ಸುದ್ದಿ

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ. […]

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭೂತಾರಾಧನೆ-ಜಾನಪದೀಯ ಅಧ್ಯಯನ, ಜಾಲಾಟ, ಸಂಸ್ಕೃತಿ ಸಿರಿ, ತುಳುಮಾನ್ಯ ಹಾಗೂ ಇನ್ನಿತರ ಕೃತಿಗಳು ಡಾ.ಚಿನ್ನಪ್ಪ ಗೌಡರ ಸಾಹಿತ್ಯ ಕೃತಿಗಳಾಗಿವೆ. ಈ ಹಿಂದೆ ಕರ್ನಾಟಕ ಸಾಹಿತ್ಯ

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ

ಪುತ್ತೂರು : ಹತ್ತೂರು ಒಡೆಯ ಪುತ್ತೂರಿನ ಮಹತೋಬಾರ ಶ್ರೀ ಮಹಾಲಿಂಗೇಶ್ವರ ಅನೇಕ ಇತಿಹಾಸವನ್ನು ಒಳಗೊಂಡಿದೆ. ಕಾರಣಿಕ ಕಥೆಯನ್ನು ಹೊಂದಿರುವ  ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದ ಅಗಳುಗಳು ಮುತ್ತಾಗಿರುವ  ಇತಿಹಾಸವಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಾರಿಯ ಜಾತ್ರೆಯಲ್ಲಿ ಭಕ್ತರಿಗೆ ಅನ್ನಪ್ರಸಾದವನ್ನು ದೇವಳದ ಕೆರೆಯ ಬಳಿಯ ವಿಶಾಲವಾದ ಜಾಗದಲ್ಲಿ ವಿತರಣೆ ಮಾಡುವುದೆಂದು ತೀರ್ಮಾನಿಸಿದಂತೆ ಮಾ.24ರಂದು ದೇವಳದ ಕೆರೆಯ ಬಳಿ ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಇದೀಗ ಈ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ Read More »

ಆನ್‌ಲೈನ್ ಮೂಲಕ  ಬಡಜನರ ಬ್ಯಾಂಕ್‍ ಖಾತೆ ವಂಚನೆ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಆನ್‌ಲೈನ್ ವಂಚನೆಯ ಮೂಲಕ  ಬಡ ಜನರ ಬ್ಯಾಂಕ್ ಖಾತೆಗಳನ್ನು ದುರುಪಯೋಗಿಸುತ್ತಿದ್ದ  ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಸೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28), ರಾಮದೇವ ಗಲ್ಲಿಯ ಅನೂಪ್ ಕಾರೇಕರ್ (42) ಬಂಧಿತ ಆರೋಪಿಗಳು. ದಕ್ಷಿಣ ಕನ್ನಡ ಸೈಬರ್ ಕ್ರೈಂ ಪ್ರಕರಣದ ತನಿಖೆ ವೇಳೆ ಆರೋಪಿಗಳ ಪ್ಲಾನ್ ತಿಳಿದು ಬಂದಿದೆ. ಮುಗ್ಧ ಜನರ ಬ್ಯಾಂಕ್ ಖಾತೆಯೇ ಇವರ ಗುರಿಯಾಗಿತ್ತು. ಆರೋಪಿಗಳು ಅಮಾಯಕರಿಗೆ ಚಿಲ್ಲರೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯಲು

ಆನ್‌ಲೈನ್ ಮೂಲಕ  ಬಡಜನರ ಬ್ಯಾಂಕ್‍ ಖಾತೆ ವಂಚನೆ : ಇಬ್ಬರು ಆರೋಪಿಗಳ ಬಂಧನ Read More »

ಜೈಲಿನ ಮೊಬೈಲ್‌ ಜಾಮರ್‌ನಿಂದ ಪರಿಸರದ ನಾಗರಿಕರಿಗೆ ನೆಟ್‌ವರ್ಕ್‌ ಸಮಸ್ಯೆ

ನೆಟ್‌ವರ್ಕ್‌ ಇಲ್ಲದೆ ತುರ್ತು ಸಂದರ್ಭದಲ್ಲಿ ಉಂಟಾದ ಸಮಸ್ಯೆಯನ್ನು ವಿವರಿಸಿದ್ದಾರೆ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಮಂಗಳೂರು: ಜೈಲಿನಲ್ಲಿರುವ ಕೈದಿಗಳು ಮೊಬೈಲ್‌ ಫೋನ್‌ ಬಳಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜೈಲಿನೊಳಗೆ ಜಾಮರ್‌ಗಳನ್ನು ಜೈಲು ಅಧಿಕಾರಿಗಳು ಅಳವಡಿಸುತ್ತಾರೆ. ಆದರೆ ಈ ಜಾಮರ್‌ಗಳು ಜೈಲಿನ ಸುತ್ತುಮುತ್ತಲಿನ ಸಮಾರು 1 ಕಿಲೋಮೀಟರ್‌ ವ್ಯಾಪ್ತಿಯಲ್ಲಿರುವ ಮೊಬೈಲ್‌ಗಳ ನೆಟ್‌ವರ್ಕ್‌ ಸಂಪರ್ಕವನ್ನು ತೀವ್ರವಾಗಿ ಬಾಧಿಸುತ್ತವೆ. ಜನರು ನಿತ್ಯ ಮೊಬೈಲ್‌ ನೆಟ್‌ವರ್ಕ್‌ ಇಲ್ಲದೆ ಪರದಾಡಬೇಕಾಗುತ್ತದೆ. ಇದು ಕೆಲವು ತುರ್ತು ಸಂದರ್ಭದಲ್ಲಿ ಭಾರಿ ಅನಾಹುತಗಳಿಗೆ ಎಡೆಮಾಡಿಕೊಡಬಹುದು. ಇಂಥ ಒಂದು ಪರಿಸ್ಥಿಯನ್ನು

ಜೈಲಿನ ಮೊಬೈಲ್‌ ಜಾಮರ್‌ನಿಂದ ಪರಿಸರದ ನಾಗರಿಕರಿಗೆ ನೆಟ್‌ವರ್ಕ್‌ ಸಮಸ್ಯೆ Read More »

ಶರವೂರಿನಲ್ಲಿ ಕೌಶಿಕ ಚರಿತ್ರೆ ತಾಳಮದ್ದಳೆ

ಶರವೂರು : ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರು ಇದರ ವತಿಯಿಂದ ದಿನಾಂಕ 22/03/2025 ರಂದು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ  ಸೇವಾರೂಪದ ಕೌಶಿಕ ಚರಿತ್ರೆ  ತಾಳಮದ್ದಳೆ  ನಡೆಯಿತು. ಭಾಗವತರಾಗಿ  ಮಹೇಶ್ ಕನ್ಯಾಡಿ, ಗೋಪಾಲ ಭಟ್ ನೈಮಿಷ, ಸುಬ್ರಹ್ಮಣ್ಯ ರಾವ್ ಶರವೂರು, ಕುಸುಮಾಕರ ಆಚಾರ್ಯ ಹಳೆನೇರೆಂಕಿ. ಹಿಮ್ಮೇಳದಲ್ಲಿ ಪದ್ಮರಾಜ ತಂತ್ರಿ, ಭಾಸ್ಕರ ಕೋಳ್ಯೂರು, ಚಂದ್ರ ದೇವಾಡಿಗ, ಶಿಕಿನ್ ಶರ್ಮ ಶರವೂರು,ಚಕ್ರತಾಳದಲ್ಲಿ ಸುರೇಂದ್ರ ಭಟ್ ಕಳಸ ಮತ್ತುಅರ್ಥಧಾರಿಗಳಾಗಿ

ಶರವೂರಿನಲ್ಲಿ ಕೌಶಿಕ ಚರಿತ್ರೆ ತಾಳಮದ್ದಳೆ Read More »

ಕೆ.ಎಸ್‌.ಎಸ್ ಕಾಲೇಜಿನ  ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸುವಿಕೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರ ಮಾ. 10 ಸೋಮವಾರದಿಂದ ಮಾ.12ರವರೆಗೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ರಾಜ್ಯ ಪುರಸ್ಕಾರ ಪಡೆದ ರೇಂಜರ್ ವಿದ್ಯಾರ್ಥಿ ಶರಣ್ಯ ಮತ್ತು ಕವಿತಾಕ್ಷಿ ಅವರು ಭಾಗವಹಿಸಿದ್ದಾರೆ.

ಕೆ.ಎಸ್‌.ಎಸ್ ಕಾಲೇಜಿನ  ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸುವಿಕೆ Read More »

ಪಿಕ್ಅಪ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತ್ಯು

ಬಂಟ್ವಾಳ : ತುಂಬೆ ಜಂಕ್ಷನ್ ಬಳಿಯ ಹೆದ್ದಾರಿಯಲ್ಲಿ ಪಿಕ್ಅಪ್ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ವಾಹನ ಢಿಕ್ಕಿಯಾಗಿ ಮೃತ ಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತುಂಬೆ ನಿವಾಸಿ ಮಹಾಬಲ (47) ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಕ್ಅಪ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತ್ಯು Read More »

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ ಸತ್ಯ ಎಂದು ಹೇಳಿದೆ.

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »

ಮಂಗಳೂರು-ಮುಂಬಯಿ ಮಧ್ಯೆ ವಂದೇ ಭಾರತ್‌ ರೈಲು ಓಡಿಸಲು ಸಿದ್ಧತೆ

12 ತಾಸಿನಲ್ಲಿ ಮುಂಬಯಿಯಿಂದ ಮಂಗಳೂರು ತಲುಪಲಿರುವ ರೈಲು ಮಂಗಳೂರು: ಮುಂಬಯಿಯಲ್ಲಿ ನೆಲೆಸಿರುವ ಕರಾವಳಿ ಭಾಗದ ಜನರಿಗೆ ರೈಲ್ವೆ ಸಿಹಿಸುದ್ದಿ ನೀಡಿದೆ. ಭಾರಿ ಜನಮೆಚ್ಚುಗೆಗೆ ಪಾತ್ರವಾಗಿರುವ ವಂದೇ ಭಾರತ್ ರೈಲು ಸೇವೆ ಮಂಗಳೂರು-ಮುಂಬಯಿ ಮಧ್ಯೆ ಶುರುವಾಗಲಿದ್ದು, ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಪ್ರಸ್ತುತ ಮುಂಬಯಿ-ಮಂಗಳೂರು ನಡುವಿನ ರೈಲು ಪ್ರಯಾಣಕ್ಕೆ 15-16 ತಾಸು ಹಿಡಿಯುತ್ತದೆ. ವಂದೇ ಭಾರತ್‌ ರೈಲು ಕೇವಲ 12 ತಾಸಿನಲ್ಲಿ ತಲುಪುತ್ತದೆ. ಹೀಗಾಗಿ ವಂದೇ ಭಾರತ್‌ನಿಂದ ಜನರ ಸಮಯ ಬಹಳಷ್ಟು ಉಳಿತಾಯವಾಗಲಿದೆ. ವಂದೇ ಭಾರತ್‌ ಪ್ರಯಾಣ ಆರಾಮದಾಯಕವೂ ಹೌದು.

ಮಂಗಳೂರು-ಮುಂಬಯಿ ಮಧ್ಯೆ ವಂದೇ ಭಾರತ್‌ ರೈಲು ಓಡಿಸಲು ಸಿದ್ಧತೆ Read More »

error: Content is protected !!
Scroll to Top