ಸುದ್ದಿ

ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ

ಗೆಳತಿ ಜೊತೆಗಿದ್ದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸ್ನೇಹಿತರು ಕಾರ್ಕಳ : ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್‌ನಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು. ಇಬ್ಬರ ಸಂಬಂಧ ಬಹಳ […]

ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ Read More »

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಇದರ ನೂತನ ಗೌರವಾಧ್ಯಕ್ಷರಾಗಿ ಆರ್.ಕೆ.ಭಟ್ ಬೆಳ್ಳಾರೆ ಆಯ್ಕೆ

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ನೆಲೆಸಿರುವ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ  ಇವರನ್ನು ಆಯ್ಕೆಮಾಡಲಾಗಿದೆ ಎಂದು ಟ್ರಸ್ಟ್ ನ ಸರ್ವ ಸದಸ್ಯರ ಸಭೆಯ ಬಳಿಕ ಅಧ್ಯಕ್ಷ ವೆಂಕಟೇಶ್ ರಾವ್ ಕೆ ಪ್ರಕಟಿಸಿದ್ದಾರೆ. 2019ರಲ್ಲಿ ‘ಯಕ್ಷಮಿತ್ರರು ಬೆಂಗಳೂರು’ ಯಕ್ಷಗಾನಾಸಕ್ತರ ವಾಟ್ಸಾಪ್ ಗ್ರೂಪ್ ರಚನೆಯಾಗಿತ್ತು. ಬಳಿಕ ಅದರ ಮೂಲಕ ಕಲೆ, ಯಕ್ಷಗಾನ, ತಾಳಮದ್ದಳೆ ಪೋಷಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ಎಂದು 2024 ರಲ್ಲಿ

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಇದರ ನೂತನ ಗೌರವಾಧ್ಯಕ್ಷರಾಗಿ ಆರ್.ಕೆ.ಭಟ್ ಬೆಳ್ಳಾರೆ ಆಯ್ಕೆ Read More »

ಅಫಘಾನಿಸ್ತಾನ ಮೇಲೆ ದಿಢೀರ್‌ ವಾಯುದಾಳಿ ನಡೆಸಿದ ಪಾಕಿಸ್ತಾನ

ರಾಜಧಾನಿ ಕಾಬೂಲ್‌ ಗುರಿಮಾಡಿಕೊಂಡು ಅಟ್ಯಾಕ್‌ ಕಾಬೂಲ್ : ಅತ್ತ ಇಸ್ರೇಲ್‌-ಹಮಾಸ್‌ ನಡುವಿನ ಸುದೀರ್ಘ ಯುದ್ಧ ಶಮನವಾಗುತ್ತಿದ್ದಂತೆ ಇತ್ತ ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ದಿಢೀರ್‌ ವಾಯುದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ. ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ

ಅಫಘಾನಿಸ್ತಾನ ಮೇಲೆ ದಿಢೀರ್‌ ವಾಯುದಾಳಿ ನಡೆಸಿದ ಪಾಕಿಸ್ತಾನ Read More »

ಚಿನ್ನ, ಬೆಳ್ಳಿ ಬೆಲೆ ಏರಿಕೆ ನಾಗಾಲೋಟ : ಮದುವೆ ಸೀಸನ್‌ನಲ್ಲೇ ಚಿಂತೆಗೆ ಕಾರಣವಾದ ದರ

ಚಿನ್ನ 10 ಗ್ರಾಂಗೆ 1.24 ಲ.ರೂ; ಬೆಳ್ಳಿ ಕೆಜಿಗೆ 1.60 ಲಕ್ಷ ರೂ. ಬೆಂಗಳೂರು: ಚಿನ್ನ ಮತ್ತು ಬೆಳ್ಳಿಯ ಬೆಲೆ ಮತ್ತೆ ಗಗನಮುಖಿಯಾಗಿದೆ. ಹಬ್ಬಗಳು, ಮದುವೆ ಸೀಸನ್‌ ಶುರುವಾಗಲೇ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗುತ್ತಿರುವುದು ಜನರ ಚಿಂತೆಗೆ ಕಾರಣವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಂಗಾರ ಮತ್ತು ಬೆಳ್ಳಿ ಎರಡೂ ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,24,000 ರೂ. ಮತ್ತು ಬೆಳ್ಳಿ ಕೆ.ಜಿಗೆ 1,60,000 ರೂ. ಆಗಿದೆ. ಪ್ರಮುಖವಾಗಿ

ಚಿನ್ನ, ಬೆಳ್ಳಿ ಬೆಲೆ ಏರಿಕೆ ನಾಗಾಲೋಟ : ಮದುವೆ ಸೀಸನ್‌ನಲ್ಲೇ ಚಿಂತೆಗೆ ಕಾರಣವಾದ ದರ Read More »

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಯ ಲಾಕರ್‌ನಲ್ಲಿತ್ತು 40 ಕೆಜಿ ಚಿನ್ನ

ಆನ್‌ಲೈನ್‌ ಬೆಟ್ಟಿಂಗ್‌ನಲ್ಲಿ ಸಂಪಾದಿಸಿದ ಅಪಾರ ಅಕ್ರಮ ಸಂಪತ್ತು ಬಯಲು ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದಾಗ ಲಾಕರ್‌ನಲಿದ್ದ 51 ಕೋಟಿ ರೂ. ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ. ಇ.ಡಿ. ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಫೆಡರಲ್ ಬ್ಯಾಂಕ್‌ ಸೇರಿದಂತೆ ಪಟ್ಟಣದ ಹಲವೆಡೆ ಶೋಧ ನಡೆಸಿದ್ದಾರೆ. ವೀರೇಂದ್ರ ಪಪ್ಪಿ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಯ ಲಾಕರ್‌ನಲ್ಲಿತ್ತು 40 ಕೆಜಿ ಚಿನ್ನ Read More »

ಈಡೇರದ ಬೇಡಿಕೆ : ಮತ್ತೆ ಮುಷ್ಕರದತ್ತ ಸಾರಿಗೆ ನೌಕರರು

ಅಕ್ಟೋಬರ್‌ 15ರಿಂದ ಉಪವಾಸ ಸತ್ಯಾಗ್ರಹದ ನಿರ್ಧಾರ ಬೆಂಗಳೂರು : ಸರ್ಕಾರ ಯಾವ ಬೇಡಿಕೆಯನ್ನೂ ಈಡೇರಿಸದಿರುವ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈ ಐದು ದಿನಗಳ ಕಾಲ ಸರ್ಕಾರಿ ಬಸ್‌ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ. ಕಳೆದ ಆಗಸ್ಟ್‌

ಈಡೇರದ ಬೇಡಿಕೆ : ಮತ್ತೆ ಮುಷ್ಕರದತ್ತ ಸಾರಿಗೆ ನೌಕರರು Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ

ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕಣ ಧರ್ಮಸ್ಥಳ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿದ್ದರು. ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ್

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ Read More »

ಪಾಲಿಶಿಂಗ್‌ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ

ದಾರಿಮಧ್ಯೆ ಸಿಕ್ಕ ಅಪರಿಚಿತನ ಮಾತು ನಂಬಿ ಮೋಸ ಹೋದ ಮಹಿಳೆ ಮಂಗಳೂರು : ಆಭರಣ ಪಾಲಿಶಿಂಗ್ ಮಾಡಿಕೊಡುವ ಸೋಗಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ವಿಧವೆಯೋರ್ವರನ್ನು ಯಾಮಾರಿಸಿ ಆಕೆಯ ಕತ್ತಿನ ಸರದಿಂದ 14 ಗ್ರಾಂ ಚಿನ್ನವನ್ನು ಕರಗಿಸಿ ಹೊತ್ತೊಯ್ದ ಘಟನೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಅಂಬ್ಲಮೊಗರು ನಿವಾಸಿ ಸುಂದರಿ (60) ವಂಚಕನಿಂದ‌ ಮೋಸ ಹೋದವರು. ಸುಂದರಿ ಅವರು ದಿನನಿತ್ಯಲೂ ಸುದರ್ಶನ್ ಶೆಟ್ಟಿ ಎಂಬವರ ಮನೆಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಮರಳುತ್ತಿದ್ದರು.

ಪಾಲಿಶಿಂಗ್‌ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ Read More »

ಪ್ರಜ್ಞಾ ಆಶ್ರಮಕ್ಕೆ ಹಣ್ಣುಗಳ ಕೊಡುಗೆ

ಪುತ್ತೂರು: ಬೀರಮಲೆ ಬೆಟ್ಟದಲ್ಲಿರುವ ವಿಶಿಷ್ಟ ಚೇತನರ ಪ್ರಜ್ಞಾ ಆಶ್ರಮದ ಬಾಲಕರಿಗೆ ಪುತ್ತೂರು ಅಗಸ್ತ್ಯ ಶಿವಪೇಟೆಯ ಭಾಸ್ಕರ ಬಾರ್ಯರ ಸೊಸೆ ಕೃಷ್ಣವೇಣಿ ಅವರ ಸೀಮಂತದ ಪ್ರಯುಕ್ತ ಹಣ್ಣುಗಳನ್ನು ವಿತರಿಸಲಾಯಿತು. ಪ್ರಜ್ಞಾ ಆಶ್ರಮಕ್ಕೆ ಇಂತಹ ಕೊಡುಗೆಗಳನ್ನು ವಿಶೇಷ ಸಂದರ್ಭಗಳಲ್ಲಿ ನೀಡುತ್ತಿರುವ ಭಾಸ್ಕರ ಬಾರ್ಯರಿಗೆಪ್ರಜ್ಞಾ ಆಶ್ರಮದ ವ್ಯವಸ್ಥಾಪಕರಾದ ಅಣ್ಣಪ್ಪ ಮತ್ತು ಜ್ಯೋತಿ ದಂಪತಿ ಕೃತಜ್ಞತೆ ವ್ಯಕ್ತಪಡಿಸಿದರು.

ಪ್ರಜ್ಞಾ ಆಶ್ರಮಕ್ಕೆ ಹಣ್ಣುಗಳ ಕೊಡುಗೆ Read More »

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ

ಭಾರತದೊಂದಿಗೆ ಮಹತ್ವದ ಮಾತುಕತೆ ನಡೆಸಲಿರುವ ಸಚಿವ ಮುತ್ತಕಿ ನವದೆಹಲಿ: ಅಫಘಾನಿಸ್ತಾನದ ತಾಲಿಬಾನ್‌ ಸರ್ಕಾರದ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಇಂದು ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಭಾರತಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಇದು ಐತಿಹಾಸಿಕ ಭೇಟಿ ಎನ್ನಲಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತ್ತಕಿ ಅವರಿಗೆ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16ರ ನಡುವೆ ಭಾರತಕ್ಕೆ ಭೇಟಿ

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ Read More »

error: Content is protected !!
Scroll to Top