ಸುದ್ದಿ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ. ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ ಗುಂಡ್ಯಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮೋರಿಗೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ Read More »

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ

ಬೆಳ್ತಂಗಡಿ : ರಂಗಭೂಮಿಯಲ್ಲಿ ಸಾಧನೆಗೈದ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ ರವರು ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆಕ್ಸಿಸ್‍ ಮ್ಯಾಕ್ಸ್‍ ಲೈಫ್ ಇನ್ಸುರೆನ್ಸ್‍ ವತಿಯಿಂದ  “VALUE AWARD CEREMONY “ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾದಕರನ್ನು  ಗುರುತಿಸಿ ಕಲಾರತ್ನ ಪ್ರಶಸ್ತಿಯನ್ನು ನೀಡಲಾಗಿದೆ.

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ Read More »

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುವ ನಂಬಿಕೆ ಹುಟ್ಟಿಸಿ ಸುಮಾರು 70 ಲ.ರೂ. ವಂಚಿಸಿದ ಕುರಿತು ಮಂಗಳೂರಿನ ವ್ಯಕ್ತಿಯೊಬ್ಬರು ಸೆನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪರಿಚಿತನಾದ ರೈಸೆನ್‌ ಎಂಬ ವ್ಯಕ್ತಿ ದೂರುದಾರರ ವಿಶ್ವಾಸ ಸಂಪಾದಿಸಿ ಕ್ರಿಪ್ಟೊ ಕರೆನ್ಸಿ ಹೂಡಿಕೆಯ ಆಶೆ ಹುಟ್ಟಿಸಿದ್ದಾನೆ. ತಾನು ಕ್ರಿಪ್ಟೊ ಕರೆನ್ಸಿ ಟ್ರೇಡಿಂಗ್‌ ಮಾಡುತ್ತಿದ್ದು, ಅದರಲ್ಲಿ ಶೇ.30ರಷ್ಟು ಲಾಭಾಂಶವಿದೆ ಎಂದು ಹೇಳಿದ್ದ. ಅವನ ಮಾತು ನಂಬಿ ದೂರುದಾರರು ಫೆ.2ರಿಂದ 23ರ ವರೆಗೆ ಪ್ರತಿದಿನ ಹೂಡಿಕೆ ಮಾಡುತ್ತಿದ್ದರು. ಒಟ್ಟಾರೆಯಾಗಿ

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ Read More »

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ

2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಇಂತಿದೆ ಬೆಂಗಳೂರು: ಈ ಬೇಸಿಗೆ ರಜೆ ಕಳೆದ ಬಳಿಕ ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭಗೊಳ್ಳಲಿವೆ. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೇ 29ರಿಂದ ಶಾಲೆಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು,

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ Read More »

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ

ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏ.6ರಂದು ನಡೆಯಬೇಕಿದ್ದ ಸಭೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ನಾಳೆ ಧರ್ಮಸ್ಥಳದಿಂದ ಉಜಿರೆವರೆಗೆ ಮೆರವಣಿಗೆ ನಡೆಸಿ ಉಜಿರೆಯಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ನಿರ್ಧರಿಸಲಾಗಿತ್ತು.ಆರಂಭದಲ್ಲಿ ಈ ಪ್ರತಿಭಟನೆಗೆ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಈ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಪ್‌ ಸೇರಿದಂತೆ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಗಮನಿಸಿದ ಬಳಿಕ ಪರಿಸ್ಥಿತಿ ಗಂಭೀರವಾಗಿರುವುದನ್ನು ಅರಿತು ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.05(ನಾಳೆ) ರಂದು ಸಂಜೆ 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ Read More »

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ

ನವದೆಹಲಿ: ಕೆಲ ದಿನಗಳಿಂದ ಭಾರಿ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ದರ ಇಂದು ದಿಢೀರ್‌ ಇಳಿಕೆಯಾಗಿದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆ 1,740 ರೂ. ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 1,600 ರೂ. ಕಡಿಮೆಯಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 91,640 ರೂ. ಆಗಿದ್ದರೆ, 22 ಕ್ಯಾರಟ್ ಚಿನ್ನದ ಬೆಲೆ 84,000 ರೂ.ಗೆ ಇಳಿಕೆಯಾಗಿದೆ. ಗುರುವಾರ 10 ಗ್ರಾಂ 24 ಕ್ಯಾರೆಟ್ ಬೆಲೆ 93,380 ರೂ. ಆಗಿದ್ದರೆ,

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ Read More »

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು

12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್‌ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು Read More »

error: Content is protected !!
Scroll to Top