ಸುದ್ದಿ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ

ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವ ಉದ್ಘಾಟನೆ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಡಿ.16 ನಡೆಯಲಿರುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗುವ ಸಲುವಾಗಿ ರಾಷ್ಟ್ರಪತಿ ಆಗಮಿಸಲಿದ್ದಾರೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಡಿ.22ರವರೆಗೆ ಏಳು ದಿನಗಳ ಕಾಲ ಬೃಹತ್ ಸಮಾರಂಭ ನಡೆಯಲಿದೆ. ಜಯಂತಿ ಮಹೋತ್ಸವ ಹಿನ್ನೆಲೆ […]

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ Read More »

ವೃದ್ಧೆಯ ಮನೆಯಿಂದ ಚಿನ್ನ ದರೋಡೆಗೈದಿದ್ದ ಆರೋಪಿಗಳು ಸೆರೆ

ಒಂಟಿ ವೃದ್ಧೆಯನ್ನು ಬೆದರಿಸಿ ಚಿನ್ನ-ನಗದು ದೋಚಿದ್ದ ದುಷ್ಕರ್ಮಿಗಳು ಮಂಗಳೂರು: ಕುಡಿಯಲು ನೀರು ಕೇಳುವ ನೆಪದಲ್ಲಿ ವೃದ್ಧೆಯೊಬ್ಬರೇ ಇದ್ದ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದು, 4.43 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಸುರತ್ಕಲ್ ಮುಕ್ಕದ ಸಸಿಹಿತ್ಲು ರಸ್ತೆಯ ಮಿತ್ರಪಟ್ಟಣದ ಜಯಲಕ್ಷ್ಮೀ ನಿವಾಸದಲ್ಲಿ ವಾಸವಾಗಿರುವ ದಿ.ಜಿನ್ನಪ್ಪ ಸುವರ್ಣ ಅವರ ಪತ್ನಿ ಜಲಜ (85) ನೀಡಿದ ದೂರಿನ ಪ್ರಕಾರ, ಡಿಸೆಂಬರ್ 3ರಂದು ಮಧ್ಯಾಹ್ನ

ವೃದ್ಧೆಯ ಮನೆಯಿಂದ ಚಿನ್ನ ದರೋಡೆಗೈದಿದ್ದ ಆರೋಪಿಗಳು ಸೆರೆ Read More »

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜಲ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರದೇಶಗಳನ್ನು ಸುತ್ತುವರಿದು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಭದ್ರತೆಯನ್ನು ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು.

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ Read More »

ದಿಢೀರ್‌ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

ವೇತನ ಹೆಚ್ಚಳ, ಹಿಂಬಾಕಿ ಪಾವತಿ ಬೇಡಿಕೆ ಬೆಂಗಳೂರು: ಕೆಎಸ್ಆರ್​​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಆಗಸ್ಟ್‌ 5ರಂದು ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾದಾಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಲಾಗಿತ್ತು. ಆದರೆ ಈ ಬಾರಿ ಮುಷ್ಕರದ ದಿನಾಂಕವನ್ನು ಘೋಷಣೆ ಮಾಡದೆ ಹಠಾತ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳ ಸಂಬಂಧ ಶನಿವಾರ ಸಾರಿಗೆ ಸಚಿವರ ಜೊತೆಗೆ ಸಭೆ ನಡೆದಿತ್ತು. ಆದರೆ ಬೇಡಿಕೆಗಳ ಈಡೇರಿಕೆ ಸಂಬಂಧ

ದಿಢೀರ್‌ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ Read More »

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ

ಶಬರಿಮಲೆ ಯಾತ್ರೆ ಮುಗಿಸಿ ಬಂದ ಖುಷಿಯಲ್ಲಿ ಎಣೆಣೆ ಪಾರ್ಟಿ ಮಾಡುತ್ತಿದ್ದ ಗೆಳೆಯರು ಉಡುಪಿ : ಸ್ನೇಹಿತರ ನಡುವೆ ಗುಂಡಿನ ಪಾರ್ಟಿಯಲ್ಲಿ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಉಡುಪಿಯ ಬ್ರಹ್ಮಾವರ ಸಮೀಪ ನಡೆದಿದೆ. ನಾಲ್ವರು ಗೆಳೆಯರು ಸೇರಿ ತಮ್ಮ ಓರ್ರವ ಗೆಳೆಯನನ್ನು ಕೊಲೆ ಮಾಡಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಬರಿಮಲೆ ಯಾತ್ರೆ ಮುಗಿಸಿಬಂದ ಖುಷಿಯಲ್ಲಿ ಮರುದಿನವೇ ಸ್ನೇಹಿತರು ಗುಂಡು ಹಾಕಲು ಕುಳಿತಿದ್ದರು ಎನ್ನಲಾಗಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆಯಲ್ಲಿ ಘಟನೆ ನಡೆದಿದ್ದು, ಬ್ಯಾಂಕ್‌

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ Read More »

ಎನ್ ಎಸ್ ಎಸ್ ಸೇವಾ ಸಂಗಮದ ದಶಮಾನೋತ್ಸವದ ಲೋಗೊ ಬಿಡುಗಡೆ

ಸುಳ್ಯ: ಎನ್ ಎಸ್ ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3 ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಾರ್ಯಕ್ರಮದ ಲೋಗೊ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಅತಿಥಿಗಳಾಗಿ ಗೌರವ ಸಲಹೆಗಾರ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ. ಅನುರಾಧ ಕುರುಂಜಿ, ಫಾಲಚಂದ್ರ ವೈ.ವಿ., ಶಾಲೆಯ ಮುಖ್ಯಗುರು

ಎನ್ ಎಸ್ ಎಸ್ ಸೇವಾ ಸಂಗಮದ ದಶಮಾನೋತ್ಸವದ ಲೋಗೊ ಬಿಡುಗಡೆ Read More »

ಕಲಾವಿದ ಶಶಿಧರ ಕನ್ಯಾಡಿ ಷಷ್ಟ್ಯಬ್ಧ: ಯಕ್ಷಭಾರತಿಯಿಂದ ಅಭಿನಂದನೆ, ತಾಳಮದ್ದಳೆ

ಕನ್ಯಾಡಿ: ಕನ್ಯಾಡಿಯ ಮಾತೃಶ್ರೀ ನಿವಾಸದಲ್ಲಿ ಯಕ್ಷಭಾರತಿ ಟ್ರಸ್ಟಿ , ಕಲಾವಿದ ಶಶಿಧರ ಕನ್ಯಾಡಿ ಅವರ ಷಷ್ಟ್ಯಬ್ಧ ನಿಮಿತ್ತ ಯಕ್ಷಭಾರತಿ ರಿ. ಕನ್ಯಾಡಿ ತಂಡದಿಂದ ಪ್ರೊ. ಪವನ್ ಕಿರಣಕೆರೆ ವಿರಚಿತ ಶ್ರೀಕೃಷ್ಣ ತುಲಾಭಾರ ಎಂಬ ತಾಳಮದ್ದಳೆ ಜರಗಿತು ಭಾಗವತರಾಗಿ ಮಹೇಶ ಕನ್ಯಾಡಿ, ಹಿಮ್ಮೇಳದಲ್ಲಿ ಜಗನ್ನಿವಾಸ ರಾವ್ ಪುತ್ತೂರು, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಶ್ರೀ ಕೃಷ್ಣನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಸತ್ಯಭಾಮೆಯಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ನಾರದನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಬಲರಾಮನಾಗಿ ರವೀಂದ್ರ ಶೆಟ್ಟಿ

ಕಲಾವಿದ ಶಶಿಧರ ಕನ್ಯಾಡಿ ಷಷ್ಟ್ಯಬ್ಧ: ಯಕ್ಷಭಾರತಿಯಿಂದ ಅಭಿನಂದನೆ, ತಾಳಮದ್ದಳೆ Read More »

ಊರಿನವರ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಯಶಸ್ಸಿನ ಜೊತೆಗೆ ಶಾಲಾಭಿವೃದ್ಧಿ ‌ಸಾಧ್ಯ: ಚಕ್ರಪಾಣಿ ಎ.ವಿ.

ಕಾಣಿಯೂರು: ಸರ್ಕಾರಿ ಶಾಲೆ ಪ್ರತಿಭಾನ್ವಿತ ಶಿಕ್ಷಕರುಗಳನ್ನು ಒಳಗೊಂಡಿದ್ದು, ಉತ್ತಮ ಬೋಧನೆ ಮಾಡುತ್ತಿರುವುದರಿಂದಲೇ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ. ಶಾಲೆಗಳ ಜೊತೆಗೆ ಊರಿನ ಸಮುದಾಯದವರ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಯಶಸ್ವಿನೊಂದಿಗೆ ಶಾಲೆಯ ಅಭಿವೃದ್ಧಿಯೂ ಸಾಧ್ಯ. ಎಸ್‌ಡಿಎಂಸಿ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕರು ತಂಡವಾಗಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದಾಗ ಶಿಕ್ಷಣ ಸಂಸ್ಥೆ ಉನ್ನತ ಎಂಬುದಕ್ಕೆ ಕುದ್ಮಾರು ಶಾಲೆಯೇ ಸಾಕ್ಷಿ ಎಂದು ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ. ಹೇಳಿದರು. ಕುದ್ಮಾರು ಸರ್ಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ

ಊರಿನವರ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಯಶಸ್ಸಿನ ಜೊತೆಗೆ ಶಾಲಾಭಿವೃದ್ಧಿ ‌ಸಾಧ್ಯ: ಚಕ್ರಪಾಣಿ ಎ.ವಿ. Read More »

ಪುತ್ತೂರು ದೇವಸ್ಥಾನದಲ್ಲಿ ವಿಶೇಷ ಮೂಡಪ್ಪ ಸೇವೆ: ಸೇವಾ ರಶೀದಿ ಪುಸ್ತಕ ಬಿಡುಗಡೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ. 6 ರಂದು ಅಂಗಾರಕ ಸಂಕಷ್ಟ ಚತುರ್ಥಿಯ ಪ್ರಯುಕ್ತ 108 ಕಾಯಿ ಗಣಪತಿ ಹೋಮ, ಸಂಜೆ 6 ಗಂಟೆಗೆ ಬಾಲಗಣಪತಿಗೆ ಮೂಡಪ್ಪ ಸೇವೆ ಸೇರಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆ ಪ್ರಯುಕ್ತ ಸಿದ್ಧಪಡಿಸಲಾದ ಸೇವಾ ರಶೀದಿ ಪುಸ್ತಕವನ್ನು ಡಿ. 15 ರಂದು ಶ್ರೀ ಮಹಾಲಿಂಗೇಶ್ವರ ಮತ್ತು ಗಣಪತಿ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು ದೇವಸ್ಥಾನದಲ್ಲಿ ವಿಶೇಷ ಮೂಡಪ್ಪ ಸೇವೆ: ಸೇವಾ ರಶೀದಿ ಪುಸ್ತಕ ಬಿಡುಗಡೆ Read More »

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ

ಅರವಣ ಪಾಯಸಂ, ಅಪ್ಪಂ ಪ್ರಸಾದಕ್ಕೆ ವಿಪರೀತ ಬೇಡಿಕೆ ಶಬರಿಮಲೆ: ಈ ವರ್ಷದ ಶಬರಿಮಲೆ ತೀರ್ಥಯಾತ್ರೆ ಋತು ಪ್ರಾರಂಭವಾದ ಕಳೆದ 28 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ವರ್ಷವೂ ಭಕ್ತರ ದಟ್ಟಣೆ ಅಧಿಕವಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ವರ್ಚುವಲ್‌ ಕ್ಯೂ ಪದ್ಧತಿ ಪಾಲಿಸುತ್ತಿರುವುದರಿಂದ ಅಯ್ಯಪ್ಪನ ದರ್ಶನ ಗೊಂದಲವಿಲ್ಲದೆ ನಡೆಯುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಭಾನುವಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿತ್ತು. ಪಂಪಾದಿಂದ ಸನ್ನಿಧಾನ ತನಕ ಎಲ್ಲೂ ಕಾಯದೆ ಭಕ್ತರು ನೇರವಾಗಿ ದರ್ಶನ ಪಡೆದಿದ್ದಾರೆ.

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ Read More »

error: Content is protected !!
Scroll to Top