ಸುದ್ದಿ

ನರಹಂತಕ ಆನೆಯನ್ನು ಸೆರೆಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ ಹೋದ ಅರಣ್ಯ ಇಲಾಖೆ

ಚಿಕ್ಕಮಗಳೂರು: ನರಹಂತಕ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಸಕ್ರೆಬೈಲು ಆನೆ ಬಿಡಾರದ ಐದು ಸಾಕಾನೆಗಳನ್ನು ಹುಣಸೇಹಳ್ಳಿಯ ಪುರ ಎಂಬಲ್ಲಿಗೆ ಕರೆ ತರಲಾಗಿದೆ. ಕೆಲ ದಿನದ ಹಿಂದೆ ಕಾಡಾನೆ ದಾಳಿಗೆ ತುತ್ತಾಗಿ ಯಲ್ಲಪ್ಪ ಎಂಬುವವರು ಸಾವನ್ನಪ್ಪಿದ್ದರು. ಈ ಘಟನೆಯಿಂದ ರೊಚ್ಚಿಗೆದ್ದ ರೈತರು ಹಾಗೂ ಸ್ಥಳೀಯರು ಬಾಳೆಹೊನ್ನೂರು ಅರಣ್ಯ ಇಲಾಖೆ ಕಚೇರಿ ಮುಂದೆ […]

ನರಹಂತಕ ಆನೆಯನ್ನು ಸೆರೆಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ ಹೋದ ಅರಣ್ಯ ಇಲಾಖೆ Read More »

ಹೆಸರು ಬದಲಾಯಿಸಲು ಹೇಳಿದ ವ್ಯಕ್ತಿಗೆ ಖಡಕ್ ತಿರುಗೇಟು ಕೊಟ್ಟ ಗಾಯಕಿ ಸುಹಾನ ಸೈಯದ್

ಬೆಂಗಳೂರು: ತಮ್ಮ ಹೆಸರನ್ನು ಸವದತ್ತಿ ಎಲ್ಲಮ್ಮ ಎಂದು ಯಾಕೆ ಬದಲಾಯಿಸಿಕೊಳ್ಳಬಾರದು ಎಂದು ಇನ್ಸ್ಟಾ‌ಗ್ರಾಮ್ ಮೂಲಕ ಪ್ರಶ್ನೆ ಕೇಳಿದ ವ್ಯಕ್ತಿಗೆ ಸೂಕ್ತ ತಿರುಗೇಟು ನೀಡಿದ್ದಾರೆ ಗಾಯಕಿ ಸುಹಾನ ಸೈಯದ್. ಸುಹಾನ ಅವರು ಇತ್ತೀಚೆಗಷ್ಟೇ ತಮ್ಮ ಹಿಂದೂ ಗೆಳೆಯನ ಜೊತೆಗೆ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿದ್ದರು. ಆ ಬಳಿಕ ತಮ್ಮ ಪತಿಯ ಜೊತೆ ದೇವಾಲಯಗಳಿಗೆ ತೆರಳಿದ ಹಲವಾರು ಫೋಟೋ‌ಗಳನ್ನು ‌ಸಹ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಸುಹಾನಾಗೆ ವ್ಯಕ್ತಿಯೊಬ್ಬ ಇನ್ಸ್ಟಾ ಸೆಷನ್‌ನಲ್ಲಿ ಹೆಸರು ಬದಲಾವಣೆಯ ಬಗ್ಗೆ ಪ್ರಶ್ನೆ ಕೇಳಿದ್ದಾನೆ. ಇದಕ್ಕೆ

ಹೆಸರು ಬದಲಾಯಿಸಲು ಹೇಳಿದ ವ್ಯಕ್ತಿಗೆ ಖಡಕ್ ತಿರುಗೇಟು ಕೊಟ್ಟ ಗಾಯಕಿ ಸುಹಾನ ಸೈಯದ್ Read More »

ಮಾನವ ಕಲ್ಯಾಣಕ್ಕೆ ಕೃತಕ ಬುದ್ಧಿಮತ್ತೆ ಬಳಕೆ : ನರೇಂದ್ರ ಮೋದಿ ಪ್ರತಿಪಾದನೆ

AI ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ MANAV ಸೂತ್ರ ತಿಳಿಸಿದ ಪ್ರಧಾನಿ ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಮಾನವ ಕಲ್ಯಾಣಕ್ಕಾಗಿ ಉಪಯೋಗಿಸುವುದು ಭಾರತದ ಗುರಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಇಂದು ನಡೆದ AI ಇಂಪ್ಯಾಕ್ಟ್‌ ಶೃಂಗಸಭೆ 2026ನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಭವಿಷ್ಯದ AI ನೀಲನಕ್ಷೆಯನ್ನು ಸಭೆಯ ಮುಂದೆ ಬಿಚ್ಚಿಟ್ಟರು. ವಿಶ್ವದ ಯುವಕರು AI ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವ ಮತ್ತು ಅದರ ಮಾಲೀಕತ್ವವನ್ನು ಪಡೆದುಕೊಳ್ಳುತ್ತಿರುವ ವೇಗ ನಿಜಕ್ಕೂ ಶ್ಲಾಘನೀಯ. ಭಾರತದಲ್ಲಿ ಆಯೋಜಿಸಿರುವ

ಮಾನವ ಕಲ್ಯಾಣಕ್ಕೆ ಕೃತಕ ಬುದ್ಧಿಮತ್ತೆ ಬಳಕೆ : ನರೇಂದ್ರ ಮೋದಿ ಪ್ರತಿಪಾದನೆ Read More »

ಈ ವಾರವೇ ಅಮೆರಿಕ – ಇರಾನ್‌ ಯುದ್ಧ ಶುರು?

ಇರಾನ್‌ ಸುತ್ತ ಭಾರಿ ಪ್ರಮಾಣದಲ್ಲಿ ಯುದ್ಧ ಸನ್ನದ್ಧತೆ ಮಾಡಿಕೊಂಡಿರುವ ಅಮೆರಿಕ ವಾಷಿಂಗ್ಟನ್ : ಈ ವಾರಾಂತ್ಯದಲ್ಲೇ ಅಮೆರಿಕ ಮತ್ತು ಇರಾನ್‌ ನಡುವೆ ಪೂರ್ಣ ಪ್ರಮಾಣದ ಯುದ್ಧ ಶುರುವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಮೆರಿಕದ ಬೆದರಿಕೆಯನ್ನು ಲೆಕ್ಕಿಸದೆ ಇರಾನ್‌ ತನ್ನ ಅಣ್ವಸ್ತ್ರ ಕಾರ್ಯಕ್ರಮವನ್ನು ಮುಂದುವರಿಸಿರುವುದು ಯುದ್ಧಕ್ಕೆ ನೆಪವಾಗಬಹುದು ಎನ್ನಲಾಗಿದೆ. ಇರಾನ್ ಮೇಲಿನ ದಾಳಿಗೆ ಅಮೆರಿಕದ ಮಿಲಿಟರಿ ಸಿದ್ಧತೆಗಳು ಪೂರ್ಣಗೊಂಡಿವೆ. ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಯುದ್ಧನೌಕೆಗಳು, ಯುದ್ಧ ವಿಮಾನಗಳು ಮತ್ತು ಇಂಧನ ತುಂಬುವ ವಿಮಾನಗಳು ಇರಾನ್ ವಿರುದ್ಧದ ಯುದ್ಧಕ್ಕೆ ಸಿದ್ಧವಾಗಿವೆ. ಈ

ಈ ವಾರವೇ ಅಮೆರಿಕ – ಇರಾನ್‌ ಯುದ್ಧ ಶುರು? Read More »

ಅಕ್ರಮ ಮರಳುಗಾರಿಕೆ : ಇಬ್ಬರ ಬಂಧನ

ಬೆಳ್ತಂಗಡಿ: ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ಮಾಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೇಣೂರು ಪೊಲೀಸ್ ಸಿಬಂದಿ ಬೀರೇಶ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ ಬಂದ ಖಚಿತ ಮಾಹಿತಿಯಂತೆ ಕರಂಬಾರಿನ ಬೊಟ್ಟೆಲ್ ಮಾರಿನ ನದಿ ಕಿನಾರೆಗೆ ತೆರಳಿದಾಗ ಆರೋಪಿಗಳಾದ ವಸಂತ ಹಾಗೂ ರಮೇಶ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದು, ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು 1 ಯುನಿಟ್‌ನಷ್ಟು ಮರಳು

ಅಕ್ರಮ ಮರಳುಗಾರಿಕೆ : ಇಬ್ಬರ ಬಂಧನ Read More »

ಪತ್ನಿಯನ್ನು ಕತ್ತು ಬಿಗಿದು ಕೊಂದ ಇಸ್ರೋ ನಿವೃತ್ತ ಉದ್ಯೋಗಿ

ತಾನು ಸತ್ತರೆ ಪತ್ನಿ ಅನಾಥಳಾಗುತ್ತಾಳೆ ಎಂದು ಕೃತ್ಯ ಬೆಂಗಳೂರು: ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಪತ್ನಿಯನ್ನೇ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟವಲ್‌ನಿಂದ ಕತ್ತು ಬಿಗಿದು ನಾಗೇಶ್ವರ್‌ ರಾವ್‌ ಎಂಬಾತ (75) ಪತ್ನಿ ಸಂಧ್ಯಾ (65) ಅವರನ್ನು ಕೊಲೆ ಮಾಡಿದ್ದಾನೆ. ಮೂರು ವರ್ಷಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ದಂಪತಿ ವಾಸವಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದ. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು

ಪತ್ನಿಯನ್ನು ಕತ್ತು ಬಿಗಿದು ಕೊಂದ ಇಸ್ರೋ ನಿವೃತ್ತ ಉದ್ಯೋಗಿ Read More »

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಪಾತಕಿ ಸೆರೆ

ಕೊಲೆ, ಗ್ಯಾಂಗ್‌ರೇಪ್‌, ದರೋಡೆ ಸೇರಿ 26 ಪ್ರಕರಣಗಳಲ್ಲಿ ಭಾಗಿ ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಳೆಯಂಗಡಿಯ ಕೊಪ್ಪಳ ಹೌಸ್‌ನ ಸಫ್ವಾನ್ ಹುಸೈನ್ (42) ಬಂಧಿತ ಆರೋಪಿ. ಆರೋಪಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್‌ರೇಪ್,

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಪಾತಕಿ ಸೆರೆ Read More »

ಇಂದು ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ

ಸರ್ಕಾರದ ಜೊತೆಗಿನ ಮಾತುಕತೆ ವಿಫಲ; ಮುಷ್ಕರ ಸಾಧ್ಯತೆ ಬೆಂಗಳೂರು: ವಿವಿಧ ಬೇಡಿಕೆಗೆ ಆಗ್ರಹಿಸಿ ಸಿಡಿದೆದ್ದಿರುವ ಸಾರಿಗೆ ನೌಕರರ ಮನವೊಲಿಸುವ ಪ್ರಯತ್ನ ವಿಫಲಗೊಂಡಿದೆ. ಸರ್ಕಾರ ಕೊಟ್ಟಿರುವ ಆಫರ್‌ಗೆ ಬಗ್ಗದ ನೌಕರರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಸಂಪೂರ್ಣ ಬೇಡಿಕೆ ಈಡೇರಲೇಬೇಕು ಏಂಬ ಬೇಡಿಕೆಯೊಂದಿಗೆ ಇಂದು ಬೆಂಗಳೂರು ಚಲೋಗೆ ಮುಂದಾಗಿದ್ದಾರೆ. ಸಾರಿಗೆ ನೌಕರರು ಹೋರಾಟ ಜೋರಾಗುವ ಸಾಧ್ಯತೆ ಕಂಡುಕೊಂಡ ನಿನ್ನೆ ಸರ್ಕಾರ, ನೌಕರರನ್ನು ಸಮಾಧಾನ ಪಡಿಸುವ ಯತ್ನಕ್ಕೆ ಮುಂದಾದರೂ ಪ್ರಯೋಜನ ಆಗಿಲ್ಲ. ನೌಕರರ ಬೇಡಿಕೆ ಪ್ರಕಾರ ಸರ್ಕಾರ 38 ತಿಂಗಳ ಹಿಂಬಾಕಿ

ಇಂದು ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ Read More »

ಟಿ20 ವಿಶ್ವಕಪ್‌ : ಸಂಭ್ರಮಕ್ಕಿಂತ ಕಳವಳ ಹುಟ್ಟಿಸಿದ ನಾಲ್ಕನೇ ಗೆಲುವು

ದುರ್ಬಲ ನೆದರ್ಲ್ಯಾಂಡ್ಸ್ ವಿರುದ್ಧ ಬರೀ 17 ರನ್‌ಗಳಿಂದ ಗೆದ್ದ ಟೀಂ ಇಂಡಿಯಾ ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಬರೀ 17 ರನ್​ಗಳಿಂದ ಗೆದ್ದಿರುವುದು ಕ್ರಿಕೆಟ್‌ ಪ್ರೇಮಿಗಳಲ್ಲಿ ಆತಂಕವುಂಟು ಮಾಡಿದೆ. ನೆದರ್ಲ್ಯಾಂಡ್ಸ್‌ನಂಥ ದುರ್ಬಲ ತಂಡದ ಎದುರು ಚಾಂಪಿಯನ್‌ ತಂಡವೊಂದು ಆಡುವ ಆಟ ಇದಾಗಿರಲಿಲ್ಲ. ಭಾರತ ಸತತ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಅಜೇಯ ಓಟವನ್ನೇನೋ ಮುಂದವರೆಸಿದೆ. ಇನ್ನಿರುವುದು ಸೂಪರ್‌ 8ರ ಘಟ್ಟದ

ಟಿ20 ವಿಶ್ವಕಪ್‌ : ಸಂಭ್ರಮಕ್ಕಿಂತ ಕಳವಳ ಹುಟ್ಟಿಸಿದ ನಾಲ್ಕನೇ ಗೆಲುವು Read More »

ವಿಧಾನಸೌಧದಲ್ಲಿ ಮಾದ್ಯಮಗಳ ನಿರ್ಬಂಧ: ಬಿ.ವೈ. ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಕಿಡಿ ಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಇದೊಂದು ಅಯೋಗ್ಯ ಸರ್ಕಾರ ಎಂದು ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಖಂಡಿಸಿದ ಅವರು ಇದೊಂದು ನಾಲಾಯಕ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನದ್ದು ಪ್ರಜಾಪ್ರಭುತ್ವವನ್ನು ಅಣಕಿಸುವ ನಡೆ ಎಂದು ಟೀಕಿಸಿರುವ ಅವರು, ಮಾಧ್ಯಮ ನಿರ್ಬಂಧ ಒಂದು ಪ್ರಜಾಪ್ರಭುತ್ವದ ವಿರೋಧಿ ನಡೆ. ಅಧಿವೇಶನದಲ್ಲಿ ದ್ವೇಷ ಭಾಷಣ ವಿರೋಧಿ ಕಾಯ್ದೆ ಜಾರಿಗೆ ತಂದ ಕಾಂಗ್ರೆಸ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಾಕ್ ಪರ

ವಿಧಾನಸೌಧದಲ್ಲಿ ಮಾದ್ಯಮಗಳ ನಿರ್ಬಂಧ: ಬಿ.ವೈ. ವಿಜಯೇಂದ್ರ ಆಕ್ರೋಶ Read More »

error: Content is protected !!
Scroll to Top