ಸುದ್ದಿ

ಎಸ್‌ಎಸ್‌ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಈ ಬಾರಿಯೂ ಬಾಲಕಿಯರದ್ದೇ ಮೇಲ್ಗೈ ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಮತ್ತು ಉತ್ತರ ಕನ್ನಡ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ […]

ಎಸ್‌ಎಸ್‌ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ Read More »

ಈ ಸಲ ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಶೇ.94.1 ವಿದ್ಯಾರ್ಥಿಗಳು ತೇರ್ಗಡೆ

ಮೂವರು ವಿದ್ಯಾರ್ಥಿಗಳಿಗೆ ಭರ್ತಿ 625 ಅಂಕ-ರಾಜ್ಯದಲ್ಲೇ ಟಾಪರ್‌ಗಳು ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು. ಮೂವರು ವಿದ್ಯಾರ್ಥಿಗಳು 625ರಲ್ಲಿ 625

ಈ ಸಲ ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಶೇ.94.1 ವಿದ್ಯಾರ್ಥಿಗಳು ತೇರ್ಗಡೆ Read More »

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್‌ಟೇಪ್‌ ಅಂಟಿಸಿದ ಸಿಬ್ಬಂದಿ

ಸಿಇಟಿ ಪರೀಕ್ಷೆಗೆ ಮೂಗುತಿಯೂ ನಿಷೇಧ ಹಿನ್ನೆಲೆಯಲ್ಲಿ ಕ್ರಮ ಚಿಕ್ಕಮಗಳೂರು : ಚಿಕ್ಕಮಗಳೂರಿನ ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ನೂರಾರು ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರವೇಶ ದ್ವಾರದಲ್ಲೇ ಸಿಬ್ಬಂದಿ ಶಾಕ್ ನೀಡಿದ್ದಾರೆ. ನಗರದ MES ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಮೂಗುತಿ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ ಗಮ್‌ಟೇಪ್ ಅಂಟಿಸಿ ಪರೀಕ್ಷಾ ಕೊಠಡಿಯೊಳಗೆ ಕಳುಹಿಸಿದ್ದಾರೆ. ಮೂಗುತಿ ತೆಗೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯರಿಗೆ ಈ ರೀತಿ ಗಮ್‌ಟೇಪ್ ಅಂಟಿಸಲಾಗಿದೆ. ರಾಜ್ಯಾದ್ಯಂತ ಇಂದು ಮತ್ತು

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್‌ಟೇಪ್‌ ಅಂಟಿಸಿದ ಸಿಬ್ಬಂದಿ Read More »

ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಬಾಂಬ್‌ ದಾಳಿ : ಹಲವರಿಗೆ ಗಾಯ

ಅಪರಿಚಿತ ದುಷ್ಕರ್ಮಿಗಳಿಂದ ಕಚ್ಚಾ ಬಾಂಬ್‌ ದಾಳಿ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಸಲುವಾಗಿ ಚುನಾವಣಾ ಆಯೋಗ ಅಭೂತಪೂರ್ವ ಬಂದೋಬಸ್ತಿನ ವ್ಯವಸ್ಥೆ ಮಾಡಿದ್ದರೂ ಹಿಂಸಾಚಾರದ ಘಟನೆಗಳು ನಡೆಯುತ್ತಿವೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ. ಬಾಂಬ್‌ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ತಿಂಗಳು ಜಿಲ್ಲೆಯ

ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಬಾಂಬ್‌ ದಾಳಿ : ಹಲವರಿಗೆ ಗಾಯ Read More »

ಮೇ 2ರಂದು ಕನ್ಯಾನ ಕುಟ್ಟಿತಡ್ಕ ಕ್ಷೇತ್ರದಲ್ಲಿ ಕೆಂಡಸೇವೆ

ಶ್ರೀ ವಿಷ್ಣುಮೂರ್ತಿ ವಯನಾಟ್‌ ಕುಲವನ್‌ ದೈವಸ್ಥಾನ ವಿಟ್ಲ: ಕನ್ಯಾನದ ಸಮೀಪ ಕುಟ್ಟಿತಡ್ಕದಲ್ಲಿರುವ ಶ್ರೀ ವಿಷ್ಣುಮೂರ್ತಿ ವಯನಾಟ್‌ ಕುಲವನ್‌ ಕ್ಷೇತ್ರದ ವಾರ್ಷಿಕ ಕೆಂಡಸೇವೆ ಮೇ 2ರಂದು ಜರುಗಲಿದೆ. ಬೆಳಗ್ಗೆ 6ಕ್ಕೆ ಮೆಲೇರಿ ರಚನೆ, ಸಂಜೆ 6ಕ್ಕೆ ದೀಪ ಪ್ರಜ್ವಲನೆ, 7ಕ್ಕೆ ವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ 7.30ಕ್ಕೆ ಭಂಡಾರ ತೆಗೆಯುವುದು, 8ಕ್ಕೆ ಮೆಲೇರಿಗೆ ಅಗ್ನಿಸ್ಪರ್ಶ, 10ಕ್ಕೆ ಅನ್ನ ಸಂತರ್ಪಣೆ, ರಾತ್ರಿ 12ರಿಂದ ಕುಳಿಚ್ಚಾಟಂ ದರ್ಶನ, ಮೇ 3ರಂದು ಮುಂಜಾನೆ 4ಕ್ಕೆ ವಿಷ್ಣುಮೂರ್ತಿ ದೈವದ ಕೆಂಡಸೇವೆ, ಬೆಳಗ್ಗೆ 5ಕ್ಕೆ

ಮೇ 2ರಂದು ಕನ್ಯಾನ ಕುಟ್ಟಿತಡ್ಕ ಕ್ಷೇತ್ರದಲ್ಲಿ ಕೆಂಡಸೇವೆ Read More »

ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ : ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ (55) ಮೃತ ವ್ಯಕ್ತಿ. ಏ.20ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ

ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಹಾರ್ಮುಜ್‌ನಲ್ಲಿ ಮತ್ತೆ ಮೂರು ಹಡಗುಗಳ ಮೇಲೆ ಇರಾನ್‌ ದಾಳಿ

ಗನ್‌ಬೋಟ್‌ನಲ್ಲಿ ಬಂದು ಹಡಗುಗಳ ಮೇಲೆ ಗುಂಡಿನ ಸುರಿಮಳೆಗೈದ ಇರಾನ್‌ ಸೇನೆ ಟೆಹ್ರಾನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಾತ್ಕಾಲಿಕ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ಮುಂದುವರಿಸಿರುವಂತೆಯೇ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ ಸೇನೆ ಮತ್ತೆ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಹಾರ್ಮುಜ್‌ ಜಾಗತಿಕ ಸಂಘರ್ಷದ ಕೇಂದ್ರವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾದ ಅತ್ಯಂತ ನಿರ್ಣಾಯಕ

ಹಾರ್ಮುಜ್‌ನಲ್ಲಿ ಮತ್ತೆ ಮೂರು ಹಡಗುಗಳ ಮೇಲೆ ಇರಾನ್‌ ದಾಳಿ Read More »

ಬೆಳ್ತಂಗಡಿ : ಮಗನಿಂದಲೇ ತಂದೆಯ ಕೊಲೆ ಯತ್ನ

ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಮಗನೇ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರದ ಮಿಲ್‌ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ ಸೇವಿಸಿದ್ದರು.

ಬೆಳ್ತಂಗಡಿ : ಮಗನಿಂದಲೇ ತಂದೆಯ ಕೊಲೆ ಯತ್ನ Read More »

ತಣ್ಣೀರುಬಾವಿ ದರೋಡೆ ಕೃತ್ಯದ ಅರೋಪಿ ಸೆರೆ

ಹುಟ್ಟುಹಬ್ಬ ಆಚರಿಸಲು ಬಂದವರನ್ನು ಬೆದರಿಸಿ ದರೋಡೆ ಮಾಡಿದ್ದ ರೌಡಿಶೀಟರ್‌ ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ. ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿಶೀಟ್ ತೆರೆಯಲಾಗಿದೆ. ಏಪ್ರಿಲ್

ತಣ್ಣೀರುಬಾವಿ ದರೋಡೆ ಕೃತ್ಯದ ಅರೋಪಿ ಸೆರೆ Read More »

ಇಂದು ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ

ಪಶ್ಚಿಮ ಬಂಗಾಳದಲ್ಲಿ ಶಾಂತಿಯುತ ಮತದಾನಕ್ಕಾಗಿ ಅಭೂತಪೂರ್ವ ಬಂದೋಬಸ್ತು ನವದೆಹಲಿ: ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಎಂಕೆ-ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮತ್ತು ಎಐಎಡಿಎಂಕೆ – ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್

ಇಂದು ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ Read More »

error: Content is protected !!
Scroll to Top