ಸುದ್ದಿ

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು

ರಾಜ್ಯದ ಅತಿದೊಡ್ಡ ಸೈಬರ್‌ ವಂಚನೆಗೆ ಬಲಿಪಶುವಾದ ವಿದ್ಯಾವಂತ ಮಹಿಳೆ ಬೆಂಗಳೂರು : ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿವೆ. ಇಂದಿರಾನಗರದ ನಿವಾಸಿ 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಪಾತಕಿಗಳು ಆರು ತಿಂಗಳಿಗೂ ಹೆಚ್ಚು ಕಾಲ ನಿರಂತರ ಡಿಜಿಟಲ್‌ ಅರೆಟ್ಸ್‌ನಲ್ಲಿರಿಸಿ ಹಣ ದೋಚಿ […]

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು Read More »

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ

ಮುಂಜಾನೆ 3 ಗಂಟೆಗೆ ತೆರೆದ ದೇಗುಲದ ಬಾಗಿಲು, ಸಾವಿರಾರು ಭಕ್ತರಿಂದ ಅಯ್ಯಪ್ಪ ದರ್ಶನ ಶಬರಿಮಲೆ : ಈ ವರ್ಷದ ಮಂಡಲ ಮತ್ತು ಮಕರ ವಿಳಕ್ಕು ಯಾತ್ರಾ ಋತುವಿಗಾಗಿ ಶಬರಿಮಲೆ ದೇಗುಲದ ಬಾಗಿಲು ಇಂದು ತೆರೆದಿದೆ. ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಇಂದಿನಿಂದ ಆರಂಭವಾಗಿದ್ದು, ಇಂದು ನಸುಕಿನ 3 ಗಂಟೆಗೆ ದೇಗುಲದ ಬಾಗಿಲು ತೆರೆಯಲಾಗಿದೆ. ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮೇಲ್‌ಶಾಂತಿ ಅರುಣ್‌ಕುಮಾರ್‌ ನಂಬೂದಿರಿಯವರು ಇಂದು ನಸುಕಿನ 3 ಗಂಟೆಗೆ ತಂತ್ರಿ ಮಹೇಶ್‌ ಮೋಹನಾರು ಮತ್ತು

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ Read More »

ಶ್ರೀ ಪುಣ್ಯ ಕುಮಾರ ದೈವಸ್ಥಾನ ಮಾಡತ್ತಾರು ಕಲ್ಲೇಗ: ವಾರ್ಷಿಕ ನೇಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕಲ್ಲೇಗ ಮಾಡತ್ತಾರುವಿನ ಶ್ರೀ ಪುಣ್ಯ ಕುಮಾರ ಹಾಗೂ ಧರ್ಮದೈವಗಳ ವರ್ಷಾವಧಿ ನೇಮದ ಜನವರಿ 2 ಮತ್ತು 3 ರಂದು ನಡೆಯಲಿದ್ದು, ಪುಣ್ಯಕುಮಾರ ದೈವಸ್ಥಾನ ಚಾವಡಿಯಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಶೇವಿರೆ, ಅಧ್ಯಕ್ಷ ಶ್ರೀಧರ್ ಹೆಗ್ಡೆ ಉಳಿಯ, ಕಾರ್ಯದರ್ಶಿ ಉಮೇಶ್ ಆಚಾರ್ಯ, ಗೌರವಾಧ್ಯಕ್ಷ ಜೀವಂಧರ್ ಜೈನ್, ಮಾಜಿ ಕಾರ್ಯದರ್ಶಿ ನಾರಾಯಣ ಗೌಡ ಕಲ್ಲೇಗ, ಉಪಾಧ್ಯಕ್ಷ ಜೀನಪ್ಪ ಪೂಜಾರಿ ಮುರ, ಖಜಾಂಚಿ ಗಣೇಶ್ ನ್ಯಾಕ್ ಪದ್ಮಡ್ಕ, ಜೊತೆ ಕಾರ್ಯದರ್ಶಿ ಚಂದಪ್ಪ ಕುಲಾಲ್, ಸಮಿತಿಯ

ಶ್ರೀ ಪುಣ್ಯ ಕುಮಾರ ದೈವಸ್ಥಾನ ಮಾಡತ್ತಾರು ಕಲ್ಲೇಗ: ವಾರ್ಷಿಕ ನೇಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ

ಮನೆಯ ಶೆಡ್‌ನ್ನು ಕಸಾಯಿಖಾನೆಯಾಗಿ ಪರಿವರ್ತಿಸಿ ಜಾನುವಾರು ವಧೆ ಬಂಟ್ವಾಳ : ಇಲ್ಲಿನ ಅರಳ ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪೊಲೀಸರು ಭಾನುವಾರ ದಾಳಿ ಮಾಡಿ ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ Read More »

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ನಾವೂರಿನ ಶಶಿ ಎಂಬವರ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್‌ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ Read More »

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ

ಸುಳ್ಯ : ಹಂದಿ ಅಡ್ಡ ಬಂದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿನ ಎದುರು ದಿಢೀರ್‌ ಎಂದು ಕಾಡುಹಂದಿ ರಸ್ತೆಗೆ ಜಿಗಿದು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೋರಿಯ ಕೆಳಗೆ ಉರುಳಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ Read More »

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ

ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿ ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಆರೋಪಿ ಹಲ್ಲೆ

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ Read More »

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು

ಬಾಂಬ್‌ ಸ್ಫೋಟಿಸಿ ರೈಲಿನ ಹಳಿತಪ್ಪಿಸಿದ ಬಂಡುಕೋರರು ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಮತ್ತೆ ದಾಳಿ ನಡೆದಿದೆ. ಸಿಬಿ ಜಿಲ್ಲೆಯ ಬಳಿಯ ನಾಸಿರಾಬಾದ್ ಪ್ರದೇಶದಲ್ಲಿ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಈ ದಾಳಿ ನಡೆಸಲಾಗಿದೆ. ಈ ಬಾರಿ ಬಾಂಬ್‌ ಸ್ಫೋಟದಲ್ಲಿ ಜಾಫರ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಹಳಿತಪ್ಪಿವೆ. ಬಲೂಚ್ ರಿಪಬ್ಲಿಕನ್ ಗಾರ್ಡ್‌ (ಬಿಆರ್‌ಜಿ) ಬಂಡುಕೋರರ ಗುಂಪು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ದಾಳಿಯಲ್ಲಿ ಹಲವಾರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅವರು

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು Read More »

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಧರ್ ನಾಯ್ಕ್ ಅಸ್ತಂಗತ

ಪುತ್ತೂರು: ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ, 1965ರಲ್ಲಿ ಸ್ಥಾಪನೆಗೊಂಡ, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ಅಸ್ತಂಗತರಾಗಿದ್ದಾರೆ. ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿ, ವಸತಿ ನಿಲಯದ ಮೇಲ್ವಿಚಾರಕರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿ ಕಾಲೇಜಿನ ಅಭಿವೃದ್ಧಿಗೆ ಅನನ್ಯ ಸೇವೆ ಸಲ್ಲಿಸಿದ್ದರು . ಆಡಳಿತ ಮಂಡಳಿಯ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಉಪನ್ಯಾಸಕ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳು ಕಂಬನಿ ಮಿಡಿದಿದ್ದಾರೆ.

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಧರ್ ನಾಯ್ಕ್ ಅಸ್ತಂಗತ Read More »

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ

ಬ್ಯಾಕ್ಟೀರಿಯ ಇನ್‌ಫೆಕ್ಷನ್‌ನಿಂದ ಸಾಯುತ್ತಿರುವ ಪ್ರಾಣಿಗಳು ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಆ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ ಆಗಿದೆ. ಬ್ಯಾಕ್ಟೀರಿಯಾ ಇನ್‌ಪೆಕ್ಷನ್‌ನಿಂದಲೇ ಕೃಷ್ಣಮೃಗಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್ 13ರಂದು 8, ಶನಿವಾರ ಒಂದೇ ದಿನ 20, ತಡರಾತ್ರಿ ಒಂದು, ನಿನ್ನೆ ಸಂಜೆ ಗಂಡು ಕೃಷ್ಣಮೃಗ ಸಾವನ್ನಪ್ಪಿವೆ. ಆ ಮೂಲಕ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈವರೆಗೆ 30 ಕೃಷ್ಣಮೃಗಗಳ ಸಾವಾಗಿದೆ.

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ Read More »

error: Content is protected !!
Scroll to Top