ಸುದ್ದಿ

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು

ತ್ಯಾಜ್ಯ ತೈಲ ಘಟಕದಲ್ಲಿ ಸೋರಿಕೆಯಾದ ವಿಷಾನಿಲ ಮಂಗಳೂರು: ಸುರತ್ಕಲ್‌ ಸಮೀಪವಿರುವ ಕೇಂದ್ರ ಸ್ವಾಮ್ಯದ ಎಂಆರ್‌ಪಿಎಲ್‌ನ ಒಂದು ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಇನ್ನೊಬ್ಬ ಅಸ್ವಸ್ಥರಾದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಎಂಆರ್‌ಪಿಎಲ್‌ನ OM‌‌‌‌&S ತ್ಯಾಜ್ಯ ತೈಲ ಸಂಗ್ರಹ ಘಟಕದಲ್ಲಿ ಇಂದು ಬೆಳಗ್ಗೆ ಅನಿಲ ಸೋರಿಕೆಯಾಗಿದೆ. ಘಟಕದಲ್ಲಿ ಲೆವೆಲ್‌ ಪರಿಶೀಲನೆ ಮಾಡಲು ತೆರಳಿದ ಕಾರ್ಮಿಕ ವಾಪಸಾಗದೆ ಇರುವುದನ್ನು ನೋಡಿ ಇನ್ನಿಬ್ಬರು ಅಲ್ಲಿಗೆ ತೆರಳಿದ್ದಾರೆ. ಮೂವರೂ ಅಲ್ಲಿ ಅನಿಲ ಸೋರಿಕೆಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. […]

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು Read More »

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ

ಗುಡ್ಡ ಕುಸಿತದ ತನಿಖೆ ಮಾಡುತ್ತಿದ್ದಾಗ ಪೊಲೀಸರ ಕಣ್ಣಿಗೆ ಬಿದ್ದ ತಾಯಿ-ಮಕ್ಕಳು ಕಾರವಾರ: ವಿದೇಶ ಮಹಿಳೆಯೊಬ್ಬಳು ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದೊಳಗೆ ಗುಹೆಯೊಳಗೆ ವಾಸ ಮಾಡುತ್ತಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿಉದೆ. ಹಿಂದೂ ಧರ್ಮದ ಕಡೆಗೆ ವಾಲಿದ ರಷ್ಯಾ ಮೂಲದ ಮಹಿಳೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದ ಗುಹೆಯಲ್ಲಿ ವಾಸವಿದ್ದಳು. ಇವರನ್ನು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ಮೋಹಿ (40) ತನ್ನ ಪುಟ್ಟ ಮಕ್ಕಳಾದ ಪ್ರೆಯಾ (6) ಹಾಗೂ ಅಮಾ

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ Read More »

ವೈದ್ಯನಿಂದಲೇ ಡ್ರಗ್ಸ್‌ ದಂಧೆ : ಬೃಹತ್‌ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಡಾಕ್ಟರ್‌ ಮಂಗಳೂರು: ಕೆಲದಿನಗಳ ಹಿಂದೆಯಷ್ಟೇ ಉಗ್ರನಿಗೆ ನೆರವು ನೀಡಿದ ಆರೋಪದಲ್ಲಿ ಮನೋವ್ಯದ್ಯ ಸೆರೆಯಾಗಿದ್ದ. ಇದೀಗ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸಿದ ಆರೋಪದಲ್ಲಿ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೀದರ್ ಮೂಲದ ವೈದ್ಯನನ್ನು ಬಂಧಿಸಿದ್ದಾರೆ. ವೈದ್ಯ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಬೀದರ್ ಮೂಲದ, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್

ವೈದ್ಯನಿಂದಲೇ ಡ್ರಗ್ಸ್‌ ದಂಧೆ : ಬೃಹತ್‌ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು Read More »

ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಶೂಟ್‌ ಮಾಡಿದ ಕಾಮುಕ ಅರೆಸ್ಟ್‌

ಬೆಂಗಳೂರು: ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹಾಜ ಮೊಯಿನುದ್ದಿನ್ ಸೆರೆಯಾಗಿರುವ ಆರೋಪಿ. ಇಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್ ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ. ಕಳೆದ ಮಂಗಳವಾರ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ-ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ತೆರಳಿದ್ದರು. ಇದನ್ನು ಗಮನಿಸಿದ ಕಾಮುಕ ಮೊಯಿನುದ್ದಿನ್ ಕಿಟಕಿ ಮೂಲಕ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ. ಈ ವೇಳೆ ಈತ ವಿಡಿಯೋ

ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಶೂಟ್‌ ಮಾಡಿದ ಕಾಮುಕ ಅರೆಸ್ಟ್‌ Read More »

ಏಕದಿನ ತಂಡದ ನಾಯಕತ್ವ ಹೊಣೆಯೂ ಶುಭಮನ್‌ ಗಿಲ್‌ ಹೆಗಲಿಗೆ

ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಕ್ರಿಕೆಟ್‌ ಬದುಕು ಅಂತಿಮ ಘಟ್ಟಕ್ಕೆ ನವದೆಹಲಿ: ಮೊದಲ ಬಾರಿ ಟೆಸ್ಟ್‌ ತಂಡದ ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಶುಭ್‌ಮನ್‌ ಗಿಲ್‌ ಹೆಗಲಿಗೆ ಸದ್ಯದಲ್ಲೇ ಏಕದಿನ ತಂಡದ ನಾಯಕತ್ವದ ಹೊಣೆಯೂ ಬೀಳಲಿದೆ. ಸದ್ಯದಲ್ಲೇ ಭಾರತ ಏಕದಿನ ತಂಡದ ನಾಯಕತ್ವವನ್ನೂ ಶುಭಮನ್‌ ಗಿಲ್‌ ವಹಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಕ್ರಿಕೆಟ್‌ ಬದುಕು ಬಹುತೇಕ ಕೊನೆಯ ಘಟ್ಟಕ್ಕೆ ತಲುಪಿದಂತಾಗಿದೆ ಎನ್ನಲಾಗುತ್ತಿದೆ. ಶರ್ಮಾ ಮತ್ತು ಕೊಹ್ಲಿ ಇಲ್ಲದ ಟೆಸ್ಟ್‌

ಏಕದಿನ ತಂಡದ ನಾಯಕತ್ವ ಹೊಣೆಯೂ ಶುಭಮನ್‌ ಗಿಲ್‌ ಹೆಗಲಿಗೆ Read More »

ಸಿಹಿತಿಂಡಿಯಲ್ಲಿ ಕೈದಿಗೆ ಡ್ರಗ್ಸ್‌ ಕೊಡಲು ಯತ್ನಿಸಿದ ಮಹಿಳೆ ವಶ

ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಮುಹಮ್ಮದ್ ಅಸ್ಕರ್ ಎಂಬಾತನಿಗೆ ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡಿದ ಆರೋಪದಲ್ಲಿ ಮಹಿಳೆಯೊಬ್ಬಳ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು.10ರಂದು ಮಧ್ಯಾಹ್ನ ಸಂದರ್ಶಕಿಯಾಗಿ ರಮ್ಸೂನಾ ಎಂಬಾಕೆ ಬಂದಿದ್ದು, ಆಕೆ ಮುಹಮ್ಮದ್ ಅಸ್ಕರ್‌ಗೆ ನೀಡಲು ಬೇಕರಿ ತಿಂಡಿಗಳನ್ನು ಕೊಂಡೊಯ್ದಿದ್ದಳು. ಇದನ್ನು ಸಿಬ್ಬಂದಿ ಪರಿಶೀಲಿಸಿದಾಗ 5 ಸಣ್ಣ ಪೊಟ್ಟಣಗಳು ಕಂಡು ಬಂದಿವೆ. ಈ ಬಗ್ಗೆ ಸಿಬ್ಬಂದಿ ಆಕೆಯನ್ನು ವಿಚಾರಿಸಿದಾಗ ಹೊಸಂಗಡಿಯ ಹುಸೇನ್ ಎಂಬಾತ ಕೆಲವು ಪೊಟ್ಟಣಗಳನ್ನು ಕೊಟ್ಟಿದ್ದಾನೆ. ಅದನ್ನು ತಂದು

ಸಿಹಿತಿಂಡಿಯಲ್ಲಿ ಕೈದಿಗೆ ಡ್ರಗ್ಸ್‌ ಕೊಡಲು ಯತ್ನಿಸಿದ ಮಹಿಳೆ ವಶ Read More »

ಸುಳ್ಯ: 13 ವರ್ಷದ ಬಾಲಕಿ ಗರ್ಭಿಣಿ ಎಂದು ವರದಿ ಕೊಟ್ಟು ಎಡವಟ್ಟು ಮಾಡಿಕೊಂಡ ವೈದ್ಯ

ಗಂಭೀರ ಲೋಪ ಮಾಡಿದ ಡಾಕ್ಟರ್‌ ಕೂಡಲೇ ವರ್ಗಾವಣೆ, ತನಿಖೆಗೆ ಆದೇಶ ಸುಳ್ಯ: ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿಯೊಬ್ಬರು ಗರ್ಭಿಣಿ ಎಂದು ವರದಿ ನೀಡಿ ಎಡವಟ್ಟು ಮಾಡಿಕೊಂಡ ಆಘಾತಕಾರಿ ಘಟನೆ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ದೂರಿನ ಬೆನ್ನಲ್ಲೇ ಈ ವೈದ್ಯಾಧಿಕಾರಿಯನ್ನು ಇಲ್ಲಿಂದ ವರ್ಗಾಯಿಸಲಾಗಿದ್ದು, ಇಡೀ ಘಟನೆಯ ತನಿಖೆಗೆ ಆದೇಶಿಸಲಾಗಿದೆ. ವೈದ್ಯಾಧಿಕಾರಿ ಎಡವಟ್ಟು ಮಾಡಿದ ವಿಚಾರವನ್ನು ಆಶಾ ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರರಿಗೆ ಹೇಳಿದ್ದು, ಈ ಸುಳ್ಳು ಮಾಹಿತಿ

ಸುಳ್ಯ: 13 ವರ್ಷದ ಬಾಲಕಿ ಗರ್ಭಿಣಿ ಎಂದು ವರದಿ ಕೊಟ್ಟು ಎಡವಟ್ಟು ಮಾಡಿಕೊಂಡ ವೈದ್ಯ Read More »

ಅಹಮದಾಬಾದ್‌ ವಿಮಾನ ದುರಂತದ ಕಾರಣ ಪತ್ತೆ

ಪ್ರಾಥಮಿಕ ತನಿಖಾ ವರದಿಯಲ್ಲಿದೆ ಬೆಚ್ಚಿಬೀಳಿಸುವ ಮಾಹಿತಿ ನವದೆಹಲಿ : ಅಹಮದಾಬಾದ್‌ನಲ್ಲಿ ಕಳೆದ ಜೂನ್ 12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಕಾರಣ ಬಹಿರಂಗವಾಗಿದೆ. ಈ ಭೀಕರ ಅಪಘಾತದ ಪ್ರಾಥಮಿಕ ತನಿಖಾ ವರದಿಯಲ್ಲಿ ವಿಮಾನ ಪತನವಗಾಲು ಕಾರಣವಾದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಇಂಜಿನ್‌ಗಳು ಸ್ಥಗಿತಗೊಂಡವು. ಆ

ಅಹಮದಾಬಾದ್‌ ವಿಮಾನ ದುರಂತದ ಕಾರಣ ಪತ್ತೆ Read More »

ಬೌದ್ಧ ಮಠದ ಮೇಲೆ ಬಾಂಬ್‌ ದಾಳಿ : 30 ಮಂದಿ ಸಾವು

ಜನರು ಆಶ್ರಯಪಡೆದಿದ್ದ ಮಠದ ಮೇಲೆ ಬಾಂಬ್‌ ದಾಳಿ ನೇಪಿಡಾವ್: ಮ್ಯಾನ್ಮಾರ್‌ನ ಮಧ್ಯ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವೈಮಾನಿಕ ಬಾಂಬ್‌ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪ್ರತಿರೋಧ ಗುಂಪಿನ ಸದಸ್ಯರೊಬ್ಬರು ತಿಳಿಸಿದ್ದಾರೆ. ಈ ಪ್ರದೇಶದ ಹತ್ತಿರದ ಹಳ್ಳಿಗಳ 150ಕ್ಕೂ ಹೆಚ್ಚು ಜನರು ಆಶ್ರಯ ಪಡೆಯುತ್ತಿದ್ದ ಗ್ರಾಮದ ಮಠದ ಕಟ್ಟಡದ ಮೇಲೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜೆಟ್

ಬೌದ್ಧ ಮಠದ ಮೇಲೆ ಬಾಂಬ್‌ ದಾಳಿ : 30 ಮಂದಿ ಸಾವು Read More »

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ : ಎಚ್‌.ಎಂ.ರೇವಣ್ಣ

ಗ್ಯಾರಂಟಿ ಕೊಡುವುದಕ್ಕೆ ತೊಡಕುಗಳಿವೆ ಎಂದು ಒಪ್ಪಿಕೊಂಡ ಸಮಿತಿ ಅಧ್ಯಕ್ಷ ಬೆಂಗಳೂರು: ಫಲಾನುಭವಿಗಳಿಗೆ ಗೃಹಲಕ್ಷ್ಮಿಹಣ ಪ್ರತಿ ತಿಂಗಳು ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ ರೇವಣ್ಣ ಹೇಳಿದ್ದಾರೆ. ಪ್ರತಿ ತಿಂಗಳು ಹಣ ಕೊಡುವುದಕ್ಕೆ ಕೆಲವು ತೊಡಕುಗಳಿವೆ. ಸದ್ಯ 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1.20 ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ : ಎಚ್‌.ಎಂ.ರೇವಣ್ಣ Read More »

error: Content is protected !!
Scroll to Top