ಸುದ್ದಿ

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು

ಸುಜಾತ ಭಟ್‌ ಪ್ರಹಸನದಲ್ಲಿ ಖ್ಯಾತ ಖಳನಟ, ನಿರ್ದೇಶಕನ ಸಹೋದರನ ಹೆಸರು ಪ್ರಸ್ತಾಪ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ಸುಜಾತಾ ಭಟ್ ಎಂಬ ವೃದ್ಧ ಮಹಿಳೆ ಸೃಷ್ಟಿಸಿದ ಅನನ್ಯ ಭಟ್ ಕಟ್ಟುಕತೆ ಪ್ರಹಸನದಲ್ಲಿ ದಿಢೀರ್‌ ಎಂದು ಖ್ಯಾತ ನಟನೊಬ್ಬನ ಸಹೋದರನ ಹೆಸರು ಪ್ರಸ್ತಾವಕ್ಕೆ ಬಂದಿರುವುದು ಕುತೂಹಲ ಮೂಡಿಸಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಹಾಗೂ ನಿರ್ದೇಶಕನ ಸಹೋದರ ಹೆಸರು ಈಗ ಧರ್ಮಸ್ಥಳ ಪ್ರಕರಣಕ್ಕೆ ತಳಕು ಹಾಕಿಕೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲೇ ಎಸ್ಐಟಿ ಅವರಿಗೆ ನೋಟಿಸ್ ನೀಡುವ […]

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು Read More »

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ

13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ; ಇಂಟರ್‌ನೆಟ್‌ ಸ್ಥಗಿತ ಭುವನೇಶ್ವರ: ಒಡಿಶಾದ ಕಟಕ್ ​​ನಗರದಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ Read More »

ಋಷಿಕೇಶದಲ್ಲಿ ರಜನಿಕಾಂತ್‌ : ಫೋಟೊ ಭಾರಿ ವೈರಲ್‌

ರಸ್ತೆ ಬದಿ ನಿಂತು ಜನಸಾಮಾನ್ಯರಂತೆ ಊಟ ಮಾಡಿದ ಸೂಪರ್‌ಸ್ಟಾರ್‌ ಚೆನ್ನೈ : ಆಗಾಗ ಹಿಮಾಲಯದತ್ತ ಆಧ್ಯಾತ್ಮಿಕ ಪ್ರವಾಸ ಕೈಗೊಂಡು ಧ್ಯಾನ, ಪ್ರಾರ್ಥನೆ ಮಾಡಿ ಬರುವ ಹವ್ಯಾಸ ಇಟ್ಟುಕೊಂಡಿರುವ ಮೇರುನಟ ರಜನಿಕಾಂತ್‌ ಈ ಸಲ ಋಷಿಕೇಶಕ್ಕೆ ಹೋಗಿದ್ದಾರೆ. ರಜನಿಕಾಂತ್ ‘ಕೂಲಿ’ ಸಿನಿಮಾ ಬಳಿಕ ಆಧ್ಯಾತ್ಮಿಕ ವಿರಾಮಕ್ಕಾಗಿ ಋಷಿಕೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ಅವರು ಸರಳವಾಗಿ ರಸ್ತೆ ಬದಿಯಲ್ಲಿ ಊಟ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ರಜನಿಕಾಂತ್‌ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ, ಗಂಗಾ ನದಿಯಲ್ಲಿ ಧ್ಯಾನ ಮಾಡಿದ್ದಾರೆ.

ಋಷಿಕೇಶದಲ್ಲಿ ರಜನಿಕಾಂತ್‌ : ಫೋಟೊ ಭಾರಿ ವೈರಲ್‌ Read More »

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ

ಜೆಸಿಬಿ ತಂದು ಕೆಡವಿ ಹಾಕಿದ ಮುಸ್ಲಿಮರು ಲಖನೌ: ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಸೀದಿಯನ್ನು ಮುಸ್ಲಿಮರೇ ಜೆಸಿಬಿ ತಂದು ಕೆಡವಿ ಹಾಕಿದ್ದಾರೆ. ಸಂಭಾಲ್‌ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು ನೆಲಸಮ ಮಾಡಿದ್ದಾರೆ. ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಮಸೀದಿಯನ್ನು ತೆಗೆಯುವಂತೆ ಜಿಲ್ಲಾಡಳಿತ 4 ದಿನಗಳ ಡೆಡ್‌ಲೈನ್‌ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆ ಮುಸ್ಲಿಮರೇ ಮಸೀದಿಯನ್ನು ಕೆಡವಿದ್ದಾರೆ. ಗೌಸುಲ್ಬರಾ ಮಸೀದಿಯನ್ನು ಕೆಡವಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಮಸೀದಿ ಸಮಿತಿಯ ಸದಸ್ಯರು

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ

ಶಾರ್ಟ್​ ಸರ್ಕ್ಯೂಟ್​ನಿಂದ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ದುರಂತ ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಅಪಾರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್‌ ಸಿಂಗ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೋರೇಜ್ ಪ್ರದೇಶದಲ್ಲಿ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ Read More »

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌

ಬೆಂಗಳೂರು ವಿವಿಯಿಂದ ಖಾದರ್‌ಗೆ ಗೌರವ ಡಾಕ್ಟರೇಟ್‌ ಘೋಷಣೆ ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌ Read More »

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ

ನಿರಾಕ್ಷೇಪಣಾ ಪ್ರಮಾಣಪತ್ರ ನೀಡಲು ಲಂಚ ಸ್ವೀಕರಿಸಿದ್ದ ಒಎಸ್‌ಡಿ ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಶನಿವಾರ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯಾಡರಹಳ್ಳಿ ನಿವಾಸಿ ಅನಂತರಾಜು ಕೆ.ಎಂ(37)

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ Read More »

ಖ್ಯಾತ ಸಾಹಿತಿ, ಚಿಂತಕ ಮೊಗಳ್ಳಿ ಗಣೇಶ್‌ ನಿಧನ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ, ಚಿಂತಕ ಡಾ.ಮೊಗಳ್ಳಿ ಗಣೇಶ್(62) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. 1963ರ ಜುಲೈ 1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್ ಕನ್ನಡದ ಪ್ರಮುಖ ಕಥೆಗಾರ, ಪ್ರಬಂಧಕಾರ, ಕಾದಂಬರಿಕಾರ ಮತ್ತು ವೈಚಾರಿಕ ಚಿಂತಕರಾಗಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಜಾನಪದ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ಮೊಗಳ್ಳಿ ಕಥೆಗಳು, ದೇವರ

ಖ್ಯಾತ ಸಾಹಿತಿ, ಚಿಂತಕ ಮೊಗಳ್ಳಿ ಗಣೇಶ್‌ ನಿಧನ Read More »

ಡಿಕೆಶಿಗೆ ಇರಿಸುಮುರಿಸು ಉಂಟುಮಾಡಿದ ಜಾತಿ ಗಣತಿ ಪ್ರಶ್ನೆಗಳು : ಬಿಜೆಪಿ ಟಾಂಗ್‌

ಪ್ರಶ್ನೆಗಳನ್ನು ʼಸಿದ್ದʼಪಡಿಸಿರುವುದು ನಿಮ್ಮದೇ ಸರ್ಕಾರ ಎಂಬುದನ್ನು ಮರೆಯದಿರಿ ಎಂದು ಕಾಲೆಳೆದ ವಿಪಕ್ಷ ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಜಾತಿ ಗಣತಿಯಲ್ಲಿ ಕೇಳುತ್ತಿರುವ ಪ್ರಶ್ನೆಗಳಿಗೆ ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಜಾತಿ ಗಣತಿಯನ್ನು ಟೀಕಿಸಲು ಬಿಜೆಪಿ ಪಾಲಿಗೆ ಹೊಸ ಅಸ್ತ್ರವೊಂದು ಸಿಕ್ಕಿದಂತಾಗಿದೆ. ಆರಂಭದಿಂದಲೂ ಬಿಜೆಪಿ ಇದು ರಾಜಕೀಯ ಉದ್ದೇಶದ ಜಾತಿ ಗಣತಿ ಎಂದು ಟೀಕಿಸುತ್ತಿದೆ. ಸರ್ಕಾರ ಇದು ಜನರ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಈ ನಡುವೆ ಶನಿವಾರ

ಡಿಕೆಶಿಗೆ ಇರಿಸುಮುರಿಸು ಉಂಟುಮಾಡಿದ ಜಾತಿ ಗಣತಿ ಪ್ರಶ್ನೆಗಳು : ಬಿಜೆಪಿ ಟಾಂಗ್‌ Read More »

ಭಾರತ ತಂಡದ ಹೊಣೆ ಹೊಸ ತಲೆಮಾರಿಗೆ ಹಸ್ತಾಂತರ : ಐವರು ದಿಗ್ಗಜರಿಗೆ ಸ್ಥಾನವೇ ಇಲ್ಲ

ಅಕ್ಟೋಬರ್‌ 19ರಿಂದ ಭಾರತ-ಆಸ್ಟ್ರೇಲಿಯಾ ಮಹತ್ವದ ಸರಣಿ ಪ್ರಾರಂಭ ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19ರಿಂದ ಶುರುವಾಗಲಿದ್ದು, ಆಸ್ಟೇಲಿಯಾದಲ್ಲಿ ನಡೆಯಲಿರುವ ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಗಳನ್ನು ಶುಭ್​ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಆದರೆ ಈ ಸಲ ಆಯ್ಕೆ ಸಮಿತಿ ಮಾಡಿರುವ ಆಯ್ಕೆಗಳು ಮಾತ್ರ ಭಾರಿ ಚರ್ಚೆಗೆ ಗುರಿಯಾಗಿದೆ. ಬಹಳ ಮುಖ್ಯವಾಗಿ ಭಾರತ ತಂಡದ ನಾಯಕನ ಬದಲಾವಣೆ, ಐವರು ಪ್ರಮುಖ ಆಟಗಾರರನ್ನು ಕೈ ಬಿಟ್ಟಿರುವುದು ಹೆಚ್ಚು

ಭಾರತ ತಂಡದ ಹೊಣೆ ಹೊಸ ತಲೆಮಾರಿಗೆ ಹಸ್ತಾಂತರ : ಐವರು ದಿಗ್ಗಜರಿಗೆ ಸ್ಥಾನವೇ ಇಲ್ಲ Read More »

error: Content is protected !!
Scroll to Top