ಸುದ್ದಿ

ಕಾಶ್ಮೀರ : ಭದ್ರತಾ ಪಡೆಯಿಂದ ಇನ್ನೊಂದು ದೊಡ್ಡ ಉಗ್ರ ಬೇಟೆ

4-5 ಭಯೋತ್ಪಾದಕರ ವಿರುದ್ಧ ನಡೆಯುತ್ತಿದೆ ತೀವ್ರ ಕಾಳಗ ಶ್ರೀನಗರ: ಜಮ್ಮು-ಕಾಶ್ಮೀರದ ಕಿಷ್ತ್ವರ್‌ ಜಿಲ್ಲೆಯ ಛತ್ರೂವಿನ ಸಿಂಘ್‌ಪುರ ಎಂಬಲ್ಲಿ ಗುರುವಾರ ನಸುಕಿನ ಹೊತ್ತು ಉಗ್ರರ ಜೊತೆ ಭದ್ರತಾ ಪಡೆಯ ತೀವ್ರ ಕಾಳಗ ಶುರುವಾಗಿದೆ. ಇಲ್ಲಿ 4-5 ಉಗ್ರರು ಇರುವ ಮಾಹಿತಿ ಇರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ತೀವ್ರ ಎನ್‌ಕೌಂಟರ್‌ ನಡೆಯುತ್ತಿದ್ದು, ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಇಡೀ ಪ್ರದೇಶದಲ್ಲಿ ಹೈಅಲರ್ಟ್‌ ಘೋಷಿಸಿ ಭದ್ರತಾ ಪಡೆಗಳು ಸುತ್ತುವರಿದಿವೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕಾಶ್ಮೀರ : ಭದ್ರತಾ ಪಡೆಯಿಂದ ಇನ್ನೊಂದು ದೊಡ್ಡ ಉಗ್ರ ಬೇಟೆ Read More »

ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿಯಲ್ಲಿ  26 ನಕ್ಸಲೀಯರ ಹತ್ಯೆ

ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ರಾಜ್ಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ. ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗ ಮೃತಪಟ್ಟಿದ್ದಾರೆ ಮತ್ತು ಒಬ್ಬರು

ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿಯಲ್ಲಿ  26 ನಕ್ಸಲೀಯರ ಹತ್ಯೆ Read More »

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ

ಪುತ್ತೂರು : ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ  ಸುಧಾಕರ ಬನ್ನಂಜೆ ಕಥೆ- ಚಿತ್ರಕಥೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ ‘ಗಂಟ್ ಕಲ್ವೆರ್’ ಚಿತ್ರ ಮೇ 28 ರಂದು ತುಳುನಾಡನಾದ್ಯಂತ ಬಿಡುಗಡೆ ಯಾಗಲಿದೆ ಎಂದು ಸಿನೆಮಾ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ, ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ  ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ Read More »

ಮೇ 25 : ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ | ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸಹಯೋಗದಲ್ಲಿ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕದ ಜಂಟಿ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಮೇ 25 ಭಾನುವಾರ ಸುದಾನ ವಸತಿಯುತ ಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಕಾರ್ಯಕ್ರಮ ಸಂಚಾಲಕ ಪ್ರಭಾಕರ ಸಾಲ್ಯಾನ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸೇರಿದಂತೆ ಸುಮಾರು

ಮೇ 25 : ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ | ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸಹಯೋಗದಲ್ಲಿ Read More »

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧ ಇದೆ ಎಂಬ ಗುಸುಗುಸು ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್‌ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ Read More »

ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ

ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಏರೋಸ್ಪೇಸ್ ಉದ್ಯೋಗಿ ಬೆಳ್ತಂಗಡಿ: ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಆಕಾಂಕ್ಷಾ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್‌ಗೆ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತರಲಾಯಿತು. ಮನೆಯಲ್ಲಿ ತಂದೆ ತಾಯಿಯರ ಆಕ್ರಂದನ ಮುಗಿಲು ಮುಟ್ಟಿದ್ದು ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ

ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ Read More »

ಭೀಕರ ಅಪಘಾತ : ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಆರು ಮಂದಿ ಸಾವು

ಡಿವೈಡರ್‌ ಹಾರಿದ ಕಾರಿನಿಂದಾಗಿ ಸಂಭವಿಸಿದ ಸರಣಿ ಅಪಘಾತ ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಕೂಡ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಕಾರು, ಕಂಟೇನರ್​ ಮತ್ತು ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದತ್ತ ಹೋಗುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ

ಭೀಕರ ಅಪಘಾತ : ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಆರು ಮಂದಿ ಸಾವು Read More »

ಬಾನು ಮುಷ್ತಾಕ್‌ ಕಥಾಸಂಕಲನಕ್ಕೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ

ಕನ್ನಡ ಸಾಹಿತ್ಯಕ್ಕೆ ಸಂದ ವಿಶ್ವ ಮನ್ನಣೆ ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್‌ ಅವರ ಕಥಾಸಂಕಲನ ಹಾರ್ಟ್ ಲ್ಯಾಂಪ್ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ವಿಶ್ವ ಮಟ್ಟದ ಪ್ರಶಸ್ತಿ ಗೌರವ ಲಭ್ಯವಾಗಿದೆ. ಬಾನು ಮುಷ್ತಾಕ್‌ ಅವರ ಹಾರ್ಟ್ ಲ್ಯಾಂಪ್ ಕಥಾಸಂಕಲನ ಇಂಗ್ಲಿಷ್‌ಗೆ ಅನುವಾದಗೊಂಡಿತ್ತು. ಹಸೀನಾ ಮತ್ತು ಇತರ ಕಥೆಗಳು ಕಥಾಸಂಕಲದಿಂದ ಆಯ್ದ ಕಥೆಗಳನ್ನು ಹಾರ್ಟ್ ಲ್ಯಾಂಪ್ ಒಳಗೊಂಡಿದೆ. ಈ ಕೃತಿಯನ್ನು ಕನ್ನಡದಿಂದ ಇಂಗ್ಲಿಷ್‌ಗೆ ಲೇಖಕಿ ದೀಪಾ ಬಸ್ತಿ ಅನುವಾದ

ಬಾನು ಮುಷ್ತಾಕ್‌ ಕಥಾಸಂಕಲನಕ್ಕೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ Read More »

ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ?

ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಇಸ್ಲಾಮಾಬಾದ್‌ : ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಬೇಟೆಯಾಡಲಾಗಿದೆ. ಲಷ್ಕರ್‌ ಇ ತೈಬಾ ಉಗ್ರ ಸಂಘಟನೆಯ ಮುಖಂಡ ಹಾಫಿದ್‌ ಸಯೀದ್‌ನ ಅತ್ಯಾಪ್ತ ಎನ್ನಲಾಗಿರುವ ಆಮಿರ್ ಹಮ್ಜಾ ಎಂಬಾತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಆದರೆಎ ಪಾಕಿಸ್ಥಾನದ ಮಾಧ್ಯಮಗಳು ಈತ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದಾನೆ ಎಂದು ವರದಿ ಮಾಡಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಲಾಹೋರ್​ನಲ್ಲಿ ಅಪರಿಚಿತರು ಹಮ್ಜಾನ ಮೇಲೆ ದಾಳಿ ನಡೆಸಿದ್ದಾರೆ. ಆಮಿರ್ ಹಮ್ಜಾ ಲಷ್ಕರ್​-ಎ-ತೈಬಾ ಸ್ಥಾಪಕರಲ್ಲಿ ಒಬ್ಬ. ಆತನಿಗೆ ಗಂಭೀರ

ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ? Read More »

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌

ಸಿಂಗಾಪುರ, ಹಾಂಕಾಂಗ್‌ನಲ್ಲಿ ಹೈಅಲರ್ಟ್‌ ಘೋಷಣೆ; ಭಾರತದಲ್ಲೂ ಕೆಲವು ಪ್ರಕರಣಗಳು ಪತ್ತೆ ನವದೆಹಲಿ: 2019ರಲ್ಲಿ ಜಗತ್ತಿಗೆ ಅಪ್ಪಳಿಸಿದ ಕೋವಿಡ್‌ ಸಾಂಕ್ರಾಮಿಕ ರೋಗ ಇನ್ನೂ ಸಂಪೂರ್ಣವಾಗಿ ನಿರ್ಮೂಲನವಾಗಿಲ್ಲ. 3 ವರ್ಷ ಜಗತ್ತನ್ನು ಇನ್ನಿಲ್ಲದಂತೆ ಕಾಡಿದ್ದ ಕೋವಿಡ್ ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದ್ದು, ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ. ಹಾಂಕಾಂಗ್‌ ಮತ್ತು ಸಿಂಗಾಪುರದಂತಹ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಇದು ಹೊಸ ಅಲೆ ಎಂದು ದೃಢಪಡಿಸಿದ್ದಾರೆ. ಭಾರತದಲ್ಲೂ ಕೆಲವು ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌ Read More »

error: Content is protected !!
Scroll to Top