ಸುದ್ದಿ

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ನಾಯಕ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕೆ ನವದೆಹಲಿ: ಹರಿಯಾಣದಲ್ಲಿ ವೋಟ್‌ ಚೋರಿ ನಡೆದಿದೆ ಎಂಬ ರಾಹುಲ್‌ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಒಂದು ಗಂಟೆಯಲ್ಲಿ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ. ನಿನ್ನೆ ಸುದ್ದಿಗೋಷ್ಠಿ ನಡೆಸಿದ ರಾಹುಲ್‌ ಗಾಂಧಿ, ಹರಿಯಾಣದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ಎಂದು ಆರೋಪಿಸಿದ್ದರು. ಅದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಭಾರತ […]

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ Read More »

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ ತಾಯಿಗೆ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಕಳೆದ ಅಕ್ಟೋಬರ್ 10ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಎಂಬ ಮಹಿಳೆ ತನ್ನ ಅಪ್ರಾಪ್ತ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲೀಕರಿಗೆ

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ Read More »

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು

121 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಉತ್ಸಾಹದಿಂದ ಧಾವಿಸಿದ ಮತದಾರರು ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಜನರು ಬೆಳಗ್ಗಿನಿಂದಲೇ ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಇಂದು ಮೊದಲ ಹಂತದ ಮತದಾನದಲ್ಲಿ, 18 ಜಿಲ್ಲೆಗಳಾದ್ಯಂತ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಈ ಹಂತವು ರಾಜ್ಯದ ರಾಜಕೀಯ ದಿಕ್ಕನ್ನು ನಿರ್ಧರಿಸುವುದಲ್ಲದೆ, ಎನ್​ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆ ಇದಾಗಿರಲಿದೆ. ಆಡಳಿತವು ಪ್ರತಿ ಮತಗಟ್ಟೆಯಲ್ಲಿ ಸಶಸ್ತ್ರ ಪಡೆಗಳನ್ನು

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು Read More »

ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ: ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರುಗಳ ಆಯ್ಕೆ

ವಿಟ್ಲ: ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ ಉಪಾಧ್ಯಕ್ಷರಾಗಿ ಬಾಬು ಕೊಪ್ಪಳ, ನಿರ್ದೇಶಕರುಗಳಾಗಿ ಡಾ. ಗೀತಪ್ರಕಾಶ್ ಎ., ರಾಘವ ಪೂಜಾರಿ, ಜಗದೀಶ್ ಪಾಣೆಮಜಲು, ಅಭಿಜಿತ್ ಜೆ., ಸಂಜೀವ ಪೂಜಾರಿ ಎಂ., ರವಿ ಬಿ. ಕೆ., ಮಾಧವ ಪೂಜಾರಿ, ಶ್ರೀಧರ ಬಿ., ಪ್ರಕಾಶ್ ಕೆ., ವನಿತಾ ಚಂದ್ರಹಾಸ ಮತ್ತು ಶ್ವೇತಾ ಪದ್ಮನಾಭ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಸಹಕಾರಿ

ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ: ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರುಗಳ ಆಯ್ಕೆ Read More »

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ

ಮಂಗಳೂರು: ದುಷ್ಕರ್ಮಿಯೊಬ್ಬ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ‌ನಕಲಿ ಖಾತೆ ತೆರೆದಿರುವ ಬಗ್ಗೆ ವರದಿಯಾಗಿದೆ. ಕೆಲ ದಿನಗಳ ಹಿಂದೆಯೇ ಈ ಖಾತೆ ತೆರೆಯಲಾಗಿದ್ದು, ಅದರಲ್ಲಿ ಈಗಾಗಲೇ ಕೆಲವು ಮಂದಿ ಸ್ನೇಹಿತರಾಗಿರುವುದು ‌ಸಹ ಕಂಡು ಬಂದಿದೆ. ಈ ಸಂಬಂಧ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತಕ್ಷಣವೇ ಫೇಸ್‌ಬುಕ್ ಸಂಸ್ಥೆಗೆ ರಿಪೋರ್ಟ್ ಮಾಡಿದ್ದಾಗಿ ತಿಳಿದು ಬಂದಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ Read More »

ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಅವಹೇಳನ: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಸರ್ಕಾರ, ಸಿ. ಎಂ. ಸಿದ್ದರಾಮಯ್ಯ, ಡಿ.ಸಿ.ಎಂ. ಡಿ. ಕೆ. ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಚಿತ್ರಗಳನ್ನು ಅವಹೇಳನಕಾರಿ ಎಂಬಂತೆ ಬಳಸಿದ ನ್ಯೂಸ್ ಫ್ಯಾಕ್ಟರಿ-09 ಎಂಬ ಯೂಟ್ಯೂಬ್ ಚಾನೆಲ್ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎಎಸ್‌ಐ ಅಸ್ಮಾ ಬೇಗಂ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ

ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಅವಹೇಳನ: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲು Read More »

ಅಂಕಪಟ್ಟಿ ಪಡೆಯಲು ಮೈಸೂರಿನ ಮಾನಸ ಗಂಗೋತ್ರಿ ಮುಂದೆ ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದ ಯುವತಿ

ಮೈಸೂರು: ನಕಲಿ ಅಂಕಪಟ್ಟಿ ಪಡೆಯಲು 18 ಸಾವಿರ ರೂ. ಗಳನ್ನು ಕೇಳುತ್ತಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬಳು ಮೈಸೂರು ವಿ.ವಿ. ಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಮೀಪ ರಸ್ತೆಯಲ್ಲಿ ಮಲಗಿ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಬಿ.ಇಡಿ. ಗೆ ಪ್ರವೇಶಾತಿ ಪಡೆಯಬೇಕಿತ್ತು. ಈ ಹಿನ್ನೆಲೆಯಲ್ಲಿ ವಿವಿಯಲ್ಲೇ ಇರುವ ನನ್ನ ಎಸ್‌ ಎಸ್‌ ಎಲ್‌ ಸಿ ಮತ್ತು ಪದವಿ ಅಂಕಪಟ್ಟಿಗಳನ್ನು ‌ನೀಡುವಂತೆ ಮನವಿ ಮಾಡಿದ್ದೆ. ಆದರೆ ಬಾಕಿ ಶುಲ್ಕ ಪಾವತಿ ಸಿ ದಲ್ಲಿ ಅಂಕ ಪಟ್ಟಿ ನೀಡುವುದಾಗಿ ತಿಳಿಸಿದರು.

ಅಂಕಪಟ್ಟಿ ಪಡೆಯಲು ಮೈಸೂರಿನ ಮಾನಸ ಗಂಗೋತ್ರಿ ಮುಂದೆ ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದ ಯುವತಿ Read More »

ಗುರುನಾನಕ್ ಜನ್ಮಜಯಂತಿ: ಶುಭ ಕೋರಿದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್

ನವದೆಹಲಿ: ಸಿಖ್ ಗುರು ಗುರುನಾನಕ್ ಅವರ ಜನ್ಮಜಯಂತಿಯ ಪ್ರಯುಕ್ತ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಶುಭ ಕೋರಿ, ಗುರುನಾನಕ್ ಅವರ ತತ್ವಗಳನ್ನು ಸ್ಮರಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶ್ರೀ ಗುರುನಾನಕ್ ದೇವ್ ಜಿ ಅವರ ಜೀವನ ಮತ್ತು ಬೋಧನೆಗಳು ಸತ್ಯ, ಸಮಾನತೆ, ಕರುಣೆ ಮತ್ತು ನಿಸ್ವಾರ್ಥ ಸೇವೆಯ ಶಾಶ್ವತ ಮೌಲ್ಯಗಳಿಂದ ಜಗತ್ತನ್ನು ಬೆಳಗಿಸುತ್ತಿವೆ ಎಂದಿದ್ದಾರೆ. ಗುರುನಾನಕ್ ಅವರ ದೈವಿಕ ಸಂದೇಶವು ಕಾಲವನ್ನು ಮೀರಿದ್ದು, ಮಾನವೀಯತೆಯು ಶಾಂತಿ, ಸದಾಚಾರ ಮತ್ತು

ಗುರುನಾನಕ್ ಜನ್ಮಜಯಂತಿ: ಶುಭ ಕೋರಿದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ Read More »

ಮೈಸೂರು ನಗರದಲ್ಲಿ ಫ್ಲೈ‌ಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ

ಮೈಸೂರು: ರಾಜ್ಯ ಸರ್ಕಾರ ಮೈಸೂರು ನಗರದಲ್ಲಿ ಎರಡು ಫ್ಲೈ ಓವರ್ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸಂಸದ ಯದುವೀರ ಕೃಷ್ಣದತ್ತ ‌ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ದಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ. ಸಿಎಂ ಕೂಡ ಗ್ರೇಟ‌ರ್

ಮೈಸೂರು ನಗರದಲ್ಲಿ ಫ್ಲೈ‌ಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ Read More »

ನಂದಿನಿ ತುಪ್ಪದ ಬೆಲೆ ದಿಢೀರ್‌ 90 ರೂ. ಏರಿಕೆ

ಜಿಎಸ್‌ಟಿ ಇಳಿಕೆಯಿಂದ ನಿರಾಳವಾಗಿದ್ದ ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌ ಬೆಂಗಳೂರು: ಜಿಎಸ್‌ಟಿ ಇಳಿಕೆಯಿಂದಾಗಿ ಎಲ್ಲ ವಸ್ತುಗಳ ಬೆಲೆ ಇಳಿಕೆಯಾಗಿ ನಿರಾಳವಾಗಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನ ತುಪ್ಪದ ಬೆಲೆಯಲ್ಲಿ ಏಕಾಏಕಿ 90 ರೂ. ಏರಿಕೆ ಮಾಡಿ ದಿಢೀರ್‌ ಶಾಕ್‌ ಕೊಟ್ಟಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಈ ಹಿಂದೆ 1

ನಂದಿನಿ ತುಪ್ಪದ ಬೆಲೆ ದಿಢೀರ್‌ 90 ರೂ. ಏರಿಕೆ Read More »

error: Content is protected !!
Scroll to Top