ಸುದ್ದಿ

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ

ಎರಡು ಅಂಗಡಿ, ಒಂದು ವಾಹನ ನಾಶ ಮಂಗಳೂರು : ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜ್ ಮುಂಭಾಗ ಗುಜರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ವ್ಯಾಪಿಸಿದೆ. ಎರಡು ಅಂಗಡಿ ಮತ್ತು ಒಂದು ಗೂಡ್ಸ್‌ ವಾಹನ ಬೆಂಕಿಯಿಂದ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಸೊತ್ತುಗಳಿಗೆ ಹಾನಿಯಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು. […]

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ Read More »

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ

ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಅಹಮದಾಬಾದ್‌: ಇಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 274ಕ್ಕೇರಿದೆ. ವಿಮಾನದಲ್ಲಿದ್ದ 230 ಪ್ರಯಾಣಿಕರು, 10 ಗಗನಸಖಿಯರು ಮತ್ತು ಇಬ್ಬರು ಪೈಲಟ್‌ಗಳ ಪೈಕಿ ಬದುಕುಳಿದಿರುವುದು ಒಬ್ಬ ಪ್ರಯಾಣಿಕ ಮಾತ್ರ. ವಿಮಾನ ಅಹಮದಾಬಾದ್‌ನ ಮೇಘನಿ ನಗರದಲ್ಲಿರುವ ಬಿ.ಜೆ.ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿದ ಪರಿಣಾಮ ಇನ್ನಷ್ಟು ಸಾವುಗಳು ಸಂಭವಿಸಿವೆ. ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಮೇಘನಿ ನಗರದಲ್ಲಿ

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ Read More »

ರಂಜಿತಾ ಸಾವನ್ನು ಅಣಕಿಸಿದ್ದ ಡೆಪ್ಯುಟಿ ತಹಸೀಲ್ದಾರ್ ಅಮಾನತು

ವಿಮಾನ ದುರಂತದಲ್ಲಿ ಸಾವಿಗೀಡಾದ ರಂಜಿತಾ ಬಗ್ಗೆ ವ್ಯಂಗ್ಯವಾಗಿ ಕಮೆಂಟ್‌ ಕಾಸರಗೋಡು: ಅಹಮದಾಬಾದ್‌ ವಿಮಾನ ದುರಂತದಲ್ಲಿ ಕೇರಳದ ನರ್ಸ್‌ ರಂಜಿತಾ ಅವರ ಸಾವನ್ನು ವ್ಯಂಗ್ಯಮಾಡಿ ಅಣಕಿಸಿದ್ದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಎ.ಪವಿತ್ರನ್ ಅವರನ್ನು ಕೇರಳ ಸರ್ಕಾರ ಅಮಾನತು ಮಾಡಿದೆ. ಕೇರಳ ಸರ್ಕಾರಕ್ಕೆ ರಜೆ ಹಾಕಿ ಹೋಗಿದ್ದಕ್ಕೆ ರಂಜಿತಾಗೆ ಸಾವು ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪವಿತ್ರನ್ ವ್ಯಂಗ್ಯವಾಗಿ ಕಮೆಂಟ್ ಹಾಕಿದ್ದರು. ಇನ್ನೊಂದು ಪೋಸ್ಟ್‌ ಮಾಡಿ ಆಕೆ ಇನ್ನೂ ಎತ್ತರಕ್ಕೇರಲಿ ಎಂದು ಪವಿತ್ರನ್‌ ಕಮೆಂಟ್‌ ಮಾಡಿದ್ದರು. ಪವಿತ್ರನ್‌

ರಂಜಿತಾ ಸಾವನ್ನು ಅಣಕಿಸಿದ್ದ ಡೆಪ್ಯುಟಿ ತಹಸೀಲ್ದಾರ್ ಅಮಾನತು Read More »

ಭೀಕರ ವಿಮಾನ ಅವಘಡದಲ್ಲಿ ಏಕೈಕ ಪ್ರಯಾಣಿಕ ಬದುಕಿ ಉಳಿದದ್ದಾದರೂ ಹೇಗೆ?

ಇಲ್ಲಿದೆ ವಿಶ್ವಾಸ್ ಕುಮಾರ್ ರಮೇಶ್‌ಗೆ ಪುನರ್ಜನ್ಮ ಸಿಕ್ಕಿದ ಪೂರ್ಣ ಮಾಹಿತಿ ಅಹಮದಾಬಾದ್ : ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಬದುಕುಳಿದದ್ದಾರೂ ಹೇಗೆ ಎಂಬ ಪ್ರಶ್ನೆ ಎಲ್ಲರನ್ನು ಈಗ ಕಾಡುತ್ತಿದೆ. ಇಡೀ ವಿಮಾನ ಬೆಂಕಿಯುಂಡೆಯಂತಾಗಿ ಕಟ್ಟಡಕ್ಕೆ ಅಪ್ಪಳಿಸಿದ್ದು, 1.25 ಲಕ್ಷ ಲೀಟರ್‌ ಪೆಟ್ರೋಲ್‌ ಸ್ಫೋಟಗೊಂಡಿದೆ. ವಿಮಾನದಲ್ಲಿ ಇದ್ದವರು ಯಾರೂ ಬದುಕುಳಿಯುವ ಸಾಧ್ಯತೆಯಿಲ್ಲ ಎಂದೇ ಭಾವಿಸಿರುವಾಗ ವಿಶ್ವಾಸ್‌ ಕುಮಾರ್‌ ರಮೇಶ್‌ ಪವಾಡ ಎಂಬಂತೆ ಬದುಕುಳಿದಿದ್ದಾರೆ. ಅದೂ ಹೆಚ್ಚೇನೂ ಗಂಭೀರ ಗಾಯಗಳಿಲ್ಲದೆ. ಇದು

ಭೀಕರ ವಿಮಾನ ಅವಘಡದಲ್ಲಿ ಏಕೈಕ ಪ್ರಯಾಣಿಕ ಬದುಕಿ ಉಳಿದದ್ದಾದರೂ ಹೇಗೆ? Read More »

ಇಸ್ರೇಲ್‌ ದಾಳಿಗೆ ಇರಾನ್‌ ಸೇನೆಯ ದಂಡನಾಯಕನೇ ಬಲಿ: ಹಲವು ನ್ಯೂಕ್ಲಿಯರ್‌ ವಿಜ್ಞಾನಿಗಳೂ ಸಾವು

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ; ಭಾರತೀಯರಿಗೆ ಎಚ್ಚರಿಕೆ ಸಂದೇಶ ರವಾನೆ ಟೆಹ್ರಾನ್: ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಸ್ಥಾವರಗಳು ಹಾಗೂ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್‌ನ ಡಜನ್‌ಗಟ್ಟಲೆ ಜೆಟ್‌ಗಳು ಶುಕ್ರವಾರ ನಸುಕಿನ ಹೊತ್ತು ನಡೆಸಿದ ಭೀಕರ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಇರಾನ್‌ ಈಗಾಗಲೇ ಪ್ರತಿಕಾರದ ನಡೆಯಿಟ್ಟಿದ್ದು, ಕ್ಷಿಪಣಿಗಳನ್ನು ಇಸ್ರೇಲ್‌ನತ್ತ ಹಾರಿಸಿದೆ. ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಮುಖ್ಯಸ್ಥ ಜನರಲ್ ಹೊಸೈನ್ ಸಲಾಮಿ, ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ, ಸಶಸ್ತ್ರ ಪಡೆಗಳ

ಇಸ್ರೇಲ್‌ ದಾಳಿಗೆ ಇರಾನ್‌ ಸೇನೆಯ ದಂಡನಾಯಕನೇ ಬಲಿ: ಹಲವು ನ್ಯೂಕ್ಲಿಯರ್‌ ವಿಜ್ಞಾನಿಗಳೂ ಸಾವು Read More »

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ತುರ್ತು ಭೂ ಸ್ಪರ್ಶ

ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ನವದೆಹಲಿ : ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಇನ್ನೂ ದೇಶ ಮಮ್ಮಲ ಮರುಗುತ್ತಾ ಇರುವಾಗಲೇ ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.ಥಾಯ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದ್ದು, ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ತುರ್ತು ಭೂ ಸ್ಪರ್ಶ Read More »

ಬೆಂದು ಹೋದ ಜೀವಗಳು – ಕರಟಿ ಹೋದ ಕನಸುಗಳು…

ವಿಮಾನ ದುರಂತದ ಮನಕಲಕುವ ಕಥೆಗಳು ಅಹದಾಬಾದ್‌: ಅಹಮದಾಬಾದ್‌ನಲ್ಲಿ ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಕರಟಿ ಹೋದ ಕನಸುಗಳೆಷ್ಟೋ, ಬೆಂದು ಹೋದ ಬದುಕುಗಳೆಷ್ಟೋ? ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿಕೊಂಡು ಪ್ರಯಾಣ ಬೆಳೆಸಿದ್ದವರು ಟೇಕಾಫ್‌ ಆದ ಕೆಲವೇ ನಿಮಿಷಗಳಲ್ಲಿ ಗುರುತು ಕೂಡ ಸಿಗದಷ್ಟು ಭೀಕರವಾಗಿ ಸಾಯಬಹುದು ಎಂದು ಕನಸು ಮನಸ್ಸಿನಲ್ಲೂ ಎಣಿಸಿರಲಿಕ್ಕಿಲ್ಲ. ಮನೆ ಕಟ್ಟಲು ತೊಡಗಿದ್ದ ನರ್ಸ್‌, ಸುಖಸಾಗರದಲ್ಲಿ ತೇಲಾಡುತ್ತಿದ್ದ ಸುಂದರ ಕುಟುಂಬ, ಹೆಂಡತಿಯನ್ನು ಕರೆತರಲು ಹೋಗುತ್ತಿದ್ದ ಮಾಜಿ ಮುಖ್ಯಮಂತ್ರಿ… ಹೀಗೆ ಒಂದೊಂದೇ ದುರಂತ ಕಥೆಗಳು ಹೊರಬರುತ್ತಿವೆ. ವಿಮಾನದಲ್ಲಿದ್ದ

ಬೆಂದು ಹೋದ ಜೀವಗಳು – ಕರಟಿ ಹೋದ ಕನಸುಗಳು… Read More »

ಅಶ್ರಫ್‌, ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣಗಳ ಎನ್‌ಐಎ ತನಿಖೆ?

ಎನ್‌ಐಎಗೊಪ್ಪಿಸುವ ಕುರಿತು ಸ್ಪೀಕರ್‌ ಯು.ಟಿ.ಖಾದರ್‌ ಮಾತುಕತೆ ಮಂಗಳೂರು : ಮಂಗಳೂರು ಸಮೀಪ ಕುಡುಪುವಿನಲ್ಲಿ ನಡೆದ ಕೇರಳ ವಯನಾಡು ಮೂಲದ ಅಶ್ರಫ್ ಗುಂಪು ಹತ್ಯೆ ಹಾಗೂ ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹಿಮಾನ್‌ ಹತ್ಯೆ ಪ್ರಕರಣಗಳ ತನಿಖೆಯನ್ನೂ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಎನ್‌ಐಎ ತನಿಖೆಗೆ ಕೇಂದ್ರ ಸರ್ಕಾರ ಒಪ್ಪಿಸಿದ ಬಳಿಕ ಅಶ್ರಫ್‌ ಮತ್ತು ಅಬ್ದುಲ್‌ ರಹಿಮಾನ್‌ ತನಿಖೆಯನ್ನೂ ಎನ್‌ಐಎ ಮಾಡಲಿ ಎಂಬ ಒತ್ತಾಯ ಕೇಳಿ ಬಂದಿತ್ತು.

ಅಶ್ರಫ್‌, ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣಗಳ ಎನ್‌ಐಎ ತನಿಖೆ? Read More »

ಕುತ್ತಾರ್‌ : 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

ಬಟ್ಟೆ ಒಣಗಲು ಹಾಕುವಾಗ ಆಯತಪ್ಪಿ ಬಿದ್ದ ವೈದ್ಯ ದಂಪತಿಯ ಪುತ್ರಿ ಮಂಗಳೂರು: ಬಾಲಕಿ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ತೊಕ್ಕೊಟ್ಟು ಸಮೀಪ ಕುತ್ತಾರ್‌ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಯೆನೆಪೋಯ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಮುಮ್ತಾಜ್‌ ಅಹ್ಮದ್‌ ಮತ್ತು ಡಾ.ಕಮ್ರಾಜ್‌ ದಂಪತಿಯ ಪುತ್ರಿ 15ರ ಹರೆಯದ ಹಿಬಾ ಐಮನ್‌ ಸಾವಿಗೀಡಾಗಿರುವ ಬಾಲಕಿ ಕುತ್ತಾರ್‌ನಲ್ಲಿರುವ ಸಿಲಿಕೋನಿಯಾ ಎಂಬ ಬಹುಮಹಡಿ ವಸತಿ ಸಂಕೀರ್ಣದ ಫ್ಲ್ಯಾಟ್‌ನಲ್ಲಿ ಈ ವೈದ್ಯ ದಂಪತಿ ವಾಸವಾಗಿದ್ದರು. ಇದೇ ಕಟ್ಟಡದಿಂದದ ಬಾಲಕಿ ಬಿದ್ದಿದ್ದಾಳೆ. 18 ಮಹಡಿಗಳ ಬೃಹತ್‌

ಕುತ್ತಾರ್‌ : 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು Read More »

ಅಹಮದಾಬಾದ್‌ ವಿಮಾನ ದುರಂತ : ಆಸ್ಪತ್ರೆಗೆ ಆಗಮಿಸಿದ ಮೋದಿ

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್‌ಗೆ ಬಂದಿಳಿದಿದ್ದು, ಇಲ್ಲಿನ ಸಿವಿಲ್ ಆಸ್ಪತ್ರೆಗೆ ಆಗಮಿಸಿ ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನ ಮೃತಪಟ್ಟಿದ್ದಾರೆ. ಮೆಡಿಕಲ್ ಕಾಲೇಜು ಹಾಸ್ಟೆಲ್​ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್​ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.

ಅಹಮದಾಬಾದ್‌ ವಿಮಾನ ದುರಂತ : ಆಸ್ಪತ್ರೆಗೆ ಆಗಮಿಸಿದ ಮೋದಿ Read More »

error: Content is protected !!
Scroll to Top