ಶೈಕ್ಷಣಿಕ

ದ್ವಿತೀಯ ಪಿಯುಸಿ ಪರೀಕ್ಷಾ ಹಿನ್ನೆಲೆ ಪರೀಕ್ಷಾ ಬೋರ್ಡ್‌ನಿಂದ ‌ಕಠಿಣ ಕ್ರಮ

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಸಮಯದಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಕ್ಸಾಂ ಬೋರ್ಡ್ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಬೋರ್ಡ್ ಕೈಗೊಂಡ ಕ್ರಮಗಳ ಪಟ್ಟಿ ಈ ಕೆಳಗಿನಂತಿವೆ:

ದ್ವಿತೀಯ ಪಿಯುಸಿ ಪರೀಕ್ಷಾ ಹಿನ್ನೆಲೆ ಪರೀಕ್ಷಾ ಬೋರ್ಡ್‌ನಿಂದ ‌ಕಠಿಣ ಕ್ರಮ Read More »

ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ನೇತೃತ್ವದಲ್ಲಿ ನನ್ನ ಭಾರತಕ್ಕಾಗಿ ಯುವಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ವಾರ್ಷಿಕ ವಿಶೇಷ ಶಿಬಿರ 2025-26 ರಂದು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ ಇಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ನವೀನ್ ಪದಬರಿ ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ ಪೆರ್ನೆ ಇವರು ವೇದಿಕೆಯನ್ನು ಅಲಂಕರಿಸಿ ಶಿಬಿರಾರ್ಥಿಗಳನ್ನು ಹಾಗೂ ಸಭೆಯನ್ನು ಕುರಿತು ಎರಡು ಸಾಲು ಪದ್ಯದ ಮೂಲಕ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಉಮ್ಮಪ್ಪ

ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ Read More »

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ: ಜಯಂತ್ ನಡುಬೈಲು ಅವರಿಗೆ ಸನ್ಮಾನ

ಮಂಗಳೂರು: ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲು ಅವರನ್ನು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಗಾಗಿ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗಪೂರಕ ಹಾಗೂ ಆಧುನಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ 2019ರಲ್ಲಿ ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಅಕ್ಷಯ ಕಾಲೇಜು ಸ್ಥಾಪಿಸಿದ ಅವರು,

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ: ಜಯಂತ್ ನಡುಬೈಲು ಅವರಿಗೆ ಸನ್ಮಾನ Read More »

ವಿದ್ಯಾರಶ್ಮಿಯಲ್ಲಿ ಯುಕೆಜಿಯ ಘಟಿಕೋತ್ಸವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಯು.ಕೆ.ಜಿ. ತರಗತಿಯ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ದಿನ (ಗ್ರಾಜ್ಯುಯೇಷನ್ ಡೇ) ಏರ್ಪಡಿಸಲಾಯಿತು. ಸಮಾರಂಭವನ್ನು ಎಸ್. ಎನ್. ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಸದಸ್ಯೆ ರಶ್ಮಿ ಅಶ್ವಿನ್ ಎಲ್. ಶೆಟ್ಟಿ ಅವರು ಉದ್ಘಾಟಿಸಿದರು. ಅತಿಥಿಯಾಗಿ ಸವಣೂರು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಜಯಂತ್ ವೈ. ಅವರು ಮಕ್ಕಳೇ ನಮ್ಮ ಆಸ್ತಿ, ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ, ಸರಿಯಾದ ಗುರಿ, ಗುರುಗಳ ಮೇಲೆ ಗೌರವ ಇರಬೇಕು ಎಂಬ ಹಿತನುಡಿಯೊಂದಿಗೆ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ಅಢ್ವಕೇಟ್ ಅಶ್ವಿನ್ ಎಲ್. ಶೆಟ್ಟಿ

ವಿದ್ಯಾರಶ್ಮಿಯಲ್ಲಿ ಯುಕೆಜಿಯ ಘಟಿಕೋತ್ಸವ Read More »

ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ

ಸಂಪ್ಯ: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಇದರ ನೇತೃತ್ವದಲ್ಲಿ ‘ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ’ ಎಂಬ ಶಿರೋನಾಮೆಯೊಂದಿಗೆ ವಾರ್ಷಿಕ ವಿಶೇಷ ಶಿಬಿರ 2025-26 ಪ್ರಾರಂಭ ಗೊಂಡಿತು. ಶಿಬಿರವನ್ನು ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇಲ್ಲಿ ಆಯೋಜಿಸಲಾಯಿತು. ಹರೀಶ್ ಭಂಡಾರಿ ಟಿ, ವಕೀಲರು ಉಚ್ಚನ್ಯಾಯಾಲಯ, ಬೆಂಗಳೂರು ಸಂಚಾಲಕರು ಶ್ರೀ ರಾಮಚಂದ್ರ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇವರು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ ನಡುಬೈಲು

ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ Read More »

ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ

ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ, ಪುತ್ತೂರು ವತಿಯಿಂದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ವಿದ್ಯಾರ್ಥಿಗಳಿಗಾಗಿ “ವಿಮಾನಯಾನ” ವಿಶೇಷ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗೆ ವಿಮಾನ ನಿಲ್ದಾಣದ ನೈಜ ಕಾರ್ಯಪದ್ಧತಿ ಮತ್ತು ಉದ್ಯೋಗಾವಕಾಶಗಳ ಅರಿವು ಮೂಡಿಸುವುದು ತರಬೇತಿಯ ಮುಖ್ಯ ಉದ್ದೇಶವಾಗಿತ್ತು. ತರಬೇತಿಯ ಭಾಗವಾಗಿ ವಿದ್ಯಾರ್ಥಿಗಳು ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್, ಬೆಂಗಳೂರುಗೆ ಭೇಟಿ ನೀಡಿದರು. ಅಲ್ಲಿ ನಡೆಯುವ ಚೆಕ್-ಇನ್, ಬೋರ್ಡಿಂಗ್, ಭದ್ರತಾ ತಪಾಸಣೆ, ಗ್ರೌಂಡ್ ಹ್ಯಾಂಡ್ಲಿಂಗ್ ಹಾಗೂ ಗ್ರಾಹಕ ಸೇವೆ ಸೇರಿದಂತೆ ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳು

ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ Read More »

ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಮಾರಿಷಸ್‌‌ಗೆ ಇಂಟರ್ನ್‌ಶಿಪ್‌ಗೆ ಆಯ್ಕೆ

ಪುತ್ತೂರು: ಸಂಪ್ಯದ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟಿನ ಮುಖಾಂತರ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದ್ದು, ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಏವಿಯೇಷನ್(Aviation), ಕೃತಕ ಬುದ್ಧಿಮತ್ತೆ (Artificial Intelligence) ಹಾಗೂ ಹಾಸ್ಪಿಟಾಲಿಟಿ ಸೈನ್ಸ್(Hotel Management) ಕೋರ್ಸ್ಗಳನ್ನು ಪರಿಚಯಿಸಿದ ಪ್ರಥಮ ಕಾಲೇಜು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಈಗಾಗಲೇ ಸತತ ಮೂರು ವರ್ಷಗಳಿಂದ ಏವಿಯೇಷನ್ ಕೋರ್ಸ್ ಮುಖಾಂತರ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಲವಾರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಹಾಗೂ ಏರ್‌ಲೈನ್ಸ್‌ಗಳಲ್ಲಿ

ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಮಾರಿಷಸ್‌‌ಗೆ ಇಂಟರ್ನ್‌ಶಿಪ್‌ಗೆ ಆಯ್ಕೆ Read More »

SSLC, PUC ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಚಿವ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ. ಫೆ. 28 ರಿಂದ ಮಾ. 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಮತ್ತು ಮಾ. 18 ರಿಂದ ಏ. 2 ರ ವರೆಗೆ ಹತ್ತನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಪಿಯುಸಿ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ಮತ್ತು ಹತ್ತನೇ ತರಗತಿ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರ ವರೆಗೆ

SSLC, PUC ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದಿನಾಂಕ ಮಕ್ಕಳ ಮಾರ್ಟ್(ಮೆಟ್ರಿಕ್ ಮೇಳ) ನಡೆಯಿತು. ವಿದ್ಯಾರಶ್ಮಿ ಮಾರ್ಟ್ ಅನ್ನು ಎಸ್. ಎನ್. ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ಸದಸ್ಯ ಎನ್. ಸುಂದರ್ ರೈ ಅವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ, ಶಿಕ್ಷಣದ ಜೊತೆಗೆ ಮಕ್ಕಳಿಗೆ ಅವಶ್ಯವಿರುವ ಆರ್ಥಿಕ, ವ್ಯವಹಾರಿಕ, ಸಾಮಾನ್ಯ ಜ್ಞಾನ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಇಂತಹ ಮಾರ್ಟ್ ಸಹಾಯಕವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸದಸ್ಯೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 77ನೆಯ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಕೆ. ಧ್ವಜಾರೋಹಣಗೈದರು. ಬಳಿಕ ಮಾತನಾಡಿದ ಅವರು, ಗಣರಾಜ್ಯೋತ್ಸವ ದಿನದ ಮಹತ್ವವನ್ನು ಮುಂದಿನ ಪರಂಪರೆಗೂ ಮಕ್ಕಳು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಮಕ್ಕಳು ತಮ್ಮ ಹೆತ್ತವರು ಮತ್ತು ಸಹಪಾಠಿಗಳನ್ನು ಪ್ರೀತಿಸುವಂತೆ ನಮ್ಮ ದೇಶದ ಸಂವಿಧಾನ ಮತ್ತು ಕಾನೂನನ್ನು ಪ್ರೀತಿಸಿ ಗೌರವಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್.

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ Read More »

error: Content is protected !!
Scroll to Top