ಸುದ್ದಿ

ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ

ಒಂದೇ ಕುಟುಂಬದ ನಾಲ್ವರನ್ನು ಸಾಯಿಸಿದ್ದ ಪಾತಕಿ ಮಡಿಕೇರಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ. ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಗಲ್ಲು ಶಿಕ್ಷೆ ವಿಧಿಸಿದ ಮೊದಲ ತೀರ್ಪು ಇದು ಎನ್ನಲಾಗಿದೆ. ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. 2024ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ […]

ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ Read More »

ಚಂಡೀಗಢದಲ್ಲಿ ಇಂದು ಭಾರತ-ದಕ್ಷಿಣ ಅಫ್ರಿಕಾ ಎರಡನೇ ಟಿ20 ಪಂದ್ಯ

ಮೊದಲ ಪಂದ್ಯದ ಅಮೋಘ ಗೆಲುವಿನ ಆತ್ಮವಿಶ್ವಾಸದಲ್ಲಿರುವ ಟೀಮ್‌ ಇಂಡಿಯಾ ಚಂಡೀಗಢ : ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದಿರುವ ಭಾರತ ಇಂದು ಚಂಡೀಗಢದಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಹೀನಾಯವಾಗಿ ಸೋಲಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 101 ರನ್‌ಗಳ ಅಮೋಘ ಗೆಲುವಿನ ಜೊತೆಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ಈ ಪಂದ್ಯದಲ್ಲಿ ಭಾರತ ತನ್ನದಾಗಿಸಿಕೊಂಡಿದೆ. ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ

ಚಂಡೀಗಢದಲ್ಲಿ ಇಂದು ಭಾರತ-ದಕ್ಷಿಣ ಅಫ್ರಿಕಾ ಎರಡನೇ ಟಿ20 ಪಂದ್ಯ Read More »

ದೇವಸ್ಥಾನದ ಎದುರು ದಫ್‌ ಪ್ರದರ್ಶನಕ್ಕೆ ವಿರೋಧ

ಹಿಂದೂ ಸಂಘಟನೆಗಳ ಆಕ್ರೋಶದ ಬಳಿಕ ಕಾರ್ಯಕ್ರಮ ಕೈಬಿಟ್ಟ ಆಯೋಜಕರು ಸುಳ್ಯ: ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರಿ ವಿರೋಧ ವ್ಯಕ್ತವಾದ ಬಳಿಕ ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಆಯೋಜಕರು ದಫ್ ಪ್ರದರ್ಶನವನ್ನು ಕೈಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಇವರ

ದೇವಸ್ಥಾನದ ಎದುರು ದಫ್‌ ಪ್ರದರ್ಶನಕ್ಕೆ ವಿರೋಧ Read More »

ದೀಪಾವಳಿಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ: ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬವನ್ನು ಸೇರ್ಪಡೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ದೀಪಾವಳಿ ನಮ್ಮ ಸಂಸ್ಕೃತಿ ಮತ್ತು ನೀತಿಯ ಜೊತೆಗೆ ನಿಕಟ ಸಂಪರ್ಕ ಹೊಂದಿದೆ. ಇದು ನಾಗರೀಕತೆಯ ಆತ್ಮವಾಗಿದೆ. ಸದಾಚಾರ ಮತ್ತು ಜ್ಞಾನೋದಯವನ್ನು ಬಿಂಬಿಸುತ್ತದೆ. ಈ ವಿಚಾರ ಭಾರತ ಮತ್ತು ವಿಶ್ವದ ಜನರನ್ನು ರೋಮಾಂಚನಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಯುನೆಸ್ಕೋ ಪಟ್ಟಿಗೆ ಸೇರಿರುವ ಕಾರಣ

ದೀಪಾವಳಿಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ Read More »

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ

ಸುಳ್ಯ: ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ತೀರ್ಪುಗಾರರ ಮೌಲ್ಯಮಾಪನದ ಆಧಾರದ ಮೇಲೆ ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಧಾನಕರ ಬಹುಮಾನದೊಂದಿಗೆ ವಿಜೇತ ತಂಡಗಳನ್ನು ಆಯ್ಕೆಮಾಡಲಾಯಿತು.

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ Read More »

4 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸ. ಸಂಘ (ನಿ.) ಕಾಣಿಯೂರು ಶಾಖೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ (ನಿ.) ದ ಕಾಣಿಯೂರು ಶಾಖೆಯು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಡಿ. 12 ರಂದು ರಂದು ಸಂಸ್ಥೆಯಲ್ಲಿ ಗಣ ಹೋಮ ಮತ್ತು ಲಕ್ಷ್ಮೀ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸದಸ್ಯರು ಮತ್ತು ಗ್ರಾಹಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಸ್ಥೆಗೆ ಮತ್ತಷ್ಟು ಬೆಂಬಲ ಸೂಚಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

4 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸ. ಸಂಘ (ನಿ.) ಕಾಣಿಯೂರು ಶಾಖೆ Read More »

ಆರ್‌ಎಸ್‌ಎಸ್‌ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ

ಈ ವರ್ಷ ರಾಜ್ಯದಲ್ಲಿ 518 ಪಥಸಂಚಲನ ಶಾಂತಿಯುತವಾಗಿ ನಡೆದಿದೆ ಎಂದು ಮಾಹಿತಿ ನೀಡಿದ ಗೃಹ ಸಚಿವ ಬೆಳಗಾವಿ : ಈ ವರ್ಷ ಕರ್ನಾಟಕದಾದ್ಯಂತ 518 ಕಡೆ ಆರ್​ಎಸ್​ಎಸ್ ಕಾರ್ಯಕ್ರಮ, ಪಥಸಂಚಲನ ನಡೆದಿದೆ. ಎಲ್ಲಿಯೂ ಗಲಾಟೆ, ದೊಂಬಿ ಆಗಿಲ್ಲ ಎಂದು ಕಾಂಗ್ರೆಸ್ ಸರ್ಕಾರವೇ ಒಪ್ಪಿಕೊಂಡಿದೆ. ಆರ್​ಎಸ್‌ಎಸ್‌ ಕಾರ್ಯಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿ ಗೃಹ ಸಚಿವ ಅವರೇ ಡಾ.ಜಿ.ಪರಮೇಶ್ವರ, ಕರ್ನಾಟಕದಾದ್ಯಂತ ಒಟ್ಟು 518 ಕಡೆಗಳಲ್ಲಿ ಆರ್​ಎಸ್​ಎಸ್ ಪಥ ಸಂಚಲನ ನಡೆದಿದೆ. ಅಂದಾಜು

ಆರ್‌ಎಸ್‌ಎಸ್‌ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ Read More »

ಅಪಘಾತದಲ್ಲಿ ಯುವ ಉದ್ಯಮಿ ಸಾವು

ನಸುಕಿನ ವೇಳೆ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಮಂಗಳೂರು: ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ನ ಮಾಲಕ ಅಭಿಷೇಕ್ ಎಂಬವರು ಪಡುಬಿದ್ರಿ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ನಸುಕಿನ ಜಾವ 2.20ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್‌ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಯುವ ಉದ್ಯಮಿ ಸಾವು Read More »

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್

ಪುತ್ತೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲೆಯ ಕಾಡಂಚಿನ ಜನರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಒಳಪಡಿಸುತ್ತಿರುವ ಕಾಡಾನೆ ದಾಳಿಯ ಗಂಭೀರ ಸಮಸ್ಯೆ ಕುರಿತು ಅರಣ್ಯ ಸಚಿವರನ್ನು ಪ್ರಶ್ನಿಸಿದರು. ಕಳೆದ ಅಧಿವೇಶನದಲ್ಲಿ ಸಚಿವರು ದಕ್ಷಿಣ ಕನ್ನಡದಲ್ಲಿ ಎಲಿಫಂಟ್ ಟಾಸ್ಕ್ ಫೋರ್ಸ್ (ETF) ಸ್ಥಾಪಿಸುವುದಾಗಿ ಹಾಗೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಘೋಷಣೆ ಮಾಡಿದ್ದರೂ ಕೂಡ, ಇವತ್ತು ತನಕ ಯಾವುದೇ ಭೇಟಿ ನಡೆದಿಲ್ಲ

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್ Read More »

ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು

ತಾಯಿ ಹುಲಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿಮರಿಗಳು ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನ.29ರಂದು ತಾಯಿಯೊಂದಿಗೆ ಸೆರೆ ಹಿಡಿದಿದ್ದ 4 ಹುಲಿ ಮರಿಗಳು ಆಹಾರ ಸೇವಿಸದೆ ಅಸ್ವಸ್ಥಗೊಂಡು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪಶುವೈದ್ಯರು ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನವೆಂಬರ್ 28ರಂದು ಈ ನಾಲ್ಕು ಮರಿಗಳ ಜೊತೆಗೆ ತಾಯಿ ಹುಲಿಯೂ ಕಾಣಿಸಿಕೊಂಡಿದ್ದು, ನವೆಂಬರ್ 29 ಮತ್ತು 30ರಂದು ಗೌಡನಕಟ್ಟೆಯ ಪ್ರಕಾಶ್‌

ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು Read More »

error: Content is protected !!
Scroll to Top