ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ
ಮಂಗಳೂರು: ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಬೆಂಗ್ರೆ ಅಳಿವೆ ಸಮೀಪ ಮೇ 30ರ ಶುಕ್ರವಾರ ಸಂಭವಿಸಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ, ಗಾಳಿಯ ರಭಸಕ್ಕೆ ಧೋಣಿ ಮಗುಚಿದ್ದು, ದೋಣಿಯಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದೋಣಿಯಲ್ಲಿದ್ದ ಯಶವಂತ, ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ Read More »