ಸುದ್ದಿ

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ

ರಾಜ್ಯದಲ್ಲಿ ಬೆಲೆ ಏರಿಸಿರುವುದಷ್ಟೆ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಟೀಕೆ ಮಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ […]

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ Read More »

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ

ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳಿಂದ ಪಥ ಸಂಚಲನ ನಡೆಸಲು ಅನುಮತಿ ಕೋರಿಕೆ ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳು ಪಥ ಸಂಚಲನ ನಡೆಸಲು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಶಾಂತ ಸಭೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ಸೂಚಿಸಿದೆ. ಅಕ್ಟೋಬರ್ 28ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದರಿಂದ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದ ಆರ್‌ಎಸ್‌ಎಸ್‌ಗೆ ತುಸು ನಿರಾಶೆಯಾಗಿದೆ. ಪಥ

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ Read More »

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಹಳಿ ವಿದ್ಯುದ್ದೀಕರಣ ಹಿನ್ನೆಲೆ ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ ನೈರುತ್ಯ ರೈಲ್ವೆ ಬೆಂಗಳೂರು – ಮಂಗಳೂರು – ಕಾರವಾರದ ನಡುವೆ ಸಂಚರಿಸುವ 6 ಪ್ರಮುಖ ರೈಲುಗಳ ರದ್ದು ಅವಧಿಯನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ. ನೈರುತ್ಯ ರೈಲ್ವೆ ನವೆಂಬರ್ 2ರಿಂದ ಡಿಸೆಂಬರ್ 15 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ ಕೆಲವು

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ Read More »

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌

ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಖಡಕ್‌ ಎಚ್ಚರಿಕೆ ನೀಡಿದ ಎಸ್‌ಪಿ ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್‌ ಕುಮಾರ್‌ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ. ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌ Read More »

ಯಕ್ಷ ಕಲಾವಿದ ಸುಜನಾ ಸುಳ್ಯ ನಿಧನ

ಸುಳ್ಯ: ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್‌ ಸುಳ್ಯ ಅವರ ತಂದೆ, ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸುಳ್ಯ ರಂಗ ಮನೆಯ ಸುಜನಾ ಸುಳ್ಯ ಅವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸುಳ್ಯದ ಜಯರಾಮ ನಾವೂರು ಅವರು ಸುಜನಾ ಸುಳ್ಯ ಎಂದೇ ಪ್ರಸಿದ್ಧರಾಗಿದ್ದವರು. ವಯೋಸಹಜ ಅನಾರೋಗ್ಯದ ಹಿನ್ನೆಲೆ ಅವರು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಾಗಿದ್ದ ಅವರು, ಯಕ್ಷಗಾನ ಮತ್ತು ರಂಗಭೂಮಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದರು.ಶ್ರೀಯುತರ ನಿಧನಕ್ಕೆ

ಯಕ್ಷ ಕಲಾವಿದ ಸುಜನಾ ಸುಳ್ಯ ನಿಧನ Read More »

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ?

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಟೀಕೆಗಳಿಗೆ ತಿರುಗೇಟು ನೀಡಿರುವ ಅವರು, ಮಗನೆ… ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದರೆ ಎಚ್ಚರ. ನನ್ನ ತಾಯಿಯನ್ನು ದಗಮನದಲ್ಲಿ ಇಟ್ಟುಕೊಂಡು ನಿಂದನಾತ್ಮಕ ಮಾತನಾಡಿದ್ದೀಯ. ನಿನಗೆ ವಾರ್ನಿಂಗ್ ಕೊಟ್ಟು ಹೇಳುತ್ತಿದ್ದೇನೆ. ಮುಳ್ಳು ಹಂದಿ ಮುಖ ಇರುವ ಕರ್ನಾಟಕದ ಏಕೈಕ ಕಾಮಿಡಿ ಪೀಸು ನಿಮ್ಮಪನಿಗೆ ಮಾತ್ರ ಹುಟ್ಟಿರುವುದು. ಇನ್ಯಾರು ವಾರಸದಾರರು ಅದಕ್ಕೆ ಬರುವುದಿಲ್ಲ. ಆದರೆ ನಮ್ಮಪ್ಪ ಏನಾದರೂ ಅವರ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ? Read More »

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ವಿರುದ್ಧ ವಕೀಲರುಗಳ ‌ಪ್ರತಿಭಟನೆ

ಮದ್ದೂರು: ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವರು ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರ ಹೇಳಿಕೆಯನ್ನು ಖಂಡಿಸಿ ಮದ್ದೂರಿನಲ್ಲಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ವಕೀಲರುಗಳು ಪ್ರತಿಭಟನೆ ನಡೆಸಿದರು. ಕಲುಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ RSS ಕಾರ್ಯಕರ್ತರು ಪಥ ಸಂಚಲನಕ್ಕೆ ಅವಕಾಶ ಮಾಡಿಕೊಡುವಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ. ಆರ್‌ಎಸ್‌ಎಸ್‌ ಪರವಾಗಿ ತೀರ್ಪು ನೀಡುವುದು ಸರಿಯಲ್ಲ ಎಂದು ಅವಹೇಳನಕಾರಿಯಾಗಿ ಸ್ವಾಮೀಜಿ ಮಾತನಾಡಿದ್ದಾರೆ. ಸ್ವಾಮೀಜಿ ಹೇಳಿಕೆ ಖಂಡಿಸಿ ಮದ್ದೂರು ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿರುವುದಾಗಿದೆ.<

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ವಿರುದ್ಧ ವಕೀಲರುಗಳ ‌ಪ್ರತಿಭಟನೆ Read More »

ಬಿಜೆಪಿ ಯುವಕರ ಸಬಲೀಕರಣಕ್ಕಾಗಿ ‌ಶ್ರಮಿಸುತ್ತಿದೆ: ಪ್ರಧಾನಿ ಮೋದಿ

ನವದೆಹಲಿ: ಯುವಕರ ಸಬಲೀಕರಣಕ್ಕೆ ಬಿಜೆಪಿ ಶ್ರಮಿಸುತ್ತಿದೆ. ದೇಶದ ವಿದೇಶಾಂಗ ನೀತಿಯನ್ನು ಸಹ ಯುವಜನರ ಹಿತಾಸಕ್ತಿಗೆ ‌ಅನುಗುಣವಾಗಿ ರೂಪಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರೋಜ್‌ಗಾ‌ರ್ ಮೇಳದಲ್ಲಿ ಧ್ವನಿಮುದ್ರಿತ ಸಂದೇಶ ನೀಡಿದ ಪ್ರಧಾನಿ, ಭಾರತ ಪ್ರಪಂಚದ ಅತ್ಯಂತ ಕಿರಿಯ ರಾಷ್ಟ್ರವಾಗಿದ್ದು, ಅದರ ಯುವಶಕ್ತಿಯ ಶಕ್ತಿಯು ಒಂದು ದೊಡ್ಡ ಆಸ್ತಿಯಾಗಿದೆ ಎಂದಿದ್ದಾರೆ. ನಂಬಿಕೆ ಮತ್ತು ವಿಶ್ವಾಸದೊಂದಿಗೆ, ನಾವು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯುತ್ತಿದ್ದೇವೆ. ನಮ್ಮ ವಿದೇಶಾಂಗ ನೀತಿಯನ್ನು ಸಹ ಭಾರತದ ಯುವಜನರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗುತ್ತಿದೆ. ನಮ್ಮ ರಾಜತಾಂತ್ರಿಕ ತೊಡಗಿಸಿಕೊಳ್ಳುವಿಕೆಗಳು ಮತ್ತು

ಬಿಜೆಪಿ ಯುವಕರ ಸಬಲೀಕರಣಕ್ಕಾಗಿ ‌ಶ್ರಮಿಸುತ್ತಿದೆ: ಪ್ರಧಾನಿ ಮೋದಿ Read More »

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ: ಯುವಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ವಿಟ್ಲ: ಅನಂತಾಡಿಯ ಬಾಬನಕಟ್ಟೆಯಲ್ಲಿ ಯುವಕನೊಬ್ಬ ಸಮಯ ಪ್ರಜ್ಞೆ ಮೆರೆದ ಪರಿಣಾಮ ಗ್ಯಾಸ್ ಸಿಲಿಂಡರ್ ಅವಘಡದಿಂದ ಕುಟುಂಬವೊಂದು ಪಾರಾದ ಘಟನೆ ನಡೆದಿದೆ. ಹಿರ್ತಂದ ಬೈಲು ಎಂಬಲ್ಲಿ ಅ.22ರಂದು ರಾತ್ರಿ 9.45ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಸಮಯಪ್ರಜ್ಞೆ ಮೆರೆದ ಯುವಕ ಜಯರಾಜ್‌ನ ಮುಖ ಹಾಗೂ ಕೈಗೆ ಗಾಯಗಳಾಗಿದೆ. ಘಟನೆಯಲ್ಲಿ ದ್ವಿಚಕ್ರವಾಹನ ಸಹಿತ ಮನೆಯಲ್ಲಿದ್ದ ಹಲವು ಉಪಕರಣಗಳಿಗೆ ಹಾನಿಯಾಗಿದೆ. ತಾಯಿ ಸುಶೀಲ ಜೊತೆ ಜಯರಾಜ್ ವಾಸ್ತವ್ಯವಿರುವ ಮನೆಯಲ್ಲಿ ಅ.22ರಂದು ಗ್ಯಾಸ್ ಸಿಲಿಂಡ‌ರ್ ಮುಗಿದ ಹಿನ್ನೆಲೆಯಲ್ಲಿ ಹೊಸ ಸಿಲಿಂಡ‌ರ್ ಅಳವಡಿಸಿದ್ದು, ರೆಗ್ಯೂಲೇಟ‌ರ್

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ: ಯುವಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

error: Content is protected !!
Scroll to Top