ಸುದ್ದಿ

ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ

ರಸ್ತೆಗಿಳಿಯದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬಂದ್‌ ಆರಂಭಿಸಿದ್ದಾರೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಸಾರಿಗೆ ನೌಕರರು ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಮುಂದಾಗಿದೆ. ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಸಮಸ್ಯೆಗಳು ಶುರುವಾಗಿವೆ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆ-ಕಾಲೇಜುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ […]

ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ Read More »

ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಯಂಗ್‌ ಇಂಡಿಯಾ : ಗಿಲ್‌ ಪಡೆ ಸಾಧನೆಗೆ ಭರಪೂರ ಮೆಚ್ಚುಗೆ

ಸೋಲಿನ ದವಡೆಯಿಂದ ಗೆಲುವನ್ನು ಕಸಿದು ಬೀಗಿದ ಟೀಮ್‌ ಇಂಡಿಯಾ–ಭಾರತ ಮಾಡಿತು ಹಲವು ಹೊಸ ದಾಖಲೆ ಲಂಡನ್‌: ಓವಲ್‌ನಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲಂಡ್ ವಿರುದ್ಧ ಭಾರತ 6 ರನ್‌ಗಳಿಂದ ರೋಚಕ ಗೆಲುವು ಸಾಧಿಸುವ ಮೂಲಕ ಬರೋಬ್ಬರಿ 77 ವರ್ಷಗಳ ನಂತರ ವಿದೇಶಿ ನೆಲದಲ್ಲಿ ಐದು ಪಂದ್ಯಗಳ ಸರಣಿಯ ಅಂತಿಮ ಪಂದ್ಯವನ್ನು ಗೆದ್ದ ದಾಖಲೆ ಮಾಡಿದೆ. ಈ ಗೆಲುವಿನೊಂದಿಗೆ ಭಾರತ 2-2ರ ಸಮಬಲದೊಂದಿಗೆ ಸರಣಿಯನ್ನು ಪೂರ್ಣಗೊಳಿಸಿದೆ. ಈ ಟೆಸ್ಟ್‌ ಸರಣಿ ಭಾರತದ ಪಾಲಿಗೆ ಸ್ಮರಣೀಯವಾಗಿ

ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಯಂಗ್‌ ಇಂಡಿಯಾ : ಗಿಲ್‌ ಪಡೆ ಸಾಧನೆಗೆ ಭರಪೂರ ಮೆಚ್ಚುಗೆ Read More »

ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ

ಪುತ್ತೂರು: ಏಳ್ಮುಡಿಯ ಪ್ರಭು ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಪ್ರೇರಣಾ ಸಂಸ್ಥೆಯಲ್ಲಿ ಖಾಲಿ ಇರುವ ಕಚೇರಿ ಸಿಬ್ಬಂದಿ ಹುದ್ದೆಗೆ ಪದವಿ ವಿದ್ಯಾರ್ಹತೆ ಹೊಂದಿರುವ, ಅಕೌಂಟಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇರುವ ಕಂಪ್ಯೂಟರ್ ಬಲ್ಲ, ಕನ್ನಡ ಟೈಪಿಂಗ್ ತಿಳಿದಿರುವ ಅಭ್ಯರ್ಥಿ ಬೇಕಾಗಿದ್ದಾರೆ. ಆಸಕ್ತರು info@myprerana.in ಇ ಮೇಲ್ ಐಡಿ‌ಗೆ ತಮ್ಮ ಬಯೋಡಟಾ ಕಳುಹಿಸಬಹುದಾಗಿದೆ‌. ಹೆಚ್ಚಿನ ಮಾಹಿತಿಗೆ:‪+918904877721‬, +917204977721‬ ನಂಬರ್ ಗೆ ಸಂಪರ್ಕಿಸಬಹುದು

ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ Read More »

ಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆ. 5 ರಂದು ಅನಿರ್ಧಿಷ್ಟಾವಧಿ ಮುಷ್ಕರ‌ ನಡೆಸಲು ಕರೆಕೊಟ್ಟಿದ್ದಾರೆ. ಇದರ ನಡುವೆಯೇ ಸಾರಿಗೆ ಇಲಾಖೆ ನೌಕರರಿಗೆ ಎಚ್ಚರಿಕೆ ಕೊಟ್ಟಿದ್ದು, ಆ. 4 ರಿಂದಲೇ ಅನ್ವಯವಾಗುವಂತೆ ಸಾರಿಗೆ ನೌಕರರ ರಜೆಯನ್ನು ಅನಿರ್ಧಿಷ್ಚಾವಧಿ ವರೆಗೆ ರದ್ದು ಮಾಡಿ ಸುತ್ತೋಲೆ ಹೊರಡಿಸಿದೆ. ಆಯಾ ನಿಗಮದ ಅಧಿಕಾರಿಗಳಿಗೆ ಈ ಸಂಬಂಧ ಸೂಚನೆ ನೀಡಿದೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರವೇ ರಜೆ ನೀಡುವಂತೆ ಆದೇಶಿಸಲಾಗಿದೆ. ಅಗತ್ಯವಿದ್ದಲ್ಲಿ ವಾರದ ರಜೆಯನ್ನು ‌ಸಹ ರದ್ದು

ಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ Read More »

ಯತ್ನಾಳ್ ವಿರುದ್ಧದ ಮಾನನಷ್ಟ ‌ಮೊಕದ್ದಮೆ ರದ್ದು ಮಾಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಚಿವ ಶಿವಾನಂದ ಪಾಟೀಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಪೀಠ ನ್ಯಾಯಾಲಯದಲ್ಲಿ ರಾಜಕೀಯ ಬೇಡ, ಅದು ಹೊರಗಡೆ ಇರಲಿ. ‌ಇದನ್ನು ಈ ಹಿಂದೆಯೂ ನ್ಯಾಯಾಲಯ ಹಲವರಿಗೆ ಹೇಳಿದೆ ಎಂದು ತಿಳಿಸಿದೆ. ಕಳೆದ ವರ್ಷದ ಸೆಪ್ಟೆಂಬರ್ 28 ರಂದು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸದ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧದ ಮಾನನಷ್ಟ‌

ಯತ್ನಾಳ್ ವಿರುದ್ಧದ ಮಾನನಷ್ಟ ‌ಮೊಕದ್ದಮೆ ರದ್ದು ಮಾಡಿದ ಸುಪ್ರೀಂ ಕೋರ್ಟ್ Read More »

ಅಕ್ರಮವಾಗಿ ಶೇಖರಿಸಿಟ್ಟ ಗಾಂಜಾ ವಶಪಡಿಸಿಕೊಂಡ ಪೊಲೀಸರು: ಆರೋಪಿ ಪರಾರಿ

ಬೆಳ್ತಂಗಡಿ: ಕಟ್ಟಡವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ಗಾಂಜಾ‌ವನ್ನು ಪುಂಜಾಲಕಟ್ಟೆ ‌ಪೊಲೀಸರು ಪತ್ತೆ‌ಹಚ್ಚಿದ್ದು, ಆರೋಪಿ ಪರಾರಿಯಾಗಿದ್ದಾನೆ. ಈ ಪ್ರಕರಣವನ್ನು ಸದ್ಯ ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಲಾಗಿದೆ. ಆರೋಪಿಯನ್ನು ಮದಡ್ಕದ ಚಿಲಿಂಬಿ ನಿವಾಸಿ ರಫೀಕ್ ಎಂಬಾತ ಪರಾರಿಯಾಗಿದ್ದಾನೆ. ಆತನ ಮನೆಯಲ್ಲಿ 160 ಗ್ರಾಂ ಗಾಂಜಾ ಶೇಖರಿಸಿ ಇಡಲಾಗಿತ್ತು. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿದ್ದು ದಾಳಿ ನಡೆಸಿದ್ದಾರೆ. ಆರೋಪಿ ರಫೀಕ್ ವಿರುದ್ಧ ಈ ಹಿಂದೆಯೂ ಹಲವಾರು ಗಾಂಜಾ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಇದೆ.

ಅಕ್ರಮವಾಗಿ ಶೇಖರಿಸಿಟ್ಟ ಗಾಂಜಾ ವಶಪಡಿಸಿಕೊಂಡ ಪೊಲೀಸರು: ಆರೋಪಿ ಪರಾರಿ Read More »

ನೀವು ನಿಜವಾದ ಭಾರತೀಯನೇ ಆಗಿದ್ದರೆ… : ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ಛೀಮಾರಿ

ಭಾರತ್‌ ಜೋಡೊ ಯಾತ್ರೆ ಸಂದರ್ಭ ನೀಡಿದ ಹೇಳಿಕೆಗೆ ಸರ್ವೋಚ್ಚ ನ್ಯಾಯಾಲಯದಿಂದ ತೀಕ್ಷ್ಣ ತರಾಟೆ ನವದೆಹಲಿ: ಮಾನನಷ್ಟ ಪ್ರಕಣಣವೊಂದರಲ್ಲಿ ಸುಪ್ರೀಂ ಕೋರ್ಟ್‌ ಇಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿಯನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದ್ದು, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಹೇಳುತ್ತಿರಲಿಲ್ಲ ಎಂದು ಛೀಮಾರಿ ಹಾಕಿದೆ. ಇದೇ ವೇಳೆ ಈ ಮಾನನಷ್ಟ ಮೊಕದ್ದಮೆಗೆ ತಡೆ ನೀಡಿದೆ. ಭಾರತದ 2,000 ಕಿ.ಮೀ. ನೆಲವನ್ನು ಚೀನ ಕಬಳಿಸಿದೆ ಎಂಬ ಹೇಳಿಕೆಗೆ ಸಂಬಂಧಿಸಿ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ವಿಚಾರಣೆ ವೇಳೆ ಸುಪ್ರೀಂ

ನೀವು ನಿಜವಾದ ಭಾರತೀಯನೇ ಆಗಿದ್ದರೆ… : ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ಛೀಮಾರಿ Read More »

ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು

74 ಮಂದಿ ನಾಪತ್ತೆ, 10 ಜನರ ರಕ್ಷಣೆ ಸನಾ: ಯೆಮೆನ್ ಕರಾವಳಿಯಲ್ಲಿ ಭಾನುವಾರ 154 ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಜನರು ಮೃತಪಟ್ಟಿದ್ದಾರೆ. 74 ಮಂದಿ ನಾಪತ್ತೆಯಾಗಿದ್ದು, 10 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಈಗಲೂ ನಡೆಯುತ್ತಿದೆ. ರಕ್ಷಿಸಲ್ಪಟ್ಟ 10 ಜನರಲ್ಲಿ ಒಂಬತ್ತು ಮಂದಿ ಇಥಿಯೋಪಿಯನ್ ಪ್ರಜೆಗಳು ಮತ್ತು ಒಬ್ಬರು ಯೆಮೆನ್ ಪ್ರಜೆ ಸೇರಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪ್ರಾಂತ್ಯದ ಆರೋಗ್ಯ ಅಧಿಕಾರಿ ಅಬ್ದುಲ್ ಖಾದಿರ್ ಬಜಮೀಲ್ ಹೇಳಿದ್ದಾರೆ. ರಕ್ಷಣಾ ತಂಡಗಳು ನಾಪತ್ತೆಯಾದವರಿಗಾಗಿ ಹುಡುಕಾಟ

ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು Read More »

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ನಿಧನ

ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್‌ 81ನೇ ವಯಸ್ಸಿನಲ್ಲಿ ಇಂದು ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ. ತಂದೆಯ ನಿಧನದ ಮಾಹಿತಿಯನ್ನು ಪುತ್ರ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ನಿಧನ Read More »

ಪುತ್ತೂರು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025

ಪುತ್ತೂರು: ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ದರ್ಬೆ ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ನಡೆಸಲಾಯಿತು.ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ರಾಷ್ಟ್ರ ಧ್ವಜ ಎತ್ತಿ ಹಿಡಿದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ನಗರ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಶಿಕಲಾ, ನಯ ಚಪ್ಪಲ್ ಬಜಾರ್ ಮಾಲಕ ಅಬ್ದುಲ್ ರಫೀಕ್, ಪ್ರಥಮ ದರ್ಜೆ ಗುತ್ತಿಗೆದಾರ ಜುನೈದ್, ಪುತ್ತೂರು ನಗರ ಠಾಣೆ

ಪುತ್ತೂರು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025 Read More »

error: Content is protected !!
Scroll to Top