ಸುದ್ದಿ

ಕಾರಿನಲ್ಲಿ ಹುಚ್ಚಾಟ ಮೆರೆದ ಯುವಕರು | ಪ್ರಕರಣ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್‍

ಸುಳ್ಯ: ಸಂಪಾಜೆ ಬಳಿ ಕಾರಿನಲ್ಲಿ ಹುಚ್ಚಾಟ ಮೆರೆದ ಪ್ರಕರಣದಲ್ಲಿ ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ತಲೆಮರೆಸಿಕೊಂಡಿದ್ದಾರೆ. ಭಟ್ಕಳ ಮೂಲದ ಯುವಕರು ಕಾರಿನಲ್ಲಿ ಹುಚ್ಚಾಟ ಮೆರೆದಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ BNS ಆಕ್ಟ್ 281 IMV ಆಕ್ಟ್ ನ 184 ಸೆಕ್ಷನ್ ಅಡಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಫೋನ್ ಸ್ವಿಚ್ ಆಫ್ ಮಾಡಿ ಯುವಕರು ಎಸ್ಕೆಪ್ ಆಗಿದ್ದಾರೆ. ಸಂಪಾಜೆ-ಸುಳ್ಯ ರಸ್ತೆಯಲ್ಲಿ KA09MG5880 ನಂಬರ್‌ನ ಕಾರಿನಲ್ಲಿ ಒಟ್ಟು ಏಳು ಮಂದಿ […]

ಕಾರಿನಲ್ಲಿ ಹುಚ್ಚಾಟ ಮೆರೆದ ಯುವಕರು | ಪ್ರಕರಣ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್‍ Read More »

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌

ಎಚ್ಚರಿಕೆ ನೀಡಿ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌ Read More »

ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) 2025ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ವಾರವೇ ಪ್ರಕಟಸುವ ನಿರೀಕ್ಷೆ ಇದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಲು ಅವಕಾಶವಿದೆ. karresults.nic.in ಮತ್ತು kseab.karnataka.gov.in ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ

ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ Read More »

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ

ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಯಕ್ಷಗಾನದ ಕಥೆಯೇ ಸಿನಿಮಾ ಆದ ಚಿತ್ರ ಉಡುಪಿ: ಸುಮಾರು ಕಲಾವಿದರು ನಟಿಸಿರುವ, ಹಿರಿಯ ನಟ ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಯಕ್ಷಗಾನವೇ ಕಥಾವಸ್ತು ಆಗಿ ಉಳ್ಳ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗಿದ್ದು, ಏ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಯಕ್ಷಗಾನ ಮತ್ತು ಯಕ್ಷಗಾನದ ಪಾತ್ರಗಳನ್ನು ಸಾಂದರ್ಭಿಕವಾಗಿ ಬಳಸಿಕೊಂಡಿರುವ ಅನೇಕ ಚಿತ್ರಗಳು ಬಂದಿವೆ. ಆದರೆ ಯಕ್ಷಗಾನ ಪ್ರಸಂಗವೊಂದನ್ನೇ ಸಿನಿಮಾ ಮಾಡಿ ಅದರಲ್ಲಿ ಯಕ್ಷಗಾನ ಕಲಾವಿದರೇ ನಟಿಸಿದ್ದು, ಇದೇ ಮೊದಲು. ಈ ಚಿತ್ರವನ್ನು ನಿರ್ದೇಶಿಸಿದವರು ಈಗಾಗಲೇ ಕನ್ನಡದಲ್ಲಿ

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ Read More »

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಮಾಟಮಂತ್ರ ತೆಗೆಯುವ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಅವರು ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ Read More »

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ

ಬೆಂಗಳೂರು : ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಉದ್ಯಮಿ ರಾಹುಲ್ ತೋನ್ಸೆಗೆ ನ್ಯಾಯಾಲಯ ಬರೋಬ್ಬರಿ 61.50 ಲಕ್ಷ ರೂಪಾಯಿ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 33ನೇ ಎಸಿಜೆಎಂ ನ್ಯಾಯಾಲಯ ಈ ತೀರ್ಪು ನೀಡಿದೆ. ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗಧಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ Read More »

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ

ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ Read More »

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌

ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌ Read More »

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ

ಬೆಂಗಳೂರು: ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಚಿತ್ರಹಿಂಸೆ ನೀಡಿರುವ ವೀಡಿಯೊ ವೈರಲ್ ಆಗಿದೆ. ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ Read More »

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ

ಗೂಡ್ಸ್ ವಾಹನಗಳು, ಟ್ಯಾಕ್ಸಿ ಸೇರಿ 6 ಲಕ್ಷಕ್ಕೂ ವಾಹನಗಳ ಸಂಚಾರ ಸ್ಥಗಿತ ಬೆಂಗಳೂರು: ರಾಜ್ಯದಲ್ಲಿ ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಏ.14ರಿಂದ ಮುಷ್ಕರ ಹೂಡಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಮತ್ತು ಟೋಲ್ ದರ ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ Read More »

error: Content is protected !!
Scroll to Top