ಸುದ್ದಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ ಮೇ.೨೭ ರಂದು ನಡೆಯಿತು.  J.C ತರಬೇತುದಾರರು, ರಾಮ ಕುಂಜ ಪ್ರೌಢಶಾಲೆಯ  ಮುಖ್ಯೋಪಾಧ್ಯಾಯ ಸತೀಶ್ ಭಟ್, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಮಾರಸ್ವಾಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂಕೀರ್ಥ್  ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ, ಡಾ. ದಿನೇಶ ಪಿ .ಟಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ Read More »

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ : ಮರಕಡ ಬಳಿ ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಡಗ ಮಿಜಾರಿನ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರಿಯಕರನಾದ ಚಾಲಕ ವೃತ್ತಿಯ ನಿನ್ನೋಡಿಯ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ವಿವಾಹಿತೆ ನಮೀಕ್ಷಾ ಎಂಬವರಿಗೆ ಇಬ್ಬರು ಗಂಡುಮಕ್ಕಳ ಇದ್ದು, ಗಂಡ ಸತೀಶ್ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ನಮೀಕ್ಷಾನ ಪ್ರಿಯಕ ಪ್ರಶಾಂತ್ ಮೂಲತಃ ಬಾಗಲಕೋಟೆಯ ನಿವಾಸಿ. ಆತನಿಗೂ ಮದುವೆಯಾಗಿದೆ ಎಂದು ತಿಳಿದು ಬಂದಿದೆ. ಇನ್‌ಸ್ಟಾಗ್ರಾಂ ಮೂಲಕ ಇವರಿಬ್ಬರ ಪರಿಚಯವಾಗಿ ಅದು ಪ್ರೇಮಸಂಬಂಧಕ್ಕೆ ತಿರುಗಿದೆ.

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು Read More »

ಆಕಾಶವಾಣಿ ಕೇಂದ್ರದ  ಸೂರ್ಯನಾರಾಯಣ ಭಟ್ಟರಿಗೆ ಸನ್ಮಾನ

ಮೇ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಪಿ. ಎಸ್ ಸೂರ್ಯನಾರಾಯಣ ಭಟ್ ಇವರನ್ನು ಶ್ರೀಮದವೂರ ವಿಘ್ನೇಶ ಕಲಾ ಸಂಘ ಗೇರುಕಟ್ಟೆ ವತಿಯಿಂದ ಆಕಾಶವಾಣಿ ಕೇಂದ್ರದಲ್ಲಿ  ಸನ್ಮಾನಿಸಲಾಯಿತು.  ಕ್ರಿಯಾಶೀಲ ವ್ಯಕ್ತಿತ್ವದ ಸೂರ್ಯನಾರಾಯಣ ಭಟ್ಟರು ಕಾವ್ಯಯಾನ, ಕಥಾಮೃತ, ಕೃಷಿರಂಗ, ತುಳು- ಕನ್ನಡ ಸಂದರ್ಶನ, ಯಕ್ಷ ಸಿರಿ, ಯಕ್ಷಗಾನ ತಾಳಮದ್ದಳೆ ಸಂಯೋಜನೆಯ ಮೂಲಕ ಬಾನುಲಿ ಕಾರ್ಯಕ್ರಮಗಳ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ವಿಘ್ನೇಶ ಕಲಾ ಸಂಘದ ಅಧ್ಯಕ್ಷ   ಪ್ರೊ. ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.  ಈ

ಆಕಾಶವಾಣಿ ಕೇಂದ್ರದ  ಸೂರ್ಯನಾರಾಯಣ ಭಟ್ಟರಿಗೆ ಸನ್ಮಾನ Read More »

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ

ಪುತ್ತೂರು : ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹು ನಿರೀಕ್ಷಿತ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಕರಾವಳಿಯಾದ್ಯಂತ ಮೇ ೩೦ ಶುಕ್ರವಾರ ತೆರೆ ಕಾಣಲಿದೆ. ಉಡುಪಿ, ದ.ಕ. ಜಿಲ್ಲೆಯ ಸುಮಾರು ೧೩ ಥಿಯೇಟರ್ ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ರಝಾಕ್ ಪುತ್ತೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಟಪಾಡಿಯ ಒಂದೇ ಶಾಲೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಸುಮಾರು ೨೫ ಶಾಲೆಯ ೧೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷವಾಗಿದೆ. ಮೊದಲಿಗೆ

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ Read More »

ಕಾರು -ಮಿನಿ ಟೆಂಪೋ ಡಿಕ್ಕಿ  

ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಅಪಘಾತವಾದ  ಘಟನೆ ಕುದ್ಮಾರು ಆಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಹಾಗೂ  ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೋ ನಡುವೆ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದ್ದು, ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಕಾರು -ಮಿನಿ ಟೆಂಪೋ ಡಿಕ್ಕಿ   Read More »

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರಲು ಚರ್ಚೆ ಬೆಂಗಳೂರು : ಮಂಗಳವಾರ ಬಂಟ್ವಾಳದಲ್ಲಿ ನಡೆದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದಿರುವ ಮೂರು ಕೊಲೆಗಳು ಹಾಗೂ ಆಗಾಗ ಸಂಭವಿಸುತ್ತಿರುವ ಕೋಮು ಹಿಂಸಾಚಾರ ಸಂಬಂಧಿ ಘಟನೆಗಳನ್ನು ತಡೆಯಲು ವಿಫಲವಾಗಿರುವ ಪೊಲೀಸ್‌ ಇಲಾಖೆಯ ವಿರುದ್ಧ ಭಾರಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಲವು ಉನ್ನತ ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ? Read More »

ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ : ಕಾಂಗ್ರೆಸ್‌ಗೆ ಮುಸ್ಲಿಮ್‌ ಮುಖಂಡರ ರಾಜೀನಾಮೆ

ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಗೆ ಆಕ್ಷೇಪ ಮಂಗಳೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆಯ ಬಳಿಕ ಕಾಂಗ್ರೆಸ್‌ನ ಮೇಲೆ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಹಲವು ನಾಯಕರು ಪಕ್ಷದಲ್ಲಿರುವ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಹಿಂಸಾಚಾರ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪೋಸ್ಟ್‌ಗಳಿಗೆ ಮುಸ್ಲಿಮ್ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಅಬ್ದುಲ್‌ ರಹಿಮಾನ್‌ ಶವವನ್ನು ಆಸ್ಪತ್ರೆಗೆ ತಂದಾಗ ಅಲ್ಲಿ ಜಮಾಯಿಸಿದ್ದ ಮುಸ್ಲಿಮರು ತಮ್ಮ ಸಮುದಾಯದ ನಾಯಕರನ್ನು ತರಾಟೆಗೆ

ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ : ಕಾಂಗ್ರೆಸ್‌ಗೆ ಮುಸ್ಲಿಮ್‌ ಮುಖಂಡರ ರಾಜೀನಾಮೆ Read More »

ಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನ

ಬಂದೂಕು ಸಹಿತ ಅಪಾರ ಶಸ್ತ್ರಾಸ್ತ್ರ ವಶ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಭದ್ರತಾ ಪಡೆ ಲಷ್ಕರ್‌ ಇ ತೈಬಾದ ಇಬ್ಬರು ಹೈಬ್ರಿಡ್ ಉಗ್ರರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಶೋಪಿಯಾನ್‌ನಲ್ಲಿ ಬಂಧಿಸಲಾದ ಈ ಲಷ್ಕರ್ ಭಯೋತ್ಪಾದಕರನ್ನು ಇರ್ಫಾನ್ ಬಶೀರ್ ಮತ್ತು ಉಜೈರ್ ಸಲಾಮ್ ಎಂದು ಗುರುತಿಸಲಾಗಿದೆ. ಭಾರಿ ದೊಡ್ಡ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದಿಂದ ಅವರು ಓಡಾಡುತ್ತಿದ್ದರು ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಸೆರೆಯಾದ ಉಗ್ರರ ಬಳಿ 2 ಎಕೆ-56 ಬಂದೂಕು,

ಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನ Read More »

ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ

ಬೈಸರನ್‌ ಕಣಿವೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಿಸಿ ಮುಗ್ಧರಿಗೆ ಗೌರವ ಎಂದು ಸಿಎಂ ಘೋಷಣೆ ಶ್ರೀನಗರ: ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯಲ್ಲಿ ಮೃತರಾದ 26 ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘೋಷಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಏ.22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ 26 ನಾಗರಿಕರು ಬಲಿಯಾಗಿದ್ದರು. ಈ 26 ಜನರಿಗೆ ಶಾಶ್ವತ ಗೌರವ ಸಲ್ಲಿಸುವ ಸ್ಮರಣಾರ್ಥ ಸ್ಮಾರಕವನ್ನು ಸ್ಥಾಪಿಸುವುದಾಗಿ

ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ Read More »

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು

ಅಧಿಕಾರ ಹಂಚಿಕೆ ಸೂತ್ರ ಪಾಲಿಸಲು ಹೈಕಮಾಂಡ್‌ ಮುಂದೆ ಕೋರಿಕೆ ಇಟ್ಟ ಡಿಕೆಶಿ ಬೆಂಗಳೂರು: ಕೆಲ ಸಮಯದಿಂದ ತಣ್ಣಗಾಗಿದ್ದ ಕಾಂಗ್ರೆಸ್‌ನ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಮತ್ತೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಕ್ಕುಮಂಡಿಸಿದ್ದಾರೆ ಎನ್ನಲಾಗಿದೆ. ಡಿಕೆ.ಶಿವಕುಮಾರ್ ಅವರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು Read More »

error: Content is protected !!
Scroll to Top