ಸುದ್ದಿ

‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಬಿಡುಗಡೆ

ಬೆಂಗಳೂರು : ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಕೊನೆಗೂ ಬಿಡುಗಡೆಯಾಗಿದೆ. ಆ್ಯಪ್ ಬಳಸಿಕೊಂಡು ಇನ್ನು ಮುಂದೆ ಬೆಂಗಳೂರಿಗರು ಬಿಎಂಟಿಸಿ ಬಸ್’ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಈ ಆ್ಯಪ್ ಅನ್ನು ಬುಧವಾರ ರಾತ್ರಿ ಲೈವ್ ಮಾಡಲಾಗಿದ್ದು, ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಡೌನ್‌ಲೋಡ್ ಮಾಡಬಹುದು ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ್ಯಪ್ ಬೀಟಾ ಪರೀಕ್ಷೆಯ ಹಂತದಲ್ಲಿದ್ದಾಗ ಅದನ್ನು ‘ನಿಮ್ ಬಸ್’ ಎಂದು ಕರೆಯಲಾಗುತ್ತಿತ್ತು. ಇದೀಗ ಲೈವ್ ಮಾಡುವ ವೇಳೆ ಅದನ್ನು ‘ನಮ್ಮ ಬಿಎಂಟಿಸಿ’ ಎಂದು […]

‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಬಿಡುಗಡೆ Read More »

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್‌ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದು, ಬೆಂಗಳೂರಿನ ಜಯನಗರದ ಎನ್ಎಂಕೆಆರ್‌ವಿ ಕಾಲೇಜು ಕಲಾ ವಿಭಾಗದ ವಿದ್ಯಾರ್ಥಿನಿ ತಬಸ್ಸುಮ್ 600ಕ್ಕೆ 593 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂತೆಯೇ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ Read More »

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಉತ್ತರ ಪ್ರದೇಶದ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರಿದ್ದು, ಈತ ಇತ್ತೀಚೆಗೆ ಹತ್ಯೆಯಾದ ‘ಗ್ಯಾಂಗ್‌ಸ್ಟರ್‌’ ಅತೀಕ್ ಅಹ್ಮದ್‌ನ ಆತ್ಮೀಯ ಸ್ನೇಹಿತ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ದೂರಿದರು. ‘ಈ ಮೂಲಕ ಕಾಂಗ್ರೆಸ್‌ ಪಕ್ಷವು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ದೇಶ ದ್ರೋಹಿಗಳು ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.‘ಅತೀಕ್ ಅಹ್ಮದ್‌ ತನ್ನ ಗುರುವೆಂದು ಹೇಳುತ್ತಿದ್ದುದು

ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿ ‘ಗ್ಯಾಂಗ್‌ಸ್ಟರ್‌’ ಸ್ನೇಹಿತ ಗಡಿಯಾ ಹೆಸರು : ಶೋಭಾ ಕರಂದ್ಲಾಜೆ Read More »

ಪೂಂಚ್ ಭಯೋತ್ಪಾದಕ ದಾಳಿ

ವಾಹನಕ್ಕೆ ಬೆಂಕಿ ಹತ್ತಿಕೊಂಡು ಐವರು ಯೋಧರು ಹುತಾತ್ಮ ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಗಡಿ ಜಿಲ್ಲೆಗಳಾದ

ಪೂಂಚ್ ಭಯೋತ್ಪಾದಕ ದಾಳಿ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ(95%) ಜಿಲ್ಲೆ ಪ್ರಥಮ ಮತ್ತು ಉಡುಪಿ (95%) ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕೊಡಗು(91%) ತೃತೀಯ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಪತ್ರಿಕಾಗೋಷ್ಠಿಯಿಂದ ಹೊರಗುಳಿಯಲಿದ್ದಾರೆ. ಫಲಿತಾಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್ ಆರ್ ಮಾಧ್ಯಮಗಳನ್ನುದ್ದೇಶಿಸಿ ಫಲಿತಾಂಶ ಪ್ರಕಟಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಒದಗಿಸಿದ ಅಂಕಿಅಂಶಗಳ ಪ್ರಕಾರ,

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ವಾಹನ ಖರೀದಿಯಲ್ಲಿ ಅಕ್ರಮ : ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕ ಆಪ್ ಆಗ್ರಹ

ಬೆಂಗಳೂರು : ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್‌ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ.ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಮ್‌ ಆದ್ಮಿ ಪಕ್ಷದ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಅವರು, ಅಕ್ರಮದ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಹೇಳಿದರು.“ಬಿಬಿಎಂಪಿಯು ಹೊರಡಿಸಿರುವ ಆದೇಶದ ಪ್ರಕಾರ 2017-18ರಿಂದ 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ, ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ. ಆದರೆ, ಈ ಪೈಕಿ

ವಾಹನ ಖರೀದಿಯಲ್ಲಿ ಅಕ್ರಮ : ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕ ಆಪ್ ಆಗ್ರಹ Read More »

ಮಾನ್ಯತೆಯ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಅನಧಿಕೃತ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮೇ 31 ರ ವರೆಗೆ ಗಡುವು

ನಿಗದಿತ ಗಡುವಿನಲ್ಲಿ ಸಮಸ್ಯೆ ಬಗೆಹರಿಯದೇ ಹೋದಲ್ಲಿ ಅಂತಹ ಶಾಲೆಗಳನ್ನು ಮುಚ್ಚುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ಬೆಂಗಳೂರು : ಮಾನ್ಯತೆಯ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದಕ್ಕೆ ಅನಧಿಕೃತ ಖಾಸಗಿ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆ ಮೇ 31 ರ ವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನಲ್ಲಿ ಸಮಸ್ಯೆ ಬಗೆಹರಿಯದೇ ಹೋದಲ್ಲಿ ಅಂತಹ ಶಾಲೆಗಳನ್ನು ಮುಚ್ಚುವಂತೆ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅನಧಿಕೃತ ಖಾಸಗಿ ಶಾಲೆಗಳು ನಡೆಯುತ್ತಿರುವುದರ ಬಗ್ಗೆ ಪೋಷರು ದೂರು ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ ಹಾಗೂ

ಮಾನ್ಯತೆಯ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಅನಧಿಕೃತ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮೇ 31 ರ ವರೆಗೆ ಗಡುವು Read More »

ಮೋದಿ ಉಪನಾಮ ಅವಹೇಳನ : ತಡೆಯಾಜ್ಞೆ ನೀಡಲು ಕೋರ್ಟ್ ನಕಾರ

ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಸೂರತ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೋದಿ ಉಪನಾಮದ ಅವಹೇಳನಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದೆ.ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು. ಸೂರತ್‌

ಮೋದಿ ಉಪನಾಮ ಅವಹೇಳನ : ತಡೆಯಾಜ್ಞೆ ನೀಡಲು ಕೋರ್ಟ್ ನಕಾರ Read More »

ನೇಪಾಳದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಪತ್ತೆ

ದೆಹಲಿ : ನೇಪಾಳದಲ್ಲಿರುವ ಮೌಂಟ್ ಅನ್ನಪೂರ್ಣದ ಕ್ಯಾಂಪ್ ನಿಂದ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಅನುರಾಗ್ ಮಲು ಎಂಬುವವರು ಪತ್ತೆಯಾಗಿದ್ದಾರೆ.ಅನುರಾಗ್ ಮಲು ಮೌಂಟ್ ಅನ್ನಪೂರ್ಣ ನ್ನು ಇಳಿಯುತ್ತಿದ್ದಾಗ ಕ್ಯಾಂಪ್ 3 ರಿಂದ ಸೋಮವಾರದಂದು, ನಾಪತ್ತೆಯಾಗಿದ್ದರು. ಆದರೆ ಅವರು 6000 ಮೀಟರ್ ಎತ್ತರದಿಂದ ಕಂದಕಕ್ಕೆ ಉರುಳಿಬಿದ್ದು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು. ಗುರುವಾರದಂದು ಮಲು ಅವರ ಸಹೋದರ ಮಾತನಾಡಿದ್ದು, ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರನ್ನು ರಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ರಾಜಸ್ಥಾನದ ಕಿಶನ್ಘರ್ ನ ನಿವಾಸಿಯಾಗಿರುವ ಮಲೂ (34) ಮೌಂಟ್ ಅನ್ನಪೂರ್ಣದ ಕ್ಯಾಂಪ್

ನೇಪಾಳದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಪತ್ತೆ Read More »

error: Content is protected !!
Scroll to Top