ಸುದ್ದಿ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು

ಫಲಿತಾಂಶ ಹೆಚ್ಚಿಸಲು ಕನಿಷ್ಠ ಅಂಕ ಮಿತಿ ಇಳಿಕೆ ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಶೇ. 33 ಅಂಕ ಪಡೆದರೆ ಸಾಕು. ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತೇರ್ಗಡೆಗೆ ಇದ್ದ ಕನಿಷ್ಠ ಅಂಕಮಿತಿಯನ್ನು ಇನ್ನಷ್ಟು ಕಡಿಮೆಗೊಳಿಸಿದ್ದು, ಈ ಮೂಲಕ ಫಲಿತಾಂಶ ಹೆಚ್ಚಿಸುವ ಪ್ರಯತ್ನ ಮಾಡಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು […]

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು Read More »

ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ಇನ್ಫೋಸಿಸ್‌ ನಾರಾಯಣ ಮೂರ್ತಿ ದಂಪತಿ

ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ ಎಂದು ಹಿಂದೇಟು ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ನಡೆಸುತ್ತಿರುವ ಜಾತಿ ಗಣತಿಗೆ ಮಾಹಿತಿ ನೀಡಲು ಇನ್ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದ್ದು, ನಾರಾಯಣ ಮೂರ್ತಿ ದಂಪತಿ ಈ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎನ್‌.ಆರ್‌. ನಾರಾಯಣಮೂರ್ತಿ ಸ್ವಯಂ ದೃಢೀಕರಣ

ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ಇನ್ಫೋಸಿಸ್‌ ನಾರಾಯಣ ಮೂರ್ತಿ ದಂಪತಿ Read More »

ವೈದ್ಯೆ ಪತ್ನಿಯನ್ನು ಪತಿಯೇ ಕೊಂದ ಪ್ರಕರಣ : ಮಗಳ 4 ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ

ಅನಾರೋಗ್ಯವಿದ್ದ ಪತ್ನಿಯನ್ನು ಅನೆಸ್ತೇಶಿಯ ಇಂಜೆಕ್ಷನ್‌ ನೀಡಿ ಕೊಂದಿದ್ದ ಟಾಕ್ಟರ್‌ ಪತಿ ಬೆಂಗಳೂರು: ನಗರದಲ್ಲಿ ವೈದ್ಯೆಯೊಬ್ಬರನ್ನು ಆಕೆಯ ಡಾಕ್ಟರ್‌ ಪತಿಯೇ ಅನೆಸ್ತೇಶಿಯ ಇಂಜೆಕ್ಷನ್‌ ಕೊಟ್ಟು ಕೊಲೆ ಮಾಡಿದ ಪ್ರಕರಣ ದೇಶವೇ ಬೆಚ್ಚಿಬೀಳುವಂತೆ ಮಾಡಿದೆ. ಮಗಳ ಸಾವಿನಿಂದ ತೀವ್ರ ನೊಂದಿರುವ ತಂದೆ ಮಗಳಿಗಾಗಿ ಕಟ್ಟಿಸಿದ್ದ 4 ಕೋ.ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳ ಸಾವಿನ ನೋವಿನಲ್ಲಿ ತಂದೆ ಮುನಿರೆಡ್ಡಿ ಮಗಳು ವಾಸವಿದ್ದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳಿಗಾಗಿ ನಾಲ್ಕು ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ದರು.

ವೈದ್ಯೆ ಪತ್ನಿಯನ್ನು ಪತಿಯೇ ಕೊಂದ ಪ್ರಕರಣ : ಮಗಳ 4 ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ Read More »

ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರು: ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ‘ಗೋ ಮಾತೆ’ ರಕ್ಷಣೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿವೆ. ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಮ್‌ಎಲ್‌ಸಿ ‌ಸಿ.ಟಿ. ರವಿ, ಎಂ.ಕೆ. ಪ್ರಾಣೇಶ್ ಮೊದಲಾದವರು ಪ್ರತಿಭಟನೆಗೆ ಚಾಲನೆ ನೀಡಿದರು. ನಗರದ ಕತ್ರಿಮಾರಮ್ಮ ದೇವಾಲಯದಿಂದ ಮೆರವಣಿಗೆ ಆರಂಭ ಮಾಡಲಾಗಿದ್ದು, ಎಂ.ಜಿ. ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೂ ಮೆರವಣಿಗೆ ಸಾಗಿದೆ. ಗೋಕಳ್ಳರನ್ನು, ಗೋವಿನ

ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ Read More »

ಅನಾರೋಗ್ಯ, ಚಿಕಿತ್ಸೆ ಫಲಿಸದೆ ಮೃತಪಟ್ಟ ಬಾಲಕಿ

ಬೆಳ್ತಂಗಡಿ: ಅನಾರೋಗ್ಯದ ಕಾರಣಕ್ಕೆ ಕೆಲ ಸಮಯದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ನಗರದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಸಾನ್ವಿ ಶೆಟ್ಟಿ ಎಂಬಾಕೆಯೇ ‌ಮೃತ ದುರ್ದೈವಿ. ಸಾನ್ವಿ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕೆಲ ಸಮಯದ ಹಿಂದೆ ಈಕೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾಳೆ.

ಅನಾರೋಗ್ಯ, ಚಿಕಿತ್ಸೆ ಫಲಿಸದೆ ಮೃತಪಟ್ಟ ಬಾಲಕಿ Read More »

ಜೈಲಿನಲ್ಲಿ ದರ್ಶನ್‌ಗೆ ‌ಸೌಲಭ್ಯ ನೀಡದ ಬಗ್ಗೆ ಕಾನೂನು ಪ್ರಾಧಿಕಾರದಿಂದ ‌ಪರಿಶೀಲನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೇಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಹಿ. ವರದರಾಜ್ ಅವರು ಮಂಗಳವಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನೂನಿನನ್ವಯ ದರ್ಶನ್‌ಗೆ ನೀಡಲಾಗಿರುವ ಸೌಲಭ್ಯಗಳಿಗೆ ಸಂಬಂಧಿಸಿದ ಹಾಗೆ ಜೈಲಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಆರೋಪಿ ದರ್ಶನ್ ಇದ್ದ ಸೆಲ್‌ಗೂ ಭೇಟಿ ನೀಡಿದ್ದು, ಅವರ ಬಳಿಯೂ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ. ಈ ವರದಿಯನ್ನು ನ್ಯಾಯಾಲಯಕ್ಕೆ

ಜೈಲಿನಲ್ಲಿ ದರ್ಶನ್‌ಗೆ ‌ಸೌಲಭ್ಯ ನೀಡದ ಬಗ್ಗೆ ಕಾನೂನು ಪ್ರಾಧಿಕಾರದಿಂದ ‌ಪರಿಶೀಲನೆ Read More »

ಕೃಷಿ ಸಂಸ್ಕರಣಾ ಘಟಕ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್

ಕೊಪ್ಪಳ: ಮೆತ್ತಗಲ್ ಗ್ರಾಮದ ಸಮೀಪದಲ್ಲಿ ನಬಾರ್ಡ್ ಮತ್ತು ಗವಿಸಿದ್ದೇಶ್ವರ ರೈತ ಉತ್ಪಾದಕರ ಕಂಪನಿಯ ಸಹಯೋಗದಲ್ಲಿ ಆರಂಭವಾದ ಕೃಷಿ ಸಂಸ್ಕರಣೆ ಮತ್ತು ಸಾಮಾನ್ಯ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದ್ಘಾಟನೆ ಮಾಡಿದ್ದಾರೆ. ಈ ನೂತನ ಘಟಕದ ಮುಂಭಾಗದಲ್ಲಿ ಕೃಷಿ ಇಲಾಖೆ ಸೇರಿದಂತೆ ಇನ್ನಿತರ ಸಂಸ್ಥೆಗಳ ಮಳಿಗೆಗಳಿಗೆ ಭೇಟಿ ನೀಡಿ ಉತ್ಪನ್ನಗಳನ್ನು ವೀಕ್ಷಣೆ ಮಾಡಿದರು. ಸ್ಥಳೀಯ ಉತ್ಪನ್ನಗಳ ಬಗೆಗೂ ಮಾಹಿತಿ ಪಡೆದುಕೊಂಡರು.

ಕೃಷಿ ಸಂಸ್ಕರಣಾ ಘಟಕ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್ Read More »

ರಾಜಕೀಯ ಭೂಕಂಪ ಏನಿದ್ದರೂ ಬೆಂಗಳೂರಿನಲ್ಲಿ: ಸತೀಶ್ ಜಾರಕಿಹೊಳಿ

ಮೈಸೂರು: ರಾಜಕೀಯ ಭೂಕಂಪ ಆಗುವುದಿದ್ದರೆ ಅದು ಬೆಂಗಳೂರಿನಲ್ಲಿ. ಬೆಳಗಾವಿಯಲ್ಲಿ ಅಂತಹ ಯಾವ ಘಟನೆಯೂ ‌ಸಂಭವಿಸುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಓಟದಿಂದ ನೀನು ಈಗಾಗಲೇ ಹೊರಬಂದು ವರ್ಷಗಳಾಗಿವೆ. ಯಾತಕ್ಕಾಗಿ ಎಂಬ ಕಾರಣ ಈಗ ಅಪ್ರಸ್ತುತ ಎಂದಿದ್ದಾರೆ. ನಮ್ಮ ಪಕ್ಷದಲ್ಲಿ ಯಾವ ಕ್ರಾಂತಿಗಳೂ ನಡೆಯುತ್ತಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ತೀರ್ಮಾನ ಮಾಡುವುದು ನಾನಲ್ಲ. ಎಲ್ಲಾ ವಿಷಯಗಳಿಂದಲೂ ನಾವೀಗ ದೂರದಲ್ಲಿದ್ದೇವೆ. ಸಿಎಂ ಬದಲಾವಣೆಗೆ ಸಂಬಂಧಿಸಿದ ಹಾಗೆ ನೀವು ಸೂಕ್ತ

ರಾಜಕೀಯ ಭೂಕಂಪ ಏನಿದ್ದರೂ ಬೆಂಗಳೂರಿನಲ್ಲಿ: ಸತೀಶ್ ಜಾರಕಿಹೊಳಿ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಾಜಿ ರಾಷ್ಟçಪತಿ, ವಿಜ್ಞಾನಿ ಮತ್ತು ಶಿಕ್ಷಕರಾದ ಡಾ.ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಅಕ್ಟೋಬರ್ 15 ರಂದು ನಡೆಯಿತು. ಕಾರ್ಯಕ್ರಮವನ್ನು ಅತಿಥಿ ಶ್ರೀಮತಿ ಸಿಂಧು ವಿ ಕೆ ವಿಜ್ಙಾನ ಶಿಕ್ಷಕಿ ಬೆಟ್ಟಂಪಾಡಿ ಇವರು ಉದ್ಘಾಟಿಸಿ ಕನಸನ್ನು ಕಾಣಬೇಕು ಕಂಡ ಕನಸನ್ನು ಕಾರ್ಯರೂಪಕ್ಕೆ ತರುವಡೆಗೆ ಹೆಜ್ಜೆ ಹಾಕಬೇಕು ಎಂದು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ವಿಜ್ಙಾನವು ಬರೀ ಪಠ್ಯ ವಿಷಯವಲ್ಲ, ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು. ಎಂದು

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ Read More »

ಜೆಜೆಎಂ ವತಿಯಿಂದ ಬೆಳಂದೂರು ಗ್ರಾಮಪಂಚಾಯತಲ್ಲಿ ಹರ್ ಘರ್ ಜಲ್ ಕಾರ್ಯಕ್ರಮ

ಬೆಳಂದೂರು ಸೇರಿದಂತೆ ಕುದ್ಮಾರು, ಕಾಯಿಮಣದಲ್ಲಿ ಗ್ರಾಮವನ್ನು ಹರ್ ಘರ್ ಜಲ್ ಘೋಷಣೆ ಬೆಳಂದೂರು: ಜಲ ಜೀವನ್ ಮಿಷನ್ ಅಡಿಯಲ್ಲಿ ಕಡಬ ತಾಲ್ಲೂಕಿನ ಬೆಳಂದೂರು ಗ್ರಾಮ ಪಂಚಾಯತಿಯ ಕುದ್ಮಾರು,ಕಾಯಿಮಣ, ಬೆಳಂದೂರು ವ್ಯಾಪ್ತಿಯ ಗ್ರಾಮವನ್ನು ಶುಕ್ರವಾರದಂದು ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗ ಕಡಬ ಇವರ ಮಾರ್ಗದರ್ಶನದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಕ್ಷಿ ಬಿ ಇವರು ಬೆಳಂದೂರು ಗ್ರಾಮವನ್ನು ಹರ್ ಗರ್ ಜಲ್

ಜೆಜೆಎಂ ವತಿಯಿಂದ ಬೆಳಂದೂರು ಗ್ರಾಮಪಂಚಾಯತಲ್ಲಿ ಹರ್ ಘರ್ ಜಲ್ ಕಾರ್ಯಕ್ರಮ Read More »

error: Content is protected !!
Scroll to Top