ಸುದ್ದಿ

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ ಫೆ. 9ರಂದು ನಡೆಯಲಿದೆ. ಸಹಕಾರ ಭಾರತಿಯ ಬೆಂಬಲಿತ ಅಭ್ಯರ್ಥಿಯಾಗಿ ಒಟ್ಟು 17 ಅಭ್ಯರ್ಥಿಗಳು ಕಣಕಿಳಿಯಲಿದ್ದಾರೆ. ಈ ಪೈಕಿ ಸಾಮಾನ್ಯ ಕ್ಷೇತ್ರದಿಂದ 11 ಅಭ್ಯರ್ಥಿಗಳು, ಮಹಿಳಾ ಮೀಸಲಾತಿಯಿಂದ 2 ಅಭ್ಯರ್ಥಿಗಳು, ಹಿಂದುಳಿದ  ‘ ಎ ‘ ವರ್ಗದಿಂದ 1 ಅಭ್ಯರ್ಥಿ, ಹಿಂದುಳಿದ ‘ ಬಿ ‘ ವರ್ಗದಿಂದ 1 ಅಭ್ಯರ್ಥಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ದಿಂದ 1 […]

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ Read More »

ಕಾಡಿನಲ್ಲಿ ಹೂತಿಟ್ಟಿದ್ದ ಬಂದೂಕು, ಮದ್ದುಗುಂಡುಗಳು ಪತ್ತೆ

ಶರಣಾಗಿರುವ ನಕ್ಸಲ್‌ ರವೀಂದ್ರನ ಬಂದೂಕು ಎಂಬ ಶಂಕೆ ಕಾರ್ಕಳ: ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮದ ತಿರುಗುಣಿಬೈಲು ಸಮೀಪ ಅರಣ್ಯದಲ್ಲಿ ಎಸ್.ಬಿ.ಎ.ಎಲ್ ಬಂದೂಕೊಂದು ಪತ್ತೆಯಾಗಿದ್ದು, ಇದು ಶರಣಾಗತ ನಕ್ಸಲ್ ರವೀಂದ್ರನಿಗೆ ಸೇರಿದ ಬಂದೂಕು ಎನ್ನಲಾಗಿದೆ. ಮಣ್ಣಿನಡಿಯಲ್ಲಿ ಹೂತಿಟ್ಟಿದ್ದ ಬಂದೂಕು ಹಾಗೂ ಜೀವಂತ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂದೂಕು ಹಾಗೂ ಜೀವಂತ ಗುಂಡುಗಳು ಅಪರಿಚಿತರದ್ದು ಎಂದು ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ನಕ್ಸಲರು ಶರಣಾದಾಗ ಸಿಕ್ಕ ಬಂದೂಕಿಗಳಿಗೂ ಪೊಲೀಸರು ಅಪರಿಚಿತರದ್ದು ಎಂದು ಹಣೆಪಟ್ಟಿ ಕಟ್ಟಿದ್ದರು. ಶರಣಾದ ನಕ್ಸಲರನ್ನು ಕಾನೂನಿನ

ಕಾಡಿನಲ್ಲಿ ಹೂತಿಟ್ಟಿದ್ದ ಬಂದೂಕು, ಮದ್ದುಗುಂಡುಗಳು ಪತ್ತೆ Read More »

ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ

ಮುಡಾ ಹಗರಣ, ಪೋಕ್ಸೊ ಕೇಸ್‌ ತೀರ್ಪಿಗೆ ಕ್ಷಣಗಣನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪಾಲಿಗೆ ಇಂದು ನ್ಯಾಯಾಲಯದ ವಿಚಾರಣೆ ನಿರ್ಣಾಯಕವಾಗಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಪೋಕ್ಸೊ ಕೇಸಿನಲ್ಲಿ ಯಡಿಯೂರಪ್ಪ ಕುರಿತಾದ ತೀರ್ಪು ಇಂದು ಪ್ರಕಟವಾಗಲಿದೆ.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಶುಕ್ರವಾರ ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ

ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ Read More »

ಸೆಂಟ್ರಿಂಗ್‌ ಕಾರ್ಮಿಕನ ಮನೆಯಲ್ಲಿ ಪ್ರೇತ ಚೇಷ್ಟೆ!

ಹಾರರ್‌ ಸಿನಿಮಾ ರೀತಿ ನಡೆಯುತ್ತಿರುವ ಘಟನೆಗಳಿಂದ ಮನೆಮಂದಿ ಕಂಗಾಲು ಬೆಳ್ತಂಗಡಿ: ನೋಡು ನೋಡುತ್ತಿದ್ದಂತೆ ಬಟ್ಟೆಗೆ ಬೆಂಕಿ ಹತ್ತಿಕೊಂಡು ಉರಿಯತೊಡಗುತ್ತದೆ, ತಟ್ಟೆಬಟ್ಟಲುಗಳು ಉರುಳಿ ಬೀಳುತ್ತವೆ, ಎಲ್ಲೋ ಇಟ್ಟ ವಸ್ತು ಇನ್ನೊಂದು ಕಡೆ ಇರುತ್ತದೆ, ಬಲ್ಬ್‌, ಟ್ಯೂಬ್‌ಗಳು ತಮ್ಮಿಂದ ತಾನೇ ಆನ್‌-ಆಫ್‌ ಆಗುತ್ತವೆ… ಇದು ಯಾವುದೋ ದೆವ್ವದ ಕಥೆಯ ಸಿನಿಮಾ ದೃಶ್ಯವಲ್ಲ ಬೆಳ್ತಂಗಡಿ ತಾಲೂಕಿನ ಮಾಲಾಡಿ ಸಮೀಪ ಕೊಲ್ಪೆದಬೈಲು ಎಂಬಲ್ಲಿರುವ ಮನೆಯೊಂದರಲ್ಲಿ ಕಳೆದ ಮೂರು ತಿಂಗಳಿಂದ ಆಗಾಗ ನಡೆಯುತ್ತಿರುವ ವಿಚಿತ್ರ ಘಟನೆಗಳು.ಸೆಂಟ್ರಿಂಗ್‌ ಕೆಲಸ ಮಾಡುವ ಉಮೇಶ್‌ ಶೆಟ್ಟಿ ಎಂಬವರ ಮನೆಯಲ್ಲಿ

ಸೆಂಟ್ರಿಂಗ್‌ ಕಾರ್ಮಿಕನ ಮನೆಯಲ್ಲಿ ಪ್ರೇತ ಚೇಷ್ಟೆ! Read More »

ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ

ಪುತ್ತೂರು: ಹೊಸಮನೆ ಕ್ರಿಕೆಟರ್ಸ್ ನಿಂದ ಆರ್ಯಾಪು ಇದರ ವತಿಯಿಂದ ಎರಡು ದಿನಗಳ ಕಾಲ ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು. ಅರ್ಚಕ ಸಂದೀಪ್ ಕಾರಂತ ಪೂಜಾ ವಿಧಿ ವಿಧಾನ‌ ನೆರವೇರಿಸಿದರು. ಹೊಸಮನೆ ಕ್ರಿಕೆಟರ್ಸ್ ನ ಅಧ್ಯಕ್ಷ ಧನುಷ್ ಹೊಸಮನೆ, ಕಾರ್ಯದರ್ಶಿ ಪವನ್ ಶೆಟ್ಟಿ ಕಂಬಳತ್ತಡ್ಡ, ಉಪಾಧ್ಯಕ್ಷ ಉಮೇಶ್ ಎಸ್.ಕೆ., ಫಿಕ್ಸೆಲ್ ಕ್ರಿಯೆಟಿವ್ ನ ಪ್ರಜ್ವಲ್ ಎಂ.ಎಸ್., ಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ, ಜತೆ ಕಾರ್ಯದರ್ಶಿ ಯತೀಶ್ ಪಿ.ಕೆ.,

ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ Read More »

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ

ಎರ್ನಾಕುಲಂ: ಮೆಣಸಿನಕಾಳನ್ನು ಕೀಳುವಾಗ ಆಯ ತಪ್ಪಿ ತಮ್ಮ ಮನೆಯ ಬಾವಿಗೆ ಬಿದ್ದ ತನ್ನ ಪತಿಯನ್ನು 56 ವರ್ಷದ ಮಹಿಳೆಯೊಬ್ಬರು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.64 ವರ್ಷದ ರಮೇಶನ್ ಎಂಬವರು ಮೆಣಿಸಿನ ಬಳ್ಳಿಯಿಂದ ಮೆಣಸಿನ ಕಾಳನ್ನು ಕೀಳುವಾಗ ಏಣಿ ಜಾರಿದ್ದು, ಮರವು ಬಾವಿಯ ಸನಿಹದಲ್ಲೇ ಇದ್ದುದರಿಂದ ರಮೇಶನ್ ಬಾವಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.ತನ್ನ ಪತಿಯು ಕಿರುಚಿಕೊಳ್ಳುತ್ತಿರುವ ಸದ್ದನ್ನು ಕೇಳಿದ ಮನೆಯೊಳಗಿದ್ದ ಪದ್ಮಾ ಹೊರಗೆ ಓಡಿ ಬಂದಿದ್ದಾರೆ. ತನ್ನ ಪತಿಯು 40 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಕಂಡು ಕ್ಷಣಕಾಲ

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ Read More »

ಬೆಳ್ಳಿಪ್ಪಾಡಿ ಗುತ್ತು ತರವಾಡು ಮನೆಯಲ್ಲಿ  ದೈವಗಳ ವರ್ಷಾವಾದಿ ನೇಮೋತ್ಸವ

ಕಾಸರಗೋಡು ತಾಲೂಕು ಬೆಳ್ಳಿಪ್ಪಾಡಿ ಗುತ್ತು ತರವಾಡು ಮನೆಯಲ್ಲಿ ಧರ್ಮದೈವ ಹಾಗೂ ಸಪರಿವಾರ ದೈವಗಳ ವರ್ಷಾವಾದಿ ನೇಮೋತ್ಸವವು ಫೆ. ೬ರಿಂದ ಫೆ. ೭ರತನಕ ನಡೆಯಲಿದೆ. ಫೆ.೬ರಂದು ಬೆಳಿಗ್ಗೆ ಗಂಟೆ ೮ರಿಂದ ಪುಣ್ಯಾಹವಾಚನ, ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ತಿರುಪತಿ ವೆಂಕಟ್ರಮಣ ದೇವರ ಮುಡಿಪು ಪೂಜೆ ನಣತರ ದೈವಗಳಿಗೆ ತಂಬಿಲ ಸೇವೆ ನಡೆದು ಮದ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ, ರಾತ್ರಿ ೭ ಗಂಟೆಗೆ ದೈವಗಳ ಭಂಡಾರ ತೆಗೆಯುವುದು, ನಂತರ ಮೈಸಂದಾಯ ದೈವದ ನೇಮೋತ್ಸವ ನಡೆಯದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮರುದಿವಸ

ಬೆಳ್ಳಿಪ್ಪಾಡಿ ಗುತ್ತು ತರವಾಡು ಮನೆಯಲ್ಲಿ  ದೈವಗಳ ವರ್ಷಾವಾದಿ ನೇಮೋತ್ಸವ Read More »

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ

ವಿಟ್ಲ :  ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು, ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮ ಚಂದಳಿಕೆ ಭಾರತ್ ಆಡಿಟೋರಿಯಂ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ  ದಿನಕರ ಕುಲಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಜೀವ ವಿಮೆಯ ಮಾಹಿತಿಯನ್ನು ಪುತ್ತೂರು ಅಂಚೆ ಕಚೇರಿಯ ಮಾರ್ಕೆಟಿಂಗ್ ಮ್ಯಾನೇಜರ್ ಗುರುಪ್ರಸಾದ್ ನೀಡಿದರು. ಬಳಿಕ ವಿಟ್ಲ ವಲಯದ ಸದಸ್ಯರ ವಿಮಾ ನೊಂದಾವಣೆ ಮಾಡಲಾಯಿತು. ವಿಟ್ಲ ವಲಯದ ಅಧ್ಯಕ್ಷ ಲೀಯೋ ಡಿ ಲಸ್ರಾದೊ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ 

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ Read More »

ಬ್ಯಾಂಕಿಗೆ ಕೋಟಿಗಟ್ಟಲೆ ರೂ. ವಂಚನೆ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು

ನೌಕರರ ಹೆಸರಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಪಡೆದು ವಂಚಿಸಿದ ಪ್ರಕರಣ ಬೆಂಗಳೂರು: ಬ್ಯಾಂಕಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಿದೆ. ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ಕೂ ಜನರು ತಪ್ಪಿತಸ್ಥರು ಎಂದು ಕೋರ್ಟ್ ಹೇಳಿದೆ. ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚನೆ ಮಾಡಿದ್ದ ಆರೋಪ

ಬ್ಯಾಂಕಿಗೆ ಕೋಟಿಗಟ್ಟಲೆ ರೂ. ವಂಚನೆ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು Read More »

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ

ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್  ಕಿರುಕುಳಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮಸ್ಥರು ಊರುಗಳನ್ನೇ ತೊರೆಯುತ್ತಿದ್ದಾರೆ. ಫೈನಾನ್ಸ್ ಹಾವಳಿಗೆ ಅಂಕುಶ ಹಾಕಲು ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಪ್ರಯೋಗಿಸಿದೆ. ಇತ್ತೀಚೆಗೆ ಸುಗ್ರೀವಾಜ್ಞೆ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ಇದೀಗ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ Read More »

error: Content is protected !!
Scroll to Top