ಸುದ್ದಿ

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ

ಮಂಗಳೂರು: ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಬೆಂಗ್ರೆ ಅಳಿವೆ  ಸಮೀಪ ಮೇ 30ರ ಶುಕ್ರವಾರ ಸಂಭವಿಸಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ, ಗಾಳಿಯ ರಭಸಕ್ಕೆ  ಧೋಣಿ ಮಗುಚಿದ್ದು, ದೋಣಿಯಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದೋಣಿಯಲ್ಲಿದ್ದ ಯಶವಂತ, ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ Read More »

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು

ಬಂಟ್ವಾಳ : ಲಾರಿ ಪಲ್ಟಿಯಾಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಿಂದಾಗಿ ಜಾರ್ಖಾಂಡ್‌ ಮೂಲದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕ ಎನ್ನಲಾಗಿದೆ. ಲಾರಿ ಚಾಲಕ ಸುಜಿತ್, ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಕ್ಕಿ ಲೋಡ್ ನ ಲಾರಿ ಬಂಟ್ವಾಳದ ಎಸ್‌ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.ಲಾರಿಯ ಹಿಂಭಾಗದಲ್ಲಿ ಅಕ್ಕಿ

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು Read More »

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು

ಉಳ್ಳಾಲ: ಮಳೆಯಾರ್ಭಟಕ್ಕೆ  ದ.ಕ ಜಿಲ್ಲೆ.ಯ ಜನರಲ್ಲಿ ಆತಂಕ ಹೆಚಾಗುತ್ತಿದ್ದು, ಇದೀಗ  ಉಳ್ಳಾಲದ ಮಂಜನಾಡಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಮಹಿಳೆ ಮತ್ತು ಮಗು ಅಸುನೀಗಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ತಾಯಿ ಮತ್ತು ಒಂದು ಮಗು ಅವಶೇಷದಡಿ ಸಿಲುಕಿದ್ದಾರೆ. ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಘಟನೆ ನಡೆದಿದ್ದು, ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ದರೆ ಕುಸಿದು ಬಿದ್ದಿದೆ. ಶುಕ್ರವಾರ ಮುಂಜಾನೆ ಸುಮಾರು

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು Read More »

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ

ಪುತ್ತೂರು : ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮುಂದುವರಿದ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತವಾಗಿದ್ದು, ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ನಡೆದಿದೆ. ಈ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಬಹಳ ದೊಡ್ಡ ದುರಂತ ತಪ್ಪಿದೆ. ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಇದಾಗಿದ್ದು, ಇನ್ನೂ ಮೂರು ಮನೆಗಳು ಅಪಾಯದ ಸ್ಥಿತಿಯಲ್ಲಿದೆ ಎನ್ನಲಾಗಿದೆ. ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ Read More »

ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಯ್ಸ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು.  ಆದರೆ ಇರ್ಫಾನ್ (19) ಚಿಕಿತ್ಸೆ

ಲಾರಿಗೆ ಡಿಕ್ಕಿ ಹೊಡೆದ ಬೈಕ್ | ಯುವಕ ಮೃತ್ತು Read More »

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ

ಚಲನಚಿತ್ರ ಸಾಹಿತಿಯಾಗಿಯೂ ಗುರುತಿಸಿಕೊಂಡಿದ್ದ ಸಾಹಿತಿ ಬೆಂಗಳೂರು: ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರ ಎಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿದ್ದ ಎಚ್.ಎಸ್ ವೆಂಕಟೇಶಮೂರ್ತಿ ಇಂದು ನಿಧನರಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದ ಎಚ್.ಎಸ್ ವೆಂಕಟೇಶಮೂರ್ತಿ ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು. ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ Read More »

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ

ಶಾಲಾರಂಭದ ಮೊದಲ ದಿನವೇ ರಜೆ ಮಂಗಳೂರು: ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ. ಎಲ್ಲ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ) ಇಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರಿಂದ ಬೇಸಿಗೆ ರಜೆ ಮುಗಿದು ಇಂದಿನಿಂದ ಪುನರಾರಂಭಗೊಳ್ಳಬೇಕಿದ್ದ ಶಾಲೆಗಳು ನಾಳೆ ತೆರೆಯಲಿವೆ. ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ Read More »

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ

ದ.ಕ., ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ಥಾಪಿಸಲು ಸರ್ಕಾರ ಆದೇಶ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಗುವ ಕೋಮುವಾದಿ ಶಕ್ತಿಗಳನ್ನು ನಿಗ್ರಹಿಸಲು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಪದೇಪದೆ ಕೋಮು ಘರ್ಷಣೆಗಳು ಸಂಭವಿಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿ ಆಡಳಿತದ ವರ್ಚಸ್ಸಿಗೆ ಕಳಂಕ ತರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಇತ್ತೀಚೆಗೆ ಮಂಗಳೂರಿನಲ್ಲಿ ಇಂತಹ ಘಟನೆಗಳನ್ನು ನಿಯಂತ್ರಣಕ್ಕೆ ತರಲು ಎಸ್‌ಟಿಎಫ್

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ ಮೇ.೨೭ ರಂದು ನಡೆಯಿತು.  J.C ತರಬೇತುದಾರರು, ರಾಮ ಕುಂಜ ಪ್ರೌಢಶಾಲೆಯ  ಮುಖ್ಯೋಪಾಧ್ಯಾಯ ಸತೀಶ್ ಭಟ್, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಮಾರಸ್ವಾಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂಕೀರ್ಥ್  ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ, ಡಾ. ದಿನೇಶ ಪಿ .ಟಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ Read More »

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ : ಮರಕಡ ಬಳಿ ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಡಗ ಮಿಜಾರಿನ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರಿಯಕರನಾದ ಚಾಲಕ ವೃತ್ತಿಯ ನಿನ್ನೋಡಿಯ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ವಿವಾಹಿತೆ ನಮೀಕ್ಷಾ ಎಂಬವರಿಗೆ ಇಬ್ಬರು ಗಂಡುಮಕ್ಕಳ ಇದ್ದು, ಗಂಡ ಸತೀಶ್ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ನಮೀಕ್ಷಾನ ಪ್ರಿಯಕ ಪ್ರಶಾಂತ್ ಮೂಲತಃ ಬಾಗಲಕೋಟೆಯ ನಿವಾಸಿ. ಆತನಿಗೂ ಮದುವೆಯಾಗಿದೆ ಎಂದು ತಿಳಿದು ಬಂದಿದೆ. ಇನ್‌ಸ್ಟಾಗ್ರಾಂ ಮೂಲಕ ಇವರಿಬ್ಬರ ಪರಿಚಯವಾಗಿ ಅದು ಪ್ರೇಮಸಂಬಂಧಕ್ಕೆ ತಿರುಗಿದೆ.

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು Read More »

error: Content is protected !!
Scroll to Top