ಸುದ್ದಿ

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಬಿಗ್‌ ಬಾಸ್‌ ಮನೆಗೆ ಬೀಗ ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದ ಕಾರಣದಿಂದ ಬಿಗ್ ಬಾಸ್ ಕನ್ನಡ ಸೀಸನ್-12 ಶೋ ಸ್ಥಗಿತಗೊಂಡಿದೆ. ಕೆಲವೇ ದಿನಗಳ ಹಿಂದೆ ಆರಂಭ ಆಗಿದ್ದ ಈ ಕಾರ್ಯಕ್ರಮಕ್ಕೆ ಕಾನೂನಿನ ತೊಡಕು ಉಂಟಾಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್​​ಗೆ ರಾಮನಗರ ಜಿಲ್ಲಾಡಳಿತ ಅಧಿಕಾರಿಗಳು ಬೀಗ ಹಾಕಿದ್ದಾರೆ. ಅದರಿಂದಾಗಿ ಶೋ ನಿಲ್ಲುವಂತಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ […]

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ Read More »

ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ

ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜು ಪುತ್ತೂರು ಇದರ ಫ್ಯಾಷನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಷನ್ ಡಿಸೈನ್ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ “DRAPOLOGY” – ಡ್ರೇಪಿಂಗ್ ಕಾರ್ಯಾಗಾರ ನಡೆಸಲಾಯಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು.ವಿದ್ಯಾರ್ಥಿಗಳು ಸ್ವತಃಪಾಲ್ಗೊಂಡು ಅಭ್ಯಾಸ ಮಾಡುವ

ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ Read More »

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ರಜೆ: ಸಿಎಂ ‌ಸಿದ್ದರಾಮಯ್ಯ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ದಸರಾ ರಜೆ ವಿಸ್ತರಣೆ ಮಾಡಿ ಸಿ ಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು, ನಿಗದಿ ಮಾಡಿದ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅ. 8 ರಿಂದ ಅ. 18 ರ ವರೆಗೆ ರಜೆಯನ್ನು ನೀಡುವಂತೆ ಆದೇಶ ಹೊರಡಿಸಲಾಗಿದೆ. ಸಿಎಂ ‌ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ಸಭೆ ನಡೆಸಿದ್ದು, ಅದರಲ್ಲಿ ಈ ನಿರ್ಣಯಕ್ಕೆ ಬರಲಾಗಿದೆ.

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ರಜೆ: ಸಿಎಂ ‌ಸಿದ್ದರಾಮಯ್ಯ ಆದೇಶ Read More »

ಎವಿಜಿ :ವಾಲ್ಮೀಕಿ ಜಯಂತಿ ಆಚರಣೆ

ಬನ್ನೂರು : ಇಲ್ಲಿನ ಅಲುಂಬುಡ ಕೃಷ್ಣ ನಗರ ದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಮೋತಿಬಾಯಿ ಅವರು ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶುಭ ಹಾರೈಸಿದರು. ಆಡಳಿತ ಅಧಿಕಾರಿ ಗುಡ್ಡಪ್ಪಗೌಡ ಬಲ್ಯ ದಿನದ ಮಹತ್ವವನ್ನು ತಿಳಿಸಿ, ಬದಲಾವಣೆಯನ್ನು ಬಯಸುವವರಿಗೆ ವಾಲ್ಮೀಕಿಯ ಬದುಕು ಸೂಕ್ತ ಉದಾಹರಣೆ. ದರೋಡೆಕೋರನಾಗಿದ್ದ ರತ್ನಾಕರನು ವಾಲ್ಮೀಕಿಯಾಗಿ ಪರಿವರ್ತನೆಯಾಗಿ ಭಾರತದ ಮಹಾನ್ ಗ್ರಂಥವಾದ ರಾಮಾಯಣ ರಚಿಸುವಲ್ಲಿ ಕಾರಣನಾಗಿ ಶ್ರೇಷ್ಠ ಸಂತನಾಗಿ

ಎವಿಜಿ :ವಾಲ್ಮೀಕಿ ಜಯಂತಿ ಆಚರಣೆ Read More »

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಬೆಳ್ತಂಗಡಿ: ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರ ಬಾಗಿಲ ತಿಲಕ ಮುರಿದು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಈ ಕೈಚಳಕ ತೋರಿದ್ದಾರೆ. ಈ ಘಟನೆ ಆ. 2 ರಿಂದ ಆ. 6 ರ ನಡುವೆ ನಡೆದಿದೆ ಎಂದು ವೇಣೂರು ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮನೆಯ ಮುಂಭಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿ, ಬೆಡ್ ರೂಂ ಒಳಗಿದ್ದ ಕಪಾಟಿನ

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »

ಕೊಡಗಿನ ಜಿ. ಕೆ. ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ

ಮಡಿಕೇರಿ: ರಾಜ್ಯ ಸರ್ಕಾರ ಕೊಡಮಾಡುವ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಕೊಡಗಿನ ಜಿ. ಕೆ. ಮುತ್ತಮ್ಮ ಅವರು ಭಾಜನರಾಗಿದ್ದಾರೆ. ಸಿದ್ದಾಪುರ ಸಮೀಪದ ದಿಡ್ಡಳ್ಳಿಯ ಗಿರಿಜನರಿಗೆ ‌ಸೂರು ಕೊಡಿಸುವ ಹಿನ್ನೆಲೆ ಮುತ್ತಮ್ಮ ಅವರು ಈ ಹಿಂದೆ ತೀವ್ರ ಸ್ವರೂಪದ ಹೋರಾಟ ಮಾಡಿದ್ದರು. ಇವರ ಪ್ರಯತ್ನದ ಫಲವಾಗಿ ಅಂದಿನ ಸರ್ಕಾರ ಕುಶಾಲನಗರದ ‌ಸಮೀಪದ ಬಸವನಹಳ್ಳಿಯಲ್ಲಿ ಪುನರ್ವಸತಿ ಕೇಂದ್ರವನ್ನು ಆರಂಭ ಮಾಡಿತ್ತು. ನಿರಾಶ್ರಿತರಿಗೆ ಎಲ್ಲಾ ಸವಲತ್ತುಗಳನ್ನು ಒಳಗೊಂಡ ನಿವೇಶನ ಮತ್ತು ಮನೆ ಗಳನ್ನು ನಿರ್ಮಾಣ ಮಾಡಿಕೊಟ್ಟಿತ್ತು. ಮುತ್ತಮ್ಮ ಅವರು ದುರ್ಬಲ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ

ಕೊಡಗಿನ ಜಿ. ಕೆ. ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ Read More »

ಮಹರ್ಷಿ ವಾಲ್ಮೀಕಿ ಜಯಂತಿ: ಪಿಎಂ ಮೋದಿ ಅವರಿಂದ ಶುಭಾಶಯ

ನವದೆಹಲಿ: ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಾಲ್ಮೀಕಿ ಅವರ ಆದರ್ಶ ಚಿಂತನೆಗಳು ಸಮಾಜ ಮತ್ತು ಕುಟುಂಬದ ಮೇಲೆ ಆಳವಾದ ಪರಿಣಾಮ ಬೀರಿದೆ ಎಂದು ಅವರು ತಿಳಿಸಿದ್ದಾರೆ. ಶುಭಾಶಯ ಕೋರಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಹರ್ಷಿ ವಾಲ್ಮೀಕಿ ಜಯಂತಿಯಂದು ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳು. ಪ್ರಾಚೀನ ಕಾಲದಿಂದಲೂ ಅವರ ಶುದ್ಧ ಮತ್ತು ಆದರ್ಶ ಚಿಂತನೆಗಳು ನಮ್ಮ ಸಮಾಜ ಮತ್ತು ಕುಟುಂಬದ ಮೇಲೆ ಆಳವಾದ ಪ್ರಭಾವ

ಮಹರ್ಷಿ ವಾಲ್ಮೀಕಿ ಜಯಂತಿ: ಪಿಎಂ ಮೋದಿ ಅವರಿಂದ ಶುಭಾಶಯ Read More »

ದಂಪತಿ ವಿಷ ಸೇವಿಸಿ ಆತ್ಮಹತ್ಯೆ

ಆರ್ಥಿಕ ಮುಗ್ಗಟ್ಟಿನಿಂದ ಕೃತ್ಯ ಎಂಬ ಶಂಕೆ ಮಂಜೇಶ್ವರ: ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಡಂಬಾರು ಎಂಬಲ್ಲಿ ನಡೆದಿದೆ. ಕಡಂಬಾರಿನ ಅಜಿತ್ (35) ಮತ್ತು ಪತ್ನಿ ಶ್ವೇತಾ (27) ಮೃತಪಟ್ಟವರು. ಅಜಿತ್ ಪೈಂಟಿಂಗ್ ಕಾರ್ಮಿಕರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್‌ನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಸೋಮವಾರ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಇಬ್ಬರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ರಾತ್ರಿ ಹಾಗೂ ಶ್ವೇತಾ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಸೋಮವಾರ

ದಂಪತಿ ವಿಷ ಸೇವಿಸಿ ಆತ್ಮಹತ್ಯೆ Read More »

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ: 7ನೇ ಸೇವಾ ಯೋಜನೆಯಡಿ ಅನಾರೋಗ್ಯ ಪೀಡಿತ ಮಗುವಿಗೆ ನೆರವಿನ ಹಸ್ತ

ಪೊಳಲಿ: ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ (ರಿ) ಇದರ 7ನೇ ಸೇವಾ ಯೋಜನೆಯಡಿಯಲ್ಲಿ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗೆ ನೆರವಿನ ಹಸ್ತ ಕಾರ್ಯಕ್ರಮ ನಡೆಯಿತು. ಭವತಿ ಭಿಕ್ಷಾಂದೇಹಿ ಕಾರ್ಯಕ್ರಮದ ಮೂಲಕ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ವಿಚಿತ್ರ ವೇಷಹಾಕಿ ಡಬ್ಬಿಯನ್ನು ಹಿಡಿದು ಶ್ರೀ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ನೀಡಿದ ಹಣವನ್ನು ಸಂಗ್ರಹ ಮಾಡಿದ್ದು, ಒಟ್ಟುಗೂಡಿದ 1,22,369ರೂ. ಹಣವನ್ನು ಅನಾರೋಗ್ಯ ಪೀಡಿತ ಮಗು ಸನ್ವಿತ್ ಕೆ. ಪೂಜಾರಿ ಅವರಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆಸರೆ ಪೌಂಡೇಷನ್

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ: 7ನೇ ಸೇವಾ ಯೋಜನೆಯಡಿ ಅನಾರೋಗ್ಯ ಪೀಡಿತ ಮಗುವಿಗೆ ನೆರವಿನ ಹಸ್ತ Read More »

ಶೂ ಎಸೆದದ್ದಕ್ಕೆ ಪಶ್ಚಾತ್ತಾಪವಿಲ್ಲ, ಕ್ಷಮೆ ಯಾಚಿಸುವುದಿಲ್ಲ ಎಂದ ವಕೀಲ

ಎಸೆಯಲು ದೇವರೆ ಪ್ರೇರಣೆ ನೀಡಿದ್ದಾನೆ ಎಂದು ತರ್ಕ ನವದೆಹಲಿ: ಸುಪ್ರೀ ಕೋರ್ಟ್‌ನ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ

ಶೂ ಎಸೆದದ್ದಕ್ಕೆ ಪಶ್ಚಾತ್ತಾಪವಿಲ್ಲ, ಕ್ಷಮೆ ಯಾಚಿಸುವುದಿಲ್ಲ ಎಂದ ವಕೀಲ Read More »

error: Content is protected !!
Scroll to Top