ಸುದ್ದಿ

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ

ಮೈಸೂರು: ರಾಜ್ಯ ಸರ್ಕಾರ ಆಯೋಜಿಸಿರುವ ದಸರಾ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ಸುತ್ತಮುತ್ತ ನಡೆದ ರಾಜಕೀಯ ತೀವ್ರ ಬೇಸರ ಮೂಡಿಸಿದೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ. ಈ ರೀತಿಯ ಬೆಳವಣಿಗೆ ಕಳವಳಕಾರಿಯಾಗಿದೆ. ಆದ್ದರಿಂದ ಪತ್ರ ಬರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ವರ್ಷದ ನಾಡಹಬ್ಬ (ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆ ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎಂಬಂತಹ ಸಂವೇದನಾರಹಿತ ಹೇಳಿಕೆ ಅನಗತ್ಯವಾಗಿತ್ತು. ಅದು ಹಿಂದೂ ದೇವಸ್ಥಾನ ಅಲ್ಲದಿದ್ದರೆ, ಅದನ್ನು ಎಂದಿಗೂ […]

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

ಕೊಡಗು ಮೂಲದ ರೋಷನ್ ಜೊತೆ ನೆರವೇರಿದ ವಿವಾಹ ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಮಂಗಳೂರು ಮೂಲದ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕಿರುತೆರೆಯಲ್ಲಿ ಆಕರ್ಷಕ ನಿರೂಪಣೆಯಿಂದ ಜನಪ್ರಿಯತೆ ಗಳಿಸಿರುಜವ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10.56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ Read More »

ಬಂಟ್ವಾಳ : ತಲವಾರಿನಿಂದ ಕೊಲ್ಲಲು ಯತ್ನಿಸಿದ್ದಾರೆ ಎಂದು ಸುಳ್ಳು ದೂರು ನೀಡಿದಾತ ಅರೆಸ್ಟ್‌

ಸಾರ್ವಜನಿಕ ಶಾಂತಿ ಕದಡುವ ಉದ್ದೇಶದಿಂದ ಕೊಲೆಯತ್ನದ ಕಥೆ ಕಟ್ಟಿದ್ದ ಆರೋಪಿ ಬಂಟ್ವಾಳ: ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 1 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ

ಬಂಟ್ವಾಳ : ತಲವಾರಿನಿಂದ ಕೊಲ್ಲಲು ಯತ್ನಿಸಿದ್ದಾರೆ ಎಂದು ಸುಳ್ಳು ದೂರು ನೀಡಿದಾತ ಅರೆಸ್ಟ್‌ Read More »

ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ

ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿ Read More »

ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ; ಮೂವರ ಸಾವು

ಕಾಸರಗೋಡು: ಒಂದೇ ಕುಟುಂಬದ ನಾಲ್ವರು ಆ್ಯಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಈ ಪೈಕಿ ಮೂವರು ಮೃತಪಟ್ಟು ಓರ್ವ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾದ ಘಟನೆ ಕಾಸರಗೋಡು ಸಮೀಪ ಇಂದು ಮುಂಜಾನೆ ಸಂಭವಿಸಿದೆ. ಕಾಸರಗೋಡಿನ ಅಂಬಲತ್ತರ ಪಾರಕ್ಕಾಲಯಿಯ ಗೋಪಿ (60), ಪತ್ನಿ ಇಂದಿರಾ (57) ಮತ್ತು ಪುತ್ರ ರಂಜೇಶ್‌ (34) ಮೃತಪಟ್ಟವರು. ಗಂಭೀರ ಸ್ಥಿತಿಯಲ್ಲಿದ್ದ ಇನ್ನೋರ್ವ ಪುತ್ರ ರಾಕೇಶ್‌ನನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ನಾಲ್ವರನ್ನು ಆಸ್ಪತ್ರೆಗೆ ತಲಪಿದರೂ ಮೂವರು ಮೃತಪಟ್ಟರು ಎಂದು ತಿಳಿದು

ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ; ಮೂವರ ಸಾವು Read More »

ಬದಲಾಗಲಿದೆ ಚಾರ್ಮಾಡಿ ಘಾಟಿ ರಾತ್ರಿ ಸಂಚಾರ ನಿಯಮ

ರಾತ್ರಿ ಹೊತ್ತು ಒಂಟಿ ವಾಹನ ಸಂಚಾರಕ್ಕೆ ನಿರ್ಬಂಧ ಮಂಗಳೂರು: ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿಯಮ ಬದಲಾವಣೆ ಮಾಡಲಾಗಿದೆ. ಅಕ್ರಮವಾಗಿ ಮರಳು ಸಾಗಾಟ, ಗೋ ಸಾಗಾಟ ಮತ್ತು ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುವುದು ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಯನ್ನು ಬಿಗುಗೊಳಿಸಲು ನಿರ್ಧರಿಸಲಾಗಿದೆ. ಕೊಟ್ಟಿಗೆಹಾರ ಬಳಿ ಇರುವ ಪೊಲೀಸ್ ಚೆಕ್‌ಪೋಸ್ಟ್​ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರೂ ಇನ್ನುಮುಂದೆ ತಪಾಸಣೆ

ಬದಲಾಗಲಿದೆ ಚಾರ್ಮಾಡಿ ಘಾಟಿ ರಾತ್ರಿ ಸಂಚಾರ ನಿಯಮ Read More »

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮೂಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ,

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಚಾಮುಂಡಿ ಬೆಟ್ಟ ವಕ್ಫ್‌ ಆಸ್ತಿಯೇ? : ಡಿ.ಕೆ.ಶಿವಕುಮಾರ್‌ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ಕಾಂಗ್ರೆಸ್‌ ಹೈಕಮಾಂಡ್‌ ಮೆಚ್ಚಿಸಲು ಹಿಂದೂ ವಿರೋಧಿ ಹೇಳಿಕೆ ನೀಡುತ್ತಿರುವ ಡಿಕೆಶಿ ಎಂದು ಆರೋಪ ಬೆಂಗಳೂರು: ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿಕೆ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಆರ್‌ಎಸ್‌ಎಸ್‌ ಗೀತೆ ಹಾಡಿ ಕಾಂಗ್ರೆಸ್‌ ಹೈಕಾಂಡ್‌ ಕೆಂಗಣ್ಣಿಗೆ ಗುರಿಯಾಗಿರುವ ಡಿಕೆಶಿ ಈಗ ಹೈಕಮಾಂಡನ್ನು ಮೆಚ್ಚಿಸಲು ಹಿಂದೂಗಳನ್ನು ಅಣಕಿಸುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ 3500ಕ್ಕೂ ಹೆಚ್ಚು ದೇವಸ್ಥಾನಗಳು ಹಿಂದೂಗಳ ಆಸ್ತಿ. ಸರ್ಕಾರದ ಆಸ್ತಿ ಎಂದರೆ ಮುಜುರಾಯಿ ಆಸ್ತಿ, ಮುಜುರಾಯಿ ಆಸ್ತಿಯಾದರೆ ಅದು ಹಿಂದೂಗಳ

ಚಾಮುಂಡಿ ಬೆಟ್ಟ ವಕ್ಫ್‌ ಆಸ್ತಿಯೇ? : ಡಿ.ಕೆ.ಶಿವಕುಮಾರ್‌ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ Read More »

ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ

ದೂರು ಹಿಂಪಡೆಯುತ್ತೇನೆ ಎಂದು ಗೋಗರೆದ ಸುಜಾತಾ ಭಟ್‌ ಧರ್ಮಸ್ಥಳ : ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಬುರುಡೆ ಬಿಟ್ಟ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿರುದ್ಧ ವಿಶೇಷ ತನಿಖಾ ತಂಡ ಹೊಸ ಸೆಕ್ಷನ್‌ಗಳನ್ನು ಹಾಕಿದೆ.ಇದರ ಪ್ರಕಾರ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನೇ ಎ-1 ಆಗಿದ್ದಾನೆ. ಇದು ಪಿತೂರಿಯಲ್ಲದೆ ಮತ್ತೋನೂ ಅಲ್ಲ, ಸುಳ್ಳು ಮಾಹಿತಿಯನ್ನು ಕೊಟ್ಟಿದ್ದರಿಂದ ಆತನನ್ನು ಬಂಧಿಸಲಾಗಿದೆ ಎಂದು ಕೋರ್ಟಿಗೆ ಎಸ್‌ಐಟಿ ಮಾಹಿತಿ ಕೊಟ್ಟಿದೆ. ಇದು ಕಪೋಲಕಲ್ಪಿತ ಷಡ್ಯಂತ್ರ ಅಂತಲೂ ಹೇಳಿರುವ ಎಸ್‌ಐಟಿ ಬಿಎನ್‌ಎಸ್ ಸೆಕ್ಷನ್ 336, 227 ರಿಂದ 238ರ

ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ Read More »

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ

ಶೂಟಿಂಗ್‌ ಮಾಡಿಟ್ಟಿದ್ದ 25ಕ್ಕೂ ಹೆಚ್ಚು ವಿಡಿಯೋಗಳು ಎಸ್‌ಐಟಿ ವಶ ಧರ್ಮಸ್ಥಳ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಶುರುವಾದ ಎಸ್‌ಐಟಿಯ ಶೋಧ ಕಾರ್ಯಾಚರಣೆ ತಡರಾತ್ರಿ ದಾಟಿ ನಸುಕಿನ 2.30ರವರೆಗೂ ಮುಂದುವರಿದಿದೆ. ವಿಡಿಯೋ ರೆಕಾರ್ಡಿಂಗ್, ಫೋನ್ ಮಾಹಿತಿ ಹಾಗೂ ಹಲವು ಮಹತ್ವದ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬುರುಡೆ ಗ್ಯಾಂಗ್ ಮಾಡಿದ ಷಡ್ಯಂತ್ರದ ಮಹತ್ವದ ಮಾಹಿತಿಗಳು ಎಸ್‌ಐಟಿಗೆ ಸಿಕ್ಕಿದೆ. ಮುಖ್ಯವಾಗಿ 25ಕ್ಕೂ ಅಧಿಕ ವಿಡಿಯೋಗಳು

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ Read More »

error: Content is protected !!
Scroll to Top