ಸುದ್ದಿ

ಕೋಡಿಮಠದ ಸ್ವಾಮೀಜಿಯ ಸರ, ಉಂಗುರ ಕದ್ದ ಕಳ್ಳ ಸೆರೆ

ರೈಲಿನಲ್ಲಿ ಪ್ರಯಾಣಿಸುವಾಗ ಬ್ಯಾಗಿನಿಂದ ಕಳವಾಗಿದ್ದ ಆಭರಣ ಹಾಸನ : ದೇಶ-ಕಾಲದ ಬಗ್ಗೆ ಭವಿಷ್ಯ ನುಡಿದು ಖ್ಯಾತರಾಗಿರುವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಚಿನ್ನ ಮತ್ತು ನಗದು ಕಳ್ಳತನ ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಏಳು ವರ್ಷಗಳ ಹಿಂದೆ ಈತ ಕಳ್ಳತನ ನಡೆದಿತ್ತು. ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್ ಎಂಬಾತ ಆರೋಪಿ. 2018ರಲ್ಲಿ ಸ್ವಾಮೀಜಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಲೆದರ್ ಬ್ಯಾಗ್‌ನಲ್ಲಿ 250 […]

ಕೋಡಿಮಠದ ಸ್ವಾಮೀಜಿಯ ಸರ, ಉಂಗುರ ಕದ್ದ ಕಳ್ಳ ಸೆರೆ Read More »

ಮದುವೆ ಮಾಡಿಸದ ದ್ವೇಷದಲ್ಲಿ ತಾಯಿಯ ಕೊಲೆ : ಪೊಲೀಸರ ಬಳಿ ಬಾಯಿಬಿಟ್ಟ ಆರೋಪಿ

ಮಂಜೇಶ್ವರ ವರ್ಕಾಡಿಯಲ್ಲಿ ತಾಯಿಯನ್ನು ದಹಿಸಿ ಕೊಂದ ಪ್ರಕರಣ ಕಾಸರಗೋಡು : ತನಗೆ ಮದುವೆ ಮಾಡದ್ದಕ್ಕಾಗಿ ಮತ್ತು ಆಸ್ತಿಗಾಗಿ ತಾಯಿಯನ್ನು ಕೊಂದಿರುವುದಾಗಿ ವರ್ಕಾಡಿ ಕೊಲೆ ಪ್ರಕರಣದ ಆರೋಪಿ ಮೆಲ್ವಿನ್‌ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ವರ್ಕಾಡಿ ನಲ್ಲೆಂಗಿಯ ಹಿಲ್ಡಾ ಮೊಂತೇರೋ (59) ಅವರನ್ನು ಪುತ್ರನೇ ಬೆಂಕಿ ಹಚ್ಚಿ ಜಿಂವಂತ ಸುಟ್ಟುಕೊಂದ ಪ್ರಕರಣ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಆರೋಪಿ ತನ್ನ ಸೋದರತ್ತೆಯನ್ನೂ ಇದೇ ಮಾದರಿ ಸಾಯಿಸಲು ಯತ್ನಿಸಿದ್ದ. ಅವರು ತಪ್ಪಿಸಿಕೊಂಡಿದ್ದರು. ಆರೋಪಿಯನ್ನು ಪೊಲೀಸರು ಬೈಂದೂರಿನಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಬೆಚ್ಚಿಬೀಳಿಸುವ ಮಾಹಿತಿ

ಮದುವೆ ಮಾಡಿಸದ ದ್ವೇಷದಲ್ಲಿ ತಾಯಿಯ ಕೊಲೆ : ಪೊಲೀಸರ ಬಳಿ ಬಾಯಿಬಿಟ್ಟ ಆರೋಪಿ Read More »

ಚಾಮರಾಜನಗರದಲ್ಲಿ ಇನ್ನೊಂದು ಹುಲಿ ಸಾವು

4-5 ವರ್ಷದ ಹೆಣ್ಣು ಹುಲಿಯ ಕಳೇಬರ ಪತ್ತೆ ಬೆಂಗಳೂರು: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಹುಲಿಗಳ ಹತ್ಯಾಕಾಂಡ ಹಸಿರಾಗಿರುವಾಗಲೇ ರಾಜ್ಯದಲ್ಲಿ ಇನ್ನೊಂದು ಹುಲಿ ಸಾವನ್ನಪ್ಪಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. 4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಇಂದು ವೈದ್ಯರು ಹುಲಿ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಐದು ಹುಲಿಗಳನ್ನು ವಿಷವಿಕ್ಕಿ ಸಾಯಿಸಿದ ಪ್ರಕರಣ

ಚಾಮರಾಜನಗರದಲ್ಲಿ ಇನ್ನೊಂದು ಹುಲಿ ಸಾವು Read More »

ಇನ್‌ಕಮ್‌ ಟ್ಯಾಕ್ಸ್‌ ರಿಟರ್ನ್ಸ್‌ ಸುಳ್ಳು ಮಾಹಿತಿ ನೀಡಿದರೆ ಶೇ.200 ದಂಡ

ಆದಾಯ ತೆರಿಗೆ ಸಲ್ಲಿಕೆಗೆ ಹೊಸ ನಿಯಮ ಜಾರಿ ನವದೆಹಲಿ : ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಗೆ ಹೊಸ ನಿಯಮ ಜಾರಿಯಾಗಿದ್ದು, ಇನ್ನು ಮುಂದೆ ರಿಟರ್ನ್ಸ್‌ ಸಲ್ಲಿಸುವಾಗ ತಪ್ಪು ಮಾಹಿತಿ ನೀಡುವ ಅಥವಾ ಆದಾಯವನ್ನು ಮರೆಮಾಚುವ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಕಠಿಣ ಎಚ್ಚರಿಕೆ ನೀಡಿದೆ. ತೆರಿಗೆದಾರರು ಸುಳ್ಳು ಮಾಹಿತಿಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ. 200ರವರೆಗೆ ದಂಡ, ವಾರ್ಷಿಕ ಶೇ. 24ವರೆಗೆ ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೇ ಸೆಕ್ಷನ್ 276ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಅವಕಾಶವೂ

ಇನ್‌ಕಮ್‌ ಟ್ಯಾಕ್ಸ್‌ ರಿಟರ್ನ್ಸ್‌ ಸುಳ್ಳು ಮಾಹಿತಿ ನೀಡಿದರೆ ಶೇ.200 ದಂಡ Read More »

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ

ತಾಳಧ್ವಜ ರಥ ರಥ ಎಳೆಯಲು ತಳ್ಳಾಟ ನಡೆದಾಗ ಅವಘಡ ಭುವನೇಶ್ವರ : ಒಡಿಶಾದ ಪುರಿಯ ಜಗತ್ಪ್ರಸಿದ್ಧ ವಾರ್ಷಿಕ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮೃತಪಟ್ಟು 500ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಲಭದ್ರನ ರಥವನ್ನು ಎಳೆಯಲು ಭಾರಿ ಜನಸಮೂಹ ಮುಂದಕ್ಕೆ ಬಂದಾಗ ಕಾಲ್ತುಳಿದಂಥ ಪರಿಸ್ಥಿತಿ ತಲೆದೋರಿದೆ. ಶತಮಾನಗಳಷ್ಟು ಹಳೆಯ ಸಂಪ್ರದಾಯದ ಭಾಗವಾಗಿ ಎಳೆಯುವ ಮೂರು ಭವ್ಯ ರಥಗಳಲ್ಲಿ ಒಂದಾದ ತಾಳಧ್ವಜ ರಥವನ್ನು ಎಳೆಯುವ ಸಮಯದಲ್ಲಿ ಈ ಕಾಲ್ತುಳಿತದ ರೀತಿಯ ಘಟನೆ ಸಂಭವಿಸಿದೆ. ಲಕ್ಷಾಂತರ ಭಕ್ತರನ್ನು

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ Read More »

ಕೆನರಾ ಬ್ಯಾಂಕ್‌ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್‌

ಬ್ಯಾಂಕ್‌ ಮ್ಯಾನೇಜರ್‌ ಕಳ್ಳರ ಗ್ಯಾಂಗಿನ ಲೀಡರ್‌ ; ಸಿನಿಮೀಯ ರೀತಿಯಲ್ಲಿ ಪ್ಲ್ಯಾನ್‌ ಬೆಂಗಳೂರು : ವಿಜಯಪುರ ಜಿಲ್ಲೆಯ ಬಸನವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮೇ 25ರಂದು ನಸುಕಿನ ಹೊತ್ತು ನಡೆದ 59 ಕೆಜಿ ಬಂಗಾರ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಕೊನೆಗೂ ಸಫಲರಾಗಿದ್ದಾರೆ. ಆಘಾತಕಾರಿ ವಿಚಾರವೆಂದರೆ ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಈ ಕಳ್ಳತನದ ರೂವಾರಿ. ಬ್ಯಾಂಕಿನಿಂದ ಮೇ 25ರಂದು ನಸುಕಿನ ಹೊತ್ತು 58.975.94 ಕೆಜಿ ಚಿನ್ನಾಭರಣಗಳು ಮತ್ತು 5.20 ಲಕ್ಷ ನಗದು ಕಳ್ಳತನವಾಗಿತ್ತು.

ಕೆನರಾ ಬ್ಯಾಂಕ್‌ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್‌ Read More »

ಕಾಂಟಾ ಲಗಾ…ಖ್ಯಾತಿಯ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ

ಪುನೀತ್‌ ರಾಜ್‌ಕುಮಾರ್‌ ಚಿತ್ರಗಳಲ್ಲೂ ನಟಿಸಿದ್ದ ನಟಿ ಮುಂಬಯಿ: ಕಾಂಟಾ ಲಗಾ… ಹಾಡಿಗೆ ಮಾದಕವಾಗಿ ಕುಣಿದು ಆಲ್ಬಂ ಸಾಂಗ್‌ ಜಮಾನದಲ್ಲಿ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿನಲ್ಲೂ ಮಸ್ತ್‌ ಆಗಿ ಕುಣಿದಿದ್ದರು. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು

ಕಾಂಟಾ ಲಗಾ…ಖ್ಯಾತಿಯ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ Read More »

ಐದು ಹುಲಿಗಳ ಸಾವು : ಐವರು ಶಂಕಿತರ ವಶ

ಗ್ರಾಮಸ್ಥರ ವಿಚಾರಣೆ; ಗೋವಿನ ಮಾಲೀಕನ ಹುಡುಕಾಟ ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ

ಐದು ಹುಲಿಗಳ ಸಾವು : ಐವರು ಶಂಕಿತರ ವಶ Read More »

ಭಾರಿ ಮಳೆಗೆ ಕುಸಿದ ಕಟ್ಟಡ : ಮೂವರು ಕಾರ್ಮಿಕರು ಸಾವು

ಇಬ್ಬರಿಗೆ ಗಂಭೀರ ಗಾಯ; 12 ಮಂದಿ ಪಾರು ತೃಶ್ಶೂರು: ಕೇರಳದ ತೃಶ್ಶೂರ್ ಜಿಲ್ಲೆಯ ಕೊಡಕರ ಪಟ್ಟಣದಲ್ಲಿ 40 ವರ್ಷ ಹಳೆಯ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ದುರ್ಮರಣ ಹೊಂದಿರುವ ದುರ್ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ರೂಪೆಲ್, ರಾಹುಲ್ ಮತ್ತು ಅಲಿಮ್ ಎಂದು ಗುರುತಿಸಲಾಗಿದೆ. ಅವಶೇಷಗಳಿಂದ ಅವರ ಶವಗಳನ್ನು ಹೊರತೆಗೆದುಕೊಳ್ಳಲಾಗಿದೆ. ಕಟ್ಟಡವು ಕೆಂಪುಕಲ್ಲಿನಿಂದ ನಿರ್ಮಿತವಾಗಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಗೆ ಪೂರ್ಣವಾಗಿ ಕುಸಿದಿದೆ. ಈ ಕಟ್ಟಡದಲ್ಲಿ

ಭಾರಿ ಮಳೆಗೆ ಕುಸಿದ ಕಟ್ಟಡ : ಮೂವರು ಕಾರ್ಮಿಕರು ಸಾವು Read More »

error: Content is protected !!
Scroll to Top