ಶೈಕ್ಷಣಿಕ

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ,  ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ  ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಾ, 25 ರಂದು  ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮವನ್ನು ಕೆ.ಎಸ್.ಎಸ್ ಕಾಲೇಜಿನ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್ ಉದ್ಘಾಟಿಸಿದರು.  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ […]

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ Read More »

ಒಲಿಂಪಿಯಾಡ್ ಪರೀಕ್ಷೆ : ಅಂಬಿಕಾ ಸಿಬಿಎಸ್‍ ಇ ಸಂಸ್ಥೆಯಿಂದ ಎರಡನೆಯ ಹಂತಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಕಳೆದ ಡಿಸೆಂಬರ್ ತಿಂಗಳಿನಲ್ಲಿ ನವದೆಹಲಿಯ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆ ಬರೆದಿದ್ದು, ಪರೀಕ್ಷೆ ಬರೆದಿದ್ದ ಒಟ್ಟು 512 ವಿದ್ಯಾರ್ಥಿಗಳಲ್ಲಿ ಸಂಸ್ಥೆಯ ಒಟ್ಟು ನಾಲ್ಕು ಮಂದಿ ವಿದ್ಯಾರ್ಥಿಗಳು ಎರಡನೆಯ ಹಂತಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ 90 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, 54 ವಿದ್ಯಾರ್ಥಿಗಳು ಬೆಳ್ಳಿಯ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, 27 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, ಉಳಿದಂತೆ

ಒಲಿಂಪಿಯಾಡ್ ಪರೀಕ್ಷೆ : ಅಂಬಿಕಾ ಸಿಬಿಎಸ್‍ ಇ ಸಂಸ್ಥೆಯಿಂದ ಎರಡನೆಯ ಹಂತಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ Read More »

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’

ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏಪ್ರಿಲ್ 11 ರಿಂದ 15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’ Read More »

ಕೆ.ಎಸ್‌.ಎಸ್ ಕಾಲೇಜಿನ  ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸುವಿಕೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರ ಮಾ. 10 ಸೋಮವಾರದಿಂದ ಮಾ.12ರವರೆಗೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ರಾಜ್ಯ ಪುರಸ್ಕಾರ ಪಡೆದ ರೇಂಜರ್ ವಿದ್ಯಾರ್ಥಿ ಶರಣ್ಯ ಮತ್ತು ಕವಿತಾಕ್ಷಿ ಅವರು ಭಾಗವಹಿಸಿದ್ದಾರೆ.

ಕೆ.ಎಸ್‌.ಎಸ್ ಕಾಲೇಜಿನ  ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸುವಿಕೆ Read More »

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು:  ನಮ್ಮ ರಾಷ್ಟ್ರದ ಸ್ಥಾನಮಾನ ಅನಾವರಣವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಭಾರತಕ್ಕೆ ಒಂದು ಸಾಂಸ್ಕೃತಿಕ ಪರಂಪರೆ ಇದೆ, ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ, ಇಂತಹ ಸಂದರ್ಭದಲ್ಲಿ ಯುವಜನತೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳು ಕೀಳರಿಮೆಯ ಮಾನಸಿಕತೆಯನ್ನು ಬಿಟ್ಟು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಹಾಗಿದ್ದಾಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ           

ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ  ಮಾರ್ಚ್ 20 ಗುರುವಾರದಂದು ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ  ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ  ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ  ಅವರ  ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡು ಕಾರ್ಯಕಲಾಪ ವೀಕ್ಷಿಸಿದರು. ವಿಧಾನಸಭಾ ಸಚಿವಾಲಯದ ಸಿಬ್ಬಂದಿ ಜ್ಞಾನಶೇಖರ್ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಸವಿವರ ಮಾಹಿತಿ ನೀಡಿದರು.

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ            Read More »

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಿನ್ನೆ ಎಸ್, ಎಸ್, ಎಲ್ ಸಿ ಪರೀಕ್ಷೆಯ ಉದ್ಘಾಟನೆ ಕರ‍್ಯಕ್ರಮ ನಡೆಯಿತು. ಎಸ್, ಎಸ್, ಎಲ್ ಸಿ ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕರಾದ ¸ವಣೂರು ಸೀತಾರಾಮ ರೈ ಕೆ ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಪರೀಕ್ಷಾ ಆಧಿಕ್ಷಕರಾದ ಪ್ರೇಮ್ ಕುಮಾರ್, ಉಪ ಆಧಿಕ್ಷಕರಾದ ಲಕ್ಷಿö್ಮ, ಪ್ರಶ್ನೆಪತ್ರಿಕೆ ಅಭಿರಕ್ಷಕರಾದ

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ Read More »

ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತರ ವಿಭಾಗದ ದಶಮಾನೋತ್ಸವ ಮತ್ತು ಪದವಿ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ ಮಾ.22 ರಂದು ನಡೆಯಲಿದೆ. ಮಾ.23ಕ್ಕೆ ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಹಾಗು ಮಾ.24ಕ್ಕೆ ಕಾಲೇಜು ವಾರ್ಷಿಕೋತ್ಸವ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಜರುಗಲಿದೆ ಎಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸಂಚಾಲಕ, ನ್ಯಾಯವಾದಿ ಮುರಳಿಕೃಷ್ಣ ಕೆ.ಎನ್. ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ

ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ Read More »

ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ  ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು

ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ  ಶಾಲೆಗೆ ಭೇಟಿ ನೀಡಿದ್ದಾರೆ. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ  ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶೈಲಾ  ಅವರು ಸಂಸ್ಥೆಯ ಉದ್ದೇಶವನ್ನು  ಹಾಗೂ ವಿದ್ಯಾರ್ಥಿಗಳು ನ್ಯೂನತೆಯನ್ನು ಹೊಂದಿದ್ದರು

ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ  ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು Read More »

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ

ಬೆಳಂದೂರು : ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಲಂತಬೆಟ್ಟುವಿನಲ್ಲಿ  ಅಂತರ್‍ ಕಾಲೇಜು ಮಟ್ಟದ  “AVINYA 2025” ಕಾರ್ಯಕ್ರಮ ನಡೆಯಿತು. ಇದರಲ್ಲಿ ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು  ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ಭಾಗವಹಿಸಿದ್ದು, ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆ ಯಲ್ಲಿ  ರಂಜನ್ ಮತ್ತು ರಶ್ಮಿ ಪ್ರಥಮ ಬಹುಮಾನ ಪಡೆದಿದ್ದಾರೆ. ವಿಜೇತರಾದ ರಂಜನ್ ಮತ್ತು ರಶ್ಮಿಯವರಿಗೆ ಶಾಲಾ ಪ್ರಾಂಶುಪಾಲರು, ಶಿಕ್ಷಕವೃಂದದವರು ಅಭಿನಂದಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ Read More »

error: Content is protected !!
Scroll to Top