ಸುದ್ದಿ

ಇರಾನ್‌ನ ಒಂದೇ ಒಂದು ನ್ಯೂಕ್ಲಿಯರ್‌ ಬಾಂಬ್‌ ಕೂಡ ನಾಶವಾಗಿಲ್ಲ ಎಂದ ಅಮೆರಿಕ ಗುಪ್ತಚರ ವರದಿ

ದಾಳಿಯ ಯಶಸ್ಸಿನ ಬಗ್ಗೆ ಕೊಚ್ಚಿಕೊಂಡಿದ್ದ ಟ್ರಂಪ್‌ಗೆ ಭಾರಿ ಮುಖಭಂಗ ವಾಷಿಂಗ್ಟನ್: ಇರಾನ್‌ನ ಮೂರು ಅಣ್ವಸ್ತ್ರ ಸ್ಥಾವರಗಳ ಮೇಲೆ ಅಮೆರಿಕ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಒಂದು ನ್ಯೂಕ್ಲಿಯರ್‌ ಬಾಂಬ್‌ ಕೂಡ ನಾಶವಾಗಿಲ್ಲ ಎಂದು ಈಗ ಸ್ವತಹ ಅಮೆರಿಕದ ಗುಪ್ತಚರ ಪಡೆಯೇ ಹೇಳಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಂತೆ ಇರಾನ್‌ನ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ನ ಪರಮಾಣು ಯೋಜನೆ ನಾಶವಾಗಿಲ್ಲ ಬದಲಾಗಿ ಕೆಲವು ತಿಂಗಳ ಕಾಲ ಹಿನ್ನಡೆಯಾಗಿದೆ ಎಂದು ಅಮೆರಿಕದ ಗುಪ್ತಚರ ವರದಿಗಳು ತಿಳಿಸಿವೆ. ಈ […]

ಇರಾನ್‌ನ ಒಂದೇ ಒಂದು ನ್ಯೂಕ್ಲಿಯರ್‌ ಬಾಂಬ್‌ ಕೂಡ ನಾಶವಾಗಿಲ್ಲ ಎಂದ ಅಮೆರಿಕ ಗುಪ್ತಚರ ವರದಿ Read More »

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ

ಹಲವು ತಾಸು ವಾಹನ ಸಂಚಾರ ವ್ಯತ್ಯಯ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಭಾರಿ ಪ್ರಮಾಣದಲ್ಲಿ ಕಲ್ಲು-ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‍ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ Read More »

ಇಂದು ಮಧ್ಯಾಹ್ನ ಶುಭಾಂಶು ಶುಕ್ಲ ಗಗನಯಾತ್ರೆ

14 ದಿನ ಬಾಹ್ಯಾಕಾಶ ನಿಲ್ದಾಣದಲ್ಲಿ ವಾಸ; 60 ವಿವಿಧ ರೀತಿಯ ಪ್ರಯೋಗ ಫ್ಲೋರಿಡಾ: ಆರು ಬಾರಿ ಮುಂದೂಡಿಕೆಯಾಗಿದ್ದ ಭಾರತೀಯ ಪ್ರಜೆ ಶುಭಾಂಶು ಶುಕ್ಲಾ ಸಹಿತ ನಾಲ್ಕು ಗಗನಯಾತ್ರಿಗಳ ಅಂತರಿಕ್ಷ ಯಾನಕ್ಕೆ ಇಂದು ಮಧ್ಯಾಹ್ನದ ಮುಹೂರ್ತ ನಿಗದಿಯಾಗಿದೆ. ಭಾರತೀಯ ಕಾಲಮಾನ ಪ್ರಕಾರ ಇಂದು ಮಧ್ಯಾಹ್ನ 12.01ಕ್ಕೆ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಂ ನೌಕೆ ನಭಕ್ಕೇರಲಿದೆ. ಸ್ಪೇಸ್‌ಎಕ್ಸ್ ಫಾಲ್ಕನ್-9 ರಾಕೆಟ್‌ ಮೂಲಕ ಶುಭಾಂಶು ಶುಕ್ಲಾ ಅವರ ಜೊತೆಗೆ ಇತರ ಮೂವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ

ಇಂದು ಮಧ್ಯಾಹ್ನ ಶುಭಾಂಶು ಶುಕ್ಲ ಗಗನಯಾತ್ರೆ Read More »

ಮೂವರು ಡಾಬಾ ಮಾಲೀಕರನ್ನು ಕೊಚ್ಚಿ ಕೊಂದ ಗ್ಯಾಂಗ್‌

ಬೆಂಗಳೂರು: ಡಾಬಾ ಮಾಲಕರನ್ನು ಕೊಚ್ಚಿ ಕೊಲೆ ಮಾಡಿರುವ ಭೀಕರ ಕೃತ್ಯ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಕಲಬುರಗಿಯ ಹೊರವಲಯದ ಪಟ್ನಾ ಗ್ರಾಮದಲ್ಲಿರುವ ಡಾಬಾದಲ್ಲಿ ಮಂಗಳವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಡಾಬಾಕ್ಕೆ ನುಗ್ಗಿ ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ

ಮೂವರು ಡಾಬಾ ಮಾಲೀಕರನ್ನು ಕೊಚ್ಚಿ ಕೊಂದ ಗ್ಯಾಂಗ್‌ Read More »

ಐದು ಶತಕ ಸಿಡಿಸಿದರೂ ಹೀನಾಯ ಸೋಲು : ಟೀಮ್‌ ಇಂಡಿಯಾ ಅಭಿಮಾನಿಗಳಿಗೆ ಭಾರಿ ನಿರಾಶೆ

ಟೆಸ್ಟ್‌ ಕ್ರಿಕೆಟ್‌ನ 148 ವರ್ಷಗಳ ಇತಿಹಾಸದಲ್ಲೇ ಕಳಪೆ ದಾಖಲೆ ಬರೆದ ಭಾರತ ತಂಡ ಲಂಡನ್‌ : ಎರಡು ಇನ್ನಿಂಗ್ಸ್‌ಗಳಲ್ಲಿ ಒಟ್ಟು ಐದು ಶತಕ ಸಿಡಿಸಿದರೂ ಇಂಗ್ಲಂಎಡ್‌ ವಿರುದ್ಧ ಭಾರತ ಸೋತಿರುವುದು ಭಾರತೀಯ ಕ್ರಿಕೆಟ್‌ ಅಭಿಮಾನಗಳಿಗೆ ಬಹಳ ನಿರಾಶೆ ಮೂಡಿಸಿದೆ. ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಐದು ವಿಕೆಟ್‌ಗಳ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ 465

ಐದು ಶತಕ ಸಿಡಿಸಿದರೂ ಹೀನಾಯ ಸೋಲು : ಟೀಮ್‌ ಇಂಡಿಯಾ ಅಭಿಮಾನಿಗಳಿಗೆ ಭಾರಿ ನಿರಾಶೆ Read More »

ಪಂಡರಾಪುರ ಭಕ್ತರ ಮೆರವಣಿಗೆ ಮೇಲೆ ಮಾಂಸ, ಮೂಳೆ ಚೂರು ಎಸೆದ ಮಹಿಳೆ

ಆಷಾಢಿ ವಾರ್ಕರಿ ಯಾತ್ರೆಯ ಸಂದರ್ಭ ನಡೆದ ಅಹಿತಕರ ಘಟನೆ ಪುಣೆ : ಪಂಡರಾಪುರದ ವಿಠ್ಠಲನ ಕ್ಷೇತ್ರಕ್ಕೆ ಸಾಗುತ್ತಿದ್ದ ವಾರ್ಕರಿಗಳ ಮೆರವಣಿಗೆಯ ಮೇಲೆ ಮುಸ್ಲಿಂ ಮಹಿಳೆಯೊಬ್ಬಳು ಮಾಂಸ ಮತ್ತು ಮೂಳೆ ಚೂರುಗಳನ್ನು ಎಸೆದು ಅಪವಿತ್ರಗೊಳಿಸಿದ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮಹಾರಾಷ್ಟ್ರದ ಪುಣೆಯ ಕ್ಯಾಂಪ್‌ ಏರಿಯಾದಲ್ಲಿ ಈ ಘಟನೆ ನಡೆದಿದೆ. ಮಾಂಸ ಎಸೆದ ಮಹಿಳೆಯನ್ನು ನಾಸಿಮ್‌ ಶೇಖ್‌ (57) ಎಂದು ಗುರುತಿಸಲಾಗಿದೆ. ಜೂನ್‌ 21ರಂದು ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರತಿ ವರ್ಷ ಆಷಾಢಿ ವಾರಿ

ಪಂಡರಾಪುರ ಭಕ್ತರ ಮೆರವಣಿಗೆ ಮೇಲೆ ಮಾಂಸ, ಮೂಳೆ ಚೂರು ಎಸೆದ ಮಹಿಳೆ Read More »

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಜ್ಜಿಯನ್ನು ಕಸದ ತೊಟ್ಟಿಗೆ ಎಸೆದ ಮೊಮ್ಮಗ!

ಅರೆಪ್ರಜ್ಞಾವಸ್ಥೆಯಲ್ಲಿದ್ದ ವೃದ್ಧೆಯನ್ನು ರಕ್ಷಿಸಿದ ಪೊಲೀಸರು ಮುಂಬೈ: ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವ ಅಜ್ಜಿಯನ್ನು ಮೊಮ್ಮಗನೇ ಕಸದ ತೊಟ್ಟಿಗೆ ಎಸೆದುಹೋದ ಅಮಾನವೀಯ ಘಟನೆಯೊಂದು ಮುಂಬಯಿ ಮಹಾನಗರದಲ್ಲಿ ಸಂಭವಿಸಿದೆ. 60 ವರ್ಷದ ಯಶೋದಾ ಗಾಯಕ್ವಾಡ್ ಎಂಬ ಹಿರಿಯ ಮಹಿಳೆ ಕಸದ ತೊಟ್ಟಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ನರಳುತ್ತಿರುವುದನ್ನು ನೋಡಿ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. ಯಶೋದಾ ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಕಳೆದ ಶನಿವಾರ ಬೆಳಗ್ಗೆ ಗೋರೆಗಾಂವ್‌ ಸಮೀಪ ಆರೆ​ ಕಾಲನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ವೃದ್ಧೆ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದನ್ನು ಅಲ್ಲೇ ಹೋಗುತ್ತಿದ್ದವರು

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಜ್ಜಿಯನ್ನು ಕಸದ ತೊಟ್ಟಿಗೆ ಎಸೆದ ಮೊಮ್ಮಗ! Read More »

ದೇಶ ಬಿಟ್ಟು ಹೋಗಿ ಇಲ್ಲವೇ ಸಾಯಲು ತಯಾರಾಗಿ : 20 ಕಮಾಂಡರ್‌ಗಳಿಗೆ ಎಚ್ಚರಿಕೆ ನೀಡಿದ ಮೊಸಾದ್‌

ಸಂಬಂಧಿಕರಿಗಿಂತ ನಾವು ನಿಮಗೆ ಬಹಳ ಹತ್ತಿರದಲ್ಲಿದ್ದೇವೆ; ಜೀವ ಉಳಿಸಿಕೊಳ್ಳಲು ಕೊನೆಯ ಆಯ್ಕೆ ಎಂದು ಧಮ್ಕಿ ಟೆಹ್ರಾನ್‌: ಕದನ ವಿರಾಮ ಒಪ್ಪಂದವಾಗಿಲ್ಲ ಎಂದು ಇರಾನ್‌ ಹೇಳಿದ ಬೆನ್ನಿಗೆ 12 ಗಂಟೆಯ ಒಳಗಡೆ ಇರಾನ್‌ ತೊರೆಯಿರಿ. ಇಲ್ಲದಿದ್ದರೆ ನಿಮ್ಮನ್ನು ಹತ್ಯೆ ಮಾಡಲಾಗುವುದು ಎಂದು ಇರಾನ್‌ನ ಸೇನೆ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ 20 ಕಮಾಂಡರ್‌ಗಳಿಗೆ ಇಸ್ರೇಲ್‌ ಗುಪ್ತಚರ ಸಂಸ್ಥೆ ಮೊಸಾದ್‌ ಕರೆ ಮಾಡಿ ನೇರ ಎಚ್ಚರಿಕೆ ನೀಡಿದೆ.ಐಆರ್‌ಜಿಸಿಯ ಕಮಾಂಡರ್‌ಗೆ ಮೊಸಾದ್‌ ಅಧಿಕಾರಿ ಕರೆ ಮಾಡಿ ಬೆದರಿಕೆ ಹಾಕುತ್ತಿರುವ ಆಡಿಯೋ ಸಾಮಾಜಿಕ

ದೇಶ ಬಿಟ್ಟು ಹೋಗಿ ಇಲ್ಲವೇ ಸಾಯಲು ತಯಾರಾಗಿ : 20 ಕಮಾಂಡರ್‌ಗಳಿಗೆ ಎಚ್ಚರಿಕೆ ನೀಡಿದ ಮೊಸಾದ್‌ Read More »

ಕದನ ವಿರಾಮ ಒಪ್ಪಂದ ಆಗಿಲ್ಲ : ಇರಾನ್‌ ಸ್ಪಷ್ಟನೆ

ಟ್ರಂಪ್‌ ಹೇಳಿಕೆಯನ್ನು ಕೆಲವೇ ತಾಸುಗಳಲ್ಲಿ ನಿರಾಕರಿಸಿ ಉಲ್ಟಾ ಹೊಡೆದ ಇರಾನ್‌ ಟೆಹ್ರಾನ್‌ : ಇರಾನ್-ಇಸ್ರೇಲ್ ಯುದ್ಧ ಮುಂದಿನ 12 ಗಂಟೆಯಲ್ಲಿ ಸಂಪೂರ್ಣ ನಿಂತುಹೋಗುತ್ತದೆ, ಕದನ ವಿರಾಮಕ್ಕೆ ಇರಾನ್ ಹಾಗೂ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ ಬೆನ್ನಲ್ಲೇ ಉಲ್ಟಾ ಹೊಡೆದಿರುವ ಇರಾನ್‌ ಯಾವುದೇ ಕದನ ವಿರಾಮ ಒಪ್ಪಂದ ಆಗಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್

ಕದನ ವಿರಾಮ ಒಪ್ಪಂದ ಆಗಿಲ್ಲ : ಇರಾನ್‌ ಸ್ಪಷ್ಟನೆ Read More »

ನಿವೃತ್ತರಾಗಿ 15 ವರ್ಷದ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ!

ಲೋಕಾಯುಕ್ತ ದಾಳಿಯಲ್ಲಿ ಬಯಲಾದ ಮಂಗಳೂರು ಮಹಾನಗರ ಪಾಲಿಕೆಯ ಭಾರಿ ಭ್ರಷ್ಟಾಚಾರ ಮಂಗಳೂರು: ಕಳೆದ ಶನಿವಾರ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ದಾಳಿ ಮಾಡಿದಾಗ ಅಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಅದರಲ್ಲೂ 15 ವರ್ಷದ ಹಿಂದೆ ನಿವೃತ್ತರಾಗಿದ್ದ ಆರೋಗ್ಯ ಅಧಿಕಾರಿಯೊಬ್ಬರು ಈಗಲೂ ಅದೇ ಹುದ್ದೆಯಲ್ಲಿ ಮುಂದುವರಿಯುತ್ತಿರುವುದನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳೇ ಚಕಿತರಾಗಿದ್ದಾರೆ. ಜೂನ್‌ 21ರಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ಹಾಗೂ ಪೊಲೀಸ್

ನಿವೃತ್ತರಾಗಿ 15 ವರ್ಷದ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ! Read More »

error: Content is protected !!
Scroll to Top