ಸುದ್ದಿ

ಸಿಎಂ, ಬಾನು ಮುಷ್ತಾಕ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ವ್ಯಕ್ತಿ ವಶ

ಫೇಸ್‌ಬುಕ್‌ನಲ್ಲಿ ಮುಖ್ಯಮಂತ್ರಿ, ಲೇಖಕಿಯ ಕುರಿತು ಹಾಕಿದ್ದ ಪೋಸ್ಟ್‌ ವಿರುದ್ಧ ದೂರು ಸುಳ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದ ಸಹಾಯದಿಂದ ಸುಳ್ಯ ಪೊಲೀಸರು ಬಂಟ್ವಾಳ ತಾಲೂಕಿನ ನಿವಾಸಿ ಪುರುಷೋತ್ತಮ ಆಚಾರ್ಯ ಬರಿಮಾರು ಎಂಬ ವ್ಯಕ್ತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಗಳು […]

ಸಿಎಂ, ಬಾನು ಮುಷ್ತಾಕ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ವ್ಯಕ್ತಿ ವಶ Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ

ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌ ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಕೇಸ್ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ರಿಲೀಫ್​ ನೀಡಿದೆ. ಧರ್ಮಸ್ಥಳದ ಠಾಣೆಯ FIR 39/2025 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಾಲನ್​,

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ Read More »

ಗುರಮಠಕಲ್‌ ಪಟ್ಟಣದಲ್ಲಿ RSS ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ಯಾದಗಿರಿ: RSS ಪಥಸಂಚಲನವನ್ನು ‌ಗುರಮಠಕಲ್ ಪಟ್ಟಣದಲ್ಲಿ ನಡೆಸಲು ಕೊನೆಗೂ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. RSS ಗೆ 100 ವರ್ಷ ತುಂಬಿದ ಹಿನ್ನೆಲೆ ಕಳೆದ ವಾರವೇ ಪಥಸಂಚಲನ ನಡೆಸಲು ತೀರ್ಮಾನಿಸಲಾಗಿತ್ತು. ಅನುಮತಿಗಾಗಿ ತಹಶೀಲ್ದಾರರಿಗೂ ಅರ್ಜಿ ಸಲ್ಲಿಸಲಾಗಿತ್ತು. ಇದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ ಎಂದು ತಹಶೀಲ್ದಾರ್ ಅನುಮತಿ ನಿರಾಕರಿಸಿದ್ದರು. ತಹಶೀಲ್ದಾರ್ ಈ ನಡೆಯಿಂದ ವಿವಾದ ಸೃಷ್ಟಿಯಾಗಿತ್ತು. ಜಿಲ್ಲಾಡಳಿತಕ್ಕೆ ಸಂಘ ಮತ್ತೆ ಅರ್ಜಿ ಸಲ್ಲಿಸಿತ್ತು. ಈಗ ಹತ್ತು ಷರತ್ತುಗಳ ಜೊತೆಗೆ ಜಿಲ್ಲಾಡಳಿತ ಅ.31 ರಂದು ಪಥಸಂಚಲನ ‌ನಡೆಸಲು ಅನುಮತಿ ನೀಡಿದೆ.

ಗುರಮಠಕಲ್‌ ಪಟ್ಟಣದಲ್ಲಿ RSS ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ Read More »

ಬೆಂಗಳೂರಿನಲ್ಲಿ ಪರವಾನಗಿ ಇಲ್ಲದ ಪಿಜಿಗಳಿಗೆ ಬೀಗ ಜಡಿಯುವ ಎಚ್ಚರಿಕೆ

ಬೆಂಗಳೂರು: ಪೇಯಿಂಗ್ ಗೆಸ್ಟ್ ಉದ್ಯಮ ನಡೆಸುವವರು ಪರವಾನಗಿ ಪಡೆಯುವುದು ಕಡ್ಡಾಯ. ಅನಧಿಕೃತ ಪಿಜಿ ಗಳಿಗೆ ಬೀಗ ಜಡಿಯುವ‌ ಎಚ್ಚರಿಕೆಯನ್ನು ಬೆಂಗಳೂರು ಪೂರ್ವ ನಗರ ಪಾಲಿಕೆ ಎಚ್ಚರಿಕೆ ನೀಡಿದೆ. ನಗರದಲ್ಲಿ ಹಲವಾರು ಪಿಜಿಗಳು ಪರವಾನಗಿ ಪಡೆಯದೆ, ಸೂಚಿತ ಮಾನದಂಡಗಳನ್ನು ಪಾಲನೆ ಮಾಡದೆ ಕಾರ್ಯನಿರ್ವಹಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ. ಅಗತ್ಯ ಮಾನದಂಡಗಳನ್ನು ಪಾಲಿಸದೆ, ಮೂಲಭೂತ ಸ್ವಚ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡದ, ಸಿಸಿ ಕೆಮರಾ ಅಳವಡಿಸದೆ ಕಾರ್ಯ ನಿರ್ವಹಿಸುವ ವಿಷಯ ಪಾಲಿಕೆಯ ಗಮನಕ್ಕೆ ಬಂದಿದೆ. ಅನಧಿಕೃತ ಪಿ ಜಿ ಗಳು ಸಾರ್ವಜನಿಕ

ಬೆಂಗಳೂರಿನಲ್ಲಿ ಪರವಾನಗಿ ಇಲ್ಲದ ಪಿಜಿಗಳಿಗೆ ಬೀಗ ಜಡಿಯುವ ಎಚ್ಚರಿಕೆ Read More »

ಬಿಸಿಲೆ ಘಾಟಿಯಲ್ಲಿ ಮಿನಿಬಸ್‌ ಪಲ್ಟಿ : 20 ಜನರಿಗೆ ಗಾಯ

ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಬರುತ್ತಿದ್ದ ಬಸ್‌ 20 ಅಡಿ ಆಳಕ್ಕೆ ಪಲ್ಟಿ ಸುಬ್ರಹ್ಮಣ್ಯ: ಮದುವೆ ಸಮಾರಂಭದಲ್ಲಿ ಭಾಗವಹಿಸಲು ವನಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಬರುತ್ತಿದ್ದ 30 ಜನರಿದ್ದ ಮಿನಿ ಬಸ್‌ ಬಿಸಿಲೆ ಘಾಟ್ ಡಬಲ್ ಟರ್ನ್‌ನಲ್ಲಿ 20 ಅಡಿ ಎತ್ತರದಿಂದ ಮಗುಚಿ ಬಿದ್ದಿದ್ದು, 20 ಜನರು ಗಾಯಗೊಂಡು 4 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರಿನ ಯುವಕ ಮತ್ತು ಏನೆಕಲ್ಲಿನ ಯುವತಿ ಮದುವೆ ಇಂದು ನಡೆಯಬೇಕಿತ್ತು.

ಬಿಸಿಲೆ ಘಾಟಿಯಲ್ಲಿ ಮಿನಿಬಸ್‌ ಪಲ್ಟಿ : 20 ಜನರಿಗೆ ಗಾಯ Read More »

ದೂರು ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ಮೊರೆಯಿಟ್ಟ ಬುರುಡೆ ಗ್ಯಾಂಗ್‌ : ಇಂದು ಅರ್ಜಿ ವಿಚಾರಣೆ

ತಾವೇ ಹೋರಾಟ ಮಾಡಿ, ದುಂಬಾಲು ಬಿದ್ದು ಮಾಡಿಸಿದ್ದ ತನಿಖೆಯೇ ಬೇಡ ಎನ್ನುತ್ತಿರುವ ಹೋರಾಟಗಾರರು ಬೆಂಗಳೂರು : ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಸಿರುವ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬುರುಡೆ ಗ್ಯಾಂಗ್

ದೂರು ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ಮೊರೆಯಿಟ್ಟ ಬುರುಡೆ ಗ್ಯಾಂಗ್‌ : ಇಂದು ಅರ್ಜಿ ವಿಚಾರಣೆ Read More »

ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಂಧನ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.ಗಿರಿಧರ ರೈ ಪಜಿಂಬಿಲ ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಗಿರಿಧರ ರೈ ಅ.26ರಂದು ಅಪರಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್ ಬಸ್ ತಂಗುದಾಣದಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು

ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಂಧನ Read More »

ಬಿಹಾರ ಚುನಾವಣೆಗೆ ರಾಜ್ಯದಿಂದ 300 ಕೋ. ರೂ. ಕಪ್ಪ : ಶ್ರೀರಾಮುಲು ಆರೋಪ

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸಚಿವರಿಂದ ಹಣ ಸಂಗ್ರಹಸಿ ಕೊಟ್ಟಿದ್ದಾರೆಂದು ಆರೋಪ ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಹಣಕಾಸು ಒದಗಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಚಿವರಿಂದ 300 ಕೋಟಿ ರೂ. ಸಂಗ್ರಹಿಸಿದ್ದಾರೆ. ಈ ಹಣ ಸಿದ್ದರಾಮಯ್ಯ ಕುರ್ಚಿಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾಗಿದೆ ಎಂದು ಎಂದು ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ಭೋಜನ ಸಭೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗಿದೆ

ಬಿಹಾರ ಚುನಾವಣೆಗೆ ರಾಜ್ಯದಿಂದ 300 ಕೋ. ರೂ. ಕಪ್ಪ : ಶ್ರೀರಾಮುಲು ಆರೋಪ Read More »

ವಿಸಾ ನೆಪದಲ್ಲಿ ಕೋಟಿಗಟ್ಟಲೆ ರೂ. ವಂಚನೆ : ಇಬ್ಬರು ಸೆರೆ

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ಪಾಸ್‌ಪೋರ್ಟ್‌, ಹಣ ಪಡೆದು ವಂಚಿಸುತ್ತಿದ್ದ ಜೋಡಿ ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿಯನ್ನು ನಂಬಿಸಿ ಹಣ ಪಡೆದುಕೊಂಡು ಸುಮಾರು 1 ಕೋಟಿ ರೂಪಾಯಿ ಮೊತ್ತ ವಂಚಿಸಿದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ

ವಿಸಾ ನೆಪದಲ್ಲಿ ಕೋಟಿಗಟ್ಟಲೆ ರೂ. ವಂಚನೆ : ಇಬ್ಬರು ಸೆರೆ Read More »

ಬಿಜೆಪಿಯವರ ಅಸೂಯೆಗೆ ಮದ್ದಿಲ್ಲ : ಖಾದರ್‌ ತಿರುಗೇಟು

ಭ್ರಷ್ಟಾಚಾರದ ಬಗ್ಗೆ ದೂರುಗಳಿದ್ದರೆ ಕಚೇರಿಗೆ ಬಂದು ಮಾತನಾಡಿ ಎಂದು ಸವಾಲು ಮಂಗಳೂರು : ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಮಾಜಿ ಸ್ಪೀಕರ್​, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಂಗಳೂರು ಉತ್ತರದ ಶಾಸಕ ಡಾ.ಭರತ್‌ ಶೆಟ್ಟಿ ಅವರಿಗೆ ತಿರುಗೇಟು ನೀಡಿರುವ ವಿಧಾನಸಭೆ ಸ್ಪೀಕರ್​ ಯು.ಟಿ.ಖಾದರ್ ಬಿಜೆಪಿಯವರ ಅಸೂಯೆಗೆ ಮದ್ದಿಲ್ಲ ಎಂದಿದ್ದಾರೆ. ನಿನ್ನೆಯಷ್ಟೇ ಅಮೆರಿಕ ಪ್ರವಾಸದಿಂದ ಹಿಂದಿರುಗಿದ ಖಾದರ್‌ ಮಂಗಳೂರಿನಲ್ಲಿ ಆರೋಪಗಳಿಗೆ ಪ್ರತಿಕ್ರಿಯಿಸಿ, ಭ್ರಷ್ಟಾಚಾರದ ಆರೋಪ ವಿಚಾರ ನನ್ನ ಗಮನಕ್ಕೆ ಬಂದಿದೆ. ಎಲ್ಲ ರೋಗಕ್ಕೆ ಮದ್ದಿದೆ, ಆದರೆ

ಬಿಜೆಪಿಯವರ ಅಸೂಯೆಗೆ ಮದ್ದಿಲ್ಲ : ಖಾದರ್‌ ತಿರುಗೇಟು Read More »

error: Content is protected !!
Scroll to Top