಲಾ, ಚೈತ್ರ, ಪುತ್ರರಾದ ಧನಂಜಯ, ಲೋಕೇಶ್ ಹಾಗೂ ಸಹೋದರಾರದ ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ

ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ Read More »

ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ಸಂಕೇತ್ ನಿಧನ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ಕನ್ನಡ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಸಂಕೇತ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ. ಮೃತರಿಗೆ ತಂದೆ, ತಾಯಿ ಹಾಗೂ ಓರ್ವ ಸಹೋದರ ಇದ್ದಾರೆ. ಶಾಲಾ ನಿರ್ದೇಶಕ ಬಿಷಪ್ ಯಾಕೂಬ್ ಮೊರ್ ಅಂತೋನಿಯಾಸ್, ಸಂಚಾಲಕ ರೆ.ಫಾ ಹನಿ ಜೇಕಬ್, ಮೆನೇಜರ್ ಸನ್ನಿ ಜಾನ್,  ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ಸಂಕೇತ್ ನಿಧನ Read More »

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

ಬೆಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ಹೋದ ವೇಳೆ ಹೃದಯಾಘಾತವಾಗಿ ನಿಧನ ಮಂಗಳೂರು : ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಸೋಮವಾರ ಮುಂಜಾನೆ ವೇಳೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಸೋಮವಾರದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್.ಕೆ ಭಟ್‌ ಅವರ ಮನೆಯಲ್ಲಿ ಬಂದಿಳಿದ ತಂಡದಲ್ಲಿದ್ದ ಬಂಟ್ವಾಳ ಆಚಾರ್ಯರಿಗೆ ಇಂದು ಮುಂಜಾನೆ 4 ಗಂಟೆಗೆ ವೇಳೆಗೆ ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ Read More »

error: Content is protected !!
Scroll to Top