ಸುದ್ದಿ

ಆರು ಸಾವಿರ ಮತದಾರರನ್ನು ಡಿಲೀಟ್‌ ಮಾಡಿಲ್ಲ, ಅರ್ಜಿ ತಿರಸ್ಕರಿಸಲಾಗಿದೆ : ರಾಹುಲ್‌ ಗಾಂಧಿ ಆರೋಪಕ್ಕೆ ಸ್ಪಷ್ಟನೆ

ಆನ್‌ಲೈನ್‌ ಮೂಲಕ ಮತದಾರರ ಹೆಸರು ಅಳಿಸುವುದು ಅಸಾಧ್ಯ ಎಂದ ಚುನಾವಣಾ ಆಯೋಗ ಬೆಂಗಳೂರು: ಕರ್ನಾಟಕದ ಆಳಂದದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಕುರಿತು ರಾಹುಲ್‌ ಗಾಂಧಿ ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ನಿನ್ನೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಆರು ಸಾವಿರಕ್ಕೂ ಅಧಿಕ ಮತಕಳ್ಳತನವಾಗಿದೆ. ಮತದಾರರ ಹೆಸರುಗಳನ್ನು ಆನ್‌ಲೈನ್‌ ಮೂಲಕ ಅಳಿಸಿ ಹಾಕಲಾಗಿದೆ ಎಂದು ಆರೋಪಿಸಿ ಇದಕ್ಕೆ ಇಬ್ಬರು ಸಾಕ್ಷಿಧಾರರನ್ನೂ ಹಾಜರುಪಡಿಸಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ […]

ಆರು ಸಾವಿರ ಮತದಾರರನ್ನು ಡಿಲೀಟ್‌ ಮಾಡಿಲ್ಲ, ಅರ್ಜಿ ತಿರಸ್ಕರಿಸಲಾಗಿದೆ : ರಾಹುಲ್‌ ಗಾಂಧಿ ಆರೋಪಕ್ಕೆ ಸ್ಪಷ್ಟನೆ Read More »

ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ

ಹೊಸದಾಗಿ 331 ಜಾತಿಗಳ ಸೇರ್ಪಡೆಗೆ ಆಕ್ಷೇಪ ಬೆಂಗಳೂರು: ಜಾತಿ ಜನಗಣತಿ ಜೇನುಗೂಡಿಗೆ ಮತ್ತೆ ಕೈ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಂದಿನ ಸೋಮವಾರದಿಂದ ಆರಂಭವಾಗಬೇಕಿದ್ದ ಜಾತಿ ಜನಗಣತಿಗೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಕಾಂಗ್ರೆಸ್‌ ಸಚಿವರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸೋಮವಾರದಿಂದ ಜಾತಿ ಗಣತಿ ಪ್ರಾರಂಭವಾಗುವುದು ಅನುಮಾನ ಎನ್ನಲಾಗಿದೆ. ಸಂಪುಟ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ಸಚಿವರ ವಿಶೇಷ ಸಭೆ ನಡೆಸಲಾಯಿತು. ಅಲ್ಲೂ ಆಕ್ರೋಶ ಶಮನವಾಗಿಲ್ಲ. ಲಿಂಗಾಯತ ಸಮುದಾಯದ ಸಚಿವರು ಜಾತಿ ಗಣತಿ ಬಗ್ಗೆ

ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ Read More »

ಸೆ.21ರಂದು ಭಾರತ-ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿ

ಹ್ಯಾಂಡ್‌ ಶೇಕ್‌ ವಿವಾದ ತಣ್ಣಗಾಗುವ ಮೊದಲೇ ಬದ್ಧ ವೈರಿಗಳ ನಡುವೆ ಇನ್ನೊಂದು ಪಂದ್ಯ ದುಬೈ: ಟಿ20 ಏಷ್ಯಾಕಪ್‌ ಟೂರ್ನಿಯ ಹ್ಯಾಂಡ್‌ ಶೇಕ್‌ ವಿವಾದ ತಣ್ಣಗಾಗುವ ಮುನ್ನವೇ ಭಾರತ–ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ.ಟೂರ್ನಿಯ ಲೀಗ್‌ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ಭಾನುವಾರ (ಸೆ.21) ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ. ಈಗಾಗಲೇ ಲೀಗ್‌ ಸುತ್ತಿನಲ್ಲಿ ಮೂರು ಪಂದ್ಯಗಳನ್ನಾಡಿರುವ ಪಾಕ್‌ 2ರಲ್ಲಿ ಗೆದ್ದು 4

ಸೆ.21ರಂದು ಭಾರತ-ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿ Read More »

ಅ.20: ಅಶೋಕ ಜನಮನ 2025 ಬೃಹತ್ ದೀಪಾವಳಿ ಕಾರ್ಯಕ್ರಮ 22 ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್ ರೈ

ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ ಅವರ ಧರ್ಮಪತ್ನಿ ಸುಮಾ ಅಶೋಕ್ ರೈ ತಿಳಿಸಿದರು. ಗುರುವಾರ ಟ್ರಸ್ಟ್ ಸಭೆಯಲ್ಲಿ ವಿಷಯ ತಿಳಿಸಿದರು. ಎಲ್ಲಾ ಸಮಿತಿಗಳಿಗೂ ವಿವಿಧ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹೇಳಿದರು. 5 ತಂಡಗಳಲ್ಲಿ ಪ್ರಚಾರಕಾರ್ಯಕ್ರಮದ ಬಗ್ಗೆ ಪ್ರತೀ ಗ್ರಾಮಕ್ಕೆ ತೆರಳಿ

ಅ.20: ಅಶೋಕ ಜನಮನ 2025 ಬೃಹತ್ ದೀಪಾವಳಿ ಕಾರ್ಯಕ್ರಮ 22 ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್ ರೈ Read More »

ಹೊಂಡದಲ್ಲಿ ರಾಜ್ಯ ಸರಕಾರ ಹೋಗುವ ಪರಿಸ್ಥಿತಿ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವ ಸಂದೇಶ –ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ಥಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆಗಳ ದುರಸ್ಥಿ ಬಗ್ಗೆ ರಾಜ್ಯ ಸರಕಾರ ಯಾವುದೇ ಹಣ ಬಿಡುಗಡೆ ಮಾಡದೆ ರಸ್ತೆ ದುರಸ್ಥಿ ಆಗುತ್ತಿಲ್ಲ. ಈ ನಡುವೆ ಗುಂಡಿಗಳನ್ನು ಮುಚ್ಚಲು ಡಾಮಾರು ರಸ್ತೆಗೆ ಮಣ್ಣು ಹಾಕುವ ಪರಿಸ್ಥಿತಿಯನ್ನು ನೋಡಿದಾಗ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಸಂದೇಶ ನೀಡುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸಹಜ. ಈ

ಹೊಂಡದಲ್ಲಿ ರಾಜ್ಯ ಸರಕಾರ ಹೋಗುವ ಪರಿಸ್ಥಿತಿ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವ ಸಂದೇಶ –ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ Read More »

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡುವ ರಾಜ್ಯಸರ್ಕಾರದ ನಿರ್ಧಾರದ ವಿರುದ್ಧ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೂ ದೂರು ಹೋಗಿದೆ. H.S. ಗೌರವ್ ಎಂಬವರು ಈ‌ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಈಗಾಗಲೇ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೇನು ನಾಡ ಹಬ್ಬ ದಸರಾ ಆಚರಣೆ ಆರಂಭವಾಗಲಿದೆ. ಹಾಗಾಗಿ ಈ ಅರ್ಜಿಯ ಶೀಘ್ರ ವಿಚಾರಣೆಗಾಗಿಯೂ ಅವರು ಮನವಿ ಮಾಡಿಕೊಂಡಿದ್ದಾರೆ. ಅರ್ಜಿ ಪುರಸ್ಕರಿಸಿರುವ ಕೋರ್ಟ್ ಇದನ್ನು ಶುಕ್ರವಾರ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾ‌ನ ಮಂಜೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಡ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ‌ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 5.70 ಕೋಟಿ ಅನುದಾನ‌ಮಂಜೂರಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ.ಸದ್ಯ ಮಂಜೂರುಗೊಂಡಿರುವ ಕಿಂಡಿ‌ಅಣೆಕಟ್ಟು ಅತ್ಯಂತ ಬೇಡಿಕೆಯದ್ದಾಗಿತ್ತು. ಹಲವು ವರ್ಷಗಳಿಂದ ಈ ಭಾಗದ ಜನರು ಕಿಂಡಿ‌ಅಣೆಕಟ್ಟು ನಿರ್ಮಾಣಕ್ಕೆ ಹೋರಾಟವನ್ನು ನಡೆಸಿದ್ದರು.‌ಕಳೆದ ವಿಧಾನಸಭಾ ಚುನಾವಣೆಯ ವೇಳೆ ಅಣೆಕಟ್ಟು‌ಮಂಜೂರು ಗೊಳಿಸುವ ಬಗ್ಗೆ ಅಶೋಕ್ ರೈ ಅವರು ವಾಗ್ದಾನ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾ‌ನ ಮಂಜೂರು Read More »

ಕಮಲಶಿಲೆಯ ಉದ್ಯಮಿ ಆತ್ಮಹತ್ಯೆ

ಉಡುಪಿ: ಕುಂದಾಪುರ ಸಮೀಪದ ಕಮಲಶಿಲೆ ಗ್ರಾಮದ ಬರೇಗುಂಡಿ ಎಂಬಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸಿದ್ದಾಪುರದಲ್ಲಿರುವ ಛಾತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಛಾತ್ರ (43) ಸೆಪ್ಟೆಂಬರ್ 17ರಂದು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದಯ ಛಾತ್ರ ಬೆಳಗ್ಗೆ ಕಮಲಶಿಲೆಯಲ್ಲಿ ನಡೆದ ಮಣಂಜೆ ಕೃಷಿ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಗೆ ಪೋಷಕರು ಮತ್ತು ಪತ್ನಿಯೊಂದಿಗೆ ಹಾಜರಾಗಿದ್ದರು. ಅವರನ್ನು ಸಭೆಯಲ್ಲಿ ಬಿಟ್ಟ ನಂತರ ಸಿದ್ದಾಪುರದಲ್ಲಿರುವ ತಮ್ಮ ವ್ಯಾಪಾರ ಸಂಸ್ಥೆ ಛಾತ್ರ ಎಂಟರ್‌ಪ್ರೈಸಸ್‌ಗೆ

ಕಮಲಶಿಲೆಯ ಉದ್ಯಮಿ ಆತ್ಮಹತ್ಯೆ Read More »

ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ : ಯೋಗ ಗುರು ಪೋಕ್ಸೊ ಅಡಿ ಬಂಧನ

ಯೋಗ ಕಲಿಯಲು ಬರುತ್ತಿದ್ದ ಮಹಿಳೆಯರ ಲೈಂಗಿಕ ಶೋಷಣೆ ನಡೆಸುತ್ತಿದ್ದ ಗುರು ಬೆಂಗಳೂರು: ತನ್ನ ಯೋಗ ಸೆಂಟರ್​ಗೆ ಯೋಗ ಕಲಿಯಲು ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೊ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಅತ್ಯಾಚಾರ ಎಸಗಿರುವುದು ತನಿಖೆ ವೇಳೆ ಬಯಲಾಗಿದೆ. ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ

ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ : ಯೋಗ ಗುರು ಪೋಕ್ಸೊ ಅಡಿ ಬಂಧನ Read More »

ಸೆ.22ರಿಂದ ಅ.7ರ ವರೆಗೆ ರಾಜ್ಯಾದ್ಯಂತ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ

ಹೇಗೆ ನಡೆಯಲಿದೆ ಸಮೀಕ್ಷೆ? ಏನೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಪೂರ್ಣ ವಿವರ ಮಂಗಳೂರು: ರಾಜ್ಯ ಹಿಂದುಳಿದ ವರ್ಗಗ ಆಯೋಗದ ವತಿಯಿಂದ ಸೆ.22ರಿಂದ ಅ.7ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯ ನಡೆಯಲಿದೆ. ಇದಕ್ಕೆ ಈಗಾಗಲೇ ಸರ್ಕಾರ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದೆ. ಮನೆ ಮನೆಗೆ ಹೋಗಿ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ಸಮೀಕ್ಷೆ ಮಾಡುವುದು ಇದರ ಉದ್ದೇಶವಾಗಿದ್ದರೂ ಇದರ ಜೊತೆಗೆ ಕುಟುಂಬದ ಸಮಗ್ರ ಮಾಹಿತಿಯನ್ನು ನೀಡಬೇಕಾಗುತ್ತದೆ. ಸಮೀಕ್ಷೆಯ ಜಾತಿ ಕಾಲಂ ಈಗಾಗಲೇ ಸಾಕಷ್ಟು ವಿರೋಧಕ್ಕೆ ಗುರಿಯಾಗಿದೆ.

ಸೆ.22ರಿಂದ ಅ.7ರ ವರೆಗೆ ರಾಜ್ಯಾದ್ಯಂತ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ Read More »

error: Content is protected !!
Scroll to Top