ಸುದ್ದಿ

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ

ಗಣರಾಜ್ಯೋತ್ಸವಕ್ಕೆ ವಂದೇ ಮಾತರಂಗೆ 150 ವರ್ಷ, ಆಪರೇಷನ್‌ ಸಿಂದೂರ ಸ್ಪರ್ಶ ನವದೆಹಲಿ : 77ನೇ ಗಣರಾಜ್ಯೋತ್ಸವ ಆಚರಿಸಲು ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. ಈ ಬಾರಿ ಗಣರಾಜ್ಯೋತ್ಸವ ಆಚರಣೆ ‘ವಂದೇ ಮಾತರಂಗೆ 150 ವರ್ಷಗಳು’ ಎಂಬ ವಿಷಯದ ಮೇಲೆ ನಡೆಯಲಿದೆ. 1875ರಲ್ಲಿ ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ವಿರಚಿತ ವಂದೇ ಮಾತರಂಗೆ ಇದೀಗ 150 ವರ್ಷಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವಂದೇ ಮಾತರಂನಿಂದ ಪ್ರೇರಿತವಾದ ಸಾಂಸ್ಕೃತಿಕ ಹಾಗೂ ಪ್ರದರ್ಶನಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ. ಇದೇ ಮೊದಲ […]

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ Read More »

ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರ : ಟಿ20 ಸರಣಿ ಭಾರತ ಕೈವಶ

ಕೇವಲ 10 ಓವರ್‌ಗಳಲ್ಲಿ ಗುರಿ ಬೆನ್ನಟ್ಟಿ ಗೆದ್ದು ಬೀಗಿದ ಟೀಂ ಇಂಡಿಯಾ ಗುವಾಹಟಿ: ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವನ್ನೂ ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಈ ಮೂಲಕ 3-0 ಅಂತರದಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಸತತ 13ನೇ ಟಿ20 ಸರಣಿಯನ್ನು ಗೆಲ್ಲುವ ಮೂಲಕ ತನ್ನದೇ ಹಳೆದ ದಾಖಲೆಯನ್ನು ಮುರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌

ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರ : ಟಿ20 ಸರಣಿ ಭಾರತ ಕೈವಶ Read More »

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಜೀವಂತ ಸುಟ್ಟುಕೊಂದ ದುಷ್ಕರ್ಮಿಗಳು

ಮಲಗಿದ್ದ ಯುವಕನ ಮೇಲೆ ಪೆಟ್ರೋಲು ಸುರಿದು ಬೆಂಕಿಹಚ್ಚಿ ಕೊಲೆ ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಸರಣಿ ಹತ್ಯೆ ಮುಂದುವರಿದಿದೆ. ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನು ಗ್ಯಾರೇಜ್‌ ಒಳಗೆ ಜೀವಂತ ಸುಟ್ಟುಹಾಕಲಾಗಿದೆ. ಇದು ಪೂರ್ವನಿಯೋಜಿತ ಕೃತ್ಯ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಚಂಚಲ್ ಚಂದ್ರ ಭೌಮಿಕ್ ಸಜೀವ ದಹನವಾದ ವ್ಯಕ್ತಿ. ನರಸಿಂಗ್ಡಿ ಪೊಲೀಸ್ ಠಾಣೆಗೆ ಹೊಂದಿಕೊಂಡಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಭೌಮಿಕ್‌ ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದವರು, ಕೆಲಸದ ನಿಮಿತ್ತ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಜೀವಂತ ಸುಟ್ಟುಕೊಂದ ದುಷ್ಕರ್ಮಿಗಳು Read More »

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ

ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಮಂಗಳೂರು : ನಗರದ ಅಕ್ಬರ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಜ್ವಾಲೆಯು ಕಟ್ಟಡದ ಹಲವು ಮಳಿಗೆಗಳಿಗೆ ವ್ಯಾಪಿಸಿದ್ದು, ಇದರಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ. ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆ ಅಂಗಡಿಗೂ ಬೆಂಕಿಯಿಂದ ಹಾನಿ ಉಂಟಾಗಿದೆ. ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಂಗಡಿಗಳಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ Read More »

ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ

ಸರಣಿ ವಶಪಡಿಸಿಕೊಳ್ಳಲು ಭಾರತ ತವಕ ; ನ್ಯೂಜಿಲೆಂಡ್‌ಗೆ ಗೆಲ್ಲುವ ಅನಿವಾರ್ಯತೆ ಗುವಾಹಟಿ : ಭಾರತ ಮತ್ತು ನ್ಯೂಜಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಮೊದಲ ಎರಡು ಪಂದ್ಯಗಳನ್ನು ಭಾರತ ಗೆದ್ದಿದ್ದು, ಮೂರನೇ ಪಂದ್ಯವನ್ನು ಗೆದ್ದರೆ ಸರಣಿ ಕೈವಶವಾಗಲಿದೆ. ಸರಣಿಯನ್ನು

ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ Read More »

400 ಕೋ. ರೂ. ಮೌಲ್ಯದ ಕರೆನ್ಸಿ ನೋಟ್‌ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳು ಹೈಜಾಕ್‌

ದಟ್ಟ ಅರಣ್ಯದ ಘಾಟ್‌ನಲ್ಲಿ ನಡೆದ ಸಿನಿಮೀಯ ಶೈಲಿಯ ದರೋಡೆ ಕೃತ್ಯ ; ಮೂರು ರಾಜ್ಯಗಳ ಪೊಲೀಸರಿಂದ ತನಿಖೆ ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನು ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣ ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ

400 ಕೋ. ರೂ. ಮೌಲ್ಯದ ಕರೆನ್ಸಿ ನೋಟ್‌ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳು ಹೈಜಾಕ್‌ Read More »

ರಾಮಕುಂಜ : ತಂದೆಗೆ ಇರಿದು ಮಗ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ತಂದೆಯೇ ಗುಂಡು ಹಾರಿಸಿ ಮಗನನ್ನು ಸಾಯಿಸಿದ್ದಾರೆ ಎಂದು ದೂರು ಕಡಬ : ಇಲ್ಲಿನ ರಾಮಕುಂಜದಲ್ಲಿ ಶನಿವಾರ ಸಂಜೆ ಬಾಲಕನೋರ್ವ ತಂದೆಗೆ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ತಂದೆಯೇ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದಾಗಿ ದೂರು ದಾಖಲಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು. ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಬಾಲಕ. ರಾಮಕುಂಜ ಗ್ರಾಮದ ಪಾದೆ ನಿವಾಸಿ ತಂದೆ

ರಾಮಕುಂಜ : ತಂದೆಗೆ ಇರಿದು ಮಗ ಆತ್ಮಹತ್ಯೆ ಪ್ರಕರಣಕ್ಕೆ ತಿರುವು Read More »

ಅಯೋಧ್ಯೆಯ ಶ್ರೀ ರಾಮನಿಗೆ 286 KG ತೂಕದ ಧನಸ್ಸು

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಒಡಿಶಾದಿಂದ 286 ಕೆಜಿ ತೂಕದ ಚಿನ್ನದ ಧನಸ್ಸು ಸಮರ್ಪಣೆಯಾಗಿದೆ. ಈ ಧನಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳ‌ ನೈಪುಣ್ಯದಿಂದ ತಯಾರು ಮಾಡಲಾಗಿದೆ. ಇದನ್ನು ತಯಾರಿಸಲು ಚಿನ್ನ, ಬೆಳ್ಳಿ, ತಾಮ್ರ, ಸತು, ಕಬ್ಬಿಣ ಮೊದಲಾದ ಮಿಶ್ರ ಲೋಹದಿಂದ ತಯಾರಿಸಲಾಗಿದೆ. ಇದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ.

ಅಯೋಧ್ಯೆಯ ಶ್ರೀ ರಾಮನಿಗೆ 286 KG ತೂಕದ ಧನಸ್ಸು Read More »

ಸಿದ್ದರಾಮಯ್ಯ ಕಟೌಟ್‌ ಬಿದ್ದು ಮೂವರಿಗೆ ಗಂಭೀರ ಗಾಯ

ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಅಳವಡಿಸಿದ್ದ ಬೃಹತ್‌ ಕಟೌಟ್‌ ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ

ಸಿದ್ದರಾಮಯ್ಯ ಕಟೌಟ್‌ ಬಿದ್ದು ಮೂವರಿಗೆ ಗಂಭೀರ ಗಾಯ Read More »

10 ರೂ.ಗೆ ಲಭ್ಯ ನಂದಿನಿ ಹಾಲು, ಮೊಸರು

ಹೊಸ ಪ್ಯಾಕೆಟ್‌ ಮಾರುಕಟ್ಟೆಗೆ ಬಿಡುಗಡೆ ಬೆಂಗಳೂರು: ಇನ್ನು ಮುಂದೆ ನಂದಿನಿ ಹಾಲು ಮತ್ತು ಮೊಸರು 10 ರೂ.ಗಳ ಪ್ಯಾಕೆಟ್‌ನಲ್ಲೂ ಸಿಗಲಿದೆ. ನಂದಿನಿ ಮಳಿಗೆಗಳಲ್ಲಿ 10 ರೂ. ಮೌಲ್ಯದ ಹಾಲು, ಮೊಸರಿನ ಪ್ಯಾಕೆಟ್‌ಗಳೊಂದಿಗೆ ಮೀಡಿಯಂ ಫ್ಯಾಟ್‌ ಇರುವ ಪನೀರ್‌, ಹೈ ಆರೋಮ ತುಪ್ಪ, ಪ್ರೊಬಯಾಟಿಕ್‌ ಮಾವಿನ ಲಸ್ಸಿ, ಡೇರಿ ವೈಟ್ನರ್‌ ಸೇರಿದಂತೆ ಒಟ್ಟು ಹತ್ತು ಹೊಸ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಶುಕ್ರವಾರ ಬಿಡುಗಡೆ ಮಾಡಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ನ ಹಾಲು

10 ರೂ.ಗೆ ಲಭ್ಯ ನಂದಿನಿ ಹಾಲು, ಮೊಸರು Read More »

error: Content is protected !!
Scroll to Top