ಸುದ್ದಿ

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌

ಉಸ್ತುವಾರಿ ಹೊರೆಯಲ್ಲ, ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ನನಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡವೆಂದು ಹೇಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ದಿನೇಶ್‌ ಗುಂಡೂರಾವ್‌ಗೆ ದಕ್ಷಿಣ ಕನ್ನಡದ ಉಸ್ತುವಾರಿ ಜವಾಬ್ದಾರಿ ಹೊರೆಯಾಗಿದೆ, ಹೀಗಾಗಿ ಅವರು ಉಸ್ತುವಾರಿ ಬದಲಾಯಿಸಲು ಮುಖ್ಯಮಂತ್ರಿಯನ್ನು ಕೋರಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, ನನ್ನ ವಿರುದ್ಧ ಸ್ಥಳೀಯ ಲಾಬಿ ಇಲ್ಲ. ಕೆಲವರು ಏನೋ ಹೇಳಬಹುದು, ಮೃತನ ಮನೆಗೆ ಹೋಗಿದ್ದೆ, ಅವನು […]

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌ Read More »

ಈ ಸಲ ಕಪ್‌ ನಮ್ದೇ : ಆರ್‌ಸಿಬಿ ಚಾಂಪಿಯನ್‌ ಆಗಲು ಇನ್ನೊಂದೆ ಹೆಜ್ಜೆ ಬಾಕಿ

ನಾಳೆ ಅಹಮಬಾದಾದ್‌ನಲ್ಲಿ ಆರ್‌ಸಿಬಿ-ಪಂಜಾಬ್‌ ನಡುವೆ ಫೈನಲ್‌ ಪಂದ್ಯ ಅಹಮದಾಬಾದ್‌ : ಐಪಿಎಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್‌ ಆಗಲು ಉಳಿದಿರುವುದು ಇನ್ನು ಒಂದೇ ಪಂದ್ಯ. ಮಂಗಳವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯುವ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದ್ದು, ಆರ್‌ಸಿಬಿ ಕಪ್‌ ಎತ್ತಬೇಕೆಂಬ ಆರು ಕೋಟಿ ಕನ್ನಡಿಗರ ಹಾರೈಕೆ ಮುಗಿಲುಬಿಟ್ಟಿದೆ. ಈ ಸಲ ಯಾರೇ ಗೆದ್ದರೂ ಹೊಸ ಚಾಂಪಿಯನ್‌ ಮೂಡಿಬರುವುದು ಖಚಿತ. 2014ರ ನಂತರ ಮೊದಲ ಬಾರಿಗೆ ಪಂಜಾಬ್ ಕಿಂಗ್ಸ್ ಫೈನಲ್ ಪ್ರವೇಶಿಸಿದೆ. ಜೂನ್

ಈ ಸಲ ಕಪ್‌ ನಮ್ದೇ : ಆರ್‌ಸಿಬಿ ಚಾಂಪಿಯನ್‌ ಆಗಲು ಇನ್ನೊಂದೆ ಹೆಜ್ಜೆ ಬಾಕಿ Read More »

ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ

ವಾಹನ ತಪಾಸಣೆಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಡಿಜಿಪಿ ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ.ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾಗಳನ್ನು ಕಡ್ಡಾಯವಾಗಿ

ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 24 ರೂ. ಇಳಿಕೆ

ಸತತ ಮೂರನೇ ಸಲ ಬೆಲೆ ಇಳಿಸಿದ ತೈಲ ಕಂಪನಿಗಳು ನವದೆಹಲಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್‌ ಬೆಲೆ 24 ರೂಪಾಯಿ ಕಡಿಮೆಯಾಗಿದೆ. ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ ಅನ್ವಯಿಸುತ್ತವೆ. ಹೊಸ ಪರಿಷ್ಕರಣೆ ಪ್ರಕಾರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 24 ರೂ. ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಸಿಲಿಂಡರ್‌ ಬೆಲೆ ದೆಹಲಿ: 1,723.50 ರೂ. ಕೋಲ್ಕತ್ತಾ 1,826 ರೂ., ಮುಂಬೈನಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಈಗ 1,674.50 ರೂ. ಆಗಿದೆ.

ಗ್ಯಾಸ್‌ ಸಿಲಿಂಡರ್‌ ಬೆಲೆ 24 ರೂ. ಇಳಿಕೆ Read More »

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಆರೋಪಿಗಳು ಸೆರೆ

ಬೆಳಗಾವಿಯಲ್ಲಿ ಒಂದೇ ವಾರದಲ್ಲಿ ಸಂಭವಿಸಿದ ಎರಡನೇ ಪ್ರಕರಣ ಬೆಳಗಾವಿ : ಬೆಳಗಾವಿಯಲ್ಲಿ ಇನ್ನೊಂದು ಗ್ಯಾಂಗ್‌ರೇಪ್‌ ಪ್ರಕರಣ ಸಂಭವಿಸಿದೆ. ಹದಿನೈದು ವರ್ಷದ ಬಾಲಕಿ ಮೇಲೆ 6 ಜನ ಎರಡೆರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಗರದ ಹೊರವಲಯದ ಕಾಕತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ.ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್​ ದಾಖಲಾದ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸಹಿತ ಉಳಿದ ನಾಲ್ವರು ತಪ್ಪಿಸಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಆರೋಪಿಗಳು ಸೆರೆ Read More »

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಸ್ವಾಧೀನ ಕಳೆದುಕೊಂಡ ಕಾಲುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದ ವೈದ್ಯರು ಮಂಗಳೂರು: ಉಳ್ಳಾಲದ ಮಂಜನಾಡಿ ಸಮೀಪ ಮೊಂಟೆಪದವು ಕೋಡಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಬಲಿಯಾದ ಘಟನೆಯಲ್ಲಿ ಬದುಕುಳಿದವರ ಬದುಕು ಇನ್ನಷ್ಟು ಯಾತನಾಮಯವಾಗಿದೆ. ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಮಕ್ಕಳು ಮತ್ತು ಹಿರಿಯ ಮಹಿಳೆಯ ಅಂತ್ಯಸಂಸ್ಕಾರವನ್ನು ಶನಿವಾರ ಕಣ್ಣೀರಕೋಡಿಯ ನಡುವೆಯೇ ಮಾಡಲಾಗಿದೆ. ಸರ್ವಧರ್ಮದವರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಎಲ್ಲರೂ ಕಣ್ಣೀರು ಸುರಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಮೂವರನ್ನು ಮನೆ ಕುಸಿದ

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ Read More »

ಮಹಿಳೆಗೆ 92 ಲ.ರೂ. ವಂಚನೆ : ಖ್ಯಾತ ನಿರ್ಮಾಪಕನ ವಿರುದ್ಧ ದೂರು ದಾಖಲು

ಶಿವರಾಜ್‌ಕುಮಾರ್‌, ಗಣೇಶ್‌ ಅಭಿನಯದ ಸಿನಿಮಾ ಮಾಡುತ್ತಿದ್ದೇನೆ ಎಂದು ನಂಬಿಸಿ ವಂಚನೆ ಬೆಂಗಳೂರು : ಕನ್ನಡದ ಖ್ಯಾತ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಯೊಬ್ಬರಿಗೆ 92 ಲ.ರೂ. ವಂಚಿಸಿದ ಕುರಿತು ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐ ದಾಖಲಾಗಿದೆ. ಶಿವರಾಜ್​ಕುಮಾರ್, ಗಣೇಶ್ ಜೊತೆ ಸಿನಿಮಾ ಮಾಡುವುದಾಗಿ ನಂಬಿಸಿ ಮಹಿಳೆಯಿಂದ ಸೂರಪ್ಪ ಬಾಬು ಹಣ ಪಡೆದಿದ್ದರು ಎನ್ನಲಾಗಿದೆ. ಆದರೆ ನಂತರ ಸಾಲ ವಾಪಸ್ ಕೇಳಿದಾಗ ಮಹಿಳೆಗೆ ಬೆದರಿಕೆ ಹಾಕಿದರು ಎಂಬ ಆರೋಪಿಸಲಾಗಿದೆ. ಪುನೀತ್ ರಾಜ್​ಕುಮಾರ್​ ನಟನೆಯ ‘ಪೃಥ್ವಿ’, ಕಿಚ್ಚ

ಮಹಿಳೆಗೆ 92 ಲ.ರೂ. ವಂಚನೆ : ಖ್ಯಾತ ನಿರ್ಮಾಪಕನ ವಿರುದ್ಧ ದೂರು ದಾಖಲು Read More »

ಐದು ತಿಂಗಳ ಹಿಂದೆ ನಡೆದ ಹಲ್ಲೆಯ ಕುರಿತು ದೂರು

ಬೈಕಿನಲ್ಲಿ ಹೋಗುವಾಗ ಕಲ್ಲಿನಿಂದ ದಾಳಿ ಮಾಡಿದ ಆರೋಪ ಬಂಟ್ವಾಳ : ಐದು ತಿಂಗಳ ಹಿಂದೆ ಕಲ್ಲಿನಿಂದ ದಾಳಿ ಮಾಡಿದ್ದಾರೆ ಎಂದು ಬಂಟ್ವಾಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಲತ್ತಮಜಲು ಎಂಬಲ್ಲಿ ಯುವಕನೊಬ್ಬ ಕಲ್ಲು ತೂರಾಟದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಡಿಸೆಂಬರ್ 29, 2024ರಂದು ನಡೆದ ಘಟನೆಯ ಬಗ್ಗೆ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಡಗಬೆಳ್ಳೂರು ನಿವಾಸಿ ಶಮೀರ್ (31) ಎಂಬ ಯುವಕ ದೂರು ನೀಡಿದ್ದು, ತೇಜಾಕ್ಷ

ಐದು ತಿಂಗಳ ಹಿಂದೆ ನಡೆದ ಹಲ್ಲೆಯ ಕುರಿತು ದೂರು Read More »

ಹರಿನಗರದಲ್ಲಿ ಧರೆಕುಸಿತ | ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಉಪ್ಪಿನಂಗಡಿಯ ಹರಿನಗರ ಎಂಬಲ್ಲಿ ಧರೆಕುಸಿದ ಘಟನೆ ನಡೆದಿದೆ. ಧರೆಕುಸಿದ ಪರಿಣಾಮ ೨೦ಕ್ಕು ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲಿಸಿದ್ದಲ್ಲದೆ, ಅಧಿಕಾರಿಗಳನ್ನು ತಕ್ಷಣ ಘಟನಾ ಸ್ಥಳಕ್ಕೆ ಬರಲು ಸೂಚನೆ ನೀಡಿದ್ದಾರೆ.

ಹರಿನಗರದಲ್ಲಿ ಧರೆಕುಸಿತ | ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ Read More »

ಶ್ರೀ ಮಹಾಭಾರತ ಸರಣಿಯಲ್ಲಿ  ಉತ್ತರಾ ವಿವಾಹ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 77ನೇ ತಾಳಮದ್ದಳೆಯಾಗಿ ಉತ್ತರ ವಿವಾಹವು  ಮಂಗಳೂರು ಬೋಳಾರದ  ಮುಳಿಹಿತ್ಲಿನ ಶ್ರೀ ಮಾರಿಯಮ್ಮ ಕೃಪ ಮತ್ತು  ಶ್ರೀ ವಾಸುದೇವ ಕೃಷ್ಣ ನಿಲಯದ ಗೃಹಪ್ರವೇಶದ ಅಂಗವಾಗಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,ನಿತೀಶ್ ಮನೋಳಿತ್ತಾಯ ಹಿಮ್ಮೇಳದಲ್ಲಿ ಶಿವದಾಸ್ ಪ್ರಭು ಮಂಗಳೂರು, ಪರೀಕ್ಷಿತ್.ಯಚ್ ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ (ಕೌರವ, ಅಭಿಮನ್ಯು), ಸತೀಶ ಶಿರ್ಲಾಲು(ಸುಶರ್ಮ) ಶ್ರುತಿ ವಿಸ್ಮಿತ್(ಭೀಮ, ಉತ್ತರೆ),

ಶ್ರೀ ಮಹಾಭಾರತ ಸರಣಿಯಲ್ಲಿ  ಉತ್ತರಾ ವಿವಾಹ ತಾಳಮದ್ದಳೆ Read More »

error: Content is protected !!
Scroll to Top