ಸುದ್ದಿ

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌

ಯುವತಿಗೆ ಮಾಸಿಕ ಹತ್ತು ಸಾವಿರ ರೂ. ಜೀವನಾಂಶ ನೀಡಲು ಸಿದ್ಧರಿದ್ದಿರಾ ಎಂದು ಕೇಳಿದ ಕೋರ್ಟ್‌ ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ. ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ. ಯುವತಿಗೆ ಮಾಸಿಕ […]

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌ Read More »

ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ವೆಬ್‌ಸೈಟ್‌, ಡಿಜಿಲಾಕರ್‌ನಲ್ಲೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯ ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಕಾಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಈ ಬಾರಿ ರಾಜ್ಯದ ಒಟ್ಟು 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರ ಶೈಕ್ಷಣಿಕ ಬದುಕಿನ ಮೊದಲ ಮಹತ್ವದ ತಿರುವು ಇಂದು ನಿರ್ಧಾರವಾಗಲಿದೆ. ಫಲಿತಾಂಶ ಪ್ರಕಟವಾದ ನಂತರ

ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ Read More »

ಗಾಂಜಾ ಬೆಳೆದು ಪೊಲೀಸರ ಅತಿಥಿಯಾದ ಟೆಕ್ಕಿ

ಹೈದರಾಬಾದ್: ಡ್ರಗ್ಸ್‌ ‌ಕಾರಣದಿಂದ ಕೆಲಸ ಕಳೆದುಕೊಂಡಿದ್ದ ಟೆಕ್ಕಿಯೊಬ್ಬ ಮನೆಯಲ್ಲೇ ಗಾಂಜಾ ಬೆಳೆದು ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯನ್ನು ನಾಚರಾಂ ನಿವಾಸಿ ಸಿ. ಎಚ್. ಶಶಿಧರ್ ಎಂದು ಗುರುತಿಸಲಾಗಿದೆ. ಆತನನ್ನು ಮಾದಕ ವಸ್ತು ನಿಷೇಧ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂದಿತು ಮನೆಯಿಂದ ಪೊಲೀಸರು 17 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಗಿಡಗಳಿಂದ ಸುಮಾರು 10 ಕೆ.ಜಿ. ಡ್ರಗ್ಸ್ ದೊರೆಯಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕೆಲವು ಗಿಡಗಳು ಮೂರು ಮೀ. ಗಳಷ್ಟು ಉದ್ದ ಬೆಳೆದಿದ್ದರೆ ಇನ್ನು ಕೆಲವು

ಗಾಂಜಾ ಬೆಳೆದು ಪೊಲೀಸರ ಅತಿಥಿಯಾದ ಟೆಕ್ಕಿ Read More »

ನೈಟಿ ಹಾಕಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಗಂಡ ಈಗ ಪೊಲೀಸರ ಅತಿಥಿ

ಬೆಳಗಾವಿ: ಸೀರೆ ಉಡಬೇಕು, ನೈಟಿ ಹಾಕಬಾರದು ಎಂದು ಗಂಡ ಹೇಳಿದ ಮೇಲೆಯೂ ವಿಪರೀತ ಸೆಖೆ ಎಂದು ನೈಟಿ ಹಾಕಿದ ಪತ್ನಿಯ ಮೇಲೆ ಕೋಪಗೊಂಡು, ಆಕೆ ಹಾಕಿದ್ದ ನೈಟಿಗೆ ಪತಿ ಬೆಂಕಿ ಹಚ್ಚಿದ್ದಾನೆ. ಪರಿಣಾಮ ಆಕೆಯ ದೇಹ 80% ಸುಟ್ಟು ಹೋದ ಘಟನೆ ಖಾನಾಪೂರದ ನಂದಗಡದಲ್ಲಿ ನಡೆದಿದೆ. ಆರೋಪಿ ಪತಿಯನ್ನು ಕೃಷ್ಣಾಜಿ ಎಂದು ಗುರುತಿಸಲಾಗಿದೆ. ಆತನ ಕ್ರೌರ್ಯಕ್ಕೆ ಬಲಿಯಾದ ಮಹಿಳೆ ಮಂಜುಳಾ. ಇವರಿಬ್ಬರೂ ಕಳೆದ ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಮಂಜುಳಾ ನೈಟಿ ಹಾಕುವುದು ಕೃಷ್ಣಾಜಿಗೆ ಸಮ್ಮತವಿರಲಿಲ್ಲ. ಸೀರೆಯನ್ನೇ

ನೈಟಿ ಹಾಕಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಗಂಡ ಈಗ ಪೊಲೀಸರ ಅತಿಥಿ Read More »

ಸ್ಕೂಟಿಗೆ ಬಸ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು

ಸರ್ವಿಸ್‌ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವಾಗ ಸ್ಕೂಟಿಯ ಹಿಂಬದಿಗೆ ಗುದ್ದಿದ ಬಸ್‌ ಉಡುಪಿ: ಎಕ್ಸ್‌ಪ್ರೆಸ್‌ ಬಸ್‌ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಪು ಹೆದ್ದಾರಿಯಲ್ಲಿ ಸಂಭವಿಸಿದೆ. ಕಾಪು ಸಾಯಿ ಸರ್ವಿಸ್‌ ಸ್ಟೇಶನ್‌ ಬಳಿ ಈ ಅಪಘಾತ ಸಂಬವಿಸಿದ್ದು, ಬಸ್‌ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದಾರೆ. ಕಾಪು ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದಂತೆ ಬಸ್‌ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ದುಬಾಯಿಯಲ್ಲಿ

ಸ್ಕೂಟಿಗೆ ಬಸ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು Read More »

ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ : ಮಾಲೀಕನ ಸಹಿತ ಇಬ್ಬರ ಸೆರೆ

ಕೊಡಗು: ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ತಂಗಿದ್ದ ವಿದೇಶಿ ಮಹಿಐಎಯ ಮೇಲೆ ಹೋಂ ಸ್ಟೇ ಮಾಲೀಕನೇ ಅತ್ಯಾಚಾರ ಎಸಗರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ

ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ : ಮಾಲೀಕನ ಸಹಿತ ಇಬ್ಬರ ಸೆರೆ Read More »

ವಾಹನ ಅಡ್ಡಗಟ್ಟಿ ಹಲ್ಲೆ, ಕೊಲೆ ಬೆದರಿಕೆ: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

ಮಂಗಳೂರು: ಕಾರಿಗೆ ಸೈಡ್ ಕೊಡುವ ವಿಷಯದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ತಂಡವೊಂದಕ್ಕೆ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC – 2 ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ. ಆರೋಪಿಗಳಾದ ಬಂಟ್ವಾಳದ ಕಾವಳಪಡೂರು ನಿವಾಸಿ ದಿನೇಶ್ ಶೆಟ್ಟಿ, ಅರ್ಕುಳದ ಧನರಾಜ್ ಪೂಜಾರಿ ಯಾನೆ ‌ವಳಚ್ಚಿಲ್ ಧನು, ನವೀನ್ ಎಡಪದವು, ಪ್ರಜ್ವಲ್ ಪೂಜಾರಿ ಕಾರ್‌ಸ್ಟ್ರೀಟ್, ವಸಂತ್ ಬಾಳ‌ ತಡಂಬೈಲ್ ಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ ಮತ್ತು 1.34 ಲಕ್ಷ ರೂ. ದಂಡ

ವಾಹನ ಅಡ್ಡಗಟ್ಟಿ ಹಲ್ಲೆ, ಕೊಲೆ ಬೆದರಿಕೆ: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್ Read More »

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ

ಪುತ್ತೂರು : ಪೇಟೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಏಪ್ರಿಲ್ 20ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದೇವಸ್ಥಾನದ ಕಚೇರಿಯ ಬಳಿ ಜನರು ಗುಂಪು

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ Read More »

ವಿಜೃಂಭಣೆಯಿಂದ ನಡೆದ ಪುತ್ತೂರು ಜಾತ್ರೆ: ಪಂಜಿಗುಡ್ಡೆ ಈಶ್ವರ ಭಟ್‌ಗೆ ಡಾ. ಪ್ರಸಾದ್ ಭಂಡಾರಿ ಪತ್ರ

ಪುತ್ತೂರು: ಈ ಬಾರಿ ನಡೆದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ವಿಜೃಂಭಣೆಯಿಂದ ನಡೆದಿದೆ.‌ ಈ ಬಗ್ಗೆ ಪುತ್ತೂರಿನ ಪ್ರಸಿದ್ಧ ಡಾಕ್ಟರ್ ಪ್ರಸಾದ್ ಭಂಡಾರಿ ಅವರು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಈ ಬಾರಿಯ ಜಾತ್ರೆ ಸೂಪರ್. ಬಹಳ ವಿಜೃಂಭಣೆಯಿಂದ ನಡೆದಿದೆ. ಇಷ್ಟು ಗ್ರಾಂಡ್ ಆಗಿ ಎಂದೂ ಜಾತ್ರೆ ನಡೆದಿಲ್ಲ. ಎಲ್ಲರಿಗೂ ಕಾಫಿ, ತಿಂಡಿ, ಊಟ, ಅದೂ ತಿನ್ನುವಷ್ಟು. ಯಾವಾಗಲೂ ನೀವೇ ಆಡಳಿತ ನಡೆಸಿದಲ್ಲಿ ಒಳ್ಳೆಯದು. ದೇವರು

ವಿಜೃಂಭಣೆಯಿಂದ ನಡೆದ ಪುತ್ತೂರು ಜಾತ್ರೆ: ಪಂಜಿಗುಡ್ಡೆ ಈಶ್ವರ ಭಟ್‌ಗೆ ಡಾ. ಪ್ರಸಾದ್ ಭಂಡಾರಿ ಪತ್ರ Read More »

ಮಂಗಳೂರು: ಮುಂಜಾನೆ ಸುರಿದ ಭಾರಿ ಗಾಳಿ-ಮಳೆಯಿಂದ ವ್ಯಾಪಕ ಹಾನಿ

ಕೊಂಬೆ ಬಿದ್ದು ವಾಹನಗಳು ಜಖಂ, ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು ಮಂಗಳೂರು : ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಮಂಗಳೂರು ನಗರಾದ್ಯಂತ ಗುಡುಗು ಸಿಡಿಲಿನ ಜೊತೆಗೆ ಭಾರಿ ಮಳೆಯಾಗಿ ಸುಡುತ್ತಿರುವ ಇಳೆಗೆ ತಂಪೆರೆದಿದೆ. ಆದರೆ ಈ ಅಕಾಲಿಕ ಮಳೆಯಿಂದ ವಿವಿಧೆಡೆ ಹಲವು ಹಾನಿಗಳು ಸಂಭವಿಸಿವೆ. ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು

ಮಂಗಳೂರು: ಮುಂಜಾನೆ ಸುರಿದ ಭಾರಿ ಗಾಳಿ-ಮಳೆಯಿಂದ ವ್ಯಾಪಕ ಹಾನಿ Read More »

error: Content is protected !!
Scroll to Top