ಸುದ್ದಿ

ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನ

ಮಹತ್ವದ ಮಾಹಿತಿಗಳನ್ನು ರೇಖಾಚಿತ್ರದೊಂದಿಗೆ ಪಾಕ್‌ ಏಜೆಂಟರಿಗೆ ಕೊಡುತ್ತಿದ್ದ ಪಾತಕಿ ಮುಂಬೈ: ದೇಶದ ಯುದ್ಧನೌಕೆಗಳು, ಜಲಾಂತರ್ಗಾಮಿಗಳ ಸೂಕ್ಷ್ಮಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ. ಥಾಣೆಯ ಕಲ್ವಾ ನಿವಾಸಿ ಮೆಕ್ಯಾನಿಕಲ್ ಇಂಜಿನಿಯರ್ ರವೀಂದ್ರ ವರ್ಮಾ (27) ಬಂಧಿತ ಆರೋಪಿ. ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ರವೀಂದ್ರನನ್ನು ಬಂಧಿಸಲಾಗಿದೆ. ವರ್ಮಾ ರಕ್ಷಣಾ ತಂತ್ರಜ್ಞಾನ ಸಂಸ್ಥೆಯಲ್ಲಿ ಜೂನಿಯರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ದಕ್ಷಿಣ ಮುಂಬೈನಲ್ಲಿರುವ ನೇವಲ್ ಡಾಕ್‌ಯಾರ್ಡ್‌ಗೆ […]

ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನ Read More »

ಬೆಳ್ಳಿಪ್ಪಾಡಿಯಲ್ಲಿ ಭೂಕುಸಿತ | ಅಪಾಯದಲ್ಲಿರುವ ಎರಡು ಮನೆಗಳು

ಪುತ್ತೂರು : ತಾಲೂಕಿನ ಬೆಳ್ಳಿಪಾಡಿ ಗ್ರಾಮದಲ್ಲಿ ಭೀಕರ ಭೂಕುಸಿತವಾಗಿದ್ದು,  ಬೆಳ್ಳಿಪ್ಪಾಡಿ ಕಠಾರ ಕೋಟೆಲು ಭಾಗಕ್ಕೆ ಸಂಪರ್ಕಿಸುವ ಸಕಲೇಶ್ವರ ದೇವಸ್ಥಾನದ ಬಳಿ ಇರುವ  ಗುತ್ತಿನಮನ ಎಂಬಲ್ಲಿ ರಸ್ತೆಗೆ ಧರೆ ಕುಸಿದುಬಿದ್ದು ದರಿಂದ ಸಂಪರ್ಕ ಕಡಿತವಾಗಿದೆ . ಮಣ್ಣು ಕೆಳಗಿನ ತೋಟಗಳಿಗೂ ನುಗ್ಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ಸ್ಥಳದಲ್ಲಿ ಭೂಕುಸಿತ ಸಂಭವಿಸಿದ್ದು, ಮೇಲ್ಬಾಗದಲ್ಲಿ ಎರಡು ಮನೆಗಳು ತೀರ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ರಸ್ತೆಯನ್ನು ಉಪಯೋಗಿಸುವಂತೆ ಸ್ಥಳೀಯರು ತಿಳಿಸಿದ್ದಾರೆ. ಇಲಾಖೆ ತಕ್ಷಣ ಎಚ್ಚೆತ್ತುಕೊಂಡು

ಬೆಳ್ಳಿಪ್ಪಾಡಿಯಲ್ಲಿ ಭೂಕುಸಿತ | ಅಪಾಯದಲ್ಲಿರುವ ಎರಡು ಮನೆಗಳು Read More »

ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದೆಲ್ಲೆಡೆ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್ ಪಿ.ಮಂಜುನಾಥ ನೇತೃತ್ವದಲ್ಲಿ ದಾಳಿಯಾಗಿದ್ದು, ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ

ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್​ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು

ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು : ಮಂಜನಾಡಿಯ ಮೊಂಟೆಪದವಿನಲ್ಲಿ ಶುಕ್ರವಾರ ನಸುಕಿನ ಹೊತ್ತು ಗುಡ್ಡಕುಸಿತವಾಗಲು ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣವೆಂಬ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ಗಾಯಾಳು ಅಶ್ವಿನಿ ಸಹೋದರ ತೇಜು ಕುಮಾರ್ ಆರೋಪಿಸಿದ್ದಾರೆ.ಈ ಕುರಿತಾಗಿ ಕೊಣಾಜೆ ಪೊಲೀಸ್

ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್​ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು Read More »

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು

ಮಹಾಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಅನಾಹುತ ಬೆಂಗಳೂರು : ರಾಜ್ಯದಲ್ಲಿ ಮೇ ತಿಂಗಳಲ್ಲಿ ಇಷ್ಟು ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು 125 ವರ್ಷಗಳಲ್ಲಿ ಇದೇ ಮೊದಲು ಎನ್ನಲಾಗಿದೆ. ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳೊಂದರಲ್ಲೇ ಸುರಿದಿದೆ. ಇದು ಶತಮಾನದ ಮಳೆ ಎಂದು ಹೇಳಲಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಗೆ 67 ಜನರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ನಾಶನಷ್ಟ ಉಂಟಾಗಿದೆ. ಭೂಕುಸಿತ, ನೆರೆ, ವಿದ್ಯುತ್‌ ಶಾಕ್‌ ಮತ್ತಿತರ ಅವಘಡಗಳಲ್ಲಿ ಶುಕ್ರವಾರ ಒಂದೇ

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು Read More »

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ

ಸಿಗರೇಟು ಮತ್ತು ತಂಬಾಕು ಉತ್ಪನ್ನ ಬಳಕೆಯ ಹೊಸ ಕಾನೂನು ಜಾರಿ ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ತಿಂದು ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ‘ಸಿಗರೇಟು ಮತ್ತು ಇತರ ತಂಬಾಕು

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ Read More »

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ

ಕೋವಿಟ್‌ ಟೆಸ್ಟ್‌ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ಕೊರೊನದಿಂದ ಇನ್ನೊಬ್ಬರು ಸಾವಿಗೀಡಾಗಿದ್ದು, ಇದರೊಂದಿಗೆ ಹೊಸ ಅಲೆಗೆ ರಾಜ್ಯದದಲ್ಲಿ ಒಟ್ಟು ಮೂವರು ಬಲಿಯಾದಂತಾಗಿದೆ. ಮೈಸೂರಲ್ಲಿ 63 ವರ್ಷದ ವ್ಯಕ್ತಿ ಕೊವಿಡ್‌ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ತೀವ್ರ ಉಸಿರಾಟದ ಸೋಂಕಿನ ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ Read More »

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ Read More »

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ

ಮಂಗಳೂರು : ಈ ಭಾರಿಯ ವರ್ಷಧಾರೆ ನಿರೀಕ್ಷೆಕ್ಕಿಂತಲೂ ಸುರಿಯುತ್ತಿದ್ದು, ಮಳೆಯಿಂದಾಗಿ ಎಲ್ಲೆಡೆ ಅವಘಡಗಳು ಸಂಭವಿಸಿದೆ. ಇದಿಗ ಅಂತದ್ದೇ ಹೃದಯವಿದ್ರಕವಾದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಹೌದು ಮಂಗಳೂರು  ಉಳ್ಳಾಲದಲ್ಲಿ ಭೂ ಕುಸಿತಕ್ಕೆ ಸಿಲುಕಿ ಮನೆಯಲ್ಲಿ ಮಲಗಿದ್ದ 3 ಜನರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಆದರೆ, ಮನೆ ಕುಸಿತವಾದಾಗ ತನ್ನ ಪ್ರಾಣ ಹೋದರೂ ಸರಿ ಮಕ್ಕಳನ್ನು ಉಳಿಸೋಣವೆಂದು ಗೋಡೆಯ ಭಾರ ತಾನು ತಡೆದುಕೊಂಡು ಮಕ್ಕಳನ್ನು ಉಳಿಸಿದ್ದಳು. ಗೋಡೆಯ ಭಾರಕ್ಕೆ ದೇಹ ಜರ್ಜಿರಿತವಾಗಿ ಪ್ರಜ್ಞೆ ಕಳೆದುಕೊಂಡಿದ್ದಳು. ಗೋಡೆ ಬಿದ್ದ ಕ್ಷಣದಲ್ಲಿ

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ Read More »

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಹಾಯಕ ಪವರ್ ಮ್ಯಾನ್ ವಿಜೇಶ್ ಜೈನ್ HT ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ಜೈನ್ ದಂಪತಿಗಳ ಎರಡನೇ ಮಗ ವಿಜೇಶ್ ಜೈನ್ (27) ಎಂಬವರು ಓಡಿಲ್ನಾಳ ಗ್ರಾಮದ ಕುಮ್ಮುಂಜ ಎಂಬಲ್ಲಿ HT ಲೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಮೇ.30 ರಂದು ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವಿಜೇಶ್ ಜೈನ್ ಶವವನ್ನು

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು Read More »

error: Content is protected !!
Scroll to Top