ಸುದ್ದಿ

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ

ಪುತ್ತೂರು: ಸವಣೂರು ಗ್ರಾಮದ ಪರಣೆ- ತುಳಸಿಪುರಂನಲ್ಲಿ ಶ್ರೀ ದೇವಿ ಸೇವಾ ಸಮಿತಿಯ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಏ. 14 ರಂದು ಬಿಸು ಆಚರಣೆ ನಡೆಯಿತು. ಬೆಳಿಗ್ಗೆ ಬಿಸು ಕಣಿ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಹಿರಿಯರ ಆಶೀರ್ವಾದವನ್ನು ಪಡೆದ ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಧ್ಯಾಹ್ನ ಬಿಸು ಪರ್ಬದ ವಿಶೇಷ ಸಹಭೋಜನ ನಡೆಯಿತು. ತುಳಸಿಪುರಂ ಶ್ರೀ ದೇವಿ ಸೇವಾ ಸಮಿತಿಯ ಸಂಚಾಲಕ ಪದ್ಮಯ್ಯ ಗೌಡ ಪರಣೆ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. […]

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ Read More »

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 56ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.17 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಪುತ್ತೂರು ಜಾತ್ರೆಯ ಜೊತೆಯಲ್ಲಿ ಸೀನಿಪ್ರಿಯರಿಗೆ ಭಾವ ತೀರ ಯಾನ ನೋಡುವ ಅವಕಾಶವಿದೆ.

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ

ನ್ಯಾಶನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ, ರಾಹುಲ್‌ಗೆ ಸಂಕಷ್ಟ ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ದಿಲ್ಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುವುದರೊಂದಿಗೆ ಕಾಂಗ್ರೆಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ನ್ಯಾಶನಲ್‌ ಹೆರಾಲ್ಡ್‌ನ ಕೋಟಿಗಟ್ಟಲೆ ಮೊತ್ತದ ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ನ

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ Read More »

ಬಿಜೆಪಿ ಸಕ್ರಿಯ ಕಾರ್ಯಕರ್ತ ರಮೇಶ್ ನಿಧನ

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತರನ್ನು ರಮೇಶ್(45) ಎನ್ನಲಾಗಿದೆ. ರಮೇಶ್ ರವರು ಉತ್ತಮ ಕ್ರೀಡಾ ಸಂಘಟಕ ಹಾಗೂ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಿಂದೂ ಹಿತರಕ್ಷಣಾ ಸಮಿತಿಯ ಸಂಘಟಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಸಾಲೆತ್ತೂರಿನಲ್ಲಿ ಆಚರಿಸಲು ಶ್ರಮ ವಹಿಸಿದ್ದರು. ಮೃತರು ಪತ್ನಿ, ಪುತ್ರಿ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಬಿಜೆಪಿ ಸಕ್ರಿಯ ಕಾರ್ಯಕರ್ತ ರಮೇಶ್ ನಿಧನ Read More »

ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ವಾತಾವರಣ ಮಂಗಳೂರು: ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬಯಿಯಿಂದ ಬಂದಿದ್ದ ಇಬ್ಬರು ಯುವಕರು ಸುರತ್ಕಲ್‌ ಬೀಚ್‌ನಲ್ಲಿ ನೀರುಪಾಲಾದ ದುರಂತ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಒಬ್ಬನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ನಾಪತ್ತೆಯಾಗಿದ್ದು ತೀವ್ರ ಹುಡುಕಾಟ ನಡೆಯುತ್ತಿದೆ. ಮೃತ ಯುವಕನನ್ನು ಮುಂಬಯಿಯ ವಿವೇಕ್‌ ಎಂಬವರ ಪುತ್ರ ಜ್ಞಾನ್‌ ಬಂಜನ್‌ (18) ಎಂದು ಗುರುತಿಸಲಾಗಿದೆ. ಮುಂಬಯಿಯ ಉಮೇಶ್‌ ಎಂಬವರ ಪುತ್ರ ಅನಿಲ್‌ (16) ಸಮುದ್ರದಲ್ಲಿ ನಾಪತ್ತೆಯಾಗಿದ್ದಾನೆ. ರಾಜ್ಯ ತುರ್ತು ಸ್ಪಂದನ

ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ Read More »

ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ಮಂಗಳೂರು : ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈರುತ್ಯ ರೈಲ್ವೆ ಕೆಲವು ವಿಶೇಷ ರೈಲುಗಳನ್ನು ಓಡಿಸಲಿದೆ. ಈ ಪೈಕಿ ಒಂದು ರೈಲು ಬೆಂಗಳೂರು-ಮಂಗಳೂರು ನಡುವೆ ಸಂಚರಿಸಲಿದೆ. ರೈಲು ಸಂಖ್ಯೆ 06579 ಏಪ್ರಿಲ್ 17ರಂದು ರಾತ್ರಿ 11.55ಕ್ಕೆ ಬೆಂಗಳೂರಿನಿಂದ (ಎಸ್​ಎಂವಿಟಿ) ಹೊರಟು ಮರುದಿನ ಸಂಜೆ 4 ಗಂಟೆಗೆ ಮಂಗಳೂರು ಜಂಕ್ಷನ್ ತಲುಪುತ್ತದೆ. ರೈಲು ಸಂಖ್ಯೆ 06580 ಏಪ್ರಿಲ್ 20ರಂದು ಮಧ್ಯಾಹ್ನ 2.10ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರು (ಎಸ್​ಎಂವಿಟಿ) ತಲುಪುತ್ತದೆ.1 ಪ್ರಥಮ

ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಇಂದಿನಿಂದ ವಕ್ಪ್‌ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಒಂದೆಡೆ ಬೀದಿ ಹೋರಾಟಗಳು ನಡೆಯುತ್ತಿದ್ದರೆ ಇಂದಿನಿಂದ ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟವೂ ಶುರುವಾಗಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 73 ಅರ್ಜಿಗಳ ಗುಚ್ಚವನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆತ್ತಿಕೊಳ್ಳಲಿದೆ.ವಕ್ಫ್‌ ಕಾಯಿದೆಗೆ ತಿದ್ದಪಡಿ ಮಾಡುವ ಮೂಲಕ ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ ಮತ್ತು ಅವರ ಆಸ್ತಿಯನ್ನು ಕಬಳಿಸುವ ಹುನ್ನಾರವಿದೆ. ಸಂವಿಧಾನದಲ್ಲಿ ವಕ್ಫ್‌ ಕಾಯಿದೆಗೆ ತಿದ್ದುಪಡಿ ಮಾಡಲು ಅವಕಾಶ ಇಲ್ಲ ಎಂದು ಮಸೂದೆಯನ್ನು ವಿರೋಧಿಸುವವರು ವಾದಿಸುತ್ತಿದ್ದಾರೆ.ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ

ಇಂದಿನಿಂದ ವಕ್ಪ್‌ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ Read More »

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ

ಪ್ರಬಲ ಸಮುದಾಯಗಳಿಂದ ಪ್ರತ್ಯೇಕ ಗಣತಿ, ಹೋರಾಟದ ಎಚ್ಚರಿಕೆ ಬೆಂಗಳೂರು: ಏನೇನೋ ಲೆಕ್ಕಾಚಾರ ಹಾಕಿ ಬಿಡುಗಡೆ ಮಾಡಿದ ಜಾತಿ ಗಣತಿ ವರದಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾಲಿಗೆ ಬಿಸಿತುಪ್ಪವಾಗುವ ಲಕ್ಷಣ ಕಾಣಿಸಿದೆ. ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದರೂ ಅದಕ್ಕೂ ಮೊದಲೇ ವರದಿಯ ಕೆಲವು ಅಂಶಗಳು ಬಹಿರಂಗವಾಗಿ ಎಲ್ಲೆಲ್ಲೂ ಆಕ್ರೋಶ ವ್ಯಕ್ತವಾಗುತ್ತದೆ. ಮುಖ್ಯವಾಗಿ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ವರದಿ ವಿರುದ್ಧ ಸಿಡಿದು ನಿಂತಿದ್ದಾರೆ. ಇದರ ಜೊತೆಗೆ ಇತರ

ಜಾತಿ ಗಣತಿ ವರದಿಗೆ ಎಲ್ಲೆಡೆಯಿಂದ ವಿರೋಧ : ಅಡಕತ್ತರಿಯಲ್ಲಿ ಸಿಲುಕಿದ ಸರಕಾರ Read More »

ಸಂಧಾನ ವಿಫಲ : ಮೂರನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

ಮುಖ್ಯಮಂತ್ರಿ ಮನವೊಲಿಕೆಗೂ ಬಗ್ಗದ ಲಾರಿ ಮಾಲೀಕರು ಬೆಂಗಳೂರು : ಮುಷ್ಕರ ಹೂಡಿರುವ ಲಾರಿ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಡೆಸಿದ ಸಂಧಾನ ಸಭೆ ವಿಫಲಗೊಂಡಿದ್ದು, ಲಾರಿ ಮುಷ್ಕರ ಮುಂದುವರಿದಿದೆ. ಏರಿಸಿದ ಡೀಸೆಲ್ ದರ ಇಳಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ

ಸಂಧಾನ ವಿಫಲ : ಮೂರನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು : ಸುಳ್ಯದ ಬೆಳ್ಳಾರೆಯಲ್ಲಿ 2022ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಇದುವರೆಗೂ ಈ ಪ್ರಕರಣದಲ್ಲಿ 21 ಆರೋಪಿಗಳನ್ನ ಬಂಧಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾನೆ. 2022ರ ಜು.26ರಂದು ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್​ ನೆಟ್ಟಾರು ಹತ್ಯೆ ನಡೆದಿತ್ತು. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್ ಮತ್ತು ಅತೀಕ್ ಅಹ್ಮದ್​ ಎಂಬವರ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ Read More »

error: Content is protected !!
Scroll to Top