ಸುದ್ದಿ

ಜಿಲ್ಲಾ ಗವರ್ನರ್ ವಿಕ್ರಂ ದತ್ತ ಬೇಟಿ ಸಂದರ್ಭ | ವಿಟ್ಲ ರೋಟರಿ ಕ್ಲಬ್ ವತಿಯಿಂದ ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ

ವಿಟ್ಲ  : ವಿಟ್ಲ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಇವರ ಅಧಿಕೃತ ಬೇಟಿಯ ಸಂದರ್ಭದಲ್ಲಿ ವಿಟ್ಲ ರೋಟರಿ ಕ್ಲಬ್ ವತಿಯಿಂದ ವಿಟ್ಲ  ಕೊಡಂಗೆ ನಿರ್ಗತಿಕ ಮಹಿಳೆ ಎಂಬವರಿಗೆ ಪುಷ್ಪಾ ಇವರಿಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮನೆಯನ್ನು ಹಸ್ತಾಂತರಿಸಲಾಯಿತು. ಸುನಂದಾ ಎಂಬವರಿಗೆ 10 ಸಾವಿರ ಧನ ಸಹಾಯ, ಪ್ರತಿಭಾವಂತ ವಿದ್ಯಾರ್ಥಿಗಳಾದ ಸಮೃದ್ಧಿ, ಅಕ್ಷತಾ ಮತ್ತು ಕೌಶಿಕ್ ಎಂಬವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಪಿ ಡಿ ಶ್ರೀನಿವಾಸ್ ಗೌಡ, ಸುನಿಲ್ […]

ಜಿಲ್ಲಾ ಗವರ್ನರ್ ವಿಕ್ರಂ ದತ್ತ ಬೇಟಿ ಸಂದರ್ಭ | ವಿಟ್ಲ ರೋಟರಿ ಕ್ಲಬ್ ವತಿಯಿಂದ ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ Read More »

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ತೀವ್ರ ಅಸ್ವಸ್ಥನಾದ ಆರೋಪಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು: ವಿಟ್ಲದ ಬೋಳಂತೂರಿನ ಸಮೀಪ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿ ಎಂಬವರ ಮನೆಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆಸಿದ ತಂಡದ ಇನ್ನೋರ್ವ ಸದಸ್ಯನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಕೇರಳ ಮೂಲದ ಸಚಿನ್‌ ಸೆರೆಯಾಗಿರುವ ಆರೋಪಿ. ಬಂಧನವಾದ ಬೆನ್ನಿಗೆ ತೀವ್ರ ಅಸ್ವಸ್ಥನಾದ ಅವನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ. ಆರೋಪಿ ಅಪಸ್ಮಾರ ಮತ್ತು ತಲೆನೋವಿನಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಲದಿನಗಳ

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷ ರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆ

ವಿಟ್ಲ : ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆಯಿತು. ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯಿಂದ ಸ್ಪರ್ಧಿಸಿದ ಎಲ್ಲಾ ಹನ್ನೆರಡು ಅಭ್ಯರ್ಥಿಗಳು ಬಹುಮತದಿಂದ ಆರಿಸಲಾಗಿದೆ. ಈ ಚುನಾವಣ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿಯವರು ಆಯ್ಕೆಯಾಗಿದ್ದಾರೆ.

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷ ರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆ Read More »

ಫೆ.13ರಂದು ಮೋದಿ-ಟ್ರಂಪ್‌ ಭೇಟಿ

ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 12ರಿಂದ ಎರಡು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಟ್ರಂಪ್‌ ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾದ ಬಳಿಕ ಅಮೆರಿಕ-ಭಾರತ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಇದು ಪ್ರಧಾನಿಯ ಮಹತ್ವದ ಪ್ರವಾಸ ಎಂದು ಪರಿಗಣಿಸಲಾಗಿದೆ. ಎರಡು ದಿನಗಳ ಪ್ಯಾರಿಸ್ ಭೇಟಿಯನ್ನು ಮುಗಿಸಿದ ನಂತರ ಫೆಬ್ರವರಿ 12ರ ಸಂಜೆ ಪ್ರಧಾನಿ ಅಮೆರಿಕ ರಾಜಧಾನಿಗೆ ಬಂದಿಳಿದು

ಫೆ.13ರಂದು ಮೋದಿ-ಟ್ರಂಪ್‌ ಭೇಟಿ Read More »

ತೆಲುಗಿನ ಖ್ಯಾತ ನಿರ್ಮಾಪಕ ಗೋವಾದಲ್ಲಿ ಆತ್ಮಹತ್ಯೆಗೆ ಶರಣು

ರಜನಿಕಾಂತ್‌ ಸಹಿತ ಸೂಪರ್‌ಸ್ಟಾರ್‌ಗಳ ಚಿತ್ರ ನಿರ್ಮಿಸಿದ್ದ ನಿರ್ಮಾಪಕ ಚೆನ್ನೈ : ರಜನಿಕಾಂತ್‌ ಅಭಿನಯದ ಕಬಾಲಿ ಸಹಿತ ಅನೇಕ ಹಿಟ್‌ ಚಿತ್ರಗಳನ್ನು ನಿರ್ಮಿಸಿದ್ದ ತಮಿಳು, ತೆಲುಗಿನ ಖ್ಯಾತ ನಿರ್ಮಾಪಕ ಕೆ.ಪಿ.ಚೌಧರಿ ಯವರ (44) ಶವ ಗೋವಾದ ಹಳ್ಳಿಯೊಂದರಲ್ಲಿ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾದ ಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಚೌಧರಿ ಅಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಗೋವಾದ ಸಿಯೋಲಿಮ್ ಗ್ರಾಮದ ಬಾಡಿಗೆ ಮನೆಯಲ್ಲಿ ಚೌಧರಿ ವಾಸವಾಗಿದ್ದರು. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ

ತೆಲುಗಿನ ಖ್ಯಾತ ನಿರ್ಮಾಪಕ ಗೋವಾದಲ್ಲಿ ಆತ್ಮಹತ್ಯೆಗೆ ಶರಣು Read More »

ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು

ಸಿಎಂ ಕುಟುಂಬದಲ್ಲಿ ಆಗಾಗ ನಡೆಯುತ್ತಿರುವ ಭೂಮಿ ದಾನದ ತನಿಖೆಗೆ ಒತ್ತಾಯ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಸಿದ್ದರಾಮಯ್ಯನವರು ಕೆಸರೆ ಗ್ರಾಮದ ಜಾಗವನ್ನು ಅರಿಶಿಣ ಕುಂಕುಮ ರೂಪದಲ್ಲಿ ಪತ್ನಿಗೆ ಕೊಟ್ಟಿದ್ದಾರೆ ಎಂದಿದ್ದರು. ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ. ಯಾಕೆ ಮಲ್ಲಿಕಾರ್ಜುನಸ್ವಾಮಿ ಖರೀದಿ ಮಾಡಿದ ಭೂಮಿಗಳನ್ನೇ

ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು Read More »

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕಠಿಣ ನಿಯಮ: ಮಧು ಬಂಗಾರಪ್ಪ

ಶೇ.10 ಕೃಪಾಂಕ ಇಲ್ಲ; ಫಲಿತಾಂಶ ಸುಧಾರಣೆಗೆ ನಾನಾ ಕಸರತ್ತು ಬೆಂಗಳೂರು : ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ನಿಯಮ ತರಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ವೆಬ್‌ಕಾಸ್ಟಿಂಗ್ ಹಾಗೂ ಸಿಸಿಟಿವಿ ನಿಯಮ ಮತ್ತಷ್ಟು ಕಠಿಣವಾಗಲಿದೆ. ಜೊತೆಗೆ ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೃಪಾಂಕ ಕೊಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿನ್ನೆ ಎಸ್‌ಎಸ್‌ಎಲ್‌ಸಿ ಮಕ್ಕಳ ಹಾಗೂ ಶಿಕ್ಷಕರ ಜೊತೆ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಬಳಿಕ ಈ ವರ್ಷ

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕಠಿಣ ನಿಯಮ: ಮಧು ಬಂಗಾರಪ್ಪ Read More »

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಎಂ.ಪೆರುವಾಯಿ, ಉಪಾಧ್ಯಕ್ಷರಾಗಿ ದಾಮೋದರ್ ಕುಲಾಲ್ ಆಯ್ಕೆ

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಭಾಸ್ಕರ ಎಂ. ಪೆರುವಾಯಿ, ಉಪಾಧ್ಯಕ್ಷರಾಗಿ ದಾಮೋದರ್ ಕುಲಾಲ್ ಆಯ್ಕೆಗೊಂಡಿದ್ದಾರೆ. ಇತ್ತೀಚೆಗೆ ಸಂಘದ ಎಲ್ಲಾ 11 ಸ್ಥಾನಗಳಿಗೂ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ. ಒಟ್ಟು 11 ಸ್ಥಾನಗಳನ್ನು ಹೊಂದಿರುವ ಸಹಕಾರಿ ಸಂಘದಲ್ಲಿ ಸಾಮಾನ್ಯ ಸ್ನಾನದಿಂದ ಹಾಲಿ ಉಪಾಧ್ಯಕ್ಷ ದಾಮೋದರ ಕುಲಾಲ್, ಹಾಲಿ ನಿರ್ದೇಶಕರಾದ ನಾಗೇಶ್ ಕುಲಾಲ್, ಪದ್ಮ ಕುಮಾರ್ ಎಚ್, ಬಿ.ಎಸ್ ಕುಲಾಲ್,

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಎಂ.ಪೆರುವಾಯಿ, ಉಪಾಧ್ಯಕ್ಷರಾಗಿ ದಾಮೋದರ್ ಕುಲಾಲ್ ಆಯ್ಕೆ Read More »

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 10 ಲ.ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬ್ಯಾಗ್‌ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್ ನಿವಾಸಿ ರಾಜಗೋಪಾಲ್ ಕಾರಂತ್ (68) ಎಂಬವರು ಪತ್ನಿಯ ತವರು ಮನೆಯಾದ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ್‌ಗೆ ಕುಟುಂಬದ ಕಾರ್ಯಕ್ರಮಕ್ಕೆಂದು ಫೆಬ್ರವರಿ 1ರಂದು ರಾತ್ರಿ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಪತ್ನಿ ಮತ್ತು ಅಳಿಯನೊಂದಿಗೆ ಮನೆಯಿಂದ ಚಿನ್ನವನ್ನು ಬಾಕ್ಸ್‌ನಲ್ಲಿ

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 10 ಲ.ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Read More »

ಕೆರೆಗೆ ಈಜಲು ಹೋದ ಗೆಳೆಯರು ನೀರು ಪಾಲು

ಹಾಸನ : ಈಜಲೆಂದು ಕೆರೆಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದ್ದು,ಮೃತಪಟ್ಟ ಯುವಕರನ್ನು ಯಶ್ವಂತ್ ಸಿಂಗ್ ಅಲಿಯಾಸ್ ಗಣೇಶ್ (29), ರೋಹಿತ್ (28) ಎನ್ನಲಾಗಿದೆ. ಮೃತ ಗಣೇಶ್ ಮತ್ತು ರೋಹಿತ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸ ಮುಗಿಸಿ ಇಬ್ಬರು ಸಂಜೆ ಕೆರೆಗೆ ಈಜಲು ತೆರಳಿದ್ದರು. ಮೊದಲು ರೋಹಿತ್ ಕೆರೆಗೆ ಇಳಿದಿದ್ದಾನೆ. ಈ ವೇಳೆ ಕೆರೆಯಲ್ಲಿ ಬೆಳೆದಿದ್ದ ಬಳ್ಳಿಗಳು ರೋಹಿತ್ ಕಾಲಿಗೆ ಸುತ್ತಿಕೊಂಡಿದೆ. ರೋಹಿತ್ ಕೆರೆಯಿಂದ ಮೇಲೆ ಬರಲಾರದೇ ಕಿರುಚಾಡಿದಾಗ

ಕೆರೆಗೆ ಈಜಲು ಹೋದ ಗೆಳೆಯರು ನೀರು ಪಾಲು Read More »

error: Content is protected !!
Scroll to Top