ಸುದ್ದಿ

ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ ಸನ್ಮಾನ

ನಾಳ :  ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳದಿಂದ  ಜರಗಿದ ಸಾಕೇತ ಸಾಮ್ರಾಜ್ನಿ ಯಕ್ಷಗಾನ ಪ್ರದರ್ಶನದಲ್ಲಿ ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇವರನ್ನು ಯಕ್ಷ ಕಲಾಭಿಮಾನಿಗಳು ನಾಳ- ಗೇರುಕಟ್ಟೆ ವತಿಯಿಂದ ಗೌರವಿಸಲಾಯಿತು . 60ರ ಹರೆಯದ  ಕಲಾವಿದ ಶೆಟ್ಟಿಗಾರ್  ಅನಾರೋಗ್ಯದಿಂದಿದ್ದು ಅವರಿಗೆ ಧೈರ್ಯ ತುಂಬುವುದಕ್ಕಾಗಿ ಯಕ್ಷ ಕಲಾಭಿಮಾನಿಗಳ ನೆರವನ್ನು ಈ ಮೂಲಕ ನೀಡಲಾಯಿತು. ಗೌರವ ಸ್ವೀಕರಿಸಿದ ಶೆಟ್ಟಿಗಾರ್ ಕೃತಜ್ಞತೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮೇಳದ ಭಾಗವತರಾದ ರವಿಚಂದ್ರ […]

ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ ಸನ್ಮಾನ Read More »

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ನೂತನ ಪ್ರವೀಣ್ ನೆಟ್ಟಾರು | ಸುಹಾಸ್ ಹೆತ್ತವರಿಗೆ ಸಾಂತ್ವನದ ಮಾತು

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಸ್‍ ಶೆಟ್ಟಿ ಮನೆಗೆ ಅನೇಕ ಹಿಂದೂ ಮುಖಂಡರು ಭೇಟಿ ನೀಡಿ ಸಾಂತ್ವನವನ್ನು ಹೇಳಿದ್ದಾರೆ. ಇದೀಗ ಹತ್ಯೆಗೀಡಾದ ಸುಹಾನ್ ಶೆಟ್ಟಿ ಅವರ ಬಂಟ್ವಾಳ ತಾಲೂಕಿನ ಕಾರಿಂಜಬೈಲು ಪುಳಿಮಜಲಿನ ಮನೆಗೆ  ಮೂರು ವರ್ಷಗಳ ಹಿಂದೆ ಹತ್ಯೆಯಾದ ಪ್ರವೀಣ್‍ ನೆಟ್ಟಾರು ಅವರ ಪತ್ನಿ ನೂತನ ಮಂಗಳವಾರ ಭೇಟಿ ನೀಡಿ ಸುಹಾಸ್ ಹೆತ್ತವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ನೂತನ ಪ್ರವೀಣ್ ನೆಟ್ಟಾರು | ಸುಹಾಸ್ ಹೆತ್ತವರಿಗೆ ಸಾಂತ್ವನದ ಮಾತು Read More »

ಕಾರುಗಳ ನಡುವೆ ಡಿಕ್ಕಿ | ಇಬ್ಬರು ಗಂಭೀರ, ಓರ್ವ ಮೃತ್ಯು

ಸುಳ್ಯ : ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸುಳ್ಯದ ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ-ಗೋಪಾಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರಾಮನಗರದ 73 ವರ್ಷದ ಯಲ್ಲಿಗಯ್ಯ ಎನ್ನಲಾಗಿದೆ. ಕಾರು ಚಲಾಯಿಸುತ್ತಿದ್ದ ಅವರ ಮಗ ನವೀನ್ (29) ಮತ್ತು ನವೀನ್ ಅವರ ತಾಯಿ ದೈಯಮ್ಮ (52) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಡಿಕ್ಕಿಯ ಪರಿಣಾಮವಾಗಿ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಕಾರುಗಳ ನಡುವೆ ಡಿಕ್ಕಿ | ಇಬ್ಬರು ಗಂಭೀರ, ಓರ್ವ ಮೃತ್ಯು Read More »

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ

ಪುತ್ತೂರು : ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ಭಾರತೀಯ ಸೇನೆಗೆ ಒಳಿತಾಗಲಿ ಹಾಗೂ ಸೇನೆಗೆ ಮತ್ತಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಜಿರಾಯಿ ಸಚಿವರ ಸೂಚನೆಯಂತೆ ವಿಶೇಷ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ ಗುರುವಾರ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ವಸಂತ ಕದಿಲಾಯ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ Read More »

ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಶಿಪ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟದಲ್ಲಿ ಚಾಂಪಿಯನ್ ಪಡೆದುಕೊಂಡಿದೆ. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಮಂಗಳೂರು ವಿಭಾಗ ಮಟ್ಟದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು  ಪಾಲ್ಗೊಂಡಿದ್ದವು. ಈ ವಿಜಯದೊಂದಿಗೆ ಕಾಲೇಜಿನ ತಂಡವು ಮೇ ೧೫ ರಿಂದ ೧೭ರ ವರೆಗೆ ಬಳ್ಳಾರಿಯ ಬಿಐಟಿಎಂ ನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪಧೆಯಲ್ಲಿ

ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಶಿಪ್ Read More »

ಹಸಮಣೆ ಏರಬೇಕಿದ್ದ ವರ ವಿಷ ಸೇವನೆ | ಆಸ್ಪತ್ರೆಗೆ ದಾಖಲು

ಸುಳ್ಯ : ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಜನಾರ್ದನ್ ಎನ್ನಲಾಗಿದೆ. ಅವರ ವಿವಾಹ ನಿಶ್ಚಯವಾಗಿದ್ದು, ಕೆಲ ದಿನಗಳಲ್ಲೇ ಹಸಮಣೆ ಏರಬೇಕಿತ್ತು. ಅಷ್ಟರಲ್ಲೇ ಇಂತಹ ನಿರ್ಧಾರ ಕೈಗೊಳ್ಳಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಜನಾರ್ದನ್ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಹಸಮಣೆ ಏರಬೇಕಿದ್ದ ವರ ವಿಷ ಸೇವನೆ | ಆಸ್ಪತ್ರೆಗೆ ದಾಖಲು Read More »

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ

ಪುತ್ತೂರು: ಇಲ್ಲಿಯ ಕಿಲ್ಲೇ ಮೈದಾನ ರಸ್ತೆಯಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ ಮೇ 11 ರಂದು ಬೆಳಿಗ್ಗೆ 8.26 ರ ಶುಭಮುಹೂರ್ತದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ದೇವಸ್ಥಾನದಲ್ಲಿ ಅರಾಧ್ಯ ದೇವಿಯಾದ ಹತ್ತೂರಿಗೆ ಸಂಬಂಧಪಟ್ಟ ಪದ್ಮಾವತಿ ಎಂಬ ಖ್ಯಾತಿಯ ಪನ್ನಗ ಕನ್ನಿಕಾದೇವಿಯನ್ನು ಪ್ರತಿಷ್ಠಾಪಿಸಿ ಆರಾಧನೆ ಮಾಡಿಕೊಂಡು ಬಂದಿದ್ದರು. ಬಳಿಕ ದಿನಗಳಲ್ಲಿ ದೇವಸ್ಥಾನ

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ Read More »

ಬಿಜೆಪಿ ಶಕ್ತಿಕೇಂದ್ರದಿಂದ ಭಾರತೀಯ ಸೇನೆಗೆ ಒಲಿತಾಗಲೆಂದು ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಜಮ್ಮು ಕಾಶ್ಮೀರದ ಪಹಲ್ಗಾಮ್‍ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿದ್ದ 9 ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿ, 90ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಮಾಡಲಾಗಿದ್ದು, ಈ ಹಿನ್ನಲೆ ದೇಶದ ಮೇಲೆ ಆಗುತ್ತಿರುವ ಉಗ್ರರ ದಾಳಿಯನ್ನು ಸಮರ್ಥವಾಗಿ ಎದುರಿಸಿ ಉಗ್ರ ನೆಲೆಗಳನ್ನು ದ್ವಂಸ ಮಾಡಿದ ನಮ್ಮ ಸೇನೆಗೆ ಇನ್ನಷ್ಟು ಆತ್ಮಸ್ಥೈರ್ಯ ಹಾಗೂ ಶಕ್ತಿ ಬರಲಿ ಎಂದು ನಮ್ಮ ಶ್ರೀ ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು

ಬಿಜೆಪಿ ಶಕ್ತಿಕೇಂದ್ರದಿಂದ ಭಾರತೀಯ ಸೇನೆಗೆ ಒಲಿತಾಗಲೆಂದು ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ

ದ್ವೇಷಪೂರಿತ ಪೋಸ್ಟ್‌ಗಳನ್ನು ಲೈಕ್‌, ಫಾರ್ವರ್ಡ್‌ ಮಾಡಿದರೂ ಕೇಸ್‌ ಮಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಗುಂಪುಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವುದನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ರೀತಿಯ ಪೋಸ್ಟ್‌ಗಳನ್ನು ಹಾಕುವವರು ಪರಿಣಾಂ ಎದುರಿಸಲು ಸಿದ್ಧರಾಗಿರಬೇಕೆಂದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಸಿದ್ದಾರೆ. ಕಳೆದ ವಾರವೊಂದರಲ್ಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ 30ಕ್ಕೂ ಹೆಚ್ಚು ಇಂಥ ಪ್ರಕರಣಗಳು ದಾಖಲಾಗಿವೆ. ಸಿಇಎನ್

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ Read More »

ಹಾಸನದಲ್ಲಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನವೀಕೃತ ಶಾಖೆ ಲೋಕಾರ್ಪಣೆ

ಹಾಸನ : ನಗರದಲ್ಲಿ ನೂತನವಾಗಿ ನವೀಕರಣಗೊಂಡ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಶಾಖೆಯನ್ನು ಖ್ಯಾತ ಚಲನಚಿತ್ರ ನಟಿ ಮಿಲನ ನಾಗರಾಜ್ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿದರು. ಸಂಸ್ಥೆಯ ನಿರ್ದೇಶಕರಾದ ಲಕ್ಷ್ಮೀಕಾಂತ್ ಮಾತನಾಡಿ, ನೂತನವಾಗಿ ಆರಂಭಗೊಂಡ ಶಾಖೆಯಲ್ಲಿ ಅತೀ ವಿನೂತನ ರೀತಿಯ ಹೊಸ ಹೊಸ ಡಿಸೈನ್ ಗಳನ್ನು ಒಳಗೊಂಡಿದ್ದು, ಈ ಆಭರಣಗಳು ಜನರ ಮನಸ್ಸನ್ನು ಮೆಚ್ಚಿಸುವಂತಹದಾಗಿದೆ ಹಾಗೂ ಗ್ರಾಹಕ ಸ್ನೇಹಿಯಾಗಿ ಒಳ್ಳೆಯ ಹೆಸರನ್ನು ಪಡೆದುಕೊಂಡಿದೆ ಎಂದರು. 2007ರಲ್ಲಿ ಹಾಸನಕ್ಕೆ ಮೊಟ್ಟ ಮೊದಲ ಬಾರಿಗೆ 916 ಹಾಲ್ ಮಾರ್ಕ್

ಹಾಸನದಲ್ಲಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನವೀಕೃತ ಶಾಖೆ ಲೋಕಾರ್ಪಣೆ Read More »

error: Content is protected !!
Scroll to Top