ಸುದ್ದಿ

ಈಶ್ವರಮಂಗಲದ ಸಾಂತ್ಯದಲ್ಲಿ ಮಾರ್ಗ ಸೂಚಕ ಫಲಕ ಅನಾವರಣ: ಗ್ರಾಮಾಭಿವೃದ್ಧಿಗೆ ಯುವಕರಿಂದ ಅರ್ಥಪೂರ್ಣ ಹೆಜ್ಜೆ

ಈಶ್ವರಮಂಗಲ: ಸಾಂತ್ಯ ಮುಖ್ಯ ರಸ್ತೆಯಿಂದ ಕವಲೊಡೆಯುವ ಪಳನೀರು-ಸಸ್ಪೆಟ್ಟಿ ಮಾರ್ಗದಲ್ಲಿ ಮಾರ್ಗ ಸೂಚಕ ನಾಮಫಲಕವನ್ನು ಅನಾವರಣಗೊಳಿಸುವ ಮೂಲಕ ಸ್ಥಳೀಯ ಯುವಕರು ಸಮಾಜಮುಖಿ ಕಾರ್ಯಕ್ಕೆ ಹೊಸ ಅರ್ಥ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ರಮೇಶ್ ರೈ ಸಾಂತ್ಯ ಅವರು, ಯುವಕರು ತಮ್ಮ ದೈನಂದಿನ ಜೀವನದ ಜವಾಬ್ದಾರಿಗಳ ನಡುವೆಯೂ ಸಮಾಜದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಗ್ರಾಮಾಭಿವೃದ್ಧಿಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಅಗತ್ಯವೆಂದು ಅಭಿಪ್ರಾಯಪಟ್ಟರು. ಬಾಲಮುರಳಿ ಸಸ್ಪೆಟ್ಟಿ ಅವರು ಮಾತನಾಡಿ, ಇಂದಿನ ಯುವಕರು ಅತಿಯಾದ ಮೊಬೈಲ್ ಬಳಕೆಯಿಂದ ದಿಕ್ಕುತಪ್ಪುತ್ತಿರುವ ಸಂದರ್ಭದಲ್ಲಿ, ಇಂತಹ ಕಾರ್ಯಗಳು […]

ಈಶ್ವರಮಂಗಲದ ಸಾಂತ್ಯದಲ್ಲಿ ಮಾರ್ಗ ಸೂಚಕ ಫಲಕ ಅನಾವರಣ: ಗ್ರಾಮಾಭಿವೃದ್ಧಿಗೆ ಯುವಕರಿಂದ ಅರ್ಥಪೂರ್ಣ ಹೆಜ್ಜೆ Read More »

ಹೈನುಗಾರರಿಗೆ ಸಿಗಲಿದೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ

ಬೇಸಿಗೆಯ ಮೇವಿನ ಸಂಕಷ್ಟ ನಿವಾರಿಸಲು ದ.ಕ. ಹಾಲು ಉತ್ಪಾದಕರ ಒಕ್ಕೂಟ ನೆರವು ಮಂಗಳೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ತನ್ನ ಸದಸ್ಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 1 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಈ ವಿಶೇಷ ಪ್ರೋತ್ಸಾಹಧನ ಫೆಬ್ರವರಿ 21ರಿಂದ ಮೇ 31ರವರೆಗೆ ಅನ್ವಯವಾಗಲಿದೆ. ಬೇಸಿಗೆಯ ಅವಧಿಯಲ್ಲಿ ಹಸಿರು ಹುಲ್ಲು ಮತ್ತು ಒಣ ಹುಲ್ಲಿನ ಕೊರತೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಹೈನುಗಾರರಿಗೆ ಸಹಾಯ ಮಾಡಲು ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ.

ಹೈನುಗಾರರಿಗೆ ಸಿಗಲಿದೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ Read More »

ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್‌ಐಎ

ಮೂರು ವರ್ಷಗಳಿಂದ ತಪ್ಪಿಸಿಕೊಂಡಿರುವ ಲಷ್ಕರ್‌ನ ಉಗ್ರ ಬೆಂಗಳೂರು: ಮೋಸ್ಟ್‌ ವಾಂಟೆಡ್‌ ಉಗ್ರ ಜುನೈದ್‌ ಅಹಮ್ಮದ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಮೋಸ್ಟ್ ವಾಂಟೆಡ್ ಲಷ್ಕರ್ ಎ ತೊಯ್ಬಾ ಉಗ್ರನಿಗಾಗಿ ಕಳೆದ ಮೂರು ವರ್ಷದಿಂದ ಎನ್‌ಐಎ ಅಧಿಕಾರಿಗಳು ದೇಶ, ಹೊರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಂಕಿತ ಉಗ್ರ ಜುನೈದ್ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ, ಉಗ್ರನ ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಗರದ ಜನನಿಬಿಡ

ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್‌ಐಎ Read More »

ಪುತ್ತೂರು : ಎಂಡಿಎಂ ಸಾಗಿಸುತ್ತಿದ್ದ ಮೂವರ ಬಂಧನ

ಕಾರು, ಮಾರಕಾಸ್ತ್ರ ಸೇರಿ 5.38 ಲ.ರೂ. ಮೌಲ್ಯದ ಸೊತ್ತು ವಶ ಪುತ್ತೂರು : ಎಂಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕೇರಳ ಮೂಲದ ಮೂವರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂದಿಸಿದ್ದಾರೆ. ಕೇರಳದ ಕೋಝಿಕೋಡ್‌ನ ಮುಹಮ್ಮದ್ ಅಜ್ಮಲ್ ಸಿ. ಯಾನೆ ಅಜ್ಜು (30), ವಯನಾಡ್ ಜಿಲ್ಲೆಯ ಇಸ್ಮಾಯಿಲ್ (28), ಕೊಝಿಕೋಡ್‌ನ ಸಂಶೀರ್ (27) ಬಂಧಿತ ಆರೋಪಿಗಳು. ಆರೋಪಿಗಳು ಫೆ.18ರಂದು ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ವಾಹನದಲ್ಲಿ ಮಾರಾಕಾಯುಧ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ

ಪುತ್ತೂರು : ಎಂಡಿಎಂ ಸಾಗಿಸುತ್ತಿದ್ದ ಮೂವರ ಬಂಧನ Read More »

ಶಿವಾಜಿ ಜಯಂತಿ ಮೇಲೆ ಕಲ್ಲು, ಚಪ್ಪಲಿ ತೂರಿದ ದುಷ್ಕರ್ಮಿಗಳು : ಪರಿಸ್ಥಿತಿ ಉದ್ವಿಗ್ನ

ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆಂದು ಆರೋಪ ಬೆಂಗಳೂರು: ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಕೆಲವರು ಗಾಯಗೊಂಡಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರುಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್​​

ಶಿವಾಜಿ ಜಯಂತಿ ಮೇಲೆ ಕಲ್ಲು, ಚಪ್ಪಲಿ ತೂರಿದ ದುಷ್ಕರ್ಮಿಗಳು : ಪರಿಸ್ಥಿತಿ ಉದ್ವಿಗ್ನ Read More »

ಕೊಕೇನ್ ಸಾಗಾಟ: ವಿದೇಶಿ ಪ್ರಜೆಯನ್ನು ಬಂಧಿಸಿದ NCB

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ದ್ರವ್ಯ ಕೊಕೇನ್ ಸಾಗಾಟ ಮಾಡುತ್ತಿದ್ದ ಬ್ರೆಜಿಲ್ ಪ್ರಜೆಯನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 23.88 ಕೋಟಿ ರೂ. ಮೌಲ್ಯದ 4.776 KG ಕೊಕೇನ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಸಾವೊಪಾಲೊದಿಂದ ದೋಹಾಗೆ ಮತ್ತು ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಿದ್ದ ಎಂದು ತಿಳಿದು ಬಂದಿದೆ. ಆರೋಪಿ ಚೆಕ್‌ ಇನ್ ಮಾಡಿದ ಸಾಮಗ್ರಿಗಳ ಪರಿಶೀಲನೆ ನಡೆಸಿದಾಗ ಅದರಲ್ಲಿ ಕೊಕೇನ್ ಇದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೊಕೇನ್ ಸಾಗಾಟ: ವಿದೇಶಿ ಪ್ರಜೆಯನ್ನು ಬಂಧಿಸಿದ NCB Read More »

ನಕ್ಸಲ್ ನಾಯಕ ಮಹೇಶ್ ಬೆಳ್ತಂಗಡಿ ಕೋರ್ಟ್‌ಗೆ ಹಾಜರ್

ಬೆಳ್ತಂಗಡಿ: ಕುತ್ಲೂರಿನಲ್ಲಿ 2012 ರಲ್ಲಿ ಮಾವೋವಾದಿಗಳಿಗೆ ಸಂಬಂಧಿಸಿದ ಕರಪತ್ರ ಹಂಚಿದ ಪ್ರಕರಣದ ಆರೋಪಿ ನಕ್ಸಲೈಟ್ ಮಹೇಶ್ ಯಾನೆ ಜಯಣ್ಣ ಯಾನೆ ಜಾನ್ ಎಂಬಾತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೇರಳದ ತ್ರಿಶೂರ್‌ನ ಕಾರಾಗೃಹದಿಂದ ಬಂಧಿತನನ್ನು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತ ಮೋಸ್ಟ್ ವಾಂಟೆಡ್ ‌ನಕ್ಸಲೈಟ್ ಆಗಿದ್ದು, ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯವ. ಈತನಿಗೆ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ

ನಕ್ಸಲ್ ನಾಯಕ ಮಹೇಶ್ ಬೆಳ್ತಂಗಡಿ ಕೋರ್ಟ್‌ಗೆ ಹಾಜರ್ Read More »

ನರಹಂತಕ ಆನೆಯನ್ನು ಸೆರೆಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ ಹೋದ ಅರಣ್ಯ ಇಲಾಖೆ

ಚಿಕ್ಕಮಗಳೂರು: ನರಹಂತಕ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಸಕ್ರೆಬೈಲು ಆನೆ ಬಿಡಾರದ ಐದು ಸಾಕಾನೆಗಳನ್ನು ಹುಣಸೇಹಳ್ಳಿಯ ಪುರ ಎಂಬಲ್ಲಿಗೆ ಕರೆ ತರಲಾಗಿದೆ. ಕೆಲ ದಿನದ ಹಿಂದೆ ಕಾಡಾನೆ ದಾಳಿಗೆ ತುತ್ತಾಗಿ ಯಲ್ಲಪ್ಪ ಎಂಬುವವರು ಸಾವನ್ನಪ್ಪಿದ್ದರು. ಈ ಘಟನೆಯಿಂದ ರೊಚ್ಚಿಗೆದ್ದ ರೈತರು ಹಾಗೂ ಸ್ಥಳೀಯರು ಬಾಳೆಹೊನ್ನೂರು ಅರಣ್ಯ ಇಲಾಖೆ ಕಚೇರಿ ಮುಂದೆ

ನರಹಂತಕ ಆನೆಯನ್ನು ಸೆರೆಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ ಹೋದ ಅರಣ್ಯ ಇಲಾಖೆ Read More »

ಹೆಸರು ಬದಲಾಯಿಸಲು ಹೇಳಿದ ವ್ಯಕ್ತಿಗೆ ಖಡಕ್ ತಿರುಗೇಟು ಕೊಟ್ಟ ಗಾಯಕಿ ಸುಹಾನ ಸೈಯದ್

ಬೆಂಗಳೂರು: ತಮ್ಮ ಹೆಸರನ್ನು ಸವದತ್ತಿ ಎಲ್ಲಮ್ಮ ಎಂದು ಯಾಕೆ ಬದಲಾಯಿಸಿಕೊಳ್ಳಬಾರದು ಎಂದು ಇನ್ಸ್ಟಾ‌ಗ್ರಾಮ್ ಮೂಲಕ ಪ್ರಶ್ನೆ ಕೇಳಿದ ವ್ಯಕ್ತಿಗೆ ಸೂಕ್ತ ತಿರುಗೇಟು ನೀಡಿದ್ದಾರೆ ಗಾಯಕಿ ಸುಹಾನ ಸೈಯದ್. ಸುಹಾನ ಅವರು ಇತ್ತೀಚೆಗಷ್ಟೇ ತಮ್ಮ ಹಿಂದೂ ಗೆಳೆಯನ ಜೊತೆಗೆ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿದ್ದರು. ಆ ಬಳಿಕ ತಮ್ಮ ಪತಿಯ ಜೊತೆ ದೇವಾಲಯಗಳಿಗೆ ತೆರಳಿದ ಹಲವಾರು ಫೋಟೋ‌ಗಳನ್ನು ‌ಸಹ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಸುಹಾನಾಗೆ ವ್ಯಕ್ತಿಯೊಬ್ಬ ಇನ್ಸ್ಟಾ ಸೆಷನ್‌ನಲ್ಲಿ ಹೆಸರು ಬದಲಾವಣೆಯ ಬಗ್ಗೆ ಪ್ರಶ್ನೆ ಕೇಳಿದ್ದಾನೆ. ಇದಕ್ಕೆ

ಹೆಸರು ಬದಲಾಯಿಸಲು ಹೇಳಿದ ವ್ಯಕ್ತಿಗೆ ಖಡಕ್ ತಿರುಗೇಟು ಕೊಟ್ಟ ಗಾಯಕಿ ಸುಹಾನ ಸೈಯದ್ Read More »

ಮಾನವ ಕಲ್ಯಾಣಕ್ಕೆ ಕೃತಕ ಬುದ್ಧಿಮತ್ತೆ ಬಳಕೆ : ನರೇಂದ್ರ ಮೋದಿ ಪ್ರತಿಪಾದನೆ

AI ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ MANAV ಸೂತ್ರ ತಿಳಿಸಿದ ಪ್ರಧಾನಿ ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಮಾನವ ಕಲ್ಯಾಣಕ್ಕಾಗಿ ಉಪಯೋಗಿಸುವುದು ಭಾರತದ ಗುರಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಇಂದು ನಡೆದ AI ಇಂಪ್ಯಾಕ್ಟ್‌ ಶೃಂಗಸಭೆ 2026ನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಭವಿಷ್ಯದ AI ನೀಲನಕ್ಷೆಯನ್ನು ಸಭೆಯ ಮುಂದೆ ಬಿಚ್ಚಿಟ್ಟರು. ವಿಶ್ವದ ಯುವಕರು AI ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವ ಮತ್ತು ಅದರ ಮಾಲೀಕತ್ವವನ್ನು ಪಡೆದುಕೊಳ್ಳುತ್ತಿರುವ ವೇಗ ನಿಜಕ್ಕೂ ಶ್ಲಾಘನೀಯ. ಭಾರತದಲ್ಲಿ ಆಯೋಜಿಸಿರುವ

ಮಾನವ ಕಲ್ಯಾಣಕ್ಕೆ ಕೃತಕ ಬುದ್ಧಿಮತ್ತೆ ಬಳಕೆ : ನರೇಂದ್ರ ಮೋದಿ ಪ್ರತಿಪಾದನೆ Read More »

error: Content is protected !!
Scroll to Top