ಸುದ್ದಿ

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕೆಲವೇ ಸೆಕೆಂಡುಗಳಲ್ಲಿ ಹರಡಿ ಬೆಕ್ಕುಗಳನ್ನು ಸಾಯಿಸುವ ವೈರಾಣು ಬೆಂಗಳೂರು: ಹಕ್ಕಿಜ್ವರದ ಹಾವಳಿಯ ಬೆನ್ನಿಗೆ ಈಗ ರಾಜ್ಯದ ಕೆಲವೆಡೆಗಳಲ್ಲಿ ಬೆಕ್ಕುಗಳಿಗೆ ವೈರಸ್‌ ಸೋಂಕು ತಗಲಿದ್ದು, ಬೆಕ್ಕುಗಳು ಹಠಾತ್‌ ಸಾವಿಗೀಡಾಗುತ್ತಿವೆ. ಬೆಕ್ಕುಗಳಿಗೆ ಬಂದಿರುವ ಮರಣಾಂತಿಕ ರೋಗಕ್ಕೆ ಎಫ್​ಪಿವಿ ವೈರಸ್ ಕಾರಣ ಎಂದು ಗುರುತಿಸಲಾಗಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ. ಅಲ್ಲದೆ ರಾಜ್ಯದ ವಿವಿಧೆಡೆ ವೈರಸ್ ಸೋಂಕು ಹರಡುತ್ತಿದೆ. ರಾಯಚೂರಿನಲ್ಲಿ ಕಳೆದ […]

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ Read More »

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’

ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏಪ್ರಿಲ್ 11 ರಿಂದ 15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’ Read More »

ಶ್ರೀಶೈಲಂ ಸುರಂಗ ಕುಸಿತ : ಒಂದು ತಿಂಗಳಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ

ಇನ್ನೊಂದು ಶವಪತ್ತೆ; ಮೃತರ ಸಂಖ್ಯೆ 2ಕ್ಕೇರಿಕೆ, ಒಳಗೆ ಸಿಲುಕಿದ್ದಾರೆ ಇನ್ನೂ ಆರು ಕಾರ್ಮಿಕರು ಹೈದರಾಬಾದ್‌ : ತೆಲಂಗಾಣದ ನಾಗಕರ್ನೂಲ್‌ ಜಿಲ್ಲೆಯಲ್ಲಿ ಸಂಭವಿಸಿದ ಸುರಂಗ ಕುಸಿತದ ರಕ್ಷಣಾ ಕಾರ್ಯಾಚರಣೆ ಒಂದು ತಿಂಗಳಾದರೂ ಮುಗಿದಿಲ್ಲ. ನಿನ್ನೆ ಸುರಂಗದೊಳಗೆ ಇನ್ನೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಅಧಿಕೃತವಾಗಿ ಎರಡಕ್ಕೇರಿದೆ. ಇನ್ನೂ ಆರು ಮಂದಿ ಸುರಂಗದೊಳಗಿದ್ದು, ಅವರ ಸ್ಥಿತಿ ಏನಾಗಿದೆ ಎಂದು ಗೊತ್ತಾಗಿಲ್ಲ. ಮಾ.9ರಂದು ಗುರುಪ್ರೀತ್‌ ಸಿಂಗ್‌ ಎಂಬ ಕಾರ್ಮಿಕನ ಶವ ಪತ್ತೆಯಾಗಿತ್ತು. ನಿನ್ನೆ ಪತ್ತೆಯಾದ ಶವದ

ಶ್ರೀಶೈಲಂ ಸುರಂಗ ಕುಸಿತ : ಒಂದು ತಿಂಗಳಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ Read More »

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು ಮಾ.25 ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ

ಪ್ರೋಟೊಕಾಲ್‌ ದುರ್ಬಳಕೆ ಮಾಡಿ ಚಿನ್ನ ಕಳ್ಳ ಸಾಗಾಟ ಮಾಡಿದ ಕುರಿತು ತನಿಖೆ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದೊಂದಿಗೆ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ಗೆ ನೀಡಿದ ಪ್ರೋಟೊಕಾಲ್‌ ಕುರಿತಾದ ತನಿಖಾ ವರದಿ ಇಂದು ಸರಕಾರದ ಕೈಸೇರಲಿದೆ. ಸರಕಾರ ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರಿಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ Read More »

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ

ಕಡಬ: ಸಾರಣೆ ಕೆಲಸಕ್ಕೆಂದು ಹೋದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಡಬದಲ್ಲಿ ನಡೆದಿದೆ. ಈ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಬಳ್ಳ ಗ್ರಾಮದ ಜೋಗಿ ಮನೆ ಚೆನ್ನಕೇಶವ ಜೋಗಿ (61) ಎಂದು ಪತ್ತೆಹಚ್ಚಲಾಗಿದೆ. ಮಾ.11 ರಂದು ತನ್ನ ಮನೆಯಿಂದ ಕೋಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋದವರು ತಿರುಗಿ ಬರಲಿಲ್ಲ. ಇವರ ಬಳಿ ಇದ್ದ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯಿಂದ ಹೊರ ಹೋಗುವ ವೇಳೆ ಉದ್ದ ತೋಳಿನ ಹಸಿರು

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ Read More »

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು

ಪುತ್ತೂರು : ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾದ ಘಟನೆ ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ನಡೆದಿದೆ. ಹೊಸ ರಿಕ್ಷಾ ಖರೀದಿಸಿದ ವ್ಯಕ್ತಿ ಚಲಾವಣೆ ಕಲಿಯುತ್ತಿದ್ದ ಎನ್ನಲಾಗಿದೆ. ರಿಕ್ಷಾಕ್ಕೆ ಹಾನಿಯಾಗಿದ್ದು, ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ರಿಕ್ಷಾದಲ್ಲಿದ್ದರು ಸಹ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು Read More »

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ.

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭೂತಾರಾಧನೆ-ಜಾನಪದೀಯ ಅಧ್ಯಯನ, ಜಾಲಾಟ, ಸಂಸ್ಕೃತಿ ಸಿರಿ, ತುಳುಮಾನ್ಯ ಹಾಗೂ ಇನ್ನಿತರ ಕೃತಿಗಳು ಡಾ.ಚಿನ್ನಪ್ಪ ಗೌಡರ ಸಾಹಿತ್ಯ ಕೃತಿಗಳಾಗಿವೆ. ಈ ಹಿಂದೆ ಕರ್ನಾಟಕ ಸಾಹಿತ್ಯ

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ Read More »

error: Content is protected !!
Scroll to Top