ಸುದ್ದಿ

ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ : ಅಂಚೆ ಇಲಾಖೆ ವಿರುದ್ಧ ಕೇಸ್‌

ನೇತ್ರಾವತಿ ನದಿ ತೀರದಲ್ಲಿ ಕಂಡುಬಂದಿದ್ದ ರಾಶಿ ರಾಶಿ ಆಧಾರ್‌ ಕಾರ್ಡ್‌ ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್‌ ಕಾರ್ಡ್‌ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಮಾ.3ರಂದು ಸಮಯ ಸಂಜೆ ಸ್ಥಳೀಯ ನಿವಾಸಿಗಳ 2013ರಿಂದ 2023ರವರೇಗಿನ ಅಂದಾಜು 500 ಮೂಲ ಆಧಾರ್ ಕಾರ್ಡ್‌ಗಳು ಪತ್ತೆಯಾಗಿದ್ದವು. ಆಧಾರ್ ಕಾರ್ಡ್ ಪ್ರತಿಗಳಲ್ಲಿ ಫರಂಗಿಪೇಟೆಯ ಪೋಸ್ಟ್ […]

ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ : ಅಂಚೆ ಇಲಾಖೆ ವಿರುದ್ಧ ಕೇಸ್‌ Read More »

ಮಸೀದಿ ಗೋಡೆ ಮೇಲೆ ‘ಜೈ ಶ್ರೀರಾಮ್’ ಎಂದು ಮಗನ ಕೈಯಲ್ಲೇ ಬರೆಸಿದ ತಂದೆ

ಬಾಗಲಕೋಟೆ: ತನ್ನ ಮಗನ ಕೈಯಿಂದ ಮುಸ್ಲಿಂ ತಂದೆಯೊಬ್ಬ ಸೆಕ್ಟರ್ 44 ಮಸೀದಿಯ ಗೋಡೆಯ ಮೇಲೆಯೇ ‘ಜೈ ಶ್ರೀರಾಮ್’ ಎಂದು ಬರೆಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಶಿವಾಜಿ ಮೆರವಣಿಗೆಯ ಸಮಯದಲ್ಲಿ ನಡೆದ ಕಲ್ಲು ತೂರಾಟ ಘಟನೆಯ ಕಾವು ಕಡಿಮೆಯಾಗುವ ಮೊದಲೇ ಮತ್ತೊಂದು ವಿವಾದಾತ್ಮಕ ಘಟನೆ ನಡೆದಿದ್ದು, ನಗರ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಎನ್ನುವುದು ಸತ್ಯ. ಮಗನ ಕೈಯಿಂದ ಗೋಡೆ ಮೇಲೆ ಬರೆಯಿಸಿ ಬಳಿಕ ಅಲ್ಲಿಂದ ಆಟೋ ಹತ್ತಿ ತೆರಳಿದ್ದಾರೆ. ಈ

ಮಸೀದಿ ಗೋಡೆ ಮೇಲೆ ‘ಜೈ ಶ್ರೀರಾಮ್’ ಎಂದು ಮಗನ ಕೈಯಲ್ಲೇ ಬರೆಸಿದ ತಂದೆ Read More »

ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಭಟ್ಕಳ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ವೈಯಕ್ತಿಕ ಕಾರಣಗಳ ಬೇಸರದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಗದ್ದೆಯಲ್ಲಿ ನಡೆದಿದೆ. ಮೃತನನ್ನು ‌ಕೌಶಿಕ್ ಸುಬ್ರಾಯ ನಾಯ್ಕ ಎಂದು ಗುರುತಿಸಲಾಗಿದೆ. ಕೌಶಿಕ್ ಓದಿನಲ್ಲಿ ಪ್ರತಿಭಾವಂತನಾಗಿದ್ದು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದ. ಆದರೆ ಶುಕ್ರವಾರ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಾಗಿದ್ದ ಹುಡುಗ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವೈಯಕ್ತಿಕ ಕಾರಣಗಳಿಂದ ಬೇಸತ್ತು ಆತ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ

ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು Read More »

ಕೊಚ್ಚಿಯಲ್ಲಿ ಲಂಗರು ಹಾಕಿದ ಇರಾನ್‌ನ ಸಮರ ನೌಕೆ

ಕೊಚ್ಚಿ ಬಂದರಿನಲ್ಲಿ ಕೆಲವು ದಿನಗಳಿಂದ ನಿಂತಿರುವ ಯುದ್ಧನೌಕೆ ನವದೆಹಲಿ: ಇರಾನಿನ ಯುದ್ಧ ನೌಕೆಯನ್ನು ಅಮೆರಿಕ ಮುಳುಗಿಸಿದ ಬೆನ್ನಲ್ಲೇ ಭಾರತ ಇರಾನಿನ ಇನ್ನೊಂದು ಹಡಗನ್ನು ಕೊಚ್ಚಿಯಲ್ಲಿ ತುರ್ತಾಗಿ ನಿಲ್ಲಿಸಲು ಅನುಮತಿ ನೀಡಿದ ವಿಚಾರ ಬೆಳಕಿಗೆ ಬಂದಿದೆ. ಇರಾನ್ ಯುದ್ಧನೌಕೆ IRIS ದೇನಾವನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸುವ ಕೆಲವು ದಿನಗಳ ಮೊದಲು IRIS Lavan ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತು. ಇರಾನಿನ ವಿನಂತಿಯನ್ನು ಸ್ವೀಕರಿಸಿದ ಭಾರತ ಕೊಚ್ಚಿಯಲ್ಲಿ ನಿಲ್ಲಿಸಲು ಅನುಮತಿ ನೀಡಿದೆ. ಹಡಗಿನಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿದ್ದರಿಂದ

ಕೊಚ್ಚಿಯಲ್ಲಿ ಲಂಗರು ಹಾಕಿದ ಇರಾನ್‌ನ ಸಮರ ನೌಕೆ Read More »

ಸೈಕಲ್‌ನಿಂದ ಬಿದ್ದು ಬಾಲಕ ಸಾವು

ವಿಟ್ಲ: ಬಾಲಕ ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ವಿಟ್ಲ ಸಮೀಪ ಕೊಳ್ನಾಡು ಎಂಬಲ್ಲಿ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್‌ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಬಾಲಕ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್‌ ನಿಯಂತ್ರಣ ತಪ್ಪಿ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲವೆಂದು ಸ್ಥಳೀಯರು

ಸೈಕಲ್‌ನಿಂದ ಬಿದ್ದು ಬಾಲಕ ಸಾವು Read More »

ವಿಟ್ಲದ ನೂಜಿಯಲ್ಲಿ ಮತ್ತೊಂದು ಭಾರಿ ಸ್ಫೋಟ

ದಾಸ್ತಾನು ಇಟ್ಟ ಪಟಾಕಿ ಬಿಸಿಲಿಗೆ ಸ್ಫೋಟಿಸಿ ಆತಂಕ ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಮ್ತೊಮ್ಮೆ ಭಾರಿ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರಿ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಇದೀಗ ಮತ್ತೆ ಅದೇ ಪರಿಸರದಲ್ಲಿ ಶುಕ್ರವಾರ ಮಧ್ಯಾಹ್ನ

ವಿಟ್ಲದ ನೂಜಿಯಲ್ಲಿ ಮತ್ತೊಂದು ಭಾರಿ ಸ್ಫೋಟ Read More »

ಗೃಹ ಬಳಕೆ ಸಿಲಿಂಡರ್‌ ಬೆಲೆ ದಿಢೀರ್‌ 60 ರೂ. ಏರಿಕೆ

ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ ಮತ್ತೆ 115 ರೂ. ಹೆಚ್ಚಳ ನವದೆಹಲಿ: ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟು ಉಳಿದ ದೇಶಗಳ ಮೇಲೆ ನೇರ ಪರಿಣಾಮ ಬೀರಲಾರಂಭಿಸಿದೆ. BHಳ ಸಮಯದ ಬಳಿಕ ಭಾರತದಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ ಹೆಚ್ಚಿಸಲಾಗಿದೆ. ಇದರ ಜೊತೆಗೆ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯೂ ಹೆಚ್ಚಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ

ಗೃಹ ಬಳಕೆ ಸಿಲಿಂಡರ್‌ ಬೆಲೆ ದಿಢೀರ್‌ 60 ರೂ. ಏರಿಕೆ Read More »

ಬುರ್ಖಾ ಹಾಕಿ ಹೋಳಿ ಹಬ್ಬ ಆಚರಿಸಿದ ಯುವಕರು ಪೊಲೀಸರ ವಶಕ್ಕೆ

ಕಲಬುರ್ಗಿ: ಹೋಳಿ ಹಬ್ಬವನ್ನು ತಮ್ಮ ಗೆಳೆಯನಿಗೆ ಬುರ್ಖಾ ಧರಿಸಿ ಆಚರಿಸಿದ ಯುವಕರ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹೋಳಿ ಆಡುವ ವೇಳೆ ಗೆಳೆಯನೊಬ್ಬನಿಗೆ ಹಿಜಾಬ್, ಬುರ್ಖಾ ಹಾಕಿಸಿ ವಿವಿಧ ಭಂಗಿಯಲ್ಲಿ ನೃತ್ಯ ಮಾಡಿಸಿ, ಫೋಟೋ ತೆಗೆಸಿ, ವಿಡಿಯೋ ಮಾಡಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಹಾಗೆಯೇ ಬುರ್ಖಾ ಧರಿಸಿದ ಯುವಕನನ್ನು ಗರ್ಭಿಣಿಯಂತೆ ನಟನೆ ಮಾಡಿಸಿ ಫೋಟೋ ತೆಗೆದು ಹಾಕಿದ್ದರು. ಇವೆಲ್ಲವೂ ಮುಸ್ಲಿಂ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ.

ಬುರ್ಖಾ ಹಾಕಿ ಹೋಳಿ ಹಬ್ಬ ಆಚರಿಸಿದ ಯುವಕರು ಪೊಲೀಸರ ವಶಕ್ಕೆ Read More »

ಸಿಎಂ ಸಿದ್ದರಾಮಯ್ಯ ಅವರ ‘ಬ್ರದರ್ಸ್ ಬಜೆಟ್’ ಬಗ್ಗೆ ಬಿಜೆಪಿ ಟೀಕೆ

ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಸರ್ಕಾರದ ಬಜೆಟ್‌ಗೆ ‘ಬ್ರದರ್ಸ್ ಬಜೆಟ್’ ಎಂದು ಕರೆದಿರುವ ಬಿಜೆಪಿ, ಟೀಕೆಗಳ ಸುರಿಮಳೆಯನ್ನೇ ‌ಮಾಡಿದೆ. ಬಿಜೆಪಿ ನಾಯಕರು ಎಕ್ಸ್ ಖಾತೆಯಲ್ಲಿ ಬಜೆಟ್ ವಿರುದ್ಧ ಟೀಕೆಗಳನ್ನು ಮಾಡಿದ್ದು, ಅಲ್ಪಸಂಖ್ಯಾತರ ಶಾಲೆಗಳನ್ನು ಕೆಪಿಎಸ್‌ ಮಾದರಿಯಲ್ಲಿ ಉನ್ನತೀಕರಣಕ್ಕೆ 1000 ಕೋಟಿ ರೂ., ಅಲ್ಪಸಂಖ್ಯಾತರ ವಸತಿ ಶಾಲೆಗಳ ಆರಂಭ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ, ಅಲ್ಪಸಂಖ್ಯಾತ ಕಾಲೋನಿಗಳ ಮೂಲಸೌಕರ್ಯಕ್ಕೆ ನೂರಾರು ಕೋಟಿ ಮೀಸಲು, ಅಲ್ಪಸಂಖ್ಯಾಂತ ನಿರ್ಗತಿಕರಿಗೆ ಎರಡು ವೃದ್ಧಾಶ್ರಮ ಆರಂಭ, ಅಲ್ಪಸಂಖ್ಯಾಂತ ನಿರುದ್ಯೋಗಿಗಳಿಗೆ 3 ಲಕ್ಷ

ಸಿಎಂ ಸಿದ್ದರಾಮಯ್ಯ ಅವರ ‘ಬ್ರದರ್ಸ್ ಬಜೆಟ್’ ಬಗ್ಗೆ ಬಿಜೆಪಿ ಟೀಕೆ Read More »

ಮಾ. 8: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಹತ್ತೂರೊಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಮಾ. 8 ರಂದು ಬಿಡುಗಡೆ ಮಾಡಲಿದ್ದಾರೆ. ಮಹಾಲಿಂಗೇಶ್ವರ ದೇಗುಲದಲ್ಲಿ ಮಾ. 8 ರಂದು 11 ಗಂಟೆಗೆ ದೇಗುಲದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ಎ. 1 ರಂದು ಜಾತ್ರಾ ಪ್ರಯುಕ್ತ ಗೊನೆ ‌ಮುಹೂರ್ತ ನಡೆಯಲಿದ್ದು, ಎ. 19 ರ ವರೆಗೆ ಪುತ್ತೂರು ಜಾತ್ರೆ ಬಹಳಷ್ಟು ವೈಭವದಿಂದ ನಡೆಯಲಿದೆ. ಪ್ರಧಾನ ವಿಧಿ

ಮಾ. 8: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top