ಶೈಕ್ಷಣಿಕ

ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ

ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023-24ನೇ ಸಾಲಿನ ಯು.ಕೆ.ಜಿ. ತರಗತಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ದಿನವನ್ನು ಏರ್ಪಡಿಸಲಾಯಿತು. ಸಮಾರಂಭವನ್ನು ಕಸ್ತೂರಿಕಲಾ ಎಸ್. ರೈ ಉದ್ಘಾಟಿಸಿ ಶುಭ ಹಾರೈಸಿದರು. ಅತಿಥಿಯಾಗಿ ಆರೆಲ್ತಡಿ ಅಂಗನವಾಡಿ ಶಿಕ್ಷಕಿ ಮಮತಾ ಸಿ. ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮಾತನಾಡಿ, ಮಕ್ಕಳನ್ನು ರೂಪಿಸುವ ಕೆಲಸ ಕೇವಲ ಶಾಲೆಯದ್ದು ಮಾತ್ರವಲ್ಲ. ಬದಲಿಗೆ ಅದು ಶಿಕ್ಷಕರು ಮತ್ತು ಪೋಷಕರು ಇಬ್ಬರಿಗೂ ಸೇರಿದ್ದು. ಎರಡೂ ಕೈ ಸೇರಿದಾಗ ಚಪ್ಪಾಳೆ ಆಗುವಂತೆ ಶಾಲೆ […]

ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ Read More »

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ

ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ 2023ರಲ್ಲಿ ನಡೆಸಿದ ಎಂ.ಡಿ.ಎಸ್ (Oral and Maxillofacial Surgery)ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟದ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಎಂ.ಡಿ.ಎಸ್ ಸ್ನಾತಕೋತ್ತರ ಪದವಿ ಪೂರೈಸಿರುವ ಅವರು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ವಾಸ್ತವ್ಯವಿರುವ ಬಿರ್ಮುಕಜೆ ಸುಧಾಕರ ಗೌಡ ಮತ್ತು  ಉದಯಗೌರಿ ದಂಪತಿ ಪುತ್ರ. ಅವರು ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿ.ಡಿ.ಎಸ್ ಪದವಿ ಪಡೆದಿದ್ದಾರೆ. ಪ್ರಸ್ತುತ

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ Read More »

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ

ಮಂಗಳೂರು: ಎಸ್‍.ಎಸ್‍.ಎಲ್‍.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯ 2024 ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ಮಾ.25 ರಿಂದ ಏ.6 ರ ತನಕ ಹಾಗೂ ಪಿಯುಸಿ ಪರೀಕ್ಷೆ ಮಾ.1 ರಿಂದ 22 ರ ತನಕ ನಡೆಯಲಿದೆ. ವೇಳಾಪಟ್ಟಿ ಈ ಕೆಳಗಿನಂತಿದೆ: ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ವೇಳಾಪಟ್ಟಿ ಮಾ.25 ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್‍.ಸಿ.ಆರ್‍.ಟಿ. ಮಾ.27 ರಂದು ಸಮಾಜ ವಿಜ್ಞಾನ, ಮಾ.30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏ.2 ರಂದು

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ Read More »

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ

ಸುಳ್ಯ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಪುತ್ತೂರು ಎಸ್.ಆರ್.ಕೆ. ಲ್ಯಾಡರ್ಸ್, ತನ್ನ ಸರಣಿಯ ಎರಡನೇ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸುಳ್ಯ ಎಂ.ಬಿ. ಫೌಂಡೇಷನ್ ಪ್ರವರ್ತಿತ ಸಾಂದೀಪ್ ವಿಶೇಷ ಶಾಲೆಯ ಕ್ಷೇಮಾಭಿವೃದ್ಧಿ ನಿಧಿಗೆ ಧನ ಸಹಾಯ ನೀಡಲಾಯಿತು. ಕಾರ್ಯಕ್ರಮದ ಬಳಿಕ ಸಹಭೋಜನ ಜರಗಿತು. ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ ಮಾತನಾಡಿ, ವಿಶೇಷ ಶಾಲೆ ನಡೆಸುವುದೆಂದರೆ ಸಣ್ಣ ವಿಚಾರವಲ್ಲ. ಹಾಗಿದ್ದು ಎಂ.ಬಿ. ಫೌಂಡೇಷನ್ ದೊಡ್ಡ ಸಾಹಸವನ್ನೇ ಮಾಡುತ್ತಿದೆ. ಫೌಂಡೇಶನಿನ ಸಾಮಾಜಿಕ ಕಾರ್ಯ ಶ್ಲಾಘನೀಯ

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ Read More »

ಡಿ.1 – 4: ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ | ಕ್ಷೇತ್ರದಾದ್ಯಂತ ಸಂಚರಿಸಲಿದೆ ಕ್ರೀಡಾ ರಥ, ಕ್ರೀಡಾಜ್ಯೋತಿ | 35 ಜಿಲ್ಲೆಗಳಿಂದ 2500 ಕ್ರೀಡಾಪಟುಗಳ ಪಾಲ್ಗೊಳ್ಳುವಿಕೆ

ಪುತ್ತೂರು: ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ಡಿ.1, 2, 3 ಹಾಗೂ 4ರಂದು ನಡೆಯುವ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಾಶಾಲಾ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟ ಪುತ್ತೂರಿಗೆ ಮೆರುಗು ತರಲಿದ್ದು, ಈ ನಿಟ್ಟಿನಲ್ಲಿ ವ್ಯವಸ್ಥೆಗಳು ಸಮರೋಪಾದಿಯಲ್ಲಿ ಸಜ್ಜುಗೊಳ್ಳುತ್ತಿವೆ ಎಂದು ಕ್ರೀಡಾಕೂಟ ಸಂಚಾಲಕ, ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ತಿಳಿಸಿದರು. ಅವರು ಶುಕ್ರವಾರ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಕ್ರೀಡಾಕೂಟದ ಯಶಸ್ಸಿಗಾಗಿ ಸುಮಾರು 18 ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ನಾಲ್ಕು ದಿನಗಳ ಕಾಲ

ಡಿ.1 – 4: ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ | ಕ್ಷೇತ್ರದಾದ್ಯಂತ ಸಂಚರಿಸಲಿದೆ ಕ್ರೀಡಾ ರಥ, ಕ್ರೀಡಾಜ್ಯೋತಿ | 35 ಜಿಲ್ಲೆಗಳಿಂದ 2500 ಕ್ರೀಡಾಪಟುಗಳ ಪಾಲ್ಗೊಳ್ಳುವಿಕೆ Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ

ಪುತ್ತೂರು : ಡೊನ್ ಬೊಸ್ಕೊ ಕ್ಲಬ್ ವತಿಯಿಂದ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ’ಪ್ರತಿಭಾ ಪುರಸ್ಕಾರ-೨೦೨೩’ ಕಾರ್ಯಕ್ರಮ ಭಾನುವಾರ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಜನರ ಕಣ್ಣೀರೊರೆಸುವ ಕಾರ್ಯ ನಮ್ಮಿಂದ ಹಾಗೂ ಸರಕಾರದಿಂದ ಆಗುತ್ತಿದೆ ಎಂದರು. ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ Read More »

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ

ಮಂಗಳೂರು: ಶಿಕ್ಷಕರ ದಿನಾಚರಣೆಯಂದೇ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ 24ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ತರಲಾಗಿದ್ದು, ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″

ಸುಳ್ಯ : ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ  ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಶಿಕ್ಷಕರ ಅತ್ಯುತ್ತಮ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು,  ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″ Read More »

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌

2025-26ನೇ ಶೈಕ್ಷಣಿಕ ವರ್ಷದಿಂದ ಜಾರಿ ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 5 ವರ್ಷ 5 ತಿಂಗಳು ಬದಲು 6 ವರ್ಷ ತುಂಬಿರಬೇಕು ಎಂದು ರಾಜ್ಯ ಸರ್ಕಾರ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಈ ಕುರಿಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 2022ರ ಜು.26ರಂದು ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಬೆಂಗಳೂರಿನ ಅನಿಕೇತ್ ಎಂಬವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌ Read More »

ಪ್ರತಿಷ್ಠಿತ ಪ್ರೇರಣಾ ತರಬೇತಿ ಸಂಸ್ಥೆಯ ಸ್ಮಿತಾ ಎಸ್ ರೈ ಮತ್ತು ಸಿಮ್ರಾನ್ ತಾಜ್ ಅವರು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ

ಪುತ್ತೂರು: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿನಿಯರು ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ಮೂಲಕ ಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ. ಜೂ.2023 ಪ್ರೇರಣಾ ಸಂಸ್ಥೆಯಿಂದ ಸಿ.ಎ.ಫೌಂಡೇಶನ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರಾದ ಸಿಮ್ರನ್ ತಾಜ್ ಹಾಗೂ ಸ್ಮಿತಾ ಎಸ್.ರೈ ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಸಿಮ್ರನ್ ತಾಜ್ ಅವರು ಆರ್ಯಾಪು ಗ್ರಾಮದ ಸಂಪ್ಯ ನಿವಾಸಿಯಾದ ಮುಬಾರಕ್ ಪಾಶಾ ಹಾಗೂ ಸಬಿಹಾ ಖನಮ್ ದಂಪತಿ ಪುತ್ರಿ. ಸ್ಮಿತಾ ಎಸ್. ರೈ ಅವರು ಕೊಳ್ತಿಗೆ

ಪ್ರತಿಷ್ಠಿತ ಪ್ರೇರಣಾ ತರಬೇತಿ ಸಂಸ್ಥೆಯ ಸ್ಮಿತಾ ಎಸ್ ರೈ ಮತ್ತು ಸಿಮ್ರಾನ್ ತಾಜ್ ಅವರು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ Read More »

error: Content is protected !!
Scroll to Top