ಸುದ್ದಿ

ಬೈಕ್‌ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್‌ ಆದೇಶ

ನಿಯಮ ಇಲ್ಲದೆ ಬೈಕ್‌ ಟ್ಯಾಕ್ಸಿ ಓಡಾಡುವಂತಿಲ್ಲ ಎಂದ ನ್ಯಾಯಾಲಯ ಬೆಂಗಳೂರು: ಬೆಂಗಳೂರಿನಲ್ಲಿ ಬಹಳ ಜನಪ್ರಿಯವಾಗಿರುವ ಬೈಕಜ್‌ ಟ್ಯಾಕ್ಸಿ ಸೇವೆಯನ್ನು 6 ವಾರಗಳಲ್ಲಿ ಸ್ಥಗಿತಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಓಲಾ, ಉಬರ್ ಕಂಪನಿಗಳು ಬೆಂಗಳೂರು ಸೇರಿ ಕೆಲವು ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿವೆ.2022ರಲ್ಲಿ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಯ ವೇಳೆ […]

ಬೈಕ್‌ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್‌ ಆದೇಶ Read More »

ಮುಂಡಾಜೆಯಲ್ಲಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಅವಘಡ

ಮುಂಡಾಜೆ : ಗ್ರಾಮದ ಕೊಟ್ಟೂಟ್ಟುವಿನ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಇಂದು ಬೆಳಗ್ಗೆ  ನಡೆಯಿತು. ಘಟನೆಯಿಂದ ಸುಮಾರು ಒಂದೂವರೆ ಎಕರೆಯಷ್ಟು ಸ್ಥಳ ಸುಟ್ಟೋಗಿದೆ.  ಸ್ಥಳೀಯ ಪರಿಸರದಲ್ಲಿ ಮನೆಗಳಿದ್ದು,  ಜನರಲ್ಲಿ ಆತಂಕಕ್ಕೆ ಗುರಿಯಾಗಿದೆ. ಗ್ರಾಮ ಪಂಚಾಯತ್‍ ಅಧ್ಯಕ್ಷ ಗಣೇಶ ಬಂಗೇರ , ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ಮನೆಗಳತ್ತ ಹರಡದಂತೆ ಮುನ್ನೆಚ್ಚರಿಕೆ ವಹಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಅಗ್ನಿಶಾಮಕ ವಾಹನದ ವ್ಯವಸ್ಥೆ ಇಲ್ಲದೆ ಬೆಂಕಿಯನ್ನು ನಂದಿಸಲು  ನೀರಿನ ಟ್ಯಾಂಕ‌ರ್ ಹುಡುಕುವುದೇ ದೊಡ್ಡ ಸಮಸ್ಯೆಯಾಗಿದೆ. ಬಳಿಕ

ಮುಂಡಾಜೆಯಲ್ಲಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಅವಘಡ Read More »

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ

ಉಡುಪಿ : ರಸ್ತೆಯಲ್ಲಿ ನಡೆದುಕೊಂಡು ಹೋದ ಮಹಿಳೆಯೋರ್ವಳಿಗೆ ಬೈಕ್‍ ಸವಾರ ಡಿಕ್ಕಿಹೊಡೆದು, ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ಮೇರಿವಾಜ್ ಮಿಯಾರು ನಿವಾಸಿಯಾಗಿದ್ದು ರಸ್ತೆ ಬದಿ ನಡೆದುಕೊಂಡು ಬರುತ್ತಿರುವಾಗಲೇ ಹಿ೦ಬದಿಯಿ೦ದ ವೇಗವಾಗಿ ಬಂದ ಬೈಕ್ ಸವಾರ ಸಂತೋಷ್ ಎಂಬವರು ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಕೆಲ ದೂರ ಹೋಗಿ ಬಿದ್ದಿದ್ದು ಅಪಘಾತದ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಕೂಡ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ Read More »

ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ದ ಪತ್ತೆ

ಉಪ್ಪಿನಂಗಡಿ : ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲದಲ್ಲಿ ನಡೆದಿದೆ. ಕಾರ್ವೆಲ್ ನಿವಾಸಿಯಾದ ವೃದ್ದ ಹಿಂದೂ ಮಹಿಳೆಯೊಂದಿಗೆ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ. ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಆದರೂ ಈ ರೀತಿ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ದ ಪತ್ತೆ Read More »

ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ರಿಕ್ಷಾ

ಬಂಟ್ವಾಳ : ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ  ರಿಕ್ಷಾ ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ದೈಕಿನಕಟ್ಟೆ ಎಂಬಲ್ಲಿ ನಡೆದಿದೆ,  ಈ ಘಟನೆಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಮಂಗಳೂರು ದೇರೇಬೈಲ್ ಸಮೀಪದ ನೆಕ್ಕಿಲಗುಡ್ಡೆ ಮಾಲೆಮಾರ್ ನಿವಾಸಿ ರಾಮಣ್ಣ ನಾಯ್ಕ (63) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರು ಸಂಬಂಧಿಕರ ಆಟೋರಿಕ್ಷಾವೊಂದರಲ್ಲಿ  ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಳಕೆಬೈಲುವಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿ ರಾತ್ರಿಯೇ ವಾಪಾಸ್ ಮಂಗಳೂರಿನತ್ತ ಬರುತ್ತಿದ್ದಾಗ

ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ರಿಕ್ಷಾ Read More »

ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಮೀಪದ‌ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಏ. ‌13 ಭಾನುವಾರದಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಂಭೆಯ ಆಮಂತ್ರಣ ಪತ್ರಿಕೆ ಬಿಡುಗಡೆಯಾಯಿತು. ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು  ಬಿಡುಗಡೆಗೊಳಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ  ಟ್ರಸ್ಟಿಗಳಾದ  ಮನೋಹರ ಶೆಟ್ಟಿ, ನವೀನ , ರಾಮಣ್ಣಗೌಡ  ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು

ಬೆಂಗಳೂರು : ಆಲೋವೆರಾ ಜ್ಯೂಸ್ ಎಂದು ತಪ್ಪಾಗಿ ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೃತಳು 9ನೇ ತರಗತಿಯ ವಿದ್ಯಾರ್ಥಿನಿ 11ನೇ ವರ್ಷದ ಬಾಲಕಿ ನಿಧಿ ಕೃಷ್ಣ ಎಂದು ಹೇಳಲಾಗಿದೆ. ಆರೋಗ್ಯ ಕಾಪಾಡಿಕೊಳ್ಳುವ ಸಲುವಾಗಿ ನಿಧಿ ಪ್ರತಿದಿನ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ, ಮನೆಯವರು ಅಲೋವೆರಾ ಜ್ಯೂಸ್‌ನ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಎಂಬ ಕ್ರಿಮಿನಾಶಕ ಔಷಧವನ್ನು ತುಂಬಿದ್ದರು. ಇದರಿಂದ ಮಾ.18ರಂದು ಬಾಲಕಿ ಜ್ಯೂಸ್ ಎಂದು ಭಾವಿಸಿ ಈ ಕ್ರಿಮಿನಾಶಕವನ್ನು

ಆಲೋವೆರಾ ಜ್ಯೂಸ್ ಎಂದು ತಿಳಿದು ಕ್ರಿಮಿನಾಶಕ ಸೇವಿಸಿದ ಬಾಲಕಿ | ಚಿಕಿತ್ಸೆ ಫಲಿಸದೆ ಬಾಲಕಿ ಮೃತ್ಯು Read More »

ಗಡಿಯಲ್ಲಿ ಐವರು ನುಸುಳುಕೋರರು ಸೇನೆಯ ಗುಂಡಿಗೆ ಬಲಿ

ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕ್‌ ಸೈನಿಕರು ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಗಡಿ ದಾಟಿ ಬರಲು ಯತ್ನಿಸಿದ ಐವರು ಪಾಕಿಸ್ಥಾನಿ ನುಸುಳುಕೋರರನ್ನು ಗಡಿ ಭದ್ರತಾ ಪಡೆಯವರು ಗುಂಡಿಕ್ಕಿ ಸಾಯಿಸಿದ್ದಾರೆ. ಪೂಂಛ್‌ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಷನ್‌ನಲ್ಲಿ ಪಾಕ್‌ ಕಡೆಯಿಂದ ಕದನ ವಿರಾಮ ಉಲ್ಲಂಘಿಸಿ ಗಡಿದಾಟಲು ಯತ್ನಿಸಲಾಗಿತ್ತು. ಅವರನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದೇವೆ. 4-5 ಮಂದಿ ಸತ್ತಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ. ನಿನ್ನೆ ಬೆಳಗ್ಗಿನಿಂದ ಗಡಿಯಲ್ಲಿ ಉದ್ವಿಗ್ನ ಸ್ಥಿತಿಯಿತ್ತು. ಅತ್ತ ಕಡೆಯಿಂದ ಪಾಕ್‌ ಸೈನಿಕರು ಗುಂಡು

ಗಡಿಯಲ್ಲಿ ಐವರು ನುಸುಳುಕೋರರು ಸೇನೆಯ ಗುಂಡಿಗೆ ಬಲಿ Read More »

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ

ಮದುವೆಯ ಬಳಿಕ ದಾಂಪತ್ಯದಲ್ಲಿ ಒಂದಲ್ಲ ಒಂದು ಸಮಸ್ಯೆ ಎಂದು ಅರ್ಜಿ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಸಂಸಾರವೂ ಈಗ ಸಮಸ್ಯೆಯಲ್ಲಿ ಸಿಲುಕಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. 2024 ಅಕ್ಟೋಬರ್ 6ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ ಮತ್ತು

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ Read More »

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಾಂಬೆನ್ ಪಾರಿಖ್  ನಿಧನ

ಗುಜರಾತ್ : ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಾಂಬೆನ್ ಪಾರಿಖ್ (92) ಮಂಗಳವಾರ ಬೆಳಿಗ್ಗೆ ನವಸಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ನೀಲಾಂಬೆನ್, ಹರಿಲಾಲ್ ಗಾಂಧಿ ಮತ್ತು ಅವರ ಪತ್ನಿ ಗುಲಾಬ್ ಅವರ ಐದು ಮಕ್ಕಳಲ್ಲಿ ಹಿರಿಯವರಾದ ರಾಮಿಬೆನ್ ಅವರ ಮಗಳು,  ಅವರು ತಮ್ಮ 93 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರು ಮಹಾತ್ಮ ಗಾಂಧಿಯವರ ಮಗ ಹರಿದಾಸ್ ಗಾಂಧಿಯವರ ಮೊಮ್ಮಗಳು, ನೀಲಾಂಬೆನ್ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರೊಂದಿಗೆ ನವಸಾರಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು.ಅವರ ಅಂತ್ಯಕ್ರಿಯೆಯ ಮೆರವಣಿಗೆ ಇಂದು

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಾಂಬೆನ್ ಪಾರಿಖ್  ನಿಧನ Read More »

error: Content is protected !!
Scroll to Top