ಸುದ್ದಿ

ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಸೈಟ್‌ ಕೊಡುಗೆ

ಬೆಂಗಳೂರಿನಲ್ಲಿ ಜಿ ಕೆಟಗರಿ ಸೈಟ್‌ ಕೊಡಲು ಸಂಪುಟ ತೀರ್ಮಾನ ಬೆಂಗಳೂರು: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ದೀಪಾ ಭಾಸ್ತಿ ಅವರು ಇಂಗ್ಲಿಷ್‌ಗೆ ಅನುವಾದಿಸಿದ ಬಾನು ಅವರ ಕನ್ನಡ ಕೃತಿ ‘ಎದೆಯ ಹಣತೆ’ 2025ರ ಬೂಕರ್ ಪ್ರಶಸ್ತಿಯನ್ನು ಗೆದ್ದಿದೆ. ಬಾನು ಮತ್ತು ದೀಪಾ ಇಬ್ಬರನ್ನೂ ಅಭಿನಂದಿಸಲು ಕ್ಯಾಬಿನೆಟ್ ನಿರ್ಣಯ ಅಂಗೀಕರಿಸಿದೆ. ಬಾನು ಮುಷ್ತಾಕ್ ಅವರು ಬಯಸಿದರೆ, […]

ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಸೈಟ್‌ ಕೊಡುಗೆ Read More »

ಪರಮೇಶ್ವರ್‌ ಸಂಸ್ಥೆಗಳ ಮೇಲಿನ ಇ.ಡಿ. ದಾಳಿಯಲ್ಲಿ ಕಾಂಗ್ರೆಸ್‌ ಕೈವಾಡ : ಜೋಶಿ

ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್‌ನ ಒಂದು ಗುಂಪಿನಿಂದ ದೂರು ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಕಾಲೇಜುಗಳು ಸೇರಿ ವಿವಿಧ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಲು ಕಾಂಗ್ರೆಸ್‌ ನಾಯಕರೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಪರಮೇಶ್ವರ್‌ ಕ್ರಮ ಕೈಗೊಳ್ಳುವಂತೆ ರಾಜ್ಯದ ಕಾಂಗ್ರೆಸ್ ನಾಯಕರ ಗುಂಪೊಂದು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಮಾಹಿತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಡಾ. ಪರಮೇಶ್ವರ್ ಅವರಿಗೆ

ಪರಮೇಶ್ವರ್‌ ಸಂಸ್ಥೆಗಳ ಮೇಲಿನ ಇ.ಡಿ. ದಾಳಿಯಲ್ಲಿ ಕಾಂಗ್ರೆಸ್‌ ಕೈವಾಡ : ಜೋಶಿ Read More »

ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಮೋಡೆಲ್‌ ಆಗಲು ಇದು ಕಾರಣವಂತೆ

ಭಾರಿ ವಿರೋಧ ವ್ಯಕ್ತವಾದ ಬಳಿಕ ಸ್ಪಷ್ಟನೆ ನೀಡಿದ ಸಚಿವ ಬೆಂಗಳೂರು: ರಾಜ್ಯ ಸರ್ಕಾರ ಒಡೆತನದ ಮೈಸೂರು ಸ್ಯಾಂಡಲ್‌ಸೋಪ್‌ಗೆ ಟಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಈ ನಿರ್ಧಾರವನ್ನು ಸಚಿವ ಎಂ.ಬಿ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ನಮ್ಮ ನಾಡಿನ ಹೆಮ್ಮೆಯ ಸೋಪ್ ಬ್ರ್ಯಾಂಡ್ ಮೈಸೂರು ಸ್ಯಾಂಡಲನ್ನು ಜಾಗತಿಕ ಮಟ್ಟದ ಒಂದು ಬ್ರ್ಯಾಂಡ್ ಆಗಿ ಮಾಡುವ ಇಚ್ಛಾಶಕ್ತಿಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ತಮನ್ನಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಮೋಡೆಲ್‌ ಆಗಲು ಇದು ಕಾರಣವಂತೆ Read More »

ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದ ಸರ್ಕಾರ : ಕ್ಯಾ.ಬ್ರಿಜೇಶ್‌ ಚೌಟ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಆಕ್ರೋಶ ಮಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆದೇಶದ ಮೂಲಕ ಸಿದ್ದರಾಮಯ್ಯ ಸರ್ಕಾರ ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದು ಅವರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲು ಹೊರಟಿದೆ ಎಂದಿದ್ದಾರೆ. ದೇಶಾದ್ಯಂತ ಯಶಸ್ವಿ ಮಾದರಿಯಾಗಿ ಹೊರಹೊಮ್ಮಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಕಡಿಮೆ ವೆಚ್ಚದಲ್ಲಿ ಲಕ್ಷಾಂತರ

ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದ ಸರ್ಕಾರ : ಕ್ಯಾ.ಬ್ರಿಜೇಶ್‌ ಚೌಟ Read More »

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಬುನಾದಿ ಶಿಕ್ಷಣ ಚಿಂತನಾ ಬೈಠಕ್ ‘ ಅಂಕುರ-25 ‘ ಉದ್ಘಾಟನೆ.

ಮಾನವನ ಶರೀರವು ಪಂಚಭೂತಗಳಿಂದ ನಿರ್ಮಿತವಾಗಿದೆ.ಅದು ಪಂಚಕರ್ಮಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಶಾಲೆಯಲ್ಲಿ  ವಿದ್ಯಾರ್ಥಿಗಳ ಬೆಳವಣಿಗೆಗೆ ಬುನಾದಿ ಶಿಕ್ಷಣವನ್ನು ಸಮರ್ಪಕವಾಗಿ ಬಳಸಬೇಕು. ಅದಕ್ಕಾಗಿ ಇಂತಹ ತರಬೇತಿಯು ಅಗತ್ಯವಿದೆ. ವಿದ್ಯಾಭಾರತಿ ಕರ್ನಾಟಕ ತನ್ನ ಶೈಕ್ಷಣಿಕ ಸಂಯೋಜಿತ ಸಂಸ್ಥೆಯ ಗುರೂಜಿ ಮಾತಾಜಿಯವರಿಗೆ ಔಚಿತ್ಯ ಪೂರ್ಣವಾಗಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಯಿಂದ ನೀಡುವುದು ಶ್ಲಾಘನೀಯ ಎಂದು ಅಧ್ಯಕ್ಷರು ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರದ ಕೃಷ್ಣರಾಯ ಶಾನುಭಾಗ್ ಹೇಳಿದರು. ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರ ಸಂಸ್ಥೆಯಲ್ಲಿ ನಡೆದ ಬುನಾದಿ ಶಿಕ್ಷಣ ಚಿಂತನ ಬೈಠಕ್ ಅಂಕುರ – 25 

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಬುನಾದಿ ಶಿಕ್ಷಣ ಚಿಂತನಾ ಬೈಠಕ್ ‘ ಅಂಕುರ-25 ‘ ಉದ್ಘಾಟನೆ. Read More »

ಸೂಟ್‌ಕೇಸ್‌ ನಲ್ಲಿ ಯುವತಿಯೋರ್ವಳ ಮೃತದೇಹ ಪತ್ತೆ

ಬೆಂಗಳೂರು: ಯುವತಿಯ ಮೃತದೇಹವನ್ನು ಸೂಟ್‌ಕೇಸ್‌ ನಲ್ಲಿಟ್ಟ ಘಟನೆ ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ನಡೆದಿದ್ದು,  ಈ ಘಟನೆ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್‌ ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಸೂಟ್ ಕೇಸ್ ಹೊರಗೆ ಎಸೆದಿರಬಹುದು ಎಂದು ಅನುಮಾನವನ್ನು ವ್ಯಕ್ತಪಡಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್‌ ಕೇಸ್‌ನಲ್ಲಿ ಶವವನ್ನು ತುಂಬಿಸಿ ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ

ಸೂಟ್‌ಕೇಸ್‌ ನಲ್ಲಿ ಯುವತಿಯೋರ್ವಳ ಮೃತದೇಹ ಪತ್ತೆ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ

ಪುತ್ತೂರು: ಸ್ವರ್ಣಧಾರಾ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆಯನ್ನು ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಗುರುವಾರ ಉದ್ಘಾಟಿಸಲಾಯಿತು. ಸ್ವರ್ಣಧಾರಾ ಯೋಜನೆಯ ಬಗ್ಗೆ ಮಾತನಾಡಿದ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ, ಸ್ವರ್ಣಧಾರಾ ಯೋಜನೆಗೆ ಗ್ರಾಹಕರಿಂದ ಉತ್ತಮ ಬೇಡಿಕೆ ಇದೆ. ಹಾಗಾಗಿ ಗ್ರಾಹಕರಿಗೆ ಇನ್ನಷ್ಟು ಅನುಕೂಲತೆ ಆಗುವಂತೆ ಯೋಜನೆಯನ್ನು ಒಂದಷ್ಡು ಬದಲಾವಣೆಯೊಂದಿಗೆ ಹೊಸತನ್ನು  ಪರಿಚಯಿಸುತ್ತಿದ್ದೇವೆ. ಇಂದು ಉದ್ಘಾಟನೆಗೊಂಡ ಹೊಸ ಸ್ಕೀಂನಲ್ಲಿ ಗ್ರಾಹಕರು ಪ್ರತಿ ತಿಂಗಳು ಹೂಡಿಕೆ ಮಾಡುವ ಮೊತ್ತದ ಚಿನ್ನವನ್ನು ತೆಗೆದಿಡಲಾಗುವುದು. ಅಂದರೆ ಇಂದು ಹೂಡಿಕೆ ಮಾಡಿದರೆ, ಇಂದಿನ ಚಿನ್ನದ ಧಾರಣೆಯಲ್ಲೇ

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ Read More »

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರ ಮಟ್ಟಕ್ಕೆ  ಆಯ್ಕೆ

ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಡ್ಡ ಮತ್ತಲಿಯ ಶಿಕ್ಷಕರಾದ ಶ್ರೀ ದೇವಲ ನಾಯ್ಕ ಆಯ್ಕೆಯಾಗಿದ್ದಾರೆ. ಶ್ರೀ ದೇವಲ ನಾಯ್ಕರು ಪಿಎಂಶ್ರೀ ವೀರಮಂಗಲದಲ್ಲಿ ಶಿಕ್ಷಕರಾಗಿ ಸೇವೆಯನ್ನು  ನಿರ್ವಸಿದ್ದರು.

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರ ಮಟ್ಟಕ್ಕೆ  ಆಯ್ಕೆ Read More »

ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿಯ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ  ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು. ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು   ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ

ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಕಡೆಯಿಂದ ಸನ್ಮಾನ Read More »

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು

ಪುತ್ತೂರು : ಟೆಂಪೊ ಟ್ರಾವೆಲರ್‌ ವಾಹನ ಮತ್ತು ಕಾರಿನ ನಡುವೆ ಢಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಬೊಳುವಾರು ಸಮೀಪದಲ್ಲಿ ನಡೆದಿದೆ.  ಈ ಘಟನೆ ತಡ ರಾತ್ರಿ ವೇಳೆ ನಡೆದಿದ್ದು,  ಅದೃಷ್ಟವಶಾತ್‍ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಟೆಂಪೊ ಟ್ರಾವೆಲರ್‌ ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಲೇನೋ ಕಾರು ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನ ಬೈಪಾಸ್‌ ರಸ್ತೆಯ ಅಪಾಯಕಾರಿ

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು Read More »

error: Content is protected !!
Scroll to Top