ಸುದ್ದಿ

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು

ಸ್ಫೋಟದ ವೇಳೆ ಬಿಡುಗಡೆಯಾದ ವಿಷಾನಿಲದಿಂದಲೂ ಹಲವರು ಮೃತ ಮೆಕ್ಸಿಕೋ ಸಿಟಿ: ಉತ್ತರ ಮೆಕ್ಸಿಕೋದ ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ 23 ಮಂದಿ ಸಾವನ್ನಪ್ಪಿದ್ದಾರೆ. ಹರ್ಮೊಸಿಲ್ಲೊದ ವಾಲ್ಡೋ ಡಿಪಾರ್ಟ್‌ಮೆಂಟಲ್‌ ಸ್ಟೋರ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 11 ಮಂದಿ ಗಾಯಗೊಂಡಿದ್ದು, ಅವರನ್ನು ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಟದಿಂದ ಹೆಚ್ಚಿನ ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಧಿವಿಜ್ಞಾನ ವೈದ್ಯಕೀಯ ಸೇವೆಯ ರಾಜ್ಯದ ಅಟಾರ್ನಿ ಜನರಲ್‌ ಗುಸ್ತಾವೋ ಸಲಾಸ್‌ ಮಾಹಿತಿ […]

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು Read More »

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು

ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಸಂಭವಿಸಿದ ಭೀಕರ ಅಪಘಾತ ಪುತ್ತೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಈ ಭೀಕರ ಅಪಘಾತವಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ಸನ್ನು ಓವರ್​ಟೇಕ್​ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು Read More »

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ

ಒಬ್ಬಳನ್ನು ರಕ್ಷಿಸಲು ಹೋಗಿ ಇತರ ಮೂವರು ನೀರುಪಾಲು ಬೆಂಗಳೂರು : ಬಟ್ಟೆ ತೊಳೆಯುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ನೀರಿಗೆ ಧುಮುಕಿದ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ (14),

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ Read More »

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು

ಸಹೋದ್ಯೋಗಿಯ ವಿದಾಯಕೂಟದಲ್ಲಿ ಹಾಡುತ್ತಿರುವಾಗಲೇ ಹೃದಯಾಘಾತ ಉಡುಪಿ : ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎಎಸ್ಸೈ) ವಿಶ್ವನಾಥ್ (56) ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು.

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು Read More »

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು

ನಿಷೇಧ ಹೇಳಿಕೆಗಳಿಗೆ ಮೊದಲ ಬಾರಿ ಅಧಿಕೃತವಾಗಿ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್‌ ನವದೆಹಲಿ: ಆರ್‌ಎಸ್‌ಎಸ್‌ ನಿಷೇಧಿಸಬೇಕು ಎಂದು ಪದೇಪದೆ ಹೇಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಮಾತನಾಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ. ಜಬಲ್‌ಪುರದಲ್ಲಿ ಮೂರು ದಿನಗಳ ಆರ್‌ಎಸ್‌ಎಸ್‌

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು Read More »

ಬಿಜೆಪಿ ತೊರೆಯುತ್ತಾರಾ ಅಣ್ಣಾಮಲೈ?

ಪಕ್ಷ ತೊರೆಯುವ ಕುರಿತು ಪರೋಕ್ಷವಾಗಿ ಮಾತನಾಡಿದ ಮಾಜಿ ಪೊಲೀಸ್‌ ಅಧಿಕಾರಿ ಚೆನ್ನೈ: ಬಿಜೆಪಿ ಜೊತೆಗಿನ ಅಣ್ಣಾಮಲೈ ನಂಟು ಹಳಸಿದೆಯೇ? ಹೀಗೊಂದು ವಿಚಾರ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷರಾಗಿರುವ ಕೆ.ಅಣ್ಣಾಮಲೈ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಈ ಚರ್ಚೆಗೆ ಕಾರಣ. ನಾನು ಪಕ್ಷದಲ್ಲಿ ಉಳಿಯಲು ಬಯಸಿದರೆ ಇರುತ್ತೇನೆ, ಇಲ್ಲದಿದ್ದರೆ ಕೃಷಿಗೆ ಮರಳುತ್ತೇನೆ. ಸಮಯ ಬಂದಾಗ ಮಾತನಾಡುತ್ತೇನೆ. ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೊಯಮತ್ತೂರಿನಲ್ಲಿ ಅಣ್ಣಾಮಲೈ ಶನಿವಾರ

ಬಿಜೆಪಿ ತೊರೆಯುತ್ತಾರಾ ಅಣ್ಣಾಮಲೈ? Read More »

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ

ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಯದ್ವಾತದ್ವಾ ಇರಿದು ಪಲಾಯನ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಕನ್ನಡ ರಾಜ್ಯೋತ್ಸವ ರೂಪಕಗಳ ಮೆರವಣಿಗೆ ವೇಳೆ ಬೆಳಗಾವಿ ನಗರದಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದು ಪಲಾಯನ ಮಾಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಸೋಇಚ್ಛೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುನಾಥ ವಕ್ಕೂಂದ, ಸಚೀನ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್,

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ Read More »

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌

90 ದಿನಗಳಲ್ಲಿ ಕನ್ನಡ ಕಡ್ಡಾಯ ಆದೇಶ ಎಂದ ಸಚಿವ ಬೆಂಗಳೂರು: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು ಆದೇಶ ಮಾಡಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಕನ್ನಡ ಕಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎಂದರು. ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌ Read More »

ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ

ಸುಳ್ಯ: ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ಸುಳ್ಯ ಎನ್.ಎಂ.ಸಿ. ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ

ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ Read More »

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಹ ಶಿಕ್ಷಕ ಬಾಲಕೃಷ್ಣ ರೈ ಪೋರ್ದಾಲ್ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ Read More »

error: Content is protected !!
Scroll to Top