ಶೈಕ್ಷಣಿಕ

ಎವಿಜಿ ಶಾಲೆಯಲ್ಲಿ ಪೋಷಕರ ದಿನಾಚರಣೆ

ಪುತ್ತೂರು: ಭರವಸೆಯ ಶಿಕ್ಷಣ ಸಂಸ್ಥೆಯಾದ ಇಲ್ಲಿನ ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಪೋಷಕರ ದಿನಾಚರಣೆಯನ್ನು ಆಚರಿಸಲಾಯಿತು. ದಿಕ್ಸೂಚಿ ಭಾಷಣಸುಳ್ಯದ ಎಂ.ಬಿ. ಫೌಂಡೇಷನ್’ನ ಅಧ್ಯಕ್ಷರಾದ ಪೂರ್ವ ಲಯನ್ಸ್ ಗವರ್ನರ್ ಲಯನ್ ಎಂ.ಬಿ. ಸದಾಶಿವ ಅವರು ತಮ್ಮ ದಿಕ್ಸೂಚಿ ಭಾಷಣದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಭಾರತೀಯ ಮೌಲ್ಯಗಳನ್ನು ನೈಜತೆಯೊಂದಿಗೆ ಅನುಷ್ಠಾನಿಸುತ್ತಿದೆ ಎಂದು ಹೇಳಿದರು. ಮನಃಪರಿವರ್ತನೆಯ ಮೂಲಕ ಸಾಮಾಜಿಕ ಪರಿವರ್ತನೆ ಆಗಬೇಕಿದೆ ಮತ್ತು ಅದು ಈ ಶಾಲೆಯಲ್ಲಿ ಆಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ಮಕ್ಕಳನ್ನು ಸ್ವತಂತ್ರರಾಗಿರುವಂತೆ ಪ್ರೇರೇಪಿಸಬೇಕು. […]

ಎವಿಜಿ ಶಾಲೆಯಲ್ಲಿ ಪೋಷಕರ ದಿನಾಚರಣೆ Read More »

ಬಿಸಿಯೂಟ, ಹಾಲು, ಮೊಟ್ಟೆ ಪಿಯುಸಿ ತನಕ ವಿಸ್ತರಣೆ : ಮಧು ಬಂಗಾರಪ್ಪ

ಪಠ್ಯಪುಸ್ತಕ, ಶೂ, ಸಾಕ್ಸ್‌ ಸಹಿತ ಎಲ್ಲ ಸೌಲಭ್ಯ ಕೊಡಲು ನಿರ್ಧಾರ ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿ ವರೆಗಿನ ಸರಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದಲ್ಲದೆ ಪಠ್ಯಪುಸ್ತಕ, ಶೂ, ಸಾಕ್ಸ್‌, ಹಾಲು, ಮೊಟ್ಟೆ ಸೇರಿ ಎಲ್ಲ ಸೌಲಭ್ಯವನ್ನು ಪಿಯುಸಿ ತನಕ ವಿಸ್ತರಿಸುತ್ತೇವೆ ಎಂದಿದ್ದಾರೆ. ಪ್ರಸ್ತುತ ನೀಡುತ್ತಿರುವ ಬಿಸಿಯೂಟದಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಇದರಿಂದ ಹೆಚ್ಚುವರಿಯಾಗಿ 200 ಕೋಟಿ ರೂ. ವೆಚ್ಚವಾಗಲಿದೆ. ಇದು

ಬಿಸಿಯೂಟ, ಹಾಲು, ಮೊಟ್ಟೆ ಪಿಯುಸಿ ತನಕ ವಿಸ್ತರಣೆ : ಮಧು ಬಂಗಾರಪ್ಪ Read More »

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್

ಪುತ್ತೂರು: ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿರುತೆರೆ ಬೆಳ್ಳಿತೆರೆ, ರಂಗಭೂಮಿ ಕಲಾವಿದೆ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ಪವಿತ್ರಾ ಹೆಗ್ಡೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಉತ್ತಮ ವೇದಿಕೆಯನ್ನು ಒದಗಿಸುತ್ತಿದೆ, ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಂಡು ತಮ್ಮ ಆಸಕ್ತಿಯನ್ನು ಬೆಳೆಸಿ ಉಳಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿ ಗಾಯಕ ಕಲಾವಿದ ಚಂದ್ರಶೇಖರ್ ಅವರು, ಯಾವುದೇ ಕಲೆಗೆ ಜಾತಿಯ ಕಟ್ಟುಪಾಡುಗಳಿಲ್ಲ. ನಮ್ಮ ಮಧ್ಯೆ ಇರುವ

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಇಲ್ಲಿನ ಕೃಷ್ಣನಗರದ ಅಲುಂಬುಡದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 2025ಗೆ 26ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಜರುಗಿತು. ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ನಾಯ್ತೊಟ್ಟು ಸುಂದರ ಗೌಡರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಮಾತನಾಡುತ್ತಾ ಅವರು ನಿರಂತರ ಸಾಧನೆ ನಿಮ್ಮನ್ನು ಅಂತಾರಾಷ್ಟ್ರೀಯ ಮಟ್ಟದ ತನಕ ಕೊಂಡೊಯ್ಯಬಲ್ಲದು ಮತ್ತು ಅದಕ್ಕೆ ಬೇಕಾದ ಸಂಪೂರ್ಣ ಬೆಂಬಲ ನೀಡುವ ಸಾಮರ್ಥ್ಯ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ಗಿದೆ ಎಂದರು. ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಆದರ್ಶ ಕೃಷಿಕ ಮತ್ತು

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಎನ್ ಎಸ್ ಎಸ್ ಸೇವಾ ಸಂಗಮದ ದಶಮಾನೋತ್ಸವದ ಲೋಗೊ ಬಿಡುಗಡೆ

ಸುಳ್ಯ: ಎನ್ ಎಸ್ ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3 ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಾರ್ಯಕ್ರಮದ ಲೋಗೊ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಅತಿಥಿಗಳಾಗಿ ಗೌರವ ಸಲಹೆಗಾರ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ. ಅನುರಾಧ ಕುರುಂಜಿ, ಫಾಲಚಂದ್ರ ವೈ.ವಿ., ಶಾಲೆಯ ಮುಖ್ಯಗುರು

ಎನ್ ಎಸ್ ಎಸ್ ಸೇವಾ ಸಂಗಮದ ದಶಮಾನೋತ್ಸವದ ಲೋಗೊ ಬಿಡುಗಡೆ Read More »

ಊರಿನವರ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಯಶಸ್ಸಿನ ಜೊತೆಗೆ ಶಾಲಾಭಿವೃದ್ಧಿ ‌ಸಾಧ್ಯ: ಚಕ್ರಪಾಣಿ ಎ.ವಿ.

ಕಾಣಿಯೂರು: ಸರ್ಕಾರಿ ಶಾಲೆ ಪ್ರತಿಭಾನ್ವಿತ ಶಿಕ್ಷಕರುಗಳನ್ನು ಒಳಗೊಂಡಿದ್ದು, ಉತ್ತಮ ಬೋಧನೆ ಮಾಡುತ್ತಿರುವುದರಿಂದಲೇ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ. ಶಾಲೆಗಳ ಜೊತೆಗೆ ಊರಿನ ಸಮುದಾಯದವರ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಯಶಸ್ವಿನೊಂದಿಗೆ ಶಾಲೆಯ ಅಭಿವೃದ್ಧಿಯೂ ಸಾಧ್ಯ. ಎಸ್‌ಡಿಎಂಸಿ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕರು ತಂಡವಾಗಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದಾಗ ಶಿಕ್ಷಣ ಸಂಸ್ಥೆ ಉನ್ನತ ಎಂಬುದಕ್ಕೆ ಕುದ್ಮಾರು ಶಾಲೆಯೇ ಸಾಕ್ಷಿ ಎಂದು ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ. ಹೇಳಿದರು. ಕುದ್ಮಾರು ಸರ್ಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ

ಊರಿನವರ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಯಶಸ್ಸಿನ ಜೊತೆಗೆ ಶಾಲಾಭಿವೃದ್ಧಿ ‌ಸಾಧ್ಯ: ಚಕ್ರಪಾಣಿ ಎ.ವಿ. Read More »

ಕುದ್ಮಾರು ಶಾಲಾ ವಾರ್ಷಿಕೋತ್ಸವ

ಕಾಣಿಯೂರು: ಅನೇಕ ಏಳುಬೀಳುಗಳನ್ನು ಕಂಡ ಕುದ್ಮಾರು ಶಾಲೆಯು ಇದೀಗ ಎಲ್ಲರ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಸಂಭ್ರಮದಿಂದ ಆಚರಿಸುತ್ತಿರುವ ಶಾಲಾ ವಾರ್ಷಿಕೋತ್ಸವ ಊರ ಹಬ್ಬವಾಗಿ ಮೂಡಿಬಂದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಶೂರಪ್ಪ ಗೌಡ ಪಟ್ಟೆತ್ತಾನ ಹೇಳಿದರು. ಅವರು ಡಿ.13ರಂದು ನಡೆದ ಕುದ್ಮಾರು ಸ.ಉ.ಹಿ.ಪ್ರಾ.ಶಾಲೆ ಹಾಗೂ ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ

ಕುದ್ಮಾರು ಶಾಲಾ ವಾರ್ಷಿಕೋತ್ಸವ Read More »

ಹಾರಾಡಿಯಲ್ಲಿ ಕಲನ 2025

ಪುತ್ತೂರು: ಇಲ್ಲಿನ ಹಾರಾಡಿಯಲ್ಲಿರುವ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಾರಥ್ಯದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಹಯೋಗದೊಂದಿಗೆ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲನ 2025’ ವ್ಯವಸ್ಥಿತವಾಗಿ ಉದ್ಘಾಟನೆಗೊಂಡಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸುಲೋಚನಿಯವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಅವರು ನೆರವೇರಿಸಿದರು. ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ವಿಜಯಿಗಳಾಗಿ ಎಂದು ಸ್ಪರ್ಧಿಗಳಿಗೆ ಕಿವಿಮಾತು ಹೇಳಿದರು. ಸಭಾಧ್ಯಕ್ಷರು ಮಾತನಾಡಿ ಸರ್ವರ ಸಹಕಾರ ಕೋರಿದರು. ವೇದಿಕೆಯಲ್ಲಿ ತಾಲೂಕು

ಹಾರಾಡಿಯಲ್ಲಿ ಕಲನ 2025 Read More »

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ

ಸುಳ್ಯ: ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ತೀರ್ಪುಗಾರರ ಮೌಲ್ಯಮಾಪನದ ಆಧಾರದ ಮೇಲೆ ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಧಾನಕರ ಬಹುಮಾನದೊಂದಿಗೆ ವಿಜೇತ ತಂಡಗಳನ್ನು ಆಯ್ಕೆಮಾಡಲಾಯಿತು.

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ Read More »

ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು: ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಕಡಬ: ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇಲ್ಲಿನ ವಾರ್ಷಿಕೋತ್ಸವ ಡಿ. 13 ರಂದು ನಡೆಯಲಿದ್ದು, ಆ ಹಿನ್ನೆಲೆ ಇಂದು ಹಿರಿಯ ವಿದ್ಯಾರ್ಥಿ ಸಂಘದ ಕ್ರೀಡಾಕೂಟ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಕಾರ್ಯದರ್ಶಿ ನಾಗೇಶ್ ಕೆಡೆಂಜಿ, ಮುಖ್ಯ ಗುರು ಮಿನಿ ವರ್ಗೀಸ್, ಎಸ್.ಡಿ.ಎಂ.ಸಿ. ಅಧ್ಯಕ್ಷ ದೇವರಾಜ್ ನೂಜಿ, ಕೋಶಾಧಿಕಾರಿ ಯಶೋದರ ಕೆಡೆಂಜಿಕಟ್ಟ , ಯೋಗೀಶ್ ಬರೆಪ್ಪಾಡಿ ,ಉಮೇಶ್ ಕೆರೆನಾರು,ಚಿದಾನಂದ ಕೆರೆನಾರು,ನಿವೃತ್ತ ಮುಖ್ಯ ಗುರುಗಳಾದ ಕುಶಾಲಪ್ಪ ಗೌಡ ಬರಮೇಲು ಸೇರಿದಂತೆ

ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು: ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

error: Content is protected !!
Scroll to Top