ಸುದ್ದಿ

ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ : ಏಳು ಪೊಲೀಸರ ಸಾವು; 30 ಮಂದಿಗೆ ಗಾಯ

ಫರಿದಾಬಾದ್‌ನಿಂದ ವಶಪಡಿಸಿಕೊಂಡ ಸ್ಫೋಟಕ ವಸ್ತು ಸ್ಫೋಟಿಸಿ ಭೀಕರ ಅನಾಹುತ ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತು ಸ್ಫೋಟಿಸಿ 7 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಜ್ವಾಲೆಗಳು ಹೊರಬರುತ್ತಿರುವುದು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಲ್ಲಿ ಕಾಣಿಸಿವೆ. ಗಾಯಗೊಂಡ […]

ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ : ಏಳು ಪೊಲೀಸರ ಸಾವು; 30 ಮಂದಿಗೆ ಗಾಯ Read More »

ಜಿ. ಎಲ್. ಆಚಾರ್ಯ‌ರ 101ನೇ ಜನ್ಮದಿನ: ರಾಮಕೃಷ್ಣ ಆಶ್ರಮಕ್ಕೆ ಡಬ್ಬಲ್ ಡೆಕ್ಕರ್ ಕಾಟ್‌ಗಳ ಕೊಡುಗೆ

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಸಂಸ್ಥೆಯ ಸಂಸ್ಥಾಪಕ ಜಿ. ಎಲ್. ಆಚಾರ್ಯ ಅವರ 101 ನೇ ಜನ್ಮ ದಿನವನ್ನು ನ. 13 ರಂದು ಸಂಸ್ಥೆಯಲ್ಲಿ ಆಚರಣೆ ಮಾಡಲಾಯಿತು. ಈ ಹಿನ್ನೆಲೆ 10 ಡಬ್ಬಲ್ ಡೆಕ್ಕರ್ ಕಾಟ್‌ಗಳನ್ನು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ ಕೊಡುಗೆಯಾಗಿ ನೀಡಲಾಯಿತು. ಈ‌ ಸಂದರ್ಭದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ ಆಚಾರ್ಯ, ಆಶ್ರಮದ ಕಾರ್ಯದರ್ಶಿ ಗುಣಪಾಲ್ ಜೈನ್, ಸದಸ್ಯ ಹರೇಕೃಷ್ಣ ಕಡಂಬಳಿತ್ತಾಯ ಮತ್ತು ಜಂಟಿ ಕಾರ್ಯದರ್ಶಿ ವತ್ಸಲ ರಾಜಿ

ಜಿ. ಎಲ್. ಆಚಾರ್ಯ‌ರ 101ನೇ ಜನ್ಮದಿನ: ರಾಮಕೃಷ್ಣ ಆಶ್ರಮಕ್ಕೆ ಡಬ್ಬಲ್ ಡೆಕ್ಕರ್ ಕಾಟ್‌ಗಳ ಕೊಡುಗೆ Read More »

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಡಿ. 25 ರಂದು ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ತಾಲೂಕು ಸಮಿತಿ ಪದ ಪ್ರದಾನ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ನ. 14 ರಂದು ಬಿಡುಗಡೆ ಮಾಡಲಾಯಿತು. ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಗಂಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು. ಸಲಹಾ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು, ಸಂಘದ ಅಧ್ಯಕ್ಷ ರವಿ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ: ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬಿಹಾರದಲ್ಲಿ NDA ಮೈತ್ರಿಕೂಟದ ಮೋಡಿ: ಕಳಪೆ ಸಾಧನೆಯ ಮೂಲಕ ಮುಖಭಂಗ ‌ಮಾಡಿಕೊಂಡ ಕಾಂಗ್ರೆಸ್, RJD

ಬಿಹಾರ: ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಭರ್ಜರಿ ಗೆಲುವಿನತ್ತ ಮುಖ ಮಾಡಿದೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಅತೀ‌ದೊಡ್ಡ ಪಕ್ಷವಾಗಿ ಅರಳುವ ಹಾದಿಯಲ್ಲಿದೆ ಎಂದು ಚು. ಆಯೋಗದ ವರದಿ ಹೇಳಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟ 190ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 101 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, 80ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದ ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ. ದೆಹಲಿ, ಮಹಾರಾಷ್ಟ್ರ ಮತ್ತು ಹರಿಯಾಣದ ನಂತರ

ಬಿಹಾರದಲ್ಲಿ NDA ಮೈತ್ರಿಕೂಟದ ಮೋಡಿ: ಕಳಪೆ ಸಾಧನೆಯ ಮೂಲಕ ಮುಖಭಂಗ ‌ಮಾಡಿಕೊಂಡ ಕಾಂಗ್ರೆಸ್, RJD Read More »

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಮಂಗಳೂರು: ಬೆಂಗಳೂರು ಆರ್‌ಟಿಒ ನೋಂದಣಿಯ ಕಾರ್‌ನಲ್ಲಿ ನಗರದ ನಂತೂರ್ ಸಮೀಪ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಹೊಗೆ ಆವರಿಸಿ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಕಾರಿನ ಬೆಂಕಿ ನಂದಿಸುವ ಪ್ರಯತ್ನ ಮಾಡಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ Read More »

ಬಿಹಾರದಲ್ಲಿ‌ ಓಟ್ ಚೋರಿ?: ಸಿಎಂ ‌ಸಿದ್ದು ಹೇಳಿದ್ದೇನು?

ಬೆಂಗಳೂರು: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಓಟ್ ಚೋರಿ ಆಗಿದೆ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಿದೆ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಹಾರದಲ್ಲಿ ಯಾಕೆ ಹಿನ್ನಡೆ ಆಗಿದೆ. ಈ ಬಗ್ಗೆ ಸರಿಯಾದ ಮಾಹಿತಿ ಪಡೆದು ಆ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ. NDA ಯಾಕೆ ಬಹುಮತ ಪಡೆದಿದೆ. ಅಲ್ಲೂ ಓಟ್ ಚೋರಿ ಆಗಿದೆ. ಆದರೆ ಜನ ತೀರ್ಪು ನಾವು ಒಪ್ಪಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಅಜೆಂಡಾ ಓಬಿಸಿ ಅವರೇ ಬಿಹಾರದಲ್ಲಿ ಕೈ

ಬಿಹಾರದಲ್ಲಿ‌ ಓಟ್ ಚೋರಿ?: ಸಿಎಂ ‌ಸಿದ್ದು ಹೇಳಿದ್ದೇನು? Read More »

ನ.15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದ ವಾರ್ಷಿಕೋತ್ಸವ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಶಾಂತಿಗೋಡು ಗ್ರಾಮ, ಸರ್ವೆ ಅಂಚೆ ಪುತ್ತೂರು ಇಲ್ಲಿನ ವಾರ್ಷಿಕೋತ್ಸವ ಪಿಎಂಶ್ರೀ ಸಡಗರ ನ. 15 ರಂದು ನಡೆಯಲಿದೆ. ಬೆಳಗ್ಗೆ 9.30 ಕ್ಕೆ ಧ್ವಜವಂದನೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಧ್ವಜಾರೋಹಣವನ್ನು ರವಿಚಂದ್ರ (ಅಧ್ಯಕ್ಷರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ) ನಡೆಸಿ ಕೊಡಲಿದ್ದಾರೆ. ಬಹುಮಾನ ವಿತರಣೆಯನ್ನು ಅಮೃತಕಲಾ (ಶಿಕ್ಷಣ ಸಂಯೋಜಕರು ಪುತ್ತೂರು) ಮಾಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಶುಭಾರಂಭವನ್ನು

ನ.15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದ ವಾರ್ಷಿಕೋತ್ಸವ Read More »

ಮಕ್ಕಳು ನಮ್ಮ ಪಾಲಕರು – ರೊ. ಚಂದ್ರಹಾಸ ರೈ

ಪುತ್ತೂರು: ಇಲ್ಲಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಅರ್ಥಪೂರ್ಣವಾಗಿ ಜರುಗಿತು. ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನದ ಅಂಗವಾಗಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯವರಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಉಪನ್ಯಾಸಕ, ಜೇಸೀ ತರಬೇತುದಾರ Rtn. ಚಂದ್ರಹಾಸ ರೈ ಮಾತನಾಡಿ ಸುಸಂಸ್ಕೃತ ಶಿಕ್ಷಣ ಸಂಸ್ಥೆಯಾಗಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಒಂದು ಸುಯೋಗ ಎಂದರು. ಹಿರಿಯರಾದ ನಾವು ಮಕ್ಕಳಿಂದ ಕಲಿಯಬೇಕಾದ್ದು ಸಾಕಷ್ಟಿದೆ ಎಂದು ಹೇಳಿ ಇಂದಿನ ಕಾರ್ಯಕ್ರಮದ ಉದ್ಘಾಟಕಿಯಾದ

ಮಕ್ಕಳು ನಮ್ಮ ಪಾಲಕರು – ರೊ. ಚಂದ್ರಹಾಸ ರೈ Read More »

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಅನಾರೋಗ್ಯದಿಂದ ನಿಧನರಾದ ಶತಾಯುಷಿ ತಿಮ್ಮಕ್ಕ ಬೆಂಗಳೂರು : ವೃಕ್ಷಮಾತೆ ಎಂದೇ ಕರಿಯಲ್ಪಡುತ್ತಿದ್ದ ಸಾಲುಮರದ ತಿಮ್ಮಕ್ಕ ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ಪ್ರಾಯವಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಹುಲಿಕಲ್​​

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ Read More »

ಕೆಂಪುಕೋಟೆ ಸ್ಫೋಟದ ಆರೋಪಿ ಡಾ.ಉಮರ್‌ನ ಮನೆ ಧ್ವಂಸ

ಬುಡೋಜರ್‌ ನುಗ್ಗಿಸಿ ಮನೆಯನ್ನು ಕೆಡವಿ ಹಾಕಿದ ಭದ್ರತಾ ಪಡೆಗಳು ಶ್ರೀನಗರ : ದೆಹಲಿಯ ಕೆಂಪುಕೋಟೆಯ ಬಳಿ ಕಳೆದ ಸೋಮವಾರ ಸಂಭವಿಸಿದ್ದ ಕಾರು ಬಾಂಬ್‌ ಸ್ಫೋಟದ ಪ್ರಮುಖ ಆರೋಪಿ ಡಾ.ಉಮರ್ ನಬಿ ಅಲಿಯಾಸ್‌ ಡಾ. ಮೊಹಮ್ಮದ್‌ ಉಮರ್‌ನ ಮನೆಯನ್ನು ಭದ್ರತಾ ಪಡೆ ಧ್ವಂಸಗೊಳಿಸಿದೆ. ಈ ಸ್ಫೋಟದಲ್ಲಿ ಅತ್ಮಾಹುತಿ ಬಾಂಬರ್‌ ಆಗಿದ್ದ ಡಾ. ಉಮರ್‌ ಸತ್ತಿರುವುದು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ದೆಹಲಿ ಸ್ಫೋಟದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಉಗ್ರರ ಹಿಂದಿನ ರಹಸ್ಯ ಒಂದೊಂದಾಗಿಯೇ ಹೊರಬರುತ್ತಿದೆ. ಡಾ.ಉಮರ್ ನಬಿ ತಾಯಿಯ ಡಿಎನ್‌ಎ ಪರೀಕ್ಷೆ

ಕೆಂಪುಕೋಟೆ ಸ್ಫೋಟದ ಆರೋಪಿ ಡಾ.ಉಮರ್‌ನ ಮನೆ ಧ್ವಂಸ Read More »

error: Content is protected !!
Scroll to Top