ಸುದ್ದಿ

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ವಂಚನೆ

4500ಕ್ಕೂ ಅಧಿಕ ಉದ್ದಿಮೆ ನಕಲಿ ಸರ್ಟಿಫಿಕೆಟ್‌ ಸೃಷ್ಟಿಸಿರುವ ಅನುಮಾನ ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯಲ್ಲಿ ದಿನಕ್ಕೊಂದು ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಗರಪಾಲಿಕೆ ನೀಡುವ ಪ್ರಮಾಣಪತ್ರವನ್ನೇ ನಕಲಿಯಾಗಿ ಸೃಷ್ಟಿಸಿ ತೆರಿಗೆ ವಂಚಿಸಿದ ಪ್ರಕರಣ ಬಯಲಾಗಿದ್ದು, ಇದರ ಹಿಂದೆ ಬೃಹತ್‌ ಜಾಲ ಇರುವ ಅನುಮಾನ ವ್ಯಕ್ತವಾಗಿದೆ. ನಕಲಿ ತೆರಿಗೆ ನೋಂದಣಿ ಜಾಲವೊಂದು ಇದರ ಹಿಂದೆ ಇದೆ ಎನ್ನಲಾಗಿದೆ. ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಲಾಗಿದೆ. ಮಹಾನಗರ ಪಾಲಿಕೆ ನೀಡುವ ಸರ್ಟಿಫಿಕೇಟ್​​ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ […]

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ವಂಚನೆ Read More »

ಮುಂಬಯಿ: ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಶಿಕ್ಷಕಿ

ಪಂಚತಾರಾ ಹೋಟೆಲ್‌ಗಳಲ್ಲಿ ಶಿಷ್ಯನ ಮೇಲೆ ದೌರ್ಜನ್ಯ ಎಸಗಿದ ಪ್ರತಿಷ್ಠಿತ ಶಾಲೆಯ ಶಿಕ್ಷಕಿ ಮುಂಬೈ: ಪ್ರತಿಷ್ಠಿತ ಶಾಲೆಯ ಶಿಕ್ಷಕಿಯೊಬ್ಬಳು ತನ್ನ ಹದಿಹರೆಯದ ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಆಘಾತಕಾರಿ ಘಟನೆ ಮುಂಬಯಿಯಲ್ಲಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ 40ರ ಹರೆಯದ ಶಿಕ್ಷಕಿಯನ್ನು ಪೋಕ್ಸೊ ಕಾಯ್ದೆಯ ಅಡಿ ಬಂಧಿಸಲಾಗಿದೆ. ಮುಂಬೈನ ಪ್ರಖ್ಯಾತ ಶಾಲೆಯ 40 ವರ್ಷದ ಇಂಗ್ಲಿಷ್‌ ಶಿಕ್ಷಕಿ ಕಳೆದ ಒಂದು ವರ್ಷದಲ್ಲಿ 16 ವರ್ಷದ ವಿದ್ಯಾರ್ಥಿಯ ಮೇಲೆ ಹಲವು ಬಾರಿ

ಮುಂಬಯಿ: ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಶಿಕ್ಷಕಿ Read More »

ಈಡೇರದ ಬೇಡಿಕೆ : ಮುಷ್ಕರದತ್ತ ಸಾರಿಗೆ ನೌಕರರ ಚಿತ್ತ

1.10 ಲಕ್ಷ ಸಿಬ್ಬಂದಿಗೆ ಶೇ.25 ವೇತನ ಹೆಚ್ಚಿಸಲು ಒತ್ತಾಯ ಬೆಂಗಳೂರು: ಸರ್ಕಾರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವ ಮಾತಿಗೆ ತಪ್ಪಿರುವುದರಿಂದ ಮುಷ್ಕರ ಹೂಡಲು ಸಾರಿಗೆ ನೌಕರರು ಚಿಂತಿಸುತ್ತಿದ್ದಾರೆ. ಮುಂದಿನ ನಡೆಯ ಬಗ್ಗೆ ಚರ್ಚಿಸಲು ಇಂದು ನಾಲ್ಕು ನಿಗಮದ ನೌಕರ ಸಂಘಟನೆಗಳ ಮಹತ್ವದ ಸಭೆ ನಡೆಯಲಿದ್ದು, ಇದರಲ್ಲಿ ಮುಷ್ಕರ ಹೂಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾರಿಗೆ ನೌಕರರು ವೇತನ ಏರಿಕೆಯೂ ಸೇರಿದಂತೆ ಸರ್ಕಾರದ ಮುಂದೆ ಅನೇಕ ಬೇಡಿಕೆಗಳನ್ನು ಇಟ್ಟಿದ್ದಾರೆ. ಕಳೆದ ವರ್ಷ ಕೂಡ ಬಸ್ ನಿಲ್ಲಿಸಿ

ಈಡೇರದ ಬೇಡಿಕೆ : ಮುಷ್ಕರದತ್ತ ಸಾರಿಗೆ ನೌಕರರ ಚಿತ್ತ Read More »

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ

ಬೆಳಗಾವಿಯ ಸಾಧನಾ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿಗೆ ಅವಮಾನ ಮಾಡಿದ್ದ ಸಿಎಂ ಬೆಂಗಳೂರು: ಕಾಂಗ್ರೆಸ್‌ನ ಸಮಾವೇಶದ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಪ್ರಸ್ತುತ ಧಾರವಾಡದ ಎಎಸ್‌ಪಿ ಆಗಿರುವ ನಾರಾಯಣ ಬರಮಣ್ಣಿ ಸ್ವಯಂ ನಿವೃತ್ತಿಗೆ ಮನವಿ ಮಾಡಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಕೆಲ ಸಮಯದ ಹಿಂದೆ ನಡೆದ ಕಾಂಗ್ರೆಸ್‌ನ ಸಾಧನಾ ಸಮಾವೇಶದ ವೇದಿಕೆಯಲ್ಲಿ ಆಗ ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ನಾರಾಯಣ ಬರಮಣ್ಣಿ ಅವರಿಗೆ ಹೊಡೆಯಲು ಸಿದ್ದರಾಮಯ್ಯ ಕೈ ಎತ್ತಿದ್ದರು. ಈ ವೀಡಿಯೊ ಭಾರಿ ವೈರಲ್‌ ಆಗಿ

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ Read More »

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು

ಕನ್ನಡಕ್ಕೆ ತಮಿಳು ತಾಯಿಭಾಷೆ ಎಂದು ಹೇಳಿ ವಿವಾದಕ್ಕೀಡಾಗಿದ್ದ ಕಮಲ ಹಾಸನ್‌ ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ ಗೌಡ ಎಂಬವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು Read More »

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ

ಮೊದಲ ಸುತ್ತಿನಲ್ಲೇ ಭಾರತ-ಪಾಕಿಸ್ತಾನ ಮುಖಾಮುಖಿ ನವದೆಹಲಿ : ಏಷ್ಯಾ ಉಪಖಂಡದ ಕ್ರಿಕೆಟ್‌ ರಾಷ್ಟ್ರಗಳ ನಡುವಿನ ಮಿನಿ ಸಮರ ಏಷ್ಯಾಕಪ್‌ ಕೂಟದ ಕರಡು ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಿದ್ಧಪಡಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್ 5ರಿಂದ 17ನೇ ಆವೃತ್ತಿಯ ಏಷ್ಯಾ ಕಪ್ ಶುರುವಾಗಲಿದೆ. ಫೈನಲ್ ಪಂದ್ಯವನ್ನು ಸೆಪ್ಟೆಂಬರ್ 21ರಂದು ಆಯೋಜಿಸಲು ನಿರ್ಧರಿಸಲಾಗಿದೆ. ಈ ಬಾರಿಯ ಟೂರ್ನಿಯನ್ನು ಯುಎಇನಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಆ ಸಂದರ್ಭದ ಪರಿಸ್ಥಿತಿಯನ್ನು ಹೊಂದಿಕೊಂಡು ಪಂದ್ಯಗಳ ದಿನಾಂಕ ಮತ್ತು ಸ್ಥಳದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ Read More »

ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆ ನನ್ನದಲ್ಲ ಎಂದ ಬಿ.ಆರ್‌.ಪಾಟೀಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆ ತಿರುಚಿ ತೇಜೋವಧೆ ಎಂದು ಸ್ಪಷ್ಟನೆ ಬೆಂಗಳೂರು: ಕಳೆದ ಕೆಲ ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪದೇ ಪದೆ ಮುಜುಗರವುಂಟು ಮಾಡುತ್ತಿರುವ ಆಳಂದದ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ನಿನ್ನೆ ಸಿದ್ದರಾಮಯ್ಯ ಲಾಟರಿ ಸಿಎಂ ಎಂದು ಹೇಳಿದ್ದು ಭಾರಿ ವೈರಲ್‌ ಆಗಿದೆ. ಫೋನ್‌ನಲ್ಲಿ ಯಾರ ಜೊತೆಗೋ ಮಾತನಾಡುತ್ತಾ ಬಿ.ಆರ್‌ ಪಾಟೀಲ್‌ ಏಕವಚನದಲ್ಲೇ ಸಿದ್ದರಾಮಯ್ಯ ಲಕ್ಕಿ, ಸಿಎಂ ಲಾಟರಿ ಹೊಡೆದುಬಿಟ್ಟರು ಎಂಬ ಹೇಳಿದ್ದರು. ಇದರಿಂದ ಪಕ್ಷಕ್ಕೆ ಮತ್ತು ಸಿದ್ದರಾಮಯ್ಯನವರಿಗೆ ತೀವ್ರ ಮುಜುಗರವಾಗಿದ್ದು, ಕೂಡಲೇ ಇದಕ್ಕೆ ಸ್ಪಷ್ಟನೆ ಕೊಟ್ಟ ಪಾಟೀಲ್‌

ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆ ನನ್ನದಲ್ಲ ಎಂದ ಬಿ.ಆರ್‌.ಪಾಟೀಲ್‌ Read More »

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಕೊಲೆ, ಹತ್ಯಾಯತ್ನ ಪ್ರಕರಣದ ಆರೋಪಿಗಳು ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ ಎಂಬಾತನನ್ನು ಮೂಲ್ಕಿ ಸಮೀಪ ಪಕ್ಷಕೆರೆಯಲ್ಲಿ ಬಂಧಿಸಲಾಗಿದೆ. ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ 2020ರಲ್ಲಿ ಮುಲ್ಕಿ ಹೆದ್ದಾರಿಯ ಬಳಿ ವಿಜಯ ಸನ್ನಿಧಿ ಎದುರು ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ.

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ Read More »

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌

ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲ ಮತ್ತು ಪ್ರಚೋದನಕಾರಿ ಪೋಸ್ಟ್‌ ಹಾಕಿದ ಸಂಬಂಧ ಇಬ್ಬರ ವಿರುದ್‌ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯೊಬ್ಬರು ನೀಡಿರುವ ದೂರಿನಂತೆ ಪ್ರಕರಣ‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Naveen Gowda (https://facebook.com/naveen.gowda.938621) ಎಂಬ ಫೇಸ್‌ಬುಕ್ ಖಾತೆಯಲ್ಲಿ ಮಹೇಶ್ ಶೆಟ್ಟಿ ಎಂತವರನ್ನು ಸಾಕಿಕೊಂಡಿದ್ದಾನೆ ಎಂದು ಆರಂಭಿಸಿ

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌ Read More »

ಎಲ್ಲ ಸೇವೆಗಳು ಒಂದೆಡೆ ಸಿಗುವ ರೈಲ್‌ ಒನ್‌ ಆ್ಯಪ್ ಬಿಡುಗಡೆ ಮಾಡಿದ ರೈಲ್ವೆ

ಪ್ರಯಾಣಿಕರಿಗೆ ಅನುಕೂಲವಾಗುವ ಸೂಪರ್‌ ಆ್ಯಪ್ ನವದೆಹಲಿ: ಭಾರತೀಯ ರೈಲ್ವೆ ರೈಲ್ ಒನ್ ಎಂಬ ಹೊಸ ಆ್ಯಪ್ ಬಿಡುಗಡೆ ಮಾಡಿದೆ. ರೈಲ್ವೆ ಪ್ರಯಾಣಿಕರ ಎಲ್ಲ ಅಗತ್ಯಗಳನ್ನು ಪೂರೈಸಬಲ್ಲ ಸೂಪರ್ ಆ್ಯಪ್ ಇದು. ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಮ್ಸ್​​ನ 40ನೇ ಸಂಸ್ಥಾಪನಾ ದಿನ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ ಒನ್ ಆ್ಯಪ್ ಬಿಡುಗಡೆ ಮಾಡಿದ್ದಾರೆ. ರೈಲ್ ​ಒನ್ ಆ್ಯಪ್ ಆಂಡ್ರಾಯ್ಡ್ ಮತ್ತು ಆ್ಯಪಲ್ ಪ್ಲಾಟ್​​ಫಾರ್ಮ್ ಎರಡರಲ್ಲೂ ಲಭ್ಯ ಇದೆ. ರೈಲ್ವೆಗೆ ಸಂಬಂಧಿತ ಯಾವುದೇ ಮಾಹಿತಿಯನ್ನು ಪಡೆಯಲು

ಎಲ್ಲ ಸೇವೆಗಳು ಒಂದೆಡೆ ಸಿಗುವ ರೈಲ್‌ ಒನ್‌ ಆ್ಯಪ್ ಬಿಡುಗಡೆ ಮಾಡಿದ ರೈಲ್ವೆ Read More »

error: Content is protected !!
Scroll to Top