ಸುದ್ದಿ

ಮೇರಠ್‌ನಲ್ಲೂ ನಡೆಯಿತು ಕಾರ್ಕಳದ ದೆಪ್ಪುತ್ತೆ ಮಾದರಿ ಕೊಲೆ ಕೃತ್ಯ

ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂಡು ಕತ್ತರಿಸಿ ಡ್ರಮ್‌ನಲ್ಲಿ ತುಂಬಿಸಿಟ್ಟ ಪತ್ನಿ ಕೋರ್ಟಿಗೆ ಕರೆತಂದಾಗ ವಕೀಲರು ಮಾಡಿದ್ದ ಮಾತ್ರ ಬೇರೆಯೇ ಕ್ರಮ ಲಖನೌ: ಕಾರ್ಕಳದ ಅಜೆಕಾರು ಸಮೀಪ ದೆಪ್ಪುತ್ತೆಯಲ್ಲಿ ಕಳೆದ ವರ್ಷ ಹೆಂಡತಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ವಿಷ ಹಾಕಿ ಕೊಂದ ಕೃತ್ಯದ ಮಾದರಿಯಲ್ಲೇ ಉತ್ತರ ಪ್ರದೇಶದ ಮೇರಠ್‌ನಲ್ಲಿ ಹೆಂಡತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಂದು 15 ತುಂಡುಗಳಾಗಿ ಕತ್ತರಿಸಿ ಶವವನ್ನು ಕತ್ತರಿಸಿ ತುಂಡು ತುಂಡು ಮಾಡಿ ಪ್ಲಾಸ್ಟಿಕ್‌ ಡ್ರಮ್‌ಗೆ ಹಾಕಿ ಅದರ ಮೇಲೆ ಸಿಮೆಂಟ್‌ […]

ಮೇರಠ್‌ನಲ್ಲೂ ನಡೆಯಿತು ಕಾರ್ಕಳದ ದೆಪ್ಪುತ್ತೆ ಮಾದರಿ ಕೊಲೆ ಕೃತ್ಯ Read More »

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ  

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲಿಸರು ಇಬ್ಬರನ್ನು ಬಂಧಿಸಿದ ಘಟನೆ ಬಿ.ಸಿ.ರೋಡು ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ. ಬಂಟ್ವಾಳ ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಖಾಸಗಿ ಕಟ್ಟಡವೊಂದರ ಬಳಿಯಲ್ಲಿ ಆಟಕ್ಕೆ ತಯಾರು ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಪ್ರಮುಖ ಆರೋಪಿಗಳಾದ ನಾವೂರ ನಿವಾಸಿ ಸುರೇಶ್ ಹಾಗೂ ಮಿತ್ತಬೈಲು ನಿವಾಸಿ ಭಾಸ್ಕರ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 3.500 ರೂ ನಗದು ಹಾಗೂ ಆಟಕ್ಕೆ

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ   Read More »

ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ

ಬೆಂಗಳೂರಿನ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಬೆಂಗಳೂರು : ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟೆಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್​ ಚಂದ್ರ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಈತ ಪಾಕಿಸ್ಥಾನದ ಗೂಢಚಾರ ಸಂಸ್ಥೆ ಐಎಸ್‌ಐ ಪರವಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಹ್ಯಾಕಾಶ ಮತ್ತು ಸೇನೆಗಾಗಿ ಆಧುನಿಕ ರಕ್ಷಣಾ ಉಪಕರಣಗಳನ್ನು ತಯಾರಿಸುವ ಕೇಂದ್ರ ಸರಕಾರ ಸ್ವಾಮ್ಯದ ಬಿಇಎಲ್​ನ ಪ್ರಾಡಕ್ಟ್​​​

ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 38 ಕೋ. ರೂ. ಮೌಲ್ಯದ ಕೊಕೇನ್‌ ವಶ

75 ಕೋ. ರೂ. ಮಾದಕ ವಸ್ತು ವಶವಾದ ಬೆನ್ನಲ್ಲೇ ಇನ್ನೊಂದು ಪ್ರಕರಣ ಬೆಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ರಾಜ್ಯದಲ್ಲೇ ಅತಿದೊಡ್ಡ ಪ್ರಕರಣವಾದ 75 ಕೋ.ಟಿ ರೂ. ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡ ಬೆನ್ನಲ್ಲೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 38 ಕೋ.ರೂ. ಮೌಲ್ಯದ ಕೊಕೇನ್‌ ವಶವಾಗಿದೆ.ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಘಾನಾ ದೇಶದ ಮಹಿಳೆಯೊಬ್ಬಳನ್ನು ಬಂಧಿಸಿ 38.4 ಕೋಟಿ ರೂ. ಮೌಲ್ಯವಿರುವ 3.186 ಕೆಜಿ ಕೊಕೇನ್‌ ಮಾದಕ ವಸ್ತು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 38 ಕೋ. ರೂ. ಮೌಲ್ಯದ ಕೊಕೇನ್‌ ವಶ Read More »

ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ : ಸಿದ್ದರಾಮಯ್ಯ ದಿಗ್ಭ್ರಮೆ

ದೇಶಾದ್ಯಂತ ಸುದ್ದಿಯಾದ ಮಲ್ಪೆ ಬಂದರಿನಲ್ಲಿ ನಡೆದ ಘಟನೆ ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೊ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೆ ಇರಲಿ ಒಬ್ಬ ಮಹಿಳೆಗೆ ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ

ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ : ಸಿದ್ದರಾಮಯ್ಯ ದಿಗ್ಭ್ರಮೆ Read More »

ಅಬ್ಬಬ್ಬಾ ಈ ಶ್ವಾನದ ಬೆಲೆ 49 ಕೋ.ರೂ.!

ಜಗತ್ತಿನ ದುಬಾರಿ ನಾಯಿಯನ್ನು ಖರೀದಿಸಿದ ಬೆಂಗಳೂರಿನ ಶ್ವಾನಪ್ರೇಮಿ ಬೆಂಗಳೂರು: ಬೆಂಗಳೂರಿನ ಶ್ವಾನಪ್ರೇಮಿ ಎಸ್. ಸತೀಶ್ ಎಂಬುವರು ಜಗತ್ತಿನ ಅತಿ ದುಬಾರಿ ನಾಯೊಂದನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಈ ನಾಯಿಯ ಬೆಲೆ ಕೇಳಿದರೆ ಬೆಚ್ಚಿಬೀಳುವುದು ಖಂಡಿತ. ಇದು ಬರೋಬ್ಬರಿ 49 ಕೋಟಿ ರೂ. (4.4 ಮಿಲಿಯನ್ ಪೌಂಡ್‌ಗಳು) ಬೆಲೆಬಾಳುವ ಅತ್ಯಂತ ಅಪರೂಪದ ನಾಯಿ. ವೂಲ್ಫ್ ಡಾಗ್ ಎಂಬ ವಿಶೇಷ ತಳಿಯ ಶ್ವಾನವನ್ನು ಅವರು ಇಷ್ಟು ದುಬಾರಿ ಬೆಲೆಕೊಟ್ಟು ಖರೀದಿಸಿ ಬೆಂಗಳೂರಿಗೆ ತಂದಿದ್ದಾರೆ. ಕ್ಯಾಡಬಾಮ್ ಒಕಾಮಿ ಎಂದು ಕರೆಯಲ್ಪಡುವ ಈ

ಅಬ್ಬಬ್ಬಾ ಈ ಶ್ವಾನದ ಬೆಲೆ 49 ಕೋ.ರೂ.! Read More »

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಹಾಗೂ ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದ ವ್ಯಾಪಾರ ಹಾಗೂ ಸಾರಿಗೆ ವ್ಯವಸ್ಥೆ ತೀವ್ರ ಅಡಚಣೆಯಾಗುತ್ತಿದೆ ಎಂದು ಎಂ.ಎಲ್‍.ಸಿ ಕಿಶೋರ್ ಕುಮಾರ್ ಪುತ್ತೂರು ಇಂದು ವಿಧಾನ ಪರಿಷತ್ತಿನಲ್ಲಿ ಚರ್ಚಿಸಿದ್ದಾರೆ. ಈ ಹಿಂದೆ ಮಾನ್ಯ ಉಪಮುಖ್ಯಮಂತ್ರಿಗಳು “ಮಂಗಳೂರು ಸಂಜೆ 8 ಗಂಟೆಗೆ ಬಂದ್ ಆಗುತ್ತದೆ” ಎಂದು ಹೇಳಿದ ಕಾರಣಕ್ಕೂ ಸಮರ್ಪಕ ರಸ್ತೆ ಸಂಪರ್ಕದ ಅಭಾವವೇ ಕಾರಣ ಎಂಬುದಾಗಿ ಶಾಸಕರು ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ನಡುವಿನ

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು Read More »

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ

ಗಡ್ಕರಿ ಎದುರು 6.5 ಲಕ್ಷ ಮತಗಳಿಂದ ಸೋತವನೇ ಗಲಭೆಯ ಸೂತ್ರಧಾರ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿರುವ ಕೋಮು ಹಿಂಸಾಚಾರದ ರೂವಾರಿಯ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಫಾಹಿಮ್‌ ಶಮೀಮ್‌ ಖಾನ್‌ ಎಂಬಾತನ ಪ್ರಚೋದನಕಾರಿ ಭಾಷಣದಿಂದ ಹಿಂಸಾಚಾರ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಫಾಹಿಮ್‌ ಖಾನ್‌ ನಾಗಪುರದ ಯಶೋಧರ ನಗರದ ಸಂಜಯ್‌ ಭಾಗ್‌ ಕಾಲನಿಯ ನಿವಾಸಿಯಾಗಿದ್ದು, ಗಲಭೆಯ ಬಳಿಕ ತಲೆಮರೆಸಿಕೊಂಡಿದ್ದಾನೆ. ನಾಗಪುರ ನಗರದಲ್ಲಿ ರಾಜಕೀಯ ಮುಖಂಡನಾಗಿ ಗುರುತಿಸಿಕೊಂಡಿದ್ದ 38ರ

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ Read More »

ಮೀನಿನ ಬರಕ್ಕೆ ಲೈಟ್‌ ಫಿಶಿಂಗ್‌ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು

ಕೊನೆಗೂ ಕಾರ್ಯಾಚರಣೆಗಿಳಿದ ಮೀನುಗಾರಿಕೆ ಇಲಾಖೆ ಉಡುಪಿ : ಈ ವರ್ಷ ಕಂಡುಬಂದಿರುವ ಮೀನಿನ ಕೊರತೆಗೆ ಸಮುದ್ರದಲ್ಲಿ ನಡೆಯುತ್ತಿರುವ ಲೈಟ್‌ಫಿಶಿಂಗ್‌ ಕಾರಣ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೀನುಗಾರಿಕೆ ಇಲಾಖೆ ಕರಾವಳಿ ರಕ್ಷಣಾ ಪಡೆಯ ಸಹಯೋಗದಲ್ಲಿ ಲೈಟ್‌ ಫಿಶಿಂಗ್‌ ಮಟ್ಟ ಹಾಕಲು ತೀವ್ರ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವರ್ಷ ಮಾರ್ಚ್‌ಗಾಗುವಾಗಲೇ ಮೀನಿನ ತೀವ್ರ ಬರ ಕಂಡುಬಂದಿದ್ದು, ಸಾಕಷ್ಟು ಮೀನು ದೊರೆಯದೆ ಹಾಕಿದ ಡೀಸೆಲ್‌ನ ಖರ್ಚು ಕೂಡ ಹುಟ್ಟುತ್ತಿಲ್ಲ ಎಂಬ ಕಾರಣಕ್ಕೆ ಆಳ ಸಮುದ್ರ ಮೀನುಗಾರಿಕೆಯ ಮೀನುಗಳೆಲ್ಲ

ಮೀನಿನ ಬರಕ್ಕೆ ಲೈಟ್‌ ಫಿಶಿಂಗ್‌ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು Read More »

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ

ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾರ್ಚ್ 28, 2022 ರಂದು ಅಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ 780 ಕೋಟಿ ರೂ. ಅನುದಾನ ಬಿಡುಗಡೆ ಆದೇಶ ಆಗಿದ್ದು, ಜತೆಗೆ 230 ಕೋಟಿ ರೂ. ಕಡಬ, ಬೆಳ್ತಂಗಡಿ, ಪುತ್ತೂರಿಗೆ ಅನುದಾನ ನೀಡಲಾಗಿದೆ. ಆದರೆ ಪುತ್ತೂರು ಹಾಲಿ ಶಾಸಕರು 780 ಕೋಟಿ ರೂ. ಅನುದಾನದ ಬದಲಿಗೆ 1010 ಕೋಟಿಯ ಫ್ಲೆಕ್ಸ್ ಗಳನ್ನು  ಹಾಕಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿರುವುದು ನಾಚಿಕೆ ಗೇಡಿನ ವಿಚಾರ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ Read More »

error: Content is protected !!
Scroll to Top