ಸುದ್ದಿ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರ ಮಟ್ಟಕ್ಕೆ  ಆಯ್ಕೆ

ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಡ್ಡ ಮತ್ತಲಿಯ ಶಿಕ್ಷಕರಾದ ಶ್ರೀ ದೇವಲ ನಾಯ್ಕ ಆಯ್ಕೆಯಾಗಿದ್ದಾರೆ. ಶ್ರೀ ದೇವಲ ನಾಯ್ಕರು ಪಿಎಂಶ್ರೀ ವೀರಮಂಗಲದಲ್ಲಿ ಶಿಕ್ಷಕರಾಗಿ ಸೇವೆಯನ್ನು  ನಿರ್ವಸಿದ್ದರು.

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರ ಮಟ್ಟಕ್ಕೆ  ಆಯ್ಕೆ Read More »

ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿಯ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ  ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು. ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು   ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ

ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಕಡೆಯಿಂದ ಸನ್ಮಾನ Read More »

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು

ಪುತ್ತೂರು : ಟೆಂಪೊ ಟ್ರಾವೆಲರ್‌ ವಾಹನ ಮತ್ತು ಕಾರಿನ ನಡುವೆ ಢಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಬೊಳುವಾರು ಸಮೀಪದಲ್ಲಿ ನಡೆದಿದೆ.  ಈ ಘಟನೆ ತಡ ರಾತ್ರಿ ವೇಳೆ ನಡೆದಿದ್ದು,  ಅದೃಷ್ಟವಶಾತ್‍ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಟೆಂಪೊ ಟ್ರಾವೆಲರ್‌ ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಲೇನೋ ಕಾರು ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನ ಬೈಪಾಸ್‌ ರಸ್ತೆಯ ಅಪಾಯಕಾರಿ

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು Read More »

ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ರನ್ಯಾ ರಾವ್‌ಗಿರುವ ಸಂಬಂಧದ ಕುರಿತು ತನಿಖೆ ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ ಬಳಿಕ ಈ ಸಂಸ್ಥೆಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಆರೋಪಿ ನಟಿ ರನ್ಯಾ ರಾವ್‌ಗೂ ಇರುವ ಸಂಬಂಧದ ಕುರಿತು ಚರ್ಚೆಗಳಾಗುತ್ತಿವೆ. ದಾಳಿ ಹಾಗೂ ಶೋಧ ಕಾರ್ಯ ಗುರುವಾರ ಬೆಳಗ್ಗೆಯೂ ಮುಂದುವರಿದಿದೆ. ದಾಳಿ ನಡೆಸಿ 24 ಗಂಟೆಗಳು ಕಳೆದರೂ ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು, ಅಕ್ರಮ ಚಿನ್ನ

ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ Read More »

ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐಎಸ್‌ಐ : ಹೈಕಮಿಷನ್‌ ಸಿಬ್ಬಂದಿ ಶಾಮೀಲು

ಯೂಟ್ಯೂಬರ್‌ಗಳ ಮೂಲಕ ಆಯಕಟ್ಟಿನ ಸ್ಥಳಗಳ ಮಾಹಿತಿ ಸಂಗ್ರಹ ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಐಎಸ್ಐ ಸಂಚನ್ನು ಭಾರತದ ಗುಪ್ತಚರ ಏಜೆನ್ಸಿಗಳು ವಿಫಲಗೊಳಿಸಿವೆ. ಮೂರು ತಿಂಗಳ ಯೋಜಿತ ಕಾರ್ಯಾಚರಣೆಯಲ್ಲಿ ಐಎಸ್ಐ ಯತ್ನವನ್ನು ವಿಫಲಗೊಳಿಸಿ, ದಾಳಿ ನಡೆಸಲು ತೀವ್ರ ತರಬೇತಿ ಪಡೆದ ಇಬ್ಬರನ್ನು ಬಂಧಿಸಲಾಗಿದೆ. ದಾಳಿ ನಡೆಸುವ ಹೊಣೆ ಹೊತ್ತಿದ್ದ ಪಾಕಿಸ್ತಾನದ ಅನ್ಸಾರುಲ್ ಮಿಯಾ ಅನ್ಸಾರಿ ಕೂಡಾ ಬಂಧಿತರಲ್ಲಿ ಸೇರಿದ್ದಾನೆ. ಈತ ಭಾರತ ಸಶಸ್ತ್ರ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಗಳನ್ನು ಕಲೆ ಹಾಕುತ್ತಿದ್ದ ಎನ್ನಲಾಗಿದೆ. ಈ

ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐಎಸ್‌ಐ : ಹೈಕಮಿಷನ್‌ ಸಿಬ್ಬಂದಿ ಶಾಮೀಲು Read More »

ದಿವಾಳಿ ಮಾಡೆಲ್‌ ಆಫ್‌ ಕರ್ನಾಟಕ : ಚಾರ್ಜ್‌ಶೀಟ್‌ ಬಿಡುಗಡೆಗೊಳಿಸಿ ಬಿಜೆಪಿ ಟೀಕೆ

ಜನರು ತೆರಿಗೆ ಭಾರ ಹೊತ್ತಿರುವಾಗ ಕಾಂಗ್ರೆಸ್‌ ಸಾಧನಾ ಸಮಾವೇಶ ಎಂದು ಟೀಕೆ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ‘ಕರ್ನಾಟಕದ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ’ ಎಂಬ ಶೀರ್ಷಿಕೆಯಡಿ ಎಂಟು ಪುಟಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ ಪಕ್ಷದ ಕಚೇರಿಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಶಾಸಕರಾದ ಕೆ.ಗೋಪಾಲಯ್ಯ, ಎಸ್‌.ರಘು, ಸಿ.ಕೆ.ರಾಮಮೂರ್ತಿ, ಮುಖಂಡರಾದ ಎಸ್‌.ಹರೀಶ್‌, ಮಾಳವಿಕಾ ಅವಿನಾಶ್‌, ಸಪ್ತಗಿರಿಗೌಡ ಅವರು ಜಂಟಿಯಾಗಿ ಆರೋಪಪಟ್ಟಿ

ದಿವಾಳಿ ಮಾಡೆಲ್‌ ಆಫ್‌ ಕರ್ನಾಟಕ : ಚಾರ್ಜ್‌ಶೀಟ್‌ ಬಿಡುಗಡೆಗೊಳಿಸಿ ಬಿಜೆಪಿ ಟೀಕೆ Read More »

ಕಾಶ್ಮೀರ : ಭದ್ರತಾ ಪಡೆಯಿಂದ ಇನ್ನೊಂದು ದೊಡ್ಡ ಉಗ್ರ ಬೇಟೆ

4-5 ಭಯೋತ್ಪಾದಕರ ವಿರುದ್ಧ ನಡೆಯುತ್ತಿದೆ ತೀವ್ರ ಕಾಳಗ ಶ್ರೀನಗರ: ಜಮ್ಮು-ಕಾಶ್ಮೀರದ ಕಿಷ್ತ್ವರ್‌ ಜಿಲ್ಲೆಯ ಛತ್ರೂವಿನ ಸಿಂಘ್‌ಪುರ ಎಂಬಲ್ಲಿ ಗುರುವಾರ ನಸುಕಿನ ಹೊತ್ತು ಉಗ್ರರ ಜೊತೆ ಭದ್ರತಾ ಪಡೆಯ ತೀವ್ರ ಕಾಳಗ ಶುರುವಾಗಿದೆ. ಇಲ್ಲಿ 4-5 ಉಗ್ರರು ಇರುವ ಮಾಹಿತಿ ಇರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ತೀವ್ರ ಎನ್‌ಕೌಂಟರ್‌ ನಡೆಯುತ್ತಿದ್ದು, ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಇಡೀ ಪ್ರದೇಶದಲ್ಲಿ ಹೈಅಲರ್ಟ್‌ ಘೋಷಿಸಿ ಭದ್ರತಾ ಪಡೆಗಳು ಸುತ್ತುವರಿದಿವೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕಾಶ್ಮೀರ : ಭದ್ರತಾ ಪಡೆಯಿಂದ ಇನ್ನೊಂದು ದೊಡ್ಡ ಉಗ್ರ ಬೇಟೆ Read More »

ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿಯಲ್ಲಿ  26 ನಕ್ಸಲೀಯರ ಹತ್ಯೆ

ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ರಾಜ್ಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ. ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗ ಮೃತಪಟ್ಟಿದ್ದಾರೆ ಮತ್ತು ಒಬ್ಬರು

ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿಯಲ್ಲಿ  26 ನಕ್ಸಲೀಯರ ಹತ್ಯೆ Read More »

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ

ಪುತ್ತೂರು : ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ  ಸುಧಾಕರ ಬನ್ನಂಜೆ ಕಥೆ- ಚಿತ್ರಕಥೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ ‘ಗಂಟ್ ಕಲ್ವೆರ್’ ಚಿತ್ರ ಮೇ 28 ರಂದು ತುಳುನಾಡನಾದ್ಯಂತ ಬಿಡುಗಡೆ ಯಾಗಲಿದೆ ಎಂದು ಸಿನೆಮಾ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ, ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ  ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ Read More »

ಮೇ 25 : ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ | ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸಹಯೋಗದಲ್ಲಿ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕದ ಜಂಟಿ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಮೇ 25 ಭಾನುವಾರ ಸುದಾನ ವಸತಿಯುತ ಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಕಾರ್ಯಕ್ರಮ ಸಂಚಾಲಕ ಪ್ರಭಾಕರ ಸಾಲ್ಯಾನ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸೇರಿದಂತೆ ಸುಮಾರು

ಮೇ 25 : ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ | ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸಹಯೋಗದಲ್ಲಿ Read More »

error: Content is protected !!
Scroll to Top